ಆರು ಕಡೆ ಮೋದಿ ಶೋ: 3 ದಿನ ಮೋದಿ, ನಡ್ಡಾ, ಶಾ ರಾಜ್ಯಕ್ಕೆ ಲಗ್ಗೆ
Team Udayavani, Apr 26, 2023, 8:27 AM IST
ಬೆಂಗಳೂರು: ಚುನಾವಣೆ ಪ್ರಚಾರ ಈಗಾಗಲೇ ಬಿರುಸು ಪಡೆದುಕೊಂಡಿದ್ದು, ಈ ನಡುವೆ ಬಿಜೆಪಿ ತನ್ನ ಪ್ರಚಾರ ಅಭಿಯಾನವನ್ನು ಇನ್ನಷ್ಟು ಆಕ್ರಮಣಕಾರಿಯಾಗಿಸಲಿದೆ.
ರಾಜ್ಯದಲ್ಲಿ ಮೇ 7ರ ತನಕ ಪ್ರಧಾನಿ ನರೇಂದ್ರ ಮೋದಿ ದಿನಕ್ಕೆ ನಾಲ್ಕು ಕಾರ್ಯಕ್ರಮಗಳಂತೆ ಆರು ದಿನ ಪ್ರಚಾರ ನಡೆಸಲಿದ್ದಾರೆ. ಅಧಿಕಾರ ಉಳಿಸಿ ಕೊಳ್ಳಲೇಬೇಕು ಎಂದು ಹಠ ತೊಟ್ಟಿರುವ ಬಿಜೆಪಿ ವರಿಷ್ಠರು ತೀವ್ರಗತಿಯ ಪ್ರಚಾರಕ್ಕೆ ಮುಂದಾಗಿದ್ದಾರೆ. ಮೂರು ದಿನಗಳ ಕಾಲ ರಾಜ್ಯದಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಏಕಕಾಲದಲ್ಲಿ ಪ್ರಚಾರ ನಡೆಸುವುದು ಕಣದಲ್ಲಿ ಇನ್ನಷ್ಟು ಕಾವೇರಿಸಲಿದೆ.
ಪ್ರಧಾನಿಯ ಮೊದಲ ಕಾರ್ಯಕ್ರಮ ಹುಮನಾಬಾದ್ನಲ್ಲಿ ಎ. 29ರಂದು ನಡೆಯಲಿದೆ. ಸದ್ಯದ ವೇಳಾಪಟ್ಟಿ ಪ್ರಕಾರ ಅಂದು ಬೆಳಗ್ಗೆ 11ಕ್ಕೆ ಪ್ರಧಾನಿ ಮೋದಿ ಬಹಿರಂಗ ಸಭೆಯಲ್ಲಿ ಭಾಗ ವಹಿಸಲಿದ್ದಾರೆ. ಆ ಬಳಿಕ ವಿಜಯಪುರ ಹಾಗೂ ಕುಡಚಿಯಲ್ಲಿ ಆಯೋಜಿಸಿರುವ ಸಭೆಗಳಲ್ಲಿ ಪಾಲ್ಗೊಳ್ಳುವರು. ಸಂಜೆ ಬೆಂಗಳೂರಿಗೆ ಆಗಮಿಸಿ ಬೃಹತ್ ರೋಡ್ ಶೋ ನಡೆಸುವರು. ಅಂದು ಬೆಂಗ ಳೂರಿನಲ್ಲಿ ವಾಸ್ತವ್ಯವಿದ್ದು, ರಾಜ್ಯ ಮುಖಂಡರ ಜತೆ ಚುನಾವಣ ತಂತ್ರಗಾರಿಕೆ ಬಗ್ಗೆ ಚರ್ಚಿಸುವರು.
ಎ. 30ರಂದು ಕೋಲಾರದಲ್ಲಿ ಬಹಿರಂಗ ಸಭೆಯ ಬಳಿಕ ಚನ್ನಪಟ್ಟಣ, ಬೇಲೂರಿನ ಸಭೆಯಲ್ಲಿ ಪಾಲ್ಗೊಳ್ಳುವರು. ಬಳಿಕ ಮೈಸೂರಿ ನಲ್ಲಿ ರೋಡ್ ಶೋ ನಡೆಸಿ ಹೊಸದಿಲ್ಲಿಗೆ ವಾಪಾಸ್ ಆಗಲಿದ್ದಾರೆ.
ಈ 2 ದಿನಗಳಲ್ಲಿ ಮೋದಿ ದಿನಕ್ಕೆ ತಲಾ 3 ಸಭೆ, ಒಂದು ರೋಡ್ ಶೋ ನಡೆಸಲಿದ್ದಾರೆ.
ಮತ್ತೂಂದೆಡೆ ಎ. 29ರಂದು ಅಮಿತ್ ಶಾ ರಾಣೆಬೆನ್ನೂರು, ಬ್ಯಾಡಗಿ, ಹಳಿಯಾಳ ಹಾಗೂ ಶಿವಮೊಗ್ಗ; ಜೆ.ಪಿ. ನಡ್ಡಾ ಅವರು ಮುದ್ದೇಬಿಹಾಳ, ಕಲಘಟಗಿ, ರೋಣ, ಹರಪನಹಳ್ಳಿಗಳಲ್ಲಿ ಬಹಿರಂಗ ಸಭೆ, ರೋಡ್ ಶೋಗಳಲ್ಲಿ ಭಾಗವಹಿಸಲಿದ್ದಾರೆ.
ಪ್ರಧಾನಿ ಕಾರ್ಯಕ್ರಮ
ಎ. 29: ಹುಮನಾಬಾದ್, ವಿಜಯಪುರ, ಕುಡಚಿ, ಬೆಂಗಳೂರು ಉತ್ತರ
ಎ. 30: ಕೋಲಾರ, ಚನ್ನಪಟ್ಟಣ, ಬೇಲೂರು, ಮೈಸೂರು
ಮೇ 2: ಚಿತ್ರದುರ್ಗ, ವಿಜಯನಗರ, ಸಿಂಧನೂರು, ಕಲಬುರಗಿ
ಮೇ 3: ಮೂಲ್ಕಿ-ಮೂಡುಬಿದಿರೆ ಕ್ಷೇತ್ರ ವ್ಯಾಪ್ತಿಯ ಕೊಲಾ°ಡು, ಕಾರವಾರ, ಕಿತ್ತೂರು
ಮೇ 6: ಚಿತ್ತಾಪುರ, ನಂಜನಗೂಡು, ತುಮಕೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ
ಮೇ 7: ಬಾದಾಮಿ, ಹಾವೇರಿ, ಶಿವಮೊಗ್ಗ ಗ್ರಾಮಾಂತರ, ಬೆಂಗಳೂರು ಕೇಂದ್ರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ