ಮಂಡ್ಯ ರಾಜಕೀಯ ಜಿದ್ದು, ರಾಮನಗರದಲ್ಲೂ ಸದ್ದು


Team Udayavani, May 4, 2023, 3:04 PM IST

ಮಂಡ್ಯ ರಾಜಕೀಯ ಜಿದ್ದು, ರಾಮನಗರದಲ್ಲೂ ಸದ್ದು

ರಾಮನಗರ: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ದಳಪತಿಗಳ ವಿರುದ್ಧ ರಣಕಹಳೆ ಮೊಳಗಿಸಿ ಯಶಸ್ಸು ಕಂಡಿದ್ದ ಸಂಸದೆ ಸುಮಲತಾ ಇದೀಗ, ತಮ್ಮ ಜಿದ್ದನ್ನು ರಾಮ ನಗರ ದಲ್ಲೂ ಮುಂದುವರಿಸಲಿದ್ದಾರಾ? ಇಂತಹ ದೊಂದು ಪ್ರಶ್ನೆ ಇದೀಗ ಜಿಲ್ಲೆಗೆ ಸುಮಲತಾ ಎಂಟ್ರಿ ಯೊಂದಿಗೆ ಉದ್ಭವಿಸಿದೆ.

2019ರ ಮಂಡ್ಯ ಲೋಕಸಭಾ ಚುನಾವಣೆ ಇಡೀ ದೇಶವೇ ತಿರುಗಿ ನೋಡಿವಂತೆ ಮಾಡಿತ್ತು. ನಿಖಿಲ್‌ ಮತ್ತು ಸುಮಲತಾ ಅಂಬರೀಶ್‌ ನಡುವಿನ ಜಿದ್ದಾಜಿದ್ದಿ ಹೋರಾಟ ಸಾಕಷ್ಟು ಸುದ್ದಿಯಾಗುವ ಜೊತೆಗೆ ಸುಮಲತಾ ಮತ್ತು ಜೆಡಿಎಸ್‌ನವರ ನಡುವೆ ವೈಷಮ್ಯ ಹೆಚ್ಚುವುದಕ್ಕೂ ಇದು ಕಾರಣವಾಗಿತ್ತು. ಇದೀಗ ಮಂಡ್ಯದಲ್ಲಿ ಇಬ್ಬರ ನಡುವಿನ ಕಿಚ್ಚು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಕರ್ಮಭೂಮಿಯಲ್ಲೂ ಮಾರ್ಧನಿಸುತ್ತಿದೆ.

ನಿಖಿಲ್‌, ಎಚ್‌ಡಿಕೆ ವಿರುದ್ಧ ದಾಳ: ಎಚ್‌ಡಿಕೆ ಕುಟುಂಬ ದ ಕರ್ಮಭೂಮಿ ರಾಮನಗರ ಜಿಲ್ಲೆಗೆ ಎಂಟ್ರಿ ನೀಡಿರುವ ಸುಮಲತಾ, ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುವ ಜೊತೆಗೆ ತಮ್ಮ ಎದುರಾಳಿ ಎಚ್‌.ಡಿ. ಕುಮಾರಸ್ವಾಮಿ ಮತ್ತು ನಿಖಿಲ್‌ ಕುಮಾರಸ್ವಾಮಿ ವಿರುದ್ಧ ವಾಗ್ಧಾಳಿ ನಡೆಸಲು ಆರಂಭಿಸಿದ್ದಾರೆ. ಕುಟುಂಬ ರಾಜಕಾರಣದ ವಿರುದ್ಧ ದನಿ ಎತ್ತುವ ಮೂಲಕ ಎಚ್ಡಿಕೆ ಕುಟುಂಬದ ವಿರುದ್ಧ ದಾಳ ಉರುಳಿಸುತ್ತಿದ್ದಾರೆ.

ರಾಮನಗರ-ಚನ್ನಪಟ್ಟಣದಲ್ಲಿ ಪ್ರಚಾರ: ಈಗಾಗಲೇ ರಾಮನಗರದಲ್ಲಿ ಬಿಜೆಪಿ ಅಭ್ಯರ್ಥಿಯ ಪರವಾಗಿ ಪ್ರಚಾರ ನಡೆಸಿ ರುವ ಸುಮಲತಾ ತಮ್ಮ ಪ್ರಚಾರ ಸಭೆಯಲ್ಲಿ ಕುಟುಂಬ ರಾಜಕಾರಣವನ್ನು ಬೆಂಬಲಿಸಬೇಡಿ. ಮಂಡ್ಯದಲ್ಲಿ ನನಗೆ ಸಾಕಷ್ಟು ತೊಂದರೆ ನೀಡಿದರು. ಎಂದು ಹೇಳುವ ಜೊತೆಗೆ ಎಚ್‌ಡಿಕೆ ಕುಟುಂಬದವರನ್ನು ತಿರಸ್ಕರಿಸಿ ಎಂದು ಹೇಳಿಕೆ ನೀಡುವ ಮೂಲಕ ಜಿದ್ದಾಜಿದ್ದಿಯ ಕಿಚ್ಚನ್ನು ಹಚ್ಚಿದ್ದಾರೆ.

ಇನ್ನು ಮೋದಿ ಕಾರ್ಯಕ್ರಮದಲ್ಲಿ ಸಹ ಇದೇ ಸಂಗತಿಯನ್ನು ಪ್ರಸ್ತಾಪಿಸಿ ಚನ್ನಪಟ್ಟಣದಲ್ಲಿ ಯೋಗೇಶ್ವರ್‌ ಪರವಾಗಿ ಪ್ರಚಾರ ನಡೆಸಿದರು. ಮುಂದುವರಿದು ಚನ್ನಪಟ್ಟಣದಲ್ಲಿ ಬಹಿರಂಗ ಪ್ರಚಾರಕ್ಕೂ ಸುಮಲತಾ ಎಂಟ್ರಿ ಆಗಲಿದ್ದಾರೆ ಎಂಬ ಮಾಹಿತಿ ಇದೆ.

ಸೇಡು ತೀರಿಸಿಕೊಳ್ಳಲು ನಿಂತರಾ ಸುಮಲತಾ: ಮಂಡ್ಯ ಲೋಕಸಭಾ ಚುನಾವಣೆಯ ಬಳಿಕ ಸುಮಲತಾ ಮತ್ತು ದಳಪತಿಗಳ ನಡುವೆ ವೈಷಮ್ಯ ಹೊಗೆಯಾಡುತ್ತಿದೆ. ಸುಮಲತಾ ವಿರುದ್ಧ ಕುಮಾರಸ್ವಾಮಿ ಲೋಕಸಭಾ ಚುನಾವಣೆಯ ಬಳಿ ನೀಡಿದ್ದ ಹೇಳಿಕೆಗಳು, ಮಂಡ್ಯದಲ್ಲಿ ಸುಮಲತಾ ಮತ್ತು ಜೆಡಿಎಸ್‌ ನಡುವೆ ತದನಂತರದ ದಿನಗಳಲ್ಲಿ ನಡೆದ ವಾಕ್ಸಮರಗಳನ್ನು ಗಮನಿಸಿದರೆ, ಈ ಹಗೆತನ ಮುಂ ದುವರಿದಿರುವುದನ್ನು ಸಾಕ್ಷೀಕರಿಸಿತ್ತು. ಇದೀಗ ರಾಮ ನಗರ ಜಿಲ್ಲೆಗೆ ಎಂಟ್ರಿ ಆಗಿ ಟಾಂಗ್‌ ನೀಡುವ ಮೂಲಕ ಸುಮಲತಾ ಈ ಚುನಾವಣೆಯಲ್ಲಿ ದಳಪತಿಗಳ ವಿರುದ್ಧ ಸೇಡು ತೀರಿಸಿಕೊಳ್ಳಲು ನಿಂತಿದ್ದಾರಾ ಎಂಬ ಭಾವನೆ ಮೂಡಿದೆ.

ಅಂಬರೀಶ್‌ಗೆ ಸಿಗದ ಬೆಂಬಲ ಸುಮಲತಾಗೆ ಸಿಕ್ಕೀತೆ?: ಸುಮಲತಾ ಅವರಿಗೆ ಹಳೇ ಮೈಸೂರು ಭಾಗದಲ್ಲಿ ಮಹತ್ವ ಸಿಕ್ಕಿದೆ ಎಂದರೆ ಅದು ಅವರ ಪತಿ ನಟ ಅಂಬರೀಶ್‌ ಅವರ ಜನಪ್ರಿಯತೆಯ ಬಳುವಳಿ. ಆದರೆ, ರಾಮನಗರ ಮತ್ತು ಚನ್ನಪಟ್ಟಣದಲ್ಲಿ ನಟ ಅಂಬರೀಶ್‌ ಅವರಿಗೆ ಅಭಿಮಾನಿಗಳ ದೊಡ್ಡಪಡೆಯೇ ಇತ್ತಾದರೂ, ರಾಜಕೀಯವಾಗಿ ಅಂಬರೀಶ್‌ ಅವರಿಗೆ ಈ ಎರಡೂ ಕ್ಷೇತ್ರಗಳು ಪ್ರತಿರೋಧವನ್ನೊಡ್ಡುತ್ತಾ ಬಂದಿದ್ದು ಇತಿಹಾಸ. 1994ರಲ್ಲಿ ಕಾಂಗ್ರೆಸ್‌ ಸ್ಟಾರ್‌ ಕ್ಯಾಂಪೇನರ್‌ ಆಗಿ ಚನ್ನಪಟ್ಟಣದಲ್ಲಿ ಪ್ರಚಾರ ಮಾಡಲು ಬಂದಿದ್ದ ಅಂಬರೀಶ್‌ ಅವರಿಗೆ ಜನತಾದಳದ ಕಾರ್ಯಕರ್ತರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಗಲಾಟೆ ಎಬ್ಬಿಸಿದ್ದರು. 1996ರಲ್ಲಿ ನಡೆದ ರಾಮನಗರ ಉಪಚುನಾವಣೆಯಲ್ಲಿ ಜನತಾದಳದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಅಂಬರೀಶ್‌ ಅವರು ಪರಾಜಿತರಾಗಿದ್ದರು. ಈ ಎರಡೂ ಘಟನೆಗಳು ಈ ಭಾಗದಲ್ಲಿ ಅಂಬರೀಶ್‌ ನಟರಾಗಿ ಸಾಕಷ್ಟು ಜನಪ್ರಿಯವಾಗಿದ್ದರೂ, ರಾಜಕೀಯವಾಗಿ ಜನ ಸ್ವೀಕರಿಸಲಿಲ್ಲ ಎಂಬುದಕ್ಕೆ ಸಾಕ್ಷಿಯಾಗಿದೆ. ಇದೀಗ ಸುಮಲತಾ ಅವರಿಗೆ ಈ ಕ್ಷೇತ್ರದಲ್ಲಿ ಮನ್ನಣೆ ದೊರೆಯುವುದೇ ಎಂದು ಕಾಯ್ದು ನೋಡಬೇಕಿದೆ.

ಸಂಸದೆ ಹೇಳಿಕೆಗೆ ದಳಪತಿಗಳಿಂದ ತಟಸ್ಥ ಪ್ರತಿಕ್ರಿಯೆ: ಜಿಲ್ಲೆಗೆ ಸುಮಲತಾ ಎಂಟ್ರಿ ನೀಡಿ ದಳಪತಿಗಳ ವಿರುದ್ಧ ವಾಗ್ಧಾಳಿ ನಡೆಸುತ್ತಿದ್ದಾರಾದರೂ, ಸುಮಲತಾ ಹೇಳಿಕೆಗಳಿಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದೆ ತಟಸ್ಥ ಪ್ರತಿಕ್ರಿಯೆ ನೀಡಲಾಗುತ್ತಿದೆ. ಇತ್ತೀಚಿಗೆ ಅವರು ದೊಡ್ಡ ಪಕ್ಷಕ್ಕೆ ಸೇರಿದ್ದಾರೆ, ಅವರ ಬಗ್ಗೆ ನಾನು ಮಾತನಾಡಲಾದೀತೆ ಎಂದು ವ್ಯಂಗ್ಯವಾಗಿ ಕುಮಾರಸ್ವಾಮಿ ಪ್ರತಿಕ್ರಿಯಿಸುವ ಮೂಲಕ ಸುಮಲತಾ ವಿಚಾರದಲ್ಲಿ ಅಂತರ ಕಾಯ್ದುಕೊಳ್ಳುವ ಸೂಚನೆಯನ್ನು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಇತ್ತೀಚಿಗೆ ನೀಡಿದ್ದರು. ಸುಮಲತಾ ಹೇಳಿಕೆ ಜೆಡಿಎಸ್‌ನ ಯಾವುದೇ ಮುಖಂಡರು ಪ್ರತಿಕ್ರಿಯಿಸದೆ ಸುಮ್ಮನಾಗುವ ಮೂಲಕ ಸುಮಲತಾ ಅವರ ಹೇಳಿಕೆಗೆ ಮಹತ್ವ ಸಿಗದಂತೆ ಮಾಡುವ ತಂತ್ರ ಅನುಸರಿಸಿದೆ.

-ಸು.ನಾ.ನಂದಕುಮಾರ್‌

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.