ನನಗೆ ಯಾವತ್ತೂ ಜಾತಿ ಅಡ್ಡ ಬಂದಿರಲಿಲ್ಲ


Team Udayavani, Feb 22, 2023, 6:16 AM IST

ನನಗೆ ಯಾವತ್ತೂ ಜಾತಿ ಅಡ್ಡ ಬಂದಿರಲಿಲ್ಲ

ಪಿ.ಜಿ.ಆರ್‌.ಸಿಂಧ್ಯಾ, ಮಾಜಿ ಸಚಿವರು
ಚುನಾವಣೆಗಳು ಅಂದರೆ ಆಗ ಜನರೇ ಅಭ್ಯರ್ಥಿಗೆ 50 ರೂ.ನಿಂದ 1 ಸಾವಿರ ರೂ.ವರೆಗೆ ಎಲೆ ಅಡಿಕೆಯಲ್ಲಿ ಹಣವಿಟ್ಟು ಕಾಲು ಮುಟ್ಟಿ, ನೀರು ಹಾಕಿ ಆರತಿ ಬೆಳಗಿ ಆಶೀರ್ವಾದ ಮಾಡೋರು. ಈಗ ಅದು “ರಿವರ್ಸ್‌” ಆಗಿದೆ. ಆಗಲೂ ಸ್ವಲ್ಪ ಮಟ್ಟಿಗೆ ಜಾತೀಯತೆ ಹಾಗೂ ಹಣಕಾಸಿನ ವ್ಯವಹಾರಗಳು ಇದ್ದವು. ಈಗ ಅದು “ಮಿತಿ ಮೀರಿದೆ. ಜಾತಿ ಹಾಗೂ ಹಣದ ಪ್ರಭಾವ ಇದಕ್ಕಿಂತ ಜಾಸ್ತಿ ಆಗೋಕೆ ಸಾಧ್ಯವಿಲ್ಲದಂತಹ ಸ್ಥಿತಿ ತಲುಪಿದ್ದೇವೆ. ಈಗ ಜಾತಿ ಹಾಗೂ ಹಣದ ಪ್ರಮಾಣ ವಿಪರೀತ ಆಗಿದೆ.

ಆಗಿನ ಚುನಾವಣೆಗಳಲ್ಲಿ ಜನ ಗುಂಪು ಕಟ್ಟಿಕೊಂಡು ಹಿಂಸಾಚಾರಗಳು ನಡೆಯುತ್ತಿದ್ದವು. ಈಗ ಅದು ಸುಧಾರಣೆ ಆಗಿದೆ. ರಾಜ್ಯದಲ್ಲಿ ಚುನಾವಣ ಹಿಂಸಾಚಾರಗಳು ಅತ್ಯಂತ ಕಡಿಮೆಯಾಗಿವೆ. ಚುನಾವಣ ಆಯೋಗ ನಿರ್ಬಂಧ ಹಾಕಿರುವುದರಿಂದ ರಾತ್ರಿ 10 ಗಂಟೆಗೆ ಪ್ರಚಾರ ಅಂತ್ಯಗೊಳ್ಳುತ್ತೆ. ಆಗ ಮುಂಜಾನೆ 2 ಗಂಟೆ, 3 ಗಂಟೆವರೆಗೂ ಪ್ರಚಾರಸಭೆಗಳು ನಡೆಯುತ್ತಿದ್ದವು. ಜನ ನಮಗಾಗಿ ಕಾಯೋರು. ಆಗ ರಾಜಕಾರಣಿಗಳ ಬಗ್ಗೆ ವಿಶ್ವಾಸವಿತ್ತು, ಅವರು ಹೇಳುವುದನ್ನೆಲ್ಲ ನಂಬುತ್ತಿದ್ದರು, ಆದರೆ ಈಗ ನಂಬುವುದಿಲ್ಲ. ಇದು ಆಗಿನ-ಈಗಿನ ಚುನಾವಣೆಗಳಿಗಿರುವ ವ್ಯತ್ಯಾಸಗಳು.

ನನ್ನ ಸ್ವಂತ ದುಡ್ಡು ಅಂತ ಹೇಳಿ ಆಗ ಖರ್ಚು ಮಾಡಿದ್ದು 1 ರಿಂದ 2 ಲಕ್ಷ ಅಷ್ಟೆ. ಜನರೇ ಸಿಕ್ಕಾಪಟ್ಟೆ ಸ್ವಂತ ಹಣ ಖರ್ಚು ಮಾಡೋರು, ಎಲ್ಲರೂ ಸಹಾಯ ಮಾಡಿದರು. ನನಗೆ ಮೊದಲ ಎಲೆಕ್ಷನ್‌ನಲ್ಲಿ ಕರೆಕ್ಟಾಗಿ ಹಳ್ಳಿಗಳೇ ಗೊತ್ತಿರಲಿಲ್ಲ. ಯಾವ ಹಳ್ಳಿ, ಯಾವ ಜಾತಿ ಏನೆಂಬುದೇ ತಿಳಿದಿರಲಿಲ್ಲ. ನನಗೆ ಜಾತಿ ಅನ್ನೋದು ಕೊನೆಯವರೆಗೂ ಗೊತ್ತಾಗಲಿಲ್ಲ. ನಾನು ಕನಕಪುರದಿಂದ 6 ಸಲ ಗೆದ್ದಿದ್ದರೂ ಯಾವತ್ತೂ ಜಾತಿ ಅಡ್ಡ ಬರಲಿಲ್ಲ. ಕ್ಷೇತ್ರ ಮರು ವಿಂಗಡಣೆ ಆಗಿದ್ದರಿಂದ ಬೇರೆ ಕಡೆ ಹೋಗಬೇಕಾಯಿತು.

ಆಗಲೂ “ಇಷ್ಯು” ಇತ್ತು
ಇವೆಲ್ಲದರ ನಡುವೆಯೂ ನನ್ನ ವೈಯಕ್ತಿಕ ಅಭಿಪ್ರಾಯ ಹೇಳುವುದಾದರೆ ಬಹುತೇಕರು ವಿಷಯಾಧಾರಿತದ ಮೇಲೆ ಮತ ಕೊಡುತ್ತಾರೆ. ಇದು ಆಗಲೂ ಅಷ್ಟೇ-ಈಗಲೂ ಅಷ್ಟೇ. ಕರ್ನಾಟಕದಲ್ಲಿ ಮೊದಲನೇ ಕಾಂಗ್ರೆಸ್‌ಯೇತರ ಸರಕಾರವೆಂದರೆ ರಾಮಕೃಷ್ಣ ಹೆಗಡೆ ನಾಯಕತ್ವದ ಜನತಾ ಸರಕಾರ. ಆ Óರ‌ಕಾರ ಬರಬೇಕಾದರೆ ಆಗಿನ ಮುಖ್ಯಮಂತ್ರಿ ಆರ್‌. ಗುಂಡೂರಾವ್‌ ಬಗ್ಗೆ ಬಹಳ ಅಪಪ್ರಚಾರ ನಡೆಯಿತು. ಇವತ್ತಿಗೆ ಹೋಲಿಸಿದರೆ ಆಗ ಅವರು ಮಾಡಿದ್ದು ನಥಿಂಗ್‌. ಆಗ ಒಂದು ಹೆಲಿಕಾಪ್ಟರ್‌ ಇಟ್ಟುಕೊಂಡಿದ್ದರು, ಈಗ ನೂರು ಹೆಲಿಕಾಪ್ಟರ್‌ಗಳು ಬಳಕೆಯಾಗುತ್ತಿವೆ. ಒಂದು ಹೆಲಿಕಾಪ್ಟರ್‌ಗೆ ಗುಂಡೂರಾಯರ ಮೇಲೆ ಬಹಳ ಕೆಟ್ಟ ಪ್ರಚಾರ ನಡೆಯಿತು. ಆಮೇಲೆ ಗೋಕಾಕ್‌ ವರದಿ ಜಾರಿ ವಿಷಯದಲ್ಲೂ ಅವರ ಮಾತುಗಳು ಸರಿ ಹೋಗಲಿಲ್ಲ, ಕನ್ನಡ ಚಳವಳಿ ಹೋರಾಟಗಾರರು, ಕನ್ನಡ ಸಂಘಟನೆಗಳು, ರೈತರು, ದಲಿತ ಸಂಘಟನೆಗಳ ಸಹ ಸರಕಾರದ ವಿರುದ್ಧ ನಿಂತವು. ಗುಂಡೂರಾಯರು ಮತ್ತು ಕಾಂಗ್ರೆಸ್‌ ವಿರುದ್ಧದ ವಾತಾವರಣ ಸೃಷ್ಟಿಯಾಗಿ ಆ ಪಕ್ಷ ಹಿನ್ನಡೆ ಅನುಭವಿಸಿತು. ವಿಶೇಷವಾಗಿ ಬಂಗಾರಪ್ಪ ಸಹ ಬಂಡಾಯದ ಬಾವುಟ ಹಾರಿಸಿದ್ದರಿಂದ ಜನತಾ ಸರಕಾರ ಬಂತು. ಇದು “ಇಷ್ಯು’ ಮೇಲೆ ನಡೆದ ಚುನಾವಣೆ, ಅನಂತರ 1985 ರಲ್ಲಿ ಹೆಗಡೆ ನಾಯಕತ್ವದಲ್ಲಿ ಚುನಾವಣೆ “ಇಷ್ಯು’ ಮೇಲೆ ನಡೆಯಿತು. ಹೆಗಡೆ ಅವರದು “ಒಳ್ಳೆಯ ಆಡಳಿತ’ ಎಂಬ ವಿಷಯದ ಮೇಲೆ ನಡೆದ ಚುನಾವಣೆ. ಈ ರೀತಿ ಪ್ರತೀ ಚುನಾವಣೆಯೂ ವಿಷಯಾಧಾರಿತದ ಮೇಲೆ ನಡೆಯುತ್ತಿವೆ.

-ಎಂ.ಎನ್‌.ಗುರುಮೂರ್ತಿ

ಟಾಪ್ ನ್ಯೂಸ್

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

Karthik’s advice helped me when i was struggling without rhythm: Virat Kohli

RCB; ಲಯ ಇಲ್ಲದೆ ಒದ್ದಾಡುತ್ತಿದ್ದಾಗ ಕಾರ್ತಿಕ್‌ ಸಲಹೆಯಿಂದ ನೆರವು: ವಿರಾಟ್ ಕೊಹ್ಲಿ

Mysore; ಒಂದು ವರ್ಷದಿಂದ ಕಟ್ಟಿಲ್ಲ ಮೋದಿ ವಾಸ್ತವ್ಯ ಹೂಡಿದ್ದ ಹೋಟೆಲ್ ಕೊಠಡಿ ಬಾಡಿಗೆ!

Mysore; ಒಂದು ವರ್ಷದಿಂದ ಪಾವತಿಸಿಲ್ಲ ಮೋದಿ ವಾಸ್ತವ್ಯ ಹೂಡಿದ್ದ ಹೋಟೆಲ್ ಕೊಠಡಿ ಬಾಡಿಗೆ!

King Cobra: ಅಡುಗೆ ಕೋಣೆಯಲ್ಲಿ ಅವಿತು ಕುಳಿತ ದೈತ್ಯ ಕಾಳಿಂಗ ಸರ್ಪ, ಬೆಚ್ಚಿಬಿದ್ದ ಮನೆ ಮಂದಿ

King Cobra: ಅಡುಗೆ ಕೋಣೆಯಲ್ಲಿ ಅವಿತು ಕುಳಿತ ದೈತ್ಯ ಕಾಳಿಂಗ ಸರ್ಪ, ಬೆಚ್ಚಿಬಿದ್ದ ಮನೆ ಮಂದಿ

ನನ್ನ ಮಗ ಸತ್ತು ಹೋಗಿ 8 ವರ್ಷ ಆಗಿದೆ…; ಕುಮಾರಸ್ವಾಮಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

ನನ್ನ ಮಗ ಸತ್ತು ಹೋಗಿ 8 ವರ್ಷ ಆಗಿದೆ…; ಕುಮಾರಸ್ವಾಮಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

Google Map Follow ಮಾಡಿ ಹಳ್ಳಕ್ಕೆ ದುಮುಕಿದ ಕಾರು… ಅದೃಷ್ಟವಶಾತ್ ಪ್ರವಾಸಿಗರು ಪಾರು

Google Map Follow ಮಾಡಿ ಹೊಳೆಗೆ ಧುಮುಕಿದ ಕಾರು… ಅದೃಷ್ಟವಶಾತ್ ಪ್ರವಾಸಿಗರು ಪಾರು

Channagiri; ಕಸ್ಟಡಿಯಲ್ಲಿದ್ದ ಆರೋಪಿ ಸಾವು ಪ್ರಕರಣ; ಚನ್ನಗಿರಿಯಲ್ಲಿ ಬಿಗಿ ಬಂದೋಬಸ್ತ್

Channagiri; ಕಸ್ಟಡಿಯಲ್ಲಿದ್ದ ಆರೋಪಿ ಸಾವು ಪ್ರಕರಣ; ಚನ್ನಗಿರಿಯಲ್ಲಿ ಬಿಗಿ ಬಂದೋಬಸ್ತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

5-

ಗಾಂಜಾ ಸಾಗಾಟ; ತೀರ್ಥಹಳ್ಳಿಯಲ್ಲಿ ಇಬ್ಬರ ಬಂಧನ; 2 ಕೆಜಿ ಗಾಂಜಾ ವಶ

Karthik’s advice helped me when i was struggling without rhythm: Virat Kohli

RCB; ಲಯ ಇಲ್ಲದೆ ಒದ್ದಾಡುತ್ತಿದ್ದಾಗ ಕಾರ್ತಿಕ್‌ ಸಲಹೆಯಿಂದ ನೆರವು: ವಿರಾಟ್ ಕೊಹ್ಲಿ

4-

UV Fusion: ಬದುಕು ಬಂಗಾರವಾಗಲಿ

Mysore; ಒಂದು ವರ್ಷದಿಂದ ಕಟ್ಟಿಲ್ಲ ಮೋದಿ ವಾಸ್ತವ್ಯ ಹೂಡಿದ್ದ ಹೋಟೆಲ್ ಕೊಠಡಿ ಬಾಡಿಗೆ!

Mysore; ಒಂದು ವರ್ಷದಿಂದ ಪಾವತಿಸಿಲ್ಲ ಮೋದಿ ವಾಸ್ತವ್ಯ ಹೂಡಿದ್ದ ಹೋಟೆಲ್ ಕೊಠಡಿ ಬಾಡಿಗೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.