ಎರಡೂ ಪಕ್ಷಗಳಲ್ಲಿ ಕಡಿಮೆ ಏನಿಲ್ಲ!


Team Udayavani, Mar 2, 2023, 6:20 AM IST

ಎರಡೂ ಪಕ್ಷಗಳಲ್ಲಿ ಕಡಿಮೆ ಏನಿಲ್ಲ!

ಪುತ್ತೂರು: ಏನಾಗುತ್ತಿದೆ ಪುತ್ತೂರಿನಲ್ಲಿ ? ಇಂಥದೊಂದು ಪ್ರಶ್ನೆ ಈಗ ರಾಜ್ಯ ಮಟ್ಟದಲ್ಲಿ ಕೇಳಿಬರುತ್ತಿದೆ. ಇದುವರೆಗೆ ಕರಾವಳಿಯ ಪ್ರಮುಖ ಕ್ಷೇತ್ರಗಳ ಪಟ್ಟಿಗೆ ಪುತ್ತೂರು ಸೇರಿದ್ದು ತೀರಾ ಅಪರೂಪ. ಈ ಹಿಂದೆ 2008ರಲ್ಲಿ ಬಿಜೆಪಿಯಿಂದ ಹೊರಬಂದು ಪಕ್ಷೇತರರಾಗಿ ಶಕುಂತಲಾ ಶೆಟ್ಟಿ ಸ್ಪರ್ಧಿಸಿದ್ದಾಗ ಜನರ ಗಮನ ಸೆಳೆದಿತ್ತು. ಈಗ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.

ಈಗ ಬಿಜೆಪಿ-ಕಾಂಗ್ರೆಸ್‌ನಲ್ಲಿ ಟಿಕೆಟ್‌ಗಾಗಿ ತೆರೆಮರೆಯ ಕಾದಾಟ ಜೋರಾಗಿದೆ. ಬಿಜೆಪಿ ಹಾಲಿ ಶಾಸಕ ಸಂಜೀವ ಮಠಂದೂರು ಅವರ ಬದಲಿಗೆ ಸಂಘ ಪರಿವಾರದವರಿಗೆ, ಹಿಂದೂ ಮುಖಂಡರಿಗೆ ಟಿಕೆಟ್‌ ನೀಡಬೇಕು ಎಂಬ ಆಗ್ರಹ ಕೇಳುತ್ತಾ ಬಂದಿದ್ದರೆ, ಇನ್ನೊಂದೆಡೆ ಕಾಂಗ್ರೆಸ್‌ನಲ್ಲಿಯೂ ಮೂಲ ಕಾಂಗ್ರೆಸ್ಸಿಗರಿಗೆ ಸ್ಪರ್ಧಿಸಲು ಅವಕಾಶ ನೀಡಬೇಕೆಂಬ ಒತ್ತಾಯ ತೀವ್ರಗೊಂಡಿದೆ. ಅದರರ್ಥ ಎರಡೂ ಪಕ್ಷಗಳಲ್ಲಿ ಈಗಿನವರು ಬೇಡ ಎಂಬ ಅಭಿಪ್ರಾಯ ಮೂಡಿದಂತಾಗಿದೆ. ಬಿಜೆಪಿಯಲ್ಲಿ ಸಂಜೀವ ಮಠಂದೂರು ಹಾಗೂ ಕಾಂಗ್ರೆಸ್‌ನ ಹಿಂದಿನ ಸಾರಿಯ ಅಭ್ಯರ್ಥಿ ಶಕುಂತಲಾ ಶೆಟ್ಟಿ ಇಬ್ಬರಿಗೂ ಈ ಮಾತು ಅನ್ವಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ ಎಂಬುದಕ್ಕಿಂತಲೂ ಮೊದಲ ಕುತೂಹಲ ಎರಡೂ ಪ್ರಮುಖ ಪಕ್ಷಗಳಲ್ಲಿ ಯಾರು ಟಿಕೆಟ್‌ ಗಿಟ್ಟಿಸಿಕೊಳ್ಳುತ್ತಾರೆ ಎಂಬುದೇ ದೊಡ್ಡ ಕಾತರ.

ಬಿಜೆಪಿಯಲ್ಲಿಯು ಒಳ ಕಸರತ್ತು..!
ಬಿಜೆಪಿ ರಾಜ್ಯಾಧ್ಯಕ್ಷರ ತವರು ಕ್ಷೇತ್ರವೂ ಆಗಿರುವ ಪುತ್ತೂರಿನಲ್ಲೂ ಪಕ್ಷದೊಳಗೆ ಟಿಕೆಟ್‌ಗಾಗಿ ಮುಸುಕಿನ ಗುದ್ದಾಟ ಕೆಲವು ದಿನಗಳ ಹಿಂದಷ್ಟೇ ಸಾರ್ವಜನಿಕವಾಗಿಯೂ ಪ್ರಕಟಗೊಂಡಿತ್ತು. ಕಳೆದ ಡಿಸೆಂಬರ್‌ ಅಂತ್ಯದ ತನಕ ಬಿಜೆಪಿಯಲ್ಲಿ ಸಂಜೀವ ಮಠಂದೂರರ ಹೆಸರೇ ಕೇಳಿಬರುತ್ತಿತ್ತು. ಆದರೆ ಈಗ ವಾತಾವರಣ ಆಗಿನಷ್ಟು ತಿಳಿಯಾಗಿಲ್ಲ. ಅಮಿತ್‌ ಶಾ ಪುತ್ತೂರಿಗೆ ಭೇಟಿ ನೀಡುವ ಸಂದರ್ಭದಲ್ಲಿ ಅಳವಡಿಸಲಾದ ಬ್ಯಾನರ್‌ ಕುರಿತಾಗಿ ಶಾಸಕರು ಬಳಸಿದರು ಎನ್ನಲಾದ ಪದ ಪ್ರಯೋಗ ಹಿಂದೂ ಸಂಘಟನೆಗಳನ್ನು ಕೆರಳಿಸಿದೆ. ಹಾಗಾಗಿ ಎರಡು ಬಾರಿಯಿಂದ ಟಿಕೆಟ್‌ ಆಕಾಂಕ್ಷಿತರಾಗಿದ್ದ ಅರುಣ್‌ ಕುಮಾರ್‌ ಪುತ್ತಿಲರ ಪರ ಟ್ವಿಟರ್‌ ಅಭಿಯಾನ ನಡೆಯುತ್ತಿದೆ. ಅದಕ್ಕೆ ಪ್ರತ್ಯುತ್ತರವಾಗಿ ಮತ್ತೊಂದು ಗುಂಪು ಶಾಸಕರ ಪರವಾಗಿ ಸೋಶಿಯಲ್‌ ಮೀಡಿಯಾಗಳಲ್ಲಿ ಪ್ರಚಾರ ಕಾರ್ಯದಲ್ಲಿ ಕಾರ್ಯ ನಿರತವಾಗಿದೆ.

ದ.ಕ. ಜಿಲ್ಲೆಯಲ್ಲಿ ಒಕ್ಕಲಿಗ ಸಮುದಾಯಕ್ಕೆ ಟಿಕೆಟ್‌ ನೀಡಲು ಅವಕಾಶ ಇರುವುದು ಪುತ್ತೂರಿನಲ್ಲಿ ಮಾತ್ರ. ಇದು ಹಾಲಿ ಶಾಸಕರನ್ನು ನಿರಾಳವಾಗಿಸಿರುವ ಅಂಶ. ಜತೆಗೆ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರ ಆಪ್ತ ಬಣದ ಸದಸ್ಯರಲ್ಲಿ ಮಠಂದೂರು ಸಹ ಒಬ್ಬರು. ಆದರೆ ಇವರ ಪರ ಸಂಘ ಪರಿವಾರದವರು ನಿಲ್ಲುವರೇ ಎಂಬುದನ್ನು ಕಾದು ನೋಡಬೇಕು. ಈಗ ಸುಳ್ಯದ ಬಿಜೆಪಿ ಹಿರಿಯ ಮುಖಂಡ ಎಸ್‌.ಎನ್‌. ಮನ್ಮಥ, ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್‌ ಕಂಜಿಪಿಲಿ ಹೆಸರೂ ಚಾಲ್ತಿಯಲ್ಲಿದೆ.

ಇನ್ನೊಂದೆಡೆ ಎಸ್‌ಡಿಪಿಐ ಪಕ್ಷದವರು ಈಗಾಗಲೇ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿ ಶಾಫಿ ಬೆಳ್ಳಾರೆಗೆ ಟಿಕೆಟ್‌ ನೀಡುವು ದಾಗಿ ಘೋಷಣೆ ಮಾಡಿದೆ. ಜೈಲಿನಲ್ಲಿದ್ದು ಕೊಂಡೇ ಸ್ಪರ್ಧೆ ಮಾಡಲಿದ್ದಾರೆ.

ಕಾಂಗ್ರೆಸ್‌ನಲ್ಲಿ ಆಕಾಂಕ್ಷಿತರ ಉದ್ದ ಪಟ್ಟಿ
2013ರಲ್ಲಿ ಪಕ್ಷೇತರರಾಗಿದ್ದ ಶಕುಂತಲಾ ಟಿ. ಶೆಟ್ಟಿ ಕಾಂಗ್ರೆಸ್‌ಗೆ ಸೇರಿ ಗೆದ್ದಿದ್ದರು. ಅವರೇ ಈ ಬಾರಿಯೂ ಆಕಾಂಕ್ಷಿ. ಈ ಮಧ್ಯೆ ಬಿಜೆಪಿಯಲ್ಲಿ ಎರಡು ಬಾರಿ ಟಿಕೆಟ್‌ಗೆ ಪ್ರಯತ್ನಿಸಿದ್ದ ಉದ್ಯಮಿ ಅಶೋಕ್‌ ಕುಮಾರ್‌ ರೈ ಕೋಡಿಂಬಾಡಿ ಈಗ ಕಾಂಗ್ರೆಸ್‌ ಪಾಳಯದಲ್ಲಿದ್ದಾರೆ. ಮೂರು ಅವಧಿಯಿಂದ ಪ್ರಬಲ ಆಕಾಂಕ್ಷಿಯಾದ ಬ್ಲಾಕ್‌ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಎ. ಹೇಮನಾಥ ಶೆಟ್ಟಿಯವರೂ ತಮ್ಮ ಪಟ್ಟು ಬಿಟ್ಟಿಲ್ಲ. ಉಳಿದವರಲ್ಲಿ ಅನಿತಾ ಹೇಮನಾಥ ಶೆಟ್ಟಿ, ಧನಂಜಯ ಅಡ³ಂಗಾಯ, ಎಂ.ಬಿ. ವಿಶ್ವನಾಥ ರೈ, ಸತೀಶ್‌ ಕೆಡೆಂಜಿ, ದಿವ್ಯ ಪ್ರಭಾ ಚೆಲ್ತಡ್ಕ ಸೇರಿದಂತೆ ಹದಿನೈದಕ್ಕೂ ಅಧಿಕ ಮಂದಿ ಪ್ರಯತ್ನನಿರತರು. ಸದ್ಯ ಟಿಕೆಟ್‌ಗೆ ಕಣ್ಣಿಗೆ ಕಾಣುತ್ತಿರುವ ಪೈಪೋಟಿ ಎಂದರೆ ಶಕುಂತಲಾ ಟಿ. ಶೆಟ್ಟಿ ಮತ್ತು ಅಶೋಕ್‌ ಕುಮಾರ್‌ ರೈ ನಡುವಿನದ್ದು. ಬ್ಲಾಕ್‌ ಸಮಿತಿ ಶಕುಂತಲಾ ಟಿ. ಶೆಟ್ಟಿ ಪರ ಒಲವು ಹೊಂದಿದ್ದರೂ ಹೇಮನಾಥ ಶೆಟ್ಟಿ ಬಣದ ವಿರೋಧ ಇದೆ. ಹಾಗೆಯೇ ಹೇಮನಾಥ ಶೆಟ್ಟಿ ಸ್ಪರ್ಧೆಗೆ ಬ್ಲಾಕ್‌ ಸಮಿತಿಯ ಎಲ್ಲರ ಸಹಮತ ಇಲ್ಲವೆಂಬ ಅಭಿಪ್ರಾಯವಿದೆ. ಅಶೋಕ್‌ ಕುಮಾರ್‌ ರೈ ಹೊರಗಿನವರಾದ ಕಾರಣ, ಪಕ್ಷದೊಳಗೆ ಅವರ ಪರವಾದ ವಾತಾವರಣ ಇನ್ನಷ್ಟೇ ನಿರ್ಮಾಣವಾಗಬೇಕಿದೆ. ಹಾಗಾಗಿ ರಾಜ್ಯ ಪ್ರಮುಖ ಕಾಂಗ್ರೆಸ್‌ ಮುಖಂಡರ ಚಿತ್ತ ಹಾಗೂ ಹೈಕಮಾಂಡ್‌ ಒಲವು ಯಾರ ಕಡೆಗೆ ವಾಲುವುದೋ ಕಾದು ನೋಡಬೇಕಿದೆ.

-ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.