ನಿರಾಣಿ ಕ್ಷೇತ್ರದಲ್ಲಿ ಕೈ ಟಿಕೆಟ್‌ಗೆ ಪೈಪೋಟಿ


Team Udayavani, Mar 10, 2023, 6:07 AM IST

ನಿರಾಣಿ ಕ್ಷೇತ್ರದಲ್ಲಿ ಕೈ ಟಿಕೆಟ್‌ಗೆ ಪೈಪೋಟಿ

ಬಾಗಲಕೋಟೆ: ರಾಜ್ಯದ ಪ್ರಭಾವಿ ಕ್ಷೇತ್ರಗಳಲ್ಲಿ ಜಿಲ್ಲೆಯ ಬೀಳಗಿಯೂ ಒಂದು. ಇಲ್ಲಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಹಾಲಿ ಶಾಸಕರು. ಈವರೆಗೆ 14 ವಿಧಾನಸಭೆ ಚುನಾವಣೆ ಎದುರಿಸಿರುವ ಈ ಕ್ಷೇತ್ರ, ಇದೀಗ 15ನೇ ಚುನಾವಣೆ ಅಖಾಡಕ್ಕೆ ಸಜ್ಜಾಗಿದೆ.ಬಿಜೆಪಿಯಿಂದ ಸಚಿವ ಮುರುಗೇಶ ನಿರಾಣಿ ಅವರೇ ಕಣ್ಣಕ್ಕಿಳಿಯುವುದು ಬಹುತೇಕ ನಿಶ್ಚಿತ. ಕಾಂಗ್ರೆಸ್‌ನಿಂದ ಯಾರು ಅಭ್ಯರ್ಥಿಯಾಗುತ್ತಾರೆ ಎಂಬ ಪ್ರಶ್ನೆ ಸ್ವತಃ ಕಾಂಗ್ರೆಸ್‌ ಕಾರ್ಯಕರ್ತರಲ್ಲಿಯೇ ಇದೆ.

ಕ್ಷೇತ್ರದಲ್ಲಿ ಈ ಬಾರಿ ಹಾಲಿ ಮತ್ತು ಮಾಜಿ ಸಚಿವರ (ಮುರುಗೇಶ ನಿರಾಣಿ- ಎಸ್‌.ಆರ್‌. ಪಾಟೀಲ್‌) ಮಧ್ಯೆ ಪೈಪೋಟಿ ನಡೆಯುತ್ತದೆಯೋ ಅಥವಾ ಹಾಲಿ ಮತ್ತು ಮಾಜಿ ಶಾಸಕರ (ನಿರಾಣಿ- ಜೆ.ಟಿ. ಪಾಟೀಲ್‌) ಮಧ್ಯೆ ಚುನಾವಣ ಕಣ ನಿರ್ಮಾಣಗೊಳ್ಳಲಿದೆಯೋ ಎಂಬುದು ಸದ್ಯ ಕ್ಷೇತ್ರದಲ್ಲಿರುವ ಕುತೂಹಲ.

ಬಿಜೆಪಿಯ ನಿರಾಣಿ ಈ ಕ್ಷೇತ್ರದಿಂದ ನಾಲ್ಕು ಬಾರಿ ಸ್ಪರ್ಧೆ ಮಾಡಿದ್ದು, ಒಂದು ಬಾರಿ ಪರಾಭವಗೊಂಡರೆ, ಮೂರು ಬಾರಿ ಗೆಲುವು ಸಾಧಿಸಿ, ಎರಡು ಬಾರಿ ಸಚಿವರಾಗಿದ್ದಾರೆ. ಈ ಬಾರಿಯೂ ಬಿಜೆಪಿಯಿಂದ ಅವರೇ ಅಭ್ಯರ್ಥಿಯಾಗುವುದು ಬಹುತೇಕ ನಿಶ್ಚಿತ. ಆದರೆ ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷರಾಗಿದ್ದ, ಸದ್ಯ ಪಕ್ಷದ ಬೆಳಗಾವಿ ವಿಭಾಗ ಸಹ ಪ್ರಭಾರಿ ಬಸವರಾಜ ಯಂಕಂಚಿ ಕೂಡ ಬಿಜೆಪಿ ಟಿಕೆಟ್‌ ಮೇಲೆ ಕಣ್ಣಿಟ್ಟಿದ್ದಾರೆ. ಇವರಿಬ್ಬರು ಬಿಟ್ಟರೆ ಬಿಜೆಪಿಯಲ್ಲಿ ಬೇರೆ ಆಕಾಂಕ್ಷಿಗಳಿಲ್ಲ.

ಕಾಂಗ್ರೆಸ್‌ನಲ್ಲಿ ದೊಡ್ಡ ಹಿಂಡು: ಕಾಂಗ್ರೆಸ್‌ನಿಂದ ಆಕಾಂಕ್ಷಿಗಳ ದೊಡ್ಡ ಪಟ್ಟಿಯೇ ಇದೆ. ಮಾಜಿ ಸಚಿವ ಎಸ್‌.ಆರ್‌. ಪಾಟೀಲ್‌, ಮಾಜಿ ಶಾಸಕ ಜೆ.ಟಿ. ಪಾಟೀಲ್‌, ಕೆಪಿಸಿಸಿ ಹಿಂದುಳಿದ ವರ್ಗಗಳ ಮಾಜಿ ಕಾರ್ಯದರ್ಶಿ ಬಸವಪ್ರಭು ಸರನಾಡಗೌಡ, ಜಿ.ಪಂ. ಮಾಜಿ ಸದಸ್ಯ ಬಸವರಾಜ ಖೋತ, ಹಿರಿಯ ಮುಖಂಡ ಶಿವಾನಂದ ನಿಂಗನೂರ ಸಹಿತ ಹಲವು ಪ್ರಬಲ ಆಕಾಂಕ್ಷಿಗಳಾಗಿದ್ದಾರೆ.

ಮಾಜಿ ಶಾಸಕ ಜೆ.ಟಿ. ಪಾಟೀಲ್‌ ಅಭ್ಯರ್ಥಿಯಾದರೆ ನಾನು ಬಂಡಾಯವಾಗಿ ಸ್ಪರ್ಧೆ ಮಾಡುವೆ ಎಂದು ಹಿರಿಯ ಮುಖಂಡ ನಿಂಗನೂರ ಹೇಳಿಕೊಂಡಿದ್ದಾರೆ. ಪಕ್ಷ ಎಲ್ಲಿ ಟಿಕೆಟ್‌ ಕೊಡುತ್ತದೆಯೋ ಅಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ಹೇಳುವ ಮೂಲಕ ಮಾಜಿ ಸಚಿವ ಎಸ್‌.ಆರ್‌.ಪಾಟೀಲ್‌ ನಾನೂ ಪ್ರಬಲ ಆಕಾಂಕ್ಷಿ ಎಂಬುದು ಪರೋಕ್ಷವಾಗಿ ಸಂದೇಶ ನೀಡಿದ್ದಾರೆ. ಆದರೆ ಈ ಬಾರಿ ಬೀಳಗಿ ಕ್ಷೇತ್ರದಿಂದ ಗೆದ್ದು ಪಕ್ಷದಲ್ಲಿ ಮತ್ತೆ ಹಿಡಿತ ಸಾಧಿಸಬೇಕೆಂದು ಈಗಾಗಲೇ ಹಲವು ರೀತಿಯ ತಯಾರಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಇನ್ನು ಜೆ.ಟಿ. ಪಾಟೀಲ್‌ ಹೊರತುಪಡಿಸಿದರೆ ಉಳಿದೆಲ್ಲ ಆಕಾಂಕ್ಷಿಗಳು ಕಾಂಗ್ರೆಸ್‌ನಿಂದ ಎಸ್‌.ಆರ್‌. ಪಾಟೀಲ್‌ ಅಭ್ಯರ್ಥಿಯಾದರೆ ಪಕ್ಷದ ಪರವಾಗಿ ಕೆಲಸ ಮಾಡುತ್ತೇವೆ. ಒಂದು ವೇಳೆ ಜೆ.ಟಿ. ಪಾಟೀಲ್‌ ಅಭ್ಯರ್ಥಿಯಾದರೆ ಬಂಡಾಯ ಕಹಳೆಯ ಸಂದೇಶ ಕೆಲವರು ನೀಡಿದ್ದಾರೆ. ಈ ಒಡಕಿನ ಲಾಭ ಬಿಜೆಪಿ ಬಳಸಿಕೊಳ್ಳುವ ಸಾಧ್ಯತೆ ಇದೆ. ಇಲ್ಲಿ ಕಾಂಗ್ರೆಸ್‌-ಬಿಜೆಪಿ ನೇರಾನೇರ ಸೆಣಸಲಿವೆ. ಜೆಡಿಎಸ್‌ಆಟಕ್ಕಿಲ್ಲ ಲೆಕ್ಕಕ್ಕೂ ಇಲ್ಲ.

ಕೋಟ್ಯಧೀಶರ ಕಾಳಗವಾಗುತ್ತಾ?: ಈ ಬಾರಿ ಬೀಳಗಿ ಕ್ಷೇತ್ರದ ಚುನಾವಣೆ ಅತ್ಯಂತ ಪ್ರತಿಷ್ಠೆ ಕಣವಾಗಿ ನಡೆಯುವ ಮುನ್ಸೂಚನೆ ದೊರೆಯುತ್ತಿದೆ. ಕಳೆದ ಬಾರಿ ಸ್ಥಳೀಯ ಸಂಸ್ಥೆಗಳಿಂದ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಪರಿಷತ್‌ನ ವಿಪಕ್ಷದ ನಾಯಕರಾಗಿದ್ದಾಗ್ಯೂ ಟಿಕೆಟ್‌ ವಂಚಿತರಾದ ಎಸ್‌.ಆರ್‌.ಪಾಟೀಲ್‌ ತೀವ್ರ ಅಸಮಾಧಾನಗೊಂಡಿದ್ದರು. ಪಕ್ಷದ ಅತ್ಯಂತ ಹಿರಿಯ ನಾಯಕರಲ್ಲಿ ಒಬ್ಬರಾದ ಇವರು ಪಕ್ಷವನ್ನೇ ಬಿಡುತ್ತಾರೆ ಎಂಬ ವದಂತಿಯೂ ಹರಡಿತ್ತು. ಇದೀಗ ಬೀಳಗಿ ವಿಧಾನಸಭೆ ಚುನಾವಣೆಗೆ ಅವಕಾಶ ನೀಡುವ ಮೂಲಕ ಅವರನ್ನು ಸಮಾಧಾನಪಡಿಸುವ ಕೆಲಸ ನಡೆಯುತ್ತಿದೆ ಎನ್ನಲಾಗಿದೆ. ನಿರಾಣಿ ಎದುರಿಸಲು ಪಾಟೀಲರೇ ಸೂಕ್ತ ಎಂಬ ಮಾತುಗಳಿವೆ.

– ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.