ಮೋದಿಯಂತ ಸ್ಟಾರ್ ನಟರ ಕೈಯಲ್ಲೇ attraction ಮಾಡೋಕೆ ಆಗ್ತಿಲ್ಲ,ಇನ್ನು…: HDK ಲೇವಡಿ
ವರುಣಾದಲ್ಲಿ ಕಾಂಗ್ರೆಸ್- ಬಿಜೆಪಿ ಮೈತ್ರಿ ಆಗಿದೆ
Team Udayavani, Apr 6, 2023, 3:08 PM IST
ಮೈಸೂರು: ಬಿಜೆಪಿ ಚುನಾವಣ ಪ್ರಚಾರಕ್ಕೆ ಖ್ಯಾತ ನಟರಾದ ಸುದೀಪ್ ಹಾಗೂ ಪವನ್ ಕಲ್ಯಾಣ್ ಕರೆತರುತ್ತಿರುವ ವಿಚಾರಕ್ಕೆ ಸಂಬಂಧಿಸಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದು, ”ಮೋದಿಯಂತ ಸ್ಟಾರ್ ನಟರ ಕೈಯಲ್ಲೇ ಅಟ್ರಾಕ್ಷನ್ ಮಾಡೋಕೆ ಆಗ್ತಿಲ್ಲ.ಅಂತಹದರಲ್ಲಿ ಈ ಸ್ಟಾರ್ ನಟರು ಏನು ಮಾಡುತ್ತಾರೆ ನೋಡೊಣ” ಎಂದಿದ್ದಾರೆ.
ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,”ವರುಣಾದಲ್ಲಿ ಕಾಂಗ್ರೆಸ್- ಬಿಜೆಪಿ ಮೈತ್ರಿ ಆಗಿದೆ” ಎಂದು ಹೊಸ ಬಾಂಬ್ ಸಿಡಿಸಿದರು. ”ಸಿದ್ದರಾಮಯ್ಯರನ್ನು ಗೆಲ್ಲಿಸಲು ಬಿಜೆಪಿ ಅನುಕೂಲ ಮಾಡಿ ಕೊಡುತ್ತಿದೆ. ಬಿಜೆಪಿ ಅಲ್ಲಿ ಸಮರ್ಥ ಅಭ್ಯರ್ಥಿ ಹಾಕುತ್ತಿಲ್ಲ.ಬಿಜೆಪಿ- ಜೆಡಿಎಸ್ ಒಳ ಒಪ್ಪಂದ ಅಲ್ಲ, ಕಾಂಗ್ರೆಸ್- ಬಿಜೆಪಿ ಒಳ ಒಪ್ಪಂದ ಆಗಿದೆ. ಜೆಡಿಎಸ್ 123 ಸ್ಥಾನ ಗೆಲ್ಲಲು ಹೋರಾಟ ಮಾಡಿಕೊಂಡು ಬರುತ್ತಿದೆ.”ಎಂದರು.
ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ಗೊಂದಲ ವಿಚಾರಕ್ಕೆ ಪ್ರತಿಕ್ರಿಯಿಸಿ, ”ಹಾಸನ ಟಿಕೆಟ್ ಪಕ್ಷದ ಕಾರ್ಯಕರ್ತನಿಗೆ ಕೊಡೋದು ಎಂದು ಹೇಳಿದ್ದೇನೆ.ಕುಟುಂಬದಿಂದ ಯಾರೂ ಸ್ಪರ್ಧಿಸಲ್ಲ.ಕಾರ್ಯಕರ್ತರಿಗೆ ಕೊಡುವ ನಿರ್ಣಯ ಆಗುತ್ತದೆ.”ಎಂದರು.
”ಅನಿತಾ ಕುಮಾರಸ್ವಾಮಿ ಸ್ಪರ್ಧೆ ಪ್ರಶ್ನೆಯೇ ಇಲ್ಲ.ಎರಡು ಬಾರಿ ಪಕ್ಷದಲ್ಲಿ ಅಭ್ಯರ್ಥಿ ಇಲ್ಲದಕ್ಕೆ ಅನಿವಾರ್ಯ ಸ್ಪರ್ಧೆ ಮಾಡಿದ್ದರು.ಪಕ್ಷ ಸಂಘಟನೆಗೆ ಬೇಕಾದರೆ ಹೋಗಿ ಬರುತ್ತಾರೆ.ಮುಂದೆ ಯಾವುದೇ ಕಾರಣಕ್ಕೂ ಅವರು ಅಭ್ಯರ್ಥಿಯಾಗುವುದಿಲ್ಲ” ಎಂದು ಸ್ಪಷ್ಟನೆ ನೀಡಿದರು.
ವೈಎಸ್ವಿ.ದತ್ತಾ ಅವರಿಗೆ ಕಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ತಪ್ಪಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ”ದತ್ತಾ ನಮ್ಮ ಪಕ್ಷ ಬಿಟ್ಟು ಹೋಗಿದ್ದಾರೆ. ಅವರು ಯಾಕೆ ಟಿಕೆಟ್ ಮಿಸ್ ಮಾಡಿಕೊಂಡರೋ ಗೊತ್ತಿಲ್ಲ.ಅವರ ಬಗ್ಗೆ ನಾನು ಮಾತನಾಡಲ್ಲ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು