‘ಆಪರೇಷನ್ ಕಮಲ’… ಪರಿಸ್ಥಿತಿ ಉದ್ಭವಿಸುವುದಿಲ್ಲ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಎಕ್ಸಿಟ್ ಪೋಲ್ಗಳನ್ನು ತಪ್ಪೆಂದು ಸಾಬೀತುಪಡಿಸುತ್ತೇವೆ...
Team Udayavani, May 11, 2023, 4:36 PM IST
ಬೆಂಗಳೂರು : ‘ಆಪರೇಷನ್ ಕಮಲ’ದ ಸಾಧ್ಯತೆಯನ್ನು ಗುರುವಾರ ತಳ್ಳಿಹಾಕಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ 120 ರಿಂದ 125 ಸ್ಥಾನಗಳನ್ನು ಪಡೆದು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.
ನಮ್ಮ ಪಕ್ಷವು ಎಕ್ಸಿಟ್ ಪೋಲ್ಗಳನ್ನು ತಪ್ಪೆಂದು ಸಾಬೀತುಪಡಿಸುತ್ತದೆ, ಅವುಗಳಲ್ಲಿ ಹೆಚ್ಚಿನವು ಕಾಂಗ್ರೆಸ್ಗೆ ಬಿಜೆಪಿಗಿಂತ ಹೆಚ್ಚಿನ ಸ್ಥಾನವನ್ನು ನೀಡಿವೆ. ಬುಧವಾರದಂದು ಪಡೆದ “ಪ್ರಾಥಮಿಕ ವರದಿಗಳು” ಚುನಾವಣೆಯ ನಂತರದ ಫಲಿತಾಂಶಗಳನ್ನು ಸೂಚಿಸುತ್ತವೆ ಎಂದು ಹೇಳಿದರು.
ಬಿಜೆಪಿಯು ‘ಆಪರೇಷನ್ ಕಮಲ’ವನ್ನು ಆಶ್ರಯಿಸುವ ಅಗತ್ಯವಿದೆಯೇ ಎಂಬ ಪ್ರಶ್ನೆಗೆ, “ಖಂಡಿತವಾಗಿಯೂ ಇಲ್ಲ. ನಂಬಿಕೆ ಇರಲಿ. ಯಾವುದೇ ರೀತಿಯ ‘ಆಪರೇಷನ್ ಕಮಲ’ದ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಬಾರಿ ರಾಜ್ಯದ ಜನತೆ ರಾಜ್ಯದ ಅಭಿವೃದ್ಧಿಗೆ ಮತ ನೀಡಿ ಬಹುಮತದ ಸರಕಾರ ನೀಡಲಿದ್ದಾರೆ. ಯಾವುದೇ ಅತಂತ್ರ ಪರಿಸ್ಥಿತಿ ಇರುವುದಿಲ್ಲ ಎಂದು ಬಿಜೆಪಿಯ ರಾಜ್ಯ ಚುನಾವಣ ನಿರ್ವಹಣ ಸಮಿತಿಯ ಸಂಚಾಲಕಿ ಶೋಭಾ ಹೇಳಿದರು.
ನಮ್ಮ ಬೂತ್ ಮಟ್ಟದ ಕಾರ್ಯಕರ್ತರಿಂದ ಪಡೆದ ಪ್ರಾಥಮಿಕ ವರದಿಗಳ ಪ್ರಕಾರ ನಾವು 120 ರಿಂದ 125 ಸ್ಥಾನಗಳನ್ನು ಗೆಲ್ಲುತ್ತೇವೆ. ಕೆಲವು ಸ್ಥಾನಗಳಲ್ಲಿ ಪಕ್ಷವು ಊಹೆಗೂ ಮೀರಿದ ಉತ್ತಮ ಸಾಧನೆ ಮಾಡಲಿದೆ ಎಂದರು.
150 ಸ್ಥಾನಗಳನ್ನು ಗೆಲ್ಲುವುದಾಗಿ ಹೇಳಿಕೊಂಡಿದ್ದ ಪಕ್ಷವು ತನ್ನ ಅಂದಾಜನ್ನು 120 ಕ್ಕೆ ಏಕೆ ಇಳಿಸಿತು ಎಂಬುದರ ಕುರಿತು, ಬೂತ್ ಮಟ್ಟದ ಕಾರ್ಯಕರ್ತರು ಪಡೆದ ಪ್ರಾಥಮಿಕ ವರದಿಯನ್ನು ಆಧರಿಸಿ ಇತ್ತೀಚಿನ ಲೆಕ್ಕಾಚಾರವನ್ನು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ