ಹರಪನಹಳ್ಳಿಯಲ್ಲಿ ಪಕ್ಷೇತರೆಯಾಗಿ ಜಯಭೇರಿ ಬಾರಿಸಿದ ಎಂಪಿ ಪ್ರಕಾಶ್ ಪುತ್ರಿ
Team Udayavani, May 13, 2023, 4:02 PM IST
ಹರಪನಹಳ್ಳಿ : ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ.ಪಿ. ಪ್ರಕಾಶ್ ಅವರ ಪುತ್ರಿ ಲತಾ ಮಲ್ಲಿಕಾರ್ಜುನ ಜಯಭೇರಿ ಬಾರಿಸಿದ್ದಾರೆ.
ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಉಳಿದ ಅವರು ಬಿಜೆಪಿ ಅಭ್ಯರ್ಥಿ ಶಾಸಕರಾಗಿದ್ದ ಜಿ ಕರುಣಾಕರ ರೆಡ್ಡಿ ಅವರಿಗೆ ಸೋಲಿನ ಶಾಕ್ ನೀಡಿದ್ದಾರೆ. ಲತಾ ಮಲ್ಲಿಕಾರ್ಜುನ ಅವರು 70194 ಮತಗಳನ್ನು ಪಡೆದಿದ್ದಾರೆ. ರೆಡ್ಡಿ 56349 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎನ್ ಕೊಟ್ರೇಶಿ 44408 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ತೃಪ್ತಿ ಪಡಬೇಕಾಯಿತು.
ಸಂಧಾನಕ್ಕೆ ಬಗ್ಗದೆ ಬಂಡಾಯ ಅಭ್ಯರ್ಥಿಯಾಗಿ ಮುಂದುವರಿದ ಕಾರಣ ಕಾಂಗ್ರೆಸ್ ಪಕ್ಷ ಲತಾ ಮಲ್ಲಿಕಾರ್ಜುನ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?