Mysuru; ಪ್ರಧಾನಿ ಮೋದಿ ಬೃಹತ್‌ ರೋಡ್‌ ಶೋ: ತೂರಿ ಬಂದ ಮೊಬೈಲ್!

ಕೊಚ್ಚಿಯಲ್ಲಿಯೂ ಮೊಬೈಲ್ ಬಿದ್ದಿತ್ತು...

Team Udayavani, Apr 30, 2023, 8:10 PM IST

1-sadsds

ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೈಸೂರು ನಗರದಲ್ಲಿ ಭಾನುವಾರ ಸಂಜೆ ಬೃಹತ್‌ ರೋಡ್‌ ಶೋ ನಡೆಸಿದರು. ಈ ವೇಳೆ ಅವರೊಂದಿಗೆ ಮಾಜಿ ಸಚಿವರಾದ ಈಶ್ವರಪ್ಪ, ರಾಮದಾಸ್ ಮತ್ತು ಸಂಸದ ಪ್ರತಾಪ್ ಸಿಂಹ ಅವರು ಉಪಸ್ಥಿತರಿದ್ದರು.

ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ಹೆಲಿಕಾಪ್ಟರ್‌ನಲ್ಲಿ ಬಂದಿಳಿದ ಪ್ರಧಾನಿ ಮೋದಿ ಗನ್‌ ಹೌಸ್‌ನಿಂದ ರೋಡ್‌ ಶೋ ಪ್ರಾರಂಭಿಸಿದರು. ಮೈಸೂರು ನಗರದ ಕೃಷ್ಣರಾಜ, ಚಾಮರಾಜ ಮತ್ತು ನರಸಿಂಹ ರಾಜ ಕ್ಷೇತ್ರಗಳ ವ್ಯಾಪ್ತಿಯ ಪ್ರಮುಖ ರಸ್ತೆಯಿಂದ ದಸರಾ ಜಂಬೂಸವಾರಿ ಮೆರವಣಿಗೆ ಹಾದು ಹೋಗುವ ರಾಜಮಾರ್ಗದಲ್ಲಿ ರೋಡ್‌ ಶೋ ನಡೆಸಿದರು.

ಚಿಕ್ಕಗಡಿಯಾರ ಬಳಿ ರೋಡ್ ಶೋ ಸಾಗುತ್ತಿದ್ದಾಗ ಹೂವಿನ ಜತೆ ಮೊಬೈಲ್ ಒಂದು ತೂರಿಬಂದಿದೆ. ರೋಡ್ ಶೋ ನಡೆಸುತ್ತಿದ್ದ ವಾಹನ ಅಂದರೆ ಪ್ರಧಾನಿ ಮೋದಿ ಅವರ ಮುಂಭಾಗದಲ್ಲಿ ಬಿದ್ದ ಮೊಬೈಲ್ ಆ ನಂತರ ಕೆಳಗೆ ಬಿದ್ದಿದೆ. ಮೊಬೈಲ್ ಬಿದ್ದ ತತ್ ಕ್ಷಣ ಭದ್ರತಾ ಸಿಬಂದಿಗಳು ಜಾಗ್ರತವಾದರು. ನಗರದೆಲ್ಲೆಡೆ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿತ್ತು. ಮೊಬೈಲ್ ಬಿದ್ದ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಧಾನಿ ಮೋದಿ ಅವರು ಕೇರಳದ ಕೊಚ್ಚಿಯಲ್ಲಿ ರೋಡ್‌ಶೋ ನಡೆಸುತ್ತಿದ್ದ ವೇಳೆ ಎಸ್‌ಪಿಜಿ ಅಧಿಕಾರಿಯೊಬ್ಬರು ಪಿಎಂ ಮೋದಿಯತ್ತ ಎಸೆದ ಮೊಬೈಲ್ ಫೋನ್ ಅನ್ನು ತಡೆದಿದ್ದರು.

ಬಸವೇಶ್ವರ ವೃತ್ತ, ಚಾಮರಾಜ ಜೋಡಿ ರಸ್ತೆ, ಮಹಾನಗರಪಾಲಿಕೆ ರಸ್ತೆ, ಕೆ.ಆರ್‌.ವೃತ್ತ, ಆಯುರ್ವೇದ ವೃತ್ತ, ಬಂಬೂಬಜಾರ್‌ ರಸ್ತೆ, ಹೈವೇ ಸರ್ಕಲ್ , ಎಲ್ಐಸಿ ಸರ್ಕಲ್‌ನಲ್ಲಿ ರೋಡ್‌ ಶೋ ಅಂತ್ಯವಾಗಬೇಕಾಗಿತ್ತು ಆದರೆ ಸಮಯದ ಅಭಾವದಿಂದ ಹೈವೇ ಸರ್ಕಲ್ ನಲ್ಲೆ ರೋಡ್ ಶೋ ಮುಕ್ತಾಯಗೊಳಿಸಲಾಯಿತು.

ರಸ್ತೆಯ ಎರಡು ಬದಿಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದರು. ಮೋದಿ, ಮೋದಿ ಎಂಬ ಘೋಷಣೆಗಳನ್ನು ಮೊಳಗಿಸಿದರು. ಕಾಡಾ ಕಚೇರಿ ಆವರಣ, ದೇವರಾಜ ಮಾರುಕಟ್ಟೆ ಮುಂಭಾಗ ಮತ್ತು ಕಿವುಡು ಮತ್ತು ಮೂಗರ ಶಾಲೆಯ ಆವರಣದಲ್ಲಿ ಹಿರಿಯ ನಾಗರಿಕರಿಗೆ ಆಸನದ ವ್ಯವಸ್ಥೆಮಾಡಲಾಗಿತ್ತು. ಮೆರವಣಿಗೆಯ ಉದ್ದಕ್ಕೂ ಸಾಂಪ್ರದಾಯಿಕ ಉಡುಗೆ ಧರಿಸಿ ಪಕ್ಷದ ಕಾರ್ಯಕರ್ತರು ಭಾಗವಹಿಸಿದರು.ಜಾನಪದ ಕಲಾ ತಂಡಗಳ ಪ್ರದರ್ಶನವೂ ನಡೆಯಿತು.

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.