ಪ್ರಮೋದ್ ಮಧ್ವರಾಜ್ ಅವರಿಗೆ ಖಂಡಿತ ಒಳ್ಳೆ ಭವಿಷ್ಯವಿದೆ: CM Bommai
Team Udayavani, Apr 13, 2023, 8:13 PM IST
ಉಡುಪಿ : ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರಿಗೆ ಬಿಜೆಪಿಯಲ್ಲಿ ಖಂಡಿತ ಒಳ್ಳೆ ಭವಿಷ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಗುರುವಾರ ಹೇಳಿಕೆ ನೀಡಿದ್ದಾರೆ.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಹೊರಬಂದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು. ‘ಪ್ರಮೋದ್ ಅವರಿಗೆ ಖಂಡಿತ ಒಳ್ಳೆಯ ಭವಿಷ್ಯವಿದೆ. ಇಡೀ ಕರ್ನಾಟಕ ರಾಜ್ಯದ ಪ್ರಚಾರದಲ್ಲಿ ಬಳಸಿಕೊಳ್ಳುತ್ತಾ ಇದ್ದೇವೆ. ಬರುವಂತಹ ದಿನಗಳಲ್ಲಿ ಇದಕ್ಕಿಂತ ಉತ್ತಮವಾದ ಅವಕಾಶ ಖಂಡಿತಾ ಇದೆ’ ಎಂದರು.
ಸಿಎಂ ಬೊಮ್ಮಾಯಿ ಅವರೊಂದಿಗೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಹಾಜರಿದ್ದರು.