ಕು.ಲಲಿತಾ ಅನಪೂರಗೆ BJP ಟಿಕೆಟ್; ಚಿಂಚನಸೂರ ಅವರಿಗೆ ಶಾಕ್
ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆ
Team Udayavani, Apr 12, 2023, 11:48 PM IST
ಯಾದಗಿರಿ : ಬಹು ನಿರೀಕ್ಷಿತ ಬಿಜೆಪಿ 2ನೇ ಪಟ್ಟಿ ಬಿಡುಗಡೆಗೊಂಡಿದ್ದು ಬಿಜೆಪಿ ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷೆ ಕು. ಲಲಿತಾ ಅನಪೂರಗೆ ಗುರುಮಠಕಲ್ ಟಿಕೆಟ್ ನೀಡುವ ಮುಖಾಂತರ ಬಿಜೆಪಿ ಹೈಕಮಾಂಡ್ ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿ ಅಭ್ಯರ್ಥಿಯಾಗಿರುವ ಬಾಬು ರಾವ್ ಚಿಂಚನಸೂರ ಗೆ ಶಾಕ್ ನೀಡಿದೆ.
ಹಿಂದುಳಿದ ಕಬ್ಬಲಿಗ ಸಮುದಾಯದ ಅತ್ಯಂತ ಪ್ರಭಾವಿ ಮಹಿಳೆಯಾಗಿರುವ ಲಲಿತಾ ಅನಪೂರ ಅವರು ಸದ್ಯ ಯಾದಗಿರಿ ನಗರಸಭೆ ಸದಸ್ಯರಾಗಿದ್ದಾರೆ.
ಇದನ್ನೂ ಓದಿ : BJP 23 ಅಭ್ಯರ್ಥಿಗಳ ಎರಡನೇ ಪಟ್ಟಿ ರಿಲೀಸ್; ಯಾವ ಕ್ಷೇತ್ರಕ್ಕೆ ಯಾರು?
ಗುರುಮಠಕಲ್ ಕ್ಷೇತ್ರದಲ್ಲಿ ಕಬ್ಬಲಿಗ ಸಮುದಾಯದ ಹೆಚ್ಚಿನ ಮತಗಳು ಇರುವುದನ್ನು ಮನಗಂಡ ಬಿಜೆಪಿ ಹೈಕಮಾಂಡ್ ಕು. ಲಲಿತಾ ಅನಪೂರರವರಿಗೆ ಟಿಕೆಟ್ ನೀಡಿದ್ದು ಗುರುಮಠಕಲ್ ಕ್ಷೇತ್ರದಲ್ಲಿ ಒಳ್ಳೆಯ ಪೈಪೋಟಿ ನೀಡಲಿದ್ದಾರೆ ಎನ್ನುವುದು ರಾಜಕೀಯ ಲೆಕ್ಕಾಚಾರವಾಗಿದೆ.
ಯಾದಗಿರಿ ಜಿಲ್ಲೆಯ ಗುರುಮಠಕಲ್ ಕ್ಷೇತ್ರದಲ್ಲಿ ಮೂರು ಪ್ರಭಾವಿಗಳು ಸ್ಪರ್ಧೆಯಲ್ಲಿ ಇರುವುದರಿಂದ ತ್ರಿಕೋನ ಸ್ಪರ್ಧೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?