ಯಡಿಯೂರಪ್ಪ ತೊರೆದ ಕ್ಷೇತ್ರ ಶಿಕಾರಿಗೆ ಪೈಪೋಟಿ


Team Udayavani, Mar 1, 2023, 6:52 AM IST

ಯಡಿಯೂರಪ್ಪ ತೊರೆದ ಕ್ಷೇತ್ರ ಶಿಕಾರಿಗೆ ಪೈಪೋಟಿ

ಶಿಕಾರಿಪುರ: ರಾಜ್ಯದ ಹೈವೊಲ್ಟೇಜ್ ಕ್ಷೇತ್ರ ಶಿಕಾರಿಪುರ. ಮಾಜಿ ಮುಖ್ಯ ಮಂತ್ರಿ ಬಿ.ಎಸ್‌.ಯಡಿಯೂರಪ್ಪ ರಾಜಕೀಯ ಆರಂಭಿಸಿದಾಗಿನಿಂದ ಸೋತಿದ್ದು ಒಮ್ಮೆ ಮಾತ್ರ. ಈಗ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಿಜೆಪಿ ಟಿಕೆಟ್‌ ನಿರೀಕ್ಷೆಯಲ್ಲಿದ್ದಾರೆ. ಕಾಂಗ್ರೆಸ್‌ನಲ್ಲಿ ಈ ಬಾರಿ 10 ಜನ ಆಕಾಂಕ್ಷಿಗಳಿದ್ದಾರೆ.

ಜೆಡಿಎಸ್‌ ಅಭ್ಯರ್ಥಿ ಹುಡುಕಾಟದಲ್ಲಿದೆ. ಶಿವಮೊಗ್ಗ ಜಿಲ್ಲೆಯ ಪ್ರಮುಖ ವಿಧಾನಸಭಾ ಕ್ಷೇತ್ರಗಳಲ್ಲೊಂದಾದ ಶಿಕಾರಿಪುರದಲ್ಲಿ ಈ ಬಾರಿ ಹೊಸ ಮುಖಗಳ ನಡುವೆ ಸ್ಪರ್ಧೆ ನಡೆಯುವ ಸಾಧ್ಯತೆ ಇದೆ.

ಬಿ.ಎಸ್‌.ಯಡಿಯೂರಪ್ಪನವರು ಚುನಾವಣ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದು ಮಗ ವಿಜಯೇಂದ್ರ ಅವರೇ ತಮ್ಮ ಉತ್ತರಾಧಿಕಾರಿ ಎಂದು ಘೋಷಿಸಿದ್ದಾರೆ. ಬಹುತೇಕ ಅವರಿಗೇ ಟಿಕೆಟ್‌ ದೊರೆಯುವ ಸಾಧ್ಯತೆ ಇದೆ. ಬಿಎಸ್‌ವೈ ಅವರು ಸಿಎಂ ಸ್ಥಾನದಿಂದ ಕೆಳಗಿಳಿದ ಮೇಲೆ ಶಿಕಾರಿಪುರದಿಂದ ಯಾರು ಸ್ಪರ್ಧಿಸುತ್ತಾರೆ ಎಂಬ ಗೊಂದಲ ಏರ್ಪಟ್ಟಿತ್ತು. ಅದಕ್ಕೆ ಬಿಎಸ್‌ವೈ ಅವರೇ ತೆರೆ ಎಳೆದಿದ್ದರು. ಈಗ ವಿಜಯೇಂದ್ರ ಅವರು ಕ್ಷೇತ್ರದಲ್ಲಿ ಮಿಂಚಿನ ಸಂಚಾರ ನಡೆಸುತ್ತಿದ್ದು ಎರಡು ಸುತ್ತು ಸಂಘಟನೆ ಮುಗಿಸಿದ್ದಾರೆ.

ಇನ್ನು ಪ್ರತಿ ಚುನಾವಣೆಯಲ್ಲೂ ಪೈಪೋಟಿ ನೀಡುತ್ತಿರುವ ಕಾಂಗ್ರೆಸ್‌ನಿಂದ ಈ ಬಾರಿ 10 ಮಂದಿ ಟಿಕೆಟ್‌ ಕೇಳಿದ್ದಾರೆ. ಇದರಲ್ಲಿ  ಪುರಸಭೆ ಮಾಜಿ ಸದಸ್ಯ ನಾಗರಾಜ ಗೌಡ, ಕಳೆದ ಚುನಾವಣೆ ಪರಾಜಿತ ಅಭ್ಯರ್ಥಿ ಗೋಣಿ ಮಾಲತೇಶ್‌, ನಿವೃತ್ತ ಡಿವೈಎಸ್‌ಪಿ ಪತ್ನಿ, ಶಾಮನೂರು ಶಿವಶಂಕರಪ್ಪ ಸಂಬಂಧಿ  ಪುಷ್ಪ ಶಿವಕುಮಾರ್‌, ಮಾಜಿ ಶಾಸಕ ಮಹಾಲಿಂಗಪ್ಪ ಹೆಸರು ಮುಂಚೂಣಿಯಲ್ಲಿದೆ. ಉಳಿದಂತೆ ಶಿರಾಳಕೊಪ್ಪ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಗಂಗಾಧರಪ್ಪ, ಪುರಸಭೆ ಸದಸ್ಯ ಉಳ್ಳಿ ದರ್ಶನ್‌, ವಕೀಲ ಚಂದ್ರಕಾಂತ ಪಾಟೀಲ್‌, ನಿರ್ಮಲಾ ಪಾಟೀಲ್‌, ರಾಘವೇಂದ್ರ ನಾಯ್ಕ, ರಾಮಲಿಂಗಪ್ಪ ಸಹ ಅರ್ಜಿ ಸಲ್ಲಿಸಿದ್ದಾರೆ. ಕಾಂಗ್ರೆಸ್‌ನಿಂದ ಆಕಾಂಕ್ಷಿಗಳ ಪಟ್ಟಿ ಹೆಚ್ಚಿದ್ದರೂ ಕ್ಷೇತ್ರದಲ್ಲಿ ಯಡಿಯೂರಪ್ಪ ವಿರುದ್ಧ ಮುನಿಸಿಕೊಂಡಿರುವ ವರ್ಗವನ್ನು ಸೆಳೆಯಲು ಕಾಂಗ್ರೆಸ್‌ ತಂತ್ರಗಾರಿಕೆ ರೂಪಿಸುತ್ತಿದೆ. ತಾಲೂಕಿನಲ್ಲಿ ಸಾದರ ಲಿಂಗಾಯತರು ಹೆಚ್ಚಿದ್ದು ಆ ಮತಗಳನ್ನು ಸೆಳೆಯುವುದು ಅಥವಾ ಅತೀ ಹೆಚ್ಚು ಸಂಖ್ಯೆಯಲ್ಲಿರುವ ಕುರುಬ ಸಮುದಾಯಕ್ಕೆ ಟಿಕೆಟ್‌ ಕೊಡಬಹುದು ಎನ್ನಲಾಗಿದೆ.

ಹೊಸ ಬೆಳವಣಿಗೆಯಲ್ಲಿ ಪಿ.ಒ. ಶಿವಕುಮಾರ್‌ ಶಿವಮೊಗ್ಗ ನಗರ ಟಿಕೆಟ್‌ ಆಕಾಂಕ್ಷಿ ಎಂದು ಹೇಳಿ ಕೊಂಡಿದ್ದಾರೆ. ಒಂದು ವೇಳೆ ಅವರಿಗೆ ಶಿವಮೊಗ್ಗ ಟಿಕೆಟ್‌ ಸಿಕ್ಕರೆ ಪತ್ನಿ ಪುಷ್ಪ ಅವರನ್ನು ಶಿಕಾರಿಪುರದಿಂದ ನಿಲ್ಲಿಸುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

2014ರ ಉಪ ಚುನಾವಣೆಯಲ್ಲಿ ಬಿ.ವೈ.ರಾಘವೇಂದ್ರ ಅವರು ಕೇವಲ 6,430 ಮತಗಳ ಅಂತರದಿಂದ ಗೆದ್ದಿದ್ದರು. ಮತಗಳ ಅಂತರ ಕಡಿಮೆಯಾಗಿದ್ದು ಬಿಜೆಪಿಯಲ್ಲಿ ಆತಂಕ ತಂದಿತ್ತು. ಈಗ ವಿಜಯೇಂದ್ರ ಅವರಿಗೂ ಪ್ರಬಲ ಪೈಪೋಟಿ ಎದುರಾಗುವ ನಿರೀಕ್ಷೆ ಇದೆ.

ಜೆಡಿಎಸ್‌ನಿಂದ ಎರಡು ಬಾರಿ ಸ್ಪರ್ಧಿಸಿ ಎಚ್‌.ಟಿ.ಬಳಿಗಾರ್‌ ಅವರು 2013ರಲ್ಲಿ 15,007, 2018ರಲ್ಲಿ 13,191 ಮತ ಪಡೆದಿದ್ದರು. ಅವರು ಬಿಜೆಪಿ ಸೇರಿ ಈಗ ಉಗ್ರಾಣ ನಿಗಮದ ಅಧ್ಯಕ್ಷರಾಗಿದ್ದಾರೆ. ಜೆಡಿಎಸ್‌ ಹೊಸ ಅಭ್ಯರ್ಥಿಯ ನಿರೀಕ್ಷೆಯಲ್ಲಿದೆ.

ಕಾಂಗ್ರೆಸ್‌ನಿಂದ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿರುವ ಹತ್ತು ಮಂದಿ ಯಾರಿಗೆ ಟಿಕೆಟ್‌ ಕೊಟ್ಟರೂ ಒಟ್ಟಿಗೆ ಕೆಲಸ ಮಾಡುವುದಾಗಿ ಪತ್ರಿಕಾಗೋಷ್ಠಿ ನಡೆಸಿ ತಿಳಿಸಿದ್ದಾರೆ. ಬಂಡಾಯ ಏಳುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಜೆಡಿಎಸ್‌ ಅಸಮಾಧಾನಿತರಿಗೆ ಟಿಕೆಟ್‌ ಆಫರ್‌ ಕೊಡಬಹುದು.

ಬಿ.ವೈ. ವಿಜಯೇಂದ್ರ ಸ್ಪರ್ಧೆ ಮಾಡೋದು ಪಕ್ಕಾನಾ?
ಶಿಕಾರಿಪುರದಲ್ಲಿ ವಿಜಯೇಂದ್ರ ಸ್ಪರ್ಧಿಸುವುದು ಇನ್ನೂ ಪಕ್ಕಾ ಆಗಿಲ್ಲ. ಹಳೇ ಮೈಸೂರು ಭಾಗದಲ್ಲಿ ನಿಲ್ಲುತ್ತಾರೆ ಎಂಬ ಗೊಂದಲಗಳಿಗೂ ತೆರೆ ಬಿದ್ದಿಲ್ಲ. ಹಳೇ ಮೈಸೂರು ಭಾಗದಲ್ಲಿ ನಿಲ್ಲುವುದು ಖಚಿತವಾದರೆ ಇಲ್ಲಿ ಬಿಎಸ್‌ವೈ ಕುಟುಂಬಕ್ಕೆ ಟಿಕೆಟ್‌ ಕೊಡುತ್ತಾರಾ? ಅಥವಾ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್‌ ಸಿಗುತ್ತದೆಯೇ ಕಾದು ನೋಡಬೇಕಿದೆ. ವಿಜಯೇಂದ್ರ ಅವರು ಹಳೇ ಮೈಸೂರು ಭಾಗದಲ್ಲಿ ಸ್ಪರ್ಧೆ ಮಾಡಿ, ಶಿಕಾರಿಪುರದಲ್ಲಿ ಕುಟುಂಬ ಸದಸ್ಯರಿಗೇ ಟಿಕೆಟ್‌ ಸಿಗುವ ಸಾಧ್ಯತೆ ಇದ್ದರೆ ಸಂಸದ ಬಿ.ವೈ.ರಾಘವೇಂದ್ರ ಅವರ ಪತ್ನಿ ಅಶ್ವಿ‌ನಿ ಅವರಿಗೆ ಸಿಗಬಹುದು. ಕಾರ್ಯ ಕರ್ತರಿಗೆ ಕೊಡುವುದಾದರೆ ಬಿಎಸ್‌ವೈ ಅವರ ಬಲಗೈನಂತಿರುವ ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಗುರುಮೂರ್ತಿ ಹೆಸರು ಕೇಳಿಬರುತ್ತಿದೆ. ಯಾರಿಗೆ ಟಿಕೆಟ್‌ ಸಿಕ್ಕರೂ ಈ ಬಾರಿ ಪ್ರಬಲ ಪೈಪೋಟಿ ಎದುರಾಗುವುದು ನಿಶ್ಚಿತ.

-ಶರತ್‌ ಭದ್ರಾವತಿ

ಟಾಪ್ ನ್ಯೂಸ್

ಯತ್ನಾಳ

Vijayapura; ಡಿಸಿಎಂ ಸ್ಥಾನಕ್ಕೆ ಶಾಮನೂರು ಬೇಡಿಕೆ ಸೂಕ್ತ: ಶಾಸಕ ಯತ್ನಾಳ

ramesh jigajinagi

Vijayapura; ಜೆಡಿಎಸ್ ಹೊಂದಾಣಿಕೆಯಿಂದ ಬಲ ಬಂದಿದೆ: ಸಂಸದ ಜಿಗಜಿಣಗಿ

Desi Swara: ಕಲ್ಲಿನಲ್ಲೇ ಅರಳಿದ ನೈಸರ್ಗಿಕ ವಿಸ್ಮಯದ ತಾಣವಿದು

Desi Swara: ಕಲ್ಲಿನಲ್ಲೇ ಅರಳಿದ ನೈಸರ್ಗಿಕ ವಿಸ್ಮಯದ ತಾಣವಿದು…

Panaji: ದೆಹಲಿ ಮಾದರಿಯಲ್ಲಿ ಗೋವಾದ ಸಮಸ್ಯೆ ನಿಭಾಯಿಸಲು ಸಾಧ್ಯವಿಲ್ಲ: ಕುತಿನ್ಹೊ

Panaji: ದೆಹಲಿ ಮಾದರಿಯಲ್ಲಿ ಗೋವಾದ ಸಮಸ್ಯೆ ನಿಭಾಯಿಸಲು ಸಾಧ್ಯವಿಲ್ಲ: ಕುತಿನ್ಹೊ

Indian Flag: ರಾಷ್ಟ್ರ‌ಧ್ವಜಕ್ಕೆ ಮದೀನಾ ಗುಂಬಜ್ ಚಿತ್ರ ಹಾಕಿ ಅಪಮಾನ: ವ್ಯಕ್ತಿ ಬಂಧನ

Indian Flag: ರಾಷ್ಟ್ರ‌ಧ್ವಜಕ್ಕೆ ಮದೀನಾ ಗುಂಬಜ್ ಚಿತ್ರ ಹಾಕಿ ಅಪಮಾನ: ವ್ಯಕ್ತಿ ಬಂಧನ

Heavy Rain: ಗೋವಾದಲ್ಲಿ ಭಾರೀ ಮಳೆ… ಧರೆಗುರುಳಿದ ಮರ, ಭೂಕುಸಿತ, ಅಪಾಯದಂಚಿನಲ್ಲಿ ಮನೆ

Heavy Rain: ಗೋವಾದಲ್ಲಿ ಭಾರೀ ಮಳೆ… ಧರೆಗುರುಳಿದ ಮರ, ಭೂಕುಸಿತ, ಅಪಾಯದಂಚಿನಲ್ಲಿ ಮನೆ

Big Bash Winning Coach Luke Williams Joins RCB Women’s Team as Head Coach

WPL; Royal Challengers Bangalore ಮಹಿಳಾ ತಂಡಕ್ಕೆ ಹೊಸ ಕೋಚ್ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

ಹೊಸ ಸೇರ್ಪಡೆ

4-kottigehara

Kottigehara: ಧಾರಾಕಾರ ಮಳೆ, ಹೈರಾಣಾದ ರೈತರು

ಯತ್ನಾಳ

Vijayapura; ಡಿಸಿಎಂ ಸ್ಥಾನಕ್ಕೆ ಶಾಮನೂರು ಬೇಡಿಕೆ ಸೂಕ್ತ: ಶಾಸಕ ಯತ್ನಾಳ

ramesh jigajinagi

Vijayapura; ಜೆಡಿಎಸ್ ಹೊಂದಾಣಿಕೆಯಿಂದ ಬಲ ಬಂದಿದೆ: ಸಂಸದ ಜಿಗಜಿಣಗಿ

Desi Swara: ಕಲ್ಲಿನಲ್ಲೇ ಅರಳಿದ ನೈಸರ್ಗಿಕ ವಿಸ್ಮಯದ ತಾಣವಿದು

Desi Swara: ಕಲ್ಲಿನಲ್ಲೇ ಅರಳಿದ ನೈಸರ್ಗಿಕ ವಿಸ್ಮಯದ ತಾಣವಿದು…

Panaji: ದೆಹಲಿ ಮಾದರಿಯಲ್ಲಿ ಗೋವಾದ ಸಮಸ್ಯೆ ನಿಭಾಯಿಸಲು ಸಾಧ್ಯವಿಲ್ಲ: ಕುತಿನ್ಹೊ

Panaji: ದೆಹಲಿ ಮಾದರಿಯಲ್ಲಿ ಗೋವಾದ ಸಮಸ್ಯೆ ನಿಭಾಯಿಸಲು ಸಾಧ್ಯವಿಲ್ಲ: ಕುತಿನ್ಹೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.