ತೇರದಾಳ Congress ಅಭ್ಯರ್ಥಿಯಾಗಿ ಸಿದ್ದು ಕೊಣ್ಣೂರ; ಉಮಾಶ್ರೀ ಅಭಿಮಾನಿಗಳಿಗೆ ಆಘಾತ


Team Udayavani, Apr 15, 2023, 10:55 PM IST

1-csaasd

ರಬಕವಿ-ಬನಹಟ್ಟಿ : ಕಳೆದ ಹಲವಾರು ದಿನಗಳಿಂದ ತೇರದಾಳ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಅಯ್ಕೆ ಕಗ್ಗಂಟಾಗಿತ್ತು. ಶನಿವಾರ ತೇರದಾಳ ಟಿಕೆಟ್ ಘೋಷನೆಯಾಗಿದ್ದು ಅಚ್ಚರಿ ಎಂಬಂತೆ ಸಿದ್ದು ಕೊಣ್ಣೂರ ಆಯ್ಕೆಯಾಗಿದ್ದಾರೆ.

ತೇರದಾಳ ಮತಕ್ಷೇತ್ರದ ಮೂಲಕ ತಮ್ಮ ಅಧಿಕೃತ ರಾಜಕಾರಣವನ್ನು ಆರಂಭಿಸಿದ್ದ ಮಾಜಿ ಸಚಿವೆ, ಶಾಸಕಿ ಉಮಾಶ್ರೀ ಅವರಿಗೆ ಟಿಕೆಟ್ ತಪ್ಪಿರುವುದು ಅವರ ಅಭಿಮಾನಿಗಳು ಹಾಗೂ ತೇರದಾಳ ಮತಕ್ಷೇತ್ರದ ಅವರ ಬೆಂಬಲಿಗರಿಗೆ ಬಾರಿ ಆಘಾತವನ್ನುಂಟು ಮಾಡಿದೆ.

ಕಳೆದ15 ವರ್ಷಗಳ ಕಾಲ ತೇರದಾಳ ವಿಧಾನಸಭಾ ಕ್ಷೇತ್ರದ ಆರಂಭದಿಂದ ಸತತವಾಗಿ ಮೂರು ಬಾರಿ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದು, ಈ ಭಾಗದ ಅಭಿಮಾನಿಗಳಿಗೆ ಸಾಕವ್ವ `ಅಮ್ಮ’ ಎಂದೇ ಪರಿಚಿತರಾಗಿದ್ದರು. ಆದರೆ ಈ ಭಾರಿ ಸ್ಥಳೀಯ ಮತ್ತು ನೇಕಾರರಿಗೆ ಟಿಕೆಟ್ ನೀಡುವ ಮಧ್ಯದಲ್ಲಿ ಮಹಾಲಿಂಗಪುರದ ಯುವ ಧುರೀಣ ಸಿದ್ದಣ್ಣ ಕೊಣ್ಣೂರ ಅವರಿಗೆ ಹೈಕಮಾಂಡ ಮಣೆ ಹಾಕಿರುವುದು ಕಾರ್ಯಕರ್ತರಲ್ಲಿ ದಿಗ್ಭ್ರಮೆ ಮೂಡಿದೆ.

2008 ರಲ್ಲಿ ಮತಕ್ಷೇತ್ರವಾಗಿ ರೂಪಗೊಂಡ ನಂತರ ನಡೆದ ಮೊದಲ ಚುನಾವಣೆಯಲ್ಲಿ ಉಮಾಶ್ರೀ ಸ್ಪರ್ಧೆಯಿಂದ ರಾಜ್ಯದಲ್ಲಿ ಕ್ಷೇತ್ರ ಗಮನ ಸೆಳೆದಿತ್ತು. ಆದರೆ ಕ್ಷೇತ್ರದಲ್ಲಿ ಉಮಾಶ್ರೀ ಹೊರಗಿನವರು ಎಂಬ ಕಾರಣಕ್ಕೆ ಬಿಜೆಪಿಯ ಸಿದ್ದು ಸವದಿ ವಿರುದ್ಧ ಸೋಲು ಅನುಭವಿಸಬೇಕಾಯಿತು. ಉಮಾಶ್ರೀ ಸೋತರೂ ಕ್ಷೇತ್ರದಲ್ಲಿ ಉಳಿದುಕೊಂಡು ನಾನು ನೇಕಾರನ ಮಗಳು, ನಾನು ನಿಮ್ಮವಳು ಎಂದು , ಪ್ರಚಾರ ಮಾಡುತ್ತಾ ಇಲ್ಲಿಯೇ ಉಳಿದರು. 2013 ರ ಚುನಾವಣೆಯಲ್ಲಿ ನೇಕಾರರು ಅವರ ಕೈ ಹಿಡಿದರು. ನಂತರ 2018ರಲ್ಲಿ ಮತ್ತೊಮ್ಮೆ ಮೂರನೇ ಬಾರಿ ಕಣಕ್ಕಿಳಿದಿದ್ದ ಮಾಜಿ ಸಚಿವೆ ಭಾರಿ ಅಂತರದಲ್ಲಿ ಹಾಲಿ ಶಾಸಕ ಸಿದ್ದು ಸವದಿ ವಿರುದ್ಧ ಸೋಲ ಬೇಕಾಯಿತು.

ಡಾ. ಪದ್ಮಜಿತ ನಾಡಗೌಡ ಪಾಟೀಲ, ಪಕ್ಷದ ಜಿಲ್ಲಾ ಉಪಾಧ್ಯಕ್ಷ ಡಾ. ಎ.ಆರ್. ಬೆಳಗಲಿ, ನೇಕಾರ ಸಮುದಾಯದ ಡಾ. ಎಂ.ಎಸ್. ದಡ್ಡೇನವರ ಸ್ಥಳೀಯ ಅಭ್ಯರ್ಥಿ ಆಕಾಂಕ್ಷಿಗಳಾಗಿ ಶತಾಯ-ಗತಾಯ ಪೈಪೋಟಿ ನಡೆಸಿದ್ದರು.

ಬಿಜೆಪಿ ಅಭ್ಯರ್ಥಿ ಸಿದ್ದು ಸವದಿ ಕೂಡಾ ಪಂಚಮಸಾಲಿಯಾಗಿರುವುದರಿಂದ ಮತಗಳನ್ನು ವಿಭಜನೆ ಮಾಡುವ ಉದ್ದೇಶದಿಂದ ಹೈಕಮಾಂಡ್ ಪಂಚಮಸಾಲಿ ಮುಖಂಡ ಸಿದ್ದು ಕೊಣ್ಣೂರ ಅವರಿಗೆ ಮಣೆಹಾಕಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.

ಹೈಕಮಾಂಡ್‌ನ ಈ ನಿರ್ಧಾರದಿಂದ ಸ್ಥಳೀಯ ಆಕಾಂಕ್ಷಿಗಳಾಗಿದ್ದ ಡಾ. ಪದ್ಮಜೀತ ನಾಡಗೌಡ ಪಾಟೀಲ ಪಕ್ಷೇತರರಾಗಿ ಸ್ಪರ್ಧಿಸುವ ಸಾಧ್ಯತೆ ಹೆಚ್ಚಿದೆ. ಮಹಾಲಿಂಗಪುರದ ಡಾ. ಎ. ಆರ್. ಬೆಳಗಲಿ ಈಗಾಗಲೇ ತಮ್ಮ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಅಲ್ಲದೇ ಇನ್ನುಳಿದವರ ನಡೆ ನಿಗೂಢವಾಗಿದ್ದು, ಬೆಂಬಲಿಗರ ಸೂಚನೆಯಂತೆ ಮುನ್ನಡೆಯುವುದಾಗಿ ತಿಳಿದು ಬಂದಿದೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.