ಬೆಳಗಾವಿಯಲ್ಲಿ ಸಕ್ಕರೆ ರಾಜಕಾರಣದ ಸದ್ದು


Team Udayavani, Feb 22, 2023, 5:44 AM IST

ಬೆಳಗಾವಿಯಲ್ಲಿ ಸಕ್ಕರೆ ರಾಜಕಾರಣದ ಸದ್ದು

ಬೆಳಗಾವಿ: ರಾಜ್ಯದಲ್ಲಿ ಅತೀ ಹೆಚ್ಚಿನ ಸಕ್ಕರೆ ಕಾರ್ಖಾನೆಗಳನ್ನು ಹೊಂದಿರುವ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಸಕ್ಕರೆ ರಾಜಕಾರಣ ಬಹಳ ಬಲವಾಗಿ ಬೇರು ಬಿಟ್ಟಿದೆ. ಸಕ್ಕರೆ ರಾಜಕಾರಣವಿಲ್ಲದೆ ಜಿಲ್ಲೆಯ ರಾಜಕೀಯ ಇಲ್ಲ ಎನ್ನುವಷ್ಟು ಎರಡೂ ಒಂದಕ್ಕೊಂದು ಬೆಸೆದುಕೊಂಡಿವೆ. ಯಾವಾಗಲೂ ಚುನಾವಣೆ ವಿಷಯವಾಗಿ ಇದು ಮಹತ್ವ ಪಡೆದುಕೊಂಡಿರುವು ದರಿಂದ ಪ್ರತಿಯೊಬ್ಬರೂ ಸಕ್ಕರೆ ರಾಜ ಕಾರಣದ ಕಡೆಗೆ ನೋಡುವಂತೆ ಮಾಡಿದೆ.

ರಾಜ್ಯ ರಾಜಕೀಯ ಮತ್ತು ಚುನಾವಣೆ ವಿಷಯ ಬಂದಾಗ ಬೆಳಗಾವಿಯ ಸಕ್ಕರೆ ರಾಜಕಾರಣದ ಬಗ್ಗೆ ಮಾತನಾಡದೆ ಮುಂದೆ ಹೋಗುವಂತೆಯೇ ಇಲ್ಲ. ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳಲ್ಲಿ ಈ ಸಕ್ಕರೆ ರಾಜಕಾರಣದ ಗಾಢ ಪ್ರಭಾವ ಅಂಟಿಕೊಂಡಿದೆ. ಅಷ್ಟೇ ಏಕೆ ಕಾಂಗ್ರೆಸ್‌, ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಸಹ ಜಿಲ್ಲೆಯ ಸಕ್ಕರೆ ರಾಜಕಾರಣದ ಲಾಬಿಗೆ ಸಂಪೂರ್ಣ ಮಣಿದಿವೆ. ಹೀಗಾಗಿ ಇಲ್ಲಿ ಸಕ್ಕರೆ ಕಾರ್ಖಾನೆಗಳ ರಾಜಕಾರಣವನ್ನು ನಿರ್ಲಕ್ಷ್ಯ ಮಾಡುವಂತೆಯೇ ಇಲ್ಲ.

ಜಿಲ್ಲೆಯ ರಾಜಕೀಯ ಇತಿಹಾಸವನ್ನು ತೆರೆದು ನೋಡಿದಾಗ 1970-80ರ ದಶಕದಿಂದಲೇ ಸಕ್ಕರೆ ರಾಜಕಾರಣ ಚುನಾವಣೆಗಳಲ್ಲಿ ತನ್ನದೇ ಪಾತ್ರ ನಿರ್ವಹಿಸುತ್ತ ಬಂದಿದೆ. 80ರ ದಶಕದ ಅನಂತರ ಸಕ್ಕರೆ ಕಾರ್ಖಾನೆಗಳ ರಾಜಕಾರಣ ಪ್ರಭಾವ ಮತ್ತಷ್ಟು ಗಾಢವಾಗಿ ಬೆಳೆಯಿತು. ಕಾಂಗ್ರೆಸ್‌ ಮತ್ತು ಬಿಜೆಪಿಯ ಅನೇಕ ನಾಯಕರು ಈ ಸಕ್ಕರೆ ರಾಜಕಾರಣದಿಂದಲೇ ರಾಜ್ಯದಲ್ಲಿ ಬಹಳ ಪ್ರಭಾವಿಗಳಾಗಿ ಬೆಳೆದರು.

ಸರಕಾರ ರಚನೆಯಲ್ಲೂ ಪ್ರಮುಖ ಪಾತ್ರ
ಗಡಿ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ಮತ್ತು ರಾಜಕೀಯದ ಬಗ್ಗೆ ಪ್ರಸ್ತಾವ ಮಾಡಿದರೆ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆ, ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆ, ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ, ಕೆಂಪವಾಡ ಸಕ್ಕರೆ ಕಾರ್ಖಾನೆ, ಸತೀಶ ಶುಗರ್ಸ್‌, ಸೌಭಾಗ್ಯಲಕ್ಷ್ಮೀ ಸಕ್ಕರೆ ಕಾರ್ಖಾನೆ, ವಿಶ್ವನಾಥ ಕತ್ತಿ ಸಕ್ಕರೆ ಕಾರ್ಖಾನೆ ಮತ್ತು ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ. ಈ ಕಾರ್ಖಾನೆಗಳ ಮೂಲಕ ಸಾಕಷ್ಟು ರಾಜಕಾರ ಣಿಗಳು ರಾಜ್ಯಮಟ್ಟದಲ್ಲಿ ತಮ್ಮ ಶಕ್ತಿ ತೋರಿಸಿದರು. ಸರಕಾರದ ರಚನೆಯಲ್ಲಿ ಮಹತ್ವ ಪಾತ್ರ ನಿರ್ವಹಿಸುವಷ್ಟು ಬೆಳೆದು ನಿಂತರು.

ರೈತರ ಮೇಲೆ ಬಿಗಿ ಹಿಡಿತ
ಎಂಟು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯನ್ನು ಹೊಂದಿರುವ ಚಿಕ್ಕೋಡಿ ಭಾಗದಲ್ಲಿ ಸಕ್ಕರೆ ರಾಜಕಾರಣಿಗಳ ದಂಡೇ ಇದೆ. ರಾಜ್ಯ ರಾಜಕಾರಣದ ಆಳ ಅಗಲವನ್ನು ಬಲ್ಲವರಾಗಿರುವ ಈ ನಾಯಕರು ರೈತ ಸಮುದಾಯ ತಮ್ಮ ಮಾತು ಮೀರದಂತೆ ನೋಡಿಕೊಂಡಿದ್ದಾರೆ. ಸಕ್ಕರೆ ಕಾರ್ಖಾನೆಗಳ ಷೇರುದಾರರು ಹಾಗೂ ಸದಸ್ಯರಾಗಿರುವ ರೈತರು ಸಕ್ಕರೆ ಕಾರ್ಖಾನೆಗಳನ್ನು ದೂರ ಇಟ್ಟು ಚುನಾವಣೆಯ ಬಗ್ಗೆ ವಿಚಾರ ಮಾಡದಂತೆ ರಾಜಕಾರಣಿಗಳು ವಾತಾವರಣ ನಿರ್ಮಾಣ ಮಾಡಿದ್ದಾರೆ. ಹೀಗಾಗಿ ಚುನಾವಣೆಯ ಸಮಯದಲ್ಲಿ ಯಾವಾಗಲೂ ಸಕ್ಕರೆ ರಾಜಕಾರಣ ತನ್ನ ಛಾಪು ತೋರಿಸುತ್ತಲೇ ಬಂದಿದೆ.

ವಿಧಾನಸಭೆ ಚುನಾವಣೆ ಸಮಯದಲ್ಲಿ ರೈತರ ಹಿತವೇ ತಮ್ಮ ಮುಖ್ಯ ಧ್ಯೇಯ ಎನ್ನುವ ರಾಜಕೀಯ ಪಕ್ಷಗಳು ಬಾಕಿ ಹಣ ಪಾವತಿ, ಕಬ್ಬಿಗೆ ವೈಜ್ಞಾನಿಕ ದರ ನಿಗದಿ, ತೂಕದಲ್ಲಿ ಮೋಸ ನಡೆಯದಂತೆ ಕ್ರಮ ಸಹಿತ ಹತ್ತಾರು ಭರವಸೆ ನೀಡುತ್ತವೆ. ಚುನಾವಣೆ ಮುಗಿಯುತ್ತಿದ್ದಂತೆ ಯಾವ ರಾಜಕೀಯ ಪಕ್ಷಗಳೂ ಈ ಭರವಸೆಗಳ ಕಡೆಗೆ ಗಮನ ಕೊಡುವುದಿಲ್ಲ. ಎಲ್ಲ ಪಕ್ಷಗಳ ಬಹುತೇಕ ಪ್ರಭಾವಿ ನಾಯಕರು ಸಕ್ಕರೆ ಕಾರ್ಖಾನೆಗಳ ಮಾಲಕರಾಗಿರುವುದರಿಂದ ಪಕ್ಷಗಳು ಸಹ ಇದನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಪರಿಣಾಮ ಸಕ್ಕರೆ ರಾಜಕಾರಣ ಮತ್ತು ರೈತರ ಸಮಸ್ಯೆಗಳು ಕೇವಲ ಚುನಾವಣೆಗೆ ಮಾತ್ರ ಸೀಮಿತ ಎನ್ನುವಂತಾಗಿದೆ.

-ಕೇಶವ ಆದಿ

 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.