Udupi constituency;ಮತಬೇಟೆಗೆ ಅಸಲಿ ಆಟ ಆರಂಭ; ರೋಡ್‌ ಶೋ, ಪ್ರಚಾರ ಕಾರ್ಯ ಬಿರುಸು

ವಿವಿಧ ಕಾರ್ಯಕ್ರಮಗಳು, ಜಾತ್ರೆ, ನೇಮಗಳಲ್ಲಿಯೂ ಅಭ್ಯರ್ಥಿಗಳೇ ಕಾಣ ಸಿಗುತ್ತಿದ್ದಾರೆ.

Team Udayavani, Apr 26, 2023, 2:18 PM IST

Udupi constituency;ಮತಬೇಟೆಗೆ ಅಸಲಿ ಆಟ ಆರಂಭ; ರೋಡ್‌ ಶೋ, ಪ್ರಚಾರ ಕಾರ್ಯ ಬಿರುಸು

ಉಡುಪಿ: ರಾಜಕೀಯಕ ಪಕ್ಷಗಳಲ್ಲಿ ಟಿಕೆಟ್‌ ಹಂಚಿಕೆ ಸಂದರ್ಭದಲ್ಲಿ ಹಲವಾರು ರೀತಿಯ ಗೊಂದಲಗಳು ಉಂಟಾಗಿದ್ದವು. ಪಕ್ಷದೊಳಗೆ ಅಸಮಾಧಾನ, ಬಂಡಾಯ ಸ್ಪರ್ಧೆಯ ಯೋಚನೆ ಸಹಿತ ಹಲವಾರು ಅಡೆತಡೆಗಳು ಪ್ರಮುಖ ರಾಷ್ಟ್ರೀಯ ಪಕ್ಷಗಳಲ್ಲಿಯೂ ಇತ್ತು. ಬಳಿಕ ಕೆಲವೇ ದಿನಗಳಲ್ಲಿ ಇದು ಇತ್ಯರ್ಥ ಕಂಡಿದೆ.

ಈ ನಡುವೆ ನಾಮಪತ್ರ ವಾಪಸಾತಿ ಪ್ರಕ್ರಿಯೆ ಯೂ ಮುಗಿದಿದ್ದು, ಜಿಲ್ಲೆಯ 5 ವಿಧಾನ ಸಭಾ ಕ್ಷೇತ್ರಗಳಲ್ಲಿ ಒಟ್ಟು 35 ಮಂದಿ ಅಭ್ಯರ್ಥಿಗಳಿಂದ ಮತಬೇಟೆಯ ಅಸಲಿ ಆಟ ಆರಂಭವಾಗಿದೆ. ಈಗ ಜಿಲ್ಲೆಯಾದ್ಯಂತ ಚುನಾವಣ ಪ್ರಚಾರ ಮತ್ತಷ್ಟು ವೇಗ ಪಡೆದುಕೊಂಡಿದೆ. ವಿವಿಧ ಪಕ್ಷಗಳ ಕಾರ್ಯಕರ್ತರಿಂದ ಮನೆ ಮನೆ ಭೇಟಿ, ರೋಡ್‌ ಶೋ, ಸಾಮಾಜಿಕ ಜಾಲತಾಣಗಳಲ್ಲಿ
ಪ್ರಚಾರ ಬಿರುಸುಗೊಂಡಿದೆ.

ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದ ಸೋಮವಾರ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಏಳು ಮಂದಿ
ನಾಮಪತ್ರ ಹಿಂಪಡೆದಿದ್ದು ಜಿಲ್ಲೆಯ ಚುನಾವಣ ಅಖಾಡ ಅಂತಿಮ ರೂಪ ಪಡೆದಿದೆ. ಅಭ್ಯರ್ಥಿಗಳು ಮತ್ತು ವಿವಿಧ ಪಕ್ಷಗಳ
ಕಾರ್ಯಕರ್ತರು ಮನೆಮನೆ ಭೇಟಿ, ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚಾರ ಕಾರ್ಯ ಮುಂದುವರಿಸಿದ್ದಾರೆ. ಧಾರ್ಮಿಕ
ಸ್ಥಳಗಳು, ವಿವಿಧ ಕಾರ್ಯಕ್ರಮಗಳು, ಜಾತ್ರೆ, ನೇಮಗಳಲ್ಲಿಯೂ ಅಭ್ಯರ್ಥಿಗಳೇ ಕಾಣ ಸಿಗುತ್ತಿದ್ದಾರೆ.

ಸಾಮಾಜಿಕ ಜಾಲತಾಣ ಬಳಕೆ
ಮತಪ್ರಚಾರಕ್ಕಾಗಿ ಅಭ್ಯರ್ಥಿಗಳ ಬೆಂಬಲಿಗರು ಸಾಮಾಜಿಕ ಜಾಲತಾಣಗಳಲ್ಲಿಯೂ ಸಕ್ರಿಯರಾಗಿದ್ದಾರೆ. ವಿವಿಧ ಸಭೆ- ಸಮಾರಂಭಗಳು, ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಸೇರಿದ ಜನರು ಹಾಗೂ ಅಭ್ಯರ್ಥಿಗಳ ಸಾಧನೆಗಳುಳ್ಳ ವಿವರ, ವೀಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಡಲಾಗುತ್ತಿದೆ. ಮನೆಮನೆ ಪ್ರಚಾರ ಆರಂಭ ಬಿಜೆಪಿ ವತಿಯಿಂದ ಮಹಾ ಅಭಿಯಾನ ರವಿವಾರ ಆರಂಭಗೊಂಡಿದ್ದು, ಆಯಾ ಬೂತ್‌ ಮಟ್ಟದಿಂದ ಸಕ್ರಿಯವಾಗಿ ನಡೆಯುತ್ತಿದೆ. ಮುಂದಿನ ಎರಡು ರವಿವಾರಗಳಂದು ಇದು ಮುಂದುವರಿಯಲಿದ್ದು, ಈ ಮೂಲಕ ಪ್ರತೀ ಮನೆಗೂ ತೆರಳಿ ಬಿಜೆಪಿ ಪಕ್ಷದ ಅಭ್ಯರ್ಥಿ ಹಾಗೂ
ಸಾಧನೆಗಳನ್ನು ತಿಳಿಸುವ ಕೆಲಸ ಮಾಡಲಾಗುತ್ತಿದೆ. ಜಿಲ್ಲಾ ಕಾಂಗ್ರೆಸ್‌ ವತಿಯಿಂದಲೂ ಮನೆಮನೆ ಪ್ರಚಾರ ಕಾರ್ಯ ಆರಂಭಗೊಂಡಿದೆ.

ಮತದಾರರ ಓಲೈಕೆ
ಮನೆಗಳಲ್ಲಿ ಹಾಗೂ ದೂರದ ಊರುಗಳಲ್ಲಿ, ಅನ್ಯ ಜಿಲ್ಲೆ, ವಿದೇಶದಲ್ಲಿರುವ ಜಿಲ್ಲೆಯ  ಮತದಾರರನ್ನೂ ರಾಜಕೀಯ ಪಕ್ಷಗಳು
ಓಲೈಕೆ ಮಾಡುತ್ತಿದ್ದಾರೆ. ಅವರಿಗೆ ಕರೆ ಮಾಡಿ ವಿಚಾರಿಸಿ ಮತದಾನ ದಿನದಂದು ಬಂದು ತಮಗೇ ಮತಚಲಾಯಿಸಬೇಕು ಎಂದು
ಕೂಡ ವಿನಂತಿ ಮಾಡುವ ಪ್ರಕ್ರಿಯೆ ಪಕ್ಷಗಳ ಕಾರ್ಯಕರ್ತರ ಮೂಲಕ ನಡೆಯುತ್ತಿದೆ.

ಹೊರ ರಾಜ್ಯ,ಜಿಲ್ಲೆಗಳಲ್ಲಿ ಮತ ಬೇಟೆ
ಜಿಲ್ಲೆಯ ಸಾಕಷ್ಟು ಮತದಾರರು ಹೊರ ಜಿಲ್ಲೆ, ರಾಜ್ಯಗಳಲ್ಲಿಯೂ ನೆಲೆಸಿರುವುದರಿಂದ ಅಭ್ಯರ್ಥಿಗಳು ಮತ್ತು ಪಕ್ಷದ ಪ್ರಮುಖರು
ಅಲ್ಲಿಗೂ ತೆರಳಿ ಮತ ಪ್ರಚಾರ ಕೈಗೊಂಡಿದ್ದಾರೆ. ಜಿಲ್ಲೆಯಲ್ಲಿ ಬಿಜೆಪಿ, ಕಾಂಗ್ರೆಸ್‌ ಎರಡು ಪಕ್ಷಗಳು ಕ್ಲೀನ್‌ ಸ್ವೀಪ್‌ಗೆ ಜಿದ್ದಾಜಿದ್ದಿನಲ್ಲಿವೆ. ಬೈಂದೂರು, ಕಾರ್ಕಳ, ಉಡುಪಿ, ಕಾಪು, ಕುಂದಾಪುರ ಕ್ಷೇತ್ರದ ಹಲವು ಮತದಾರರು ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ ಮೊದಲಾದ ಕಡೆಗಳಲ್ಲಿ ಹೊಟೇಲ್‌, ಕ್ಯಾಂಟಿನ್‌, ಕಾಂಡಿಮೆಂಟ್ಸ್‌ ಉದ್ಯಮಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನಡೆಸುತ್ತಿದ್ದಾರೆ. ಅಲ್ಲದೇ ಪ್ರಮುಖ ಸಂಸ್ಥೆಗಳಲ್ಲಿ ಉದ್ಯೋಗಿಗಳಾಗಿಯೂ ಅನೇಕರು ಕಾರ್ಯನಿರ್ವಹಿಸುತ್ತಿದ್ದಾರೆ. ಮುಂಬಯಿ ಮತ್ತು ಪುಣೆಯಲ್ಲಿಯೂ ಕರಾವಳಿ ಜಿಲ್ಲೆಯವರು ಹೆಚ್ಚಿದ್ದಾರೆ.

ಹಾಗೆಯೇ ಅರಬ್‌ ದೇಶಗಳಲ್ಲೂ ಉದ್ಯೋಗ ಮಾಡುತ್ತಿರುವ ಕರಾವಳಿಗರ ಮೇಲೆ ಅಭ್ಯರ್ಥಿಗಳು ಕಣ್ಣಿಟ್ಟಿದ್ದು, ಅವರನ್ನು
ಮತದಾನದ ದಿನ ಊರಿಗೆ ಕರೆಸಿಕೊಳ್ಳುವ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಅಭ್ಯರ್ಥಿಗಳು ಹೊರ ಜಿಲ್ಲೆ/ ರಾಜ್ಯಗಳಲ್ಲಿ
ಇರುವ ಪ್ರಮುಖ ಸಂಘ, ಸಂಸ್ಥೆಗಳಲ್ಲಿನ ಮುಖಂಡರನ್ನು ಭೇಟಿ ಮಾಡಿ ಮತಯಾಚಿಸುತ್ತಿದ್ದಾರೆ. ಅಲ್ಲದೇ ಅಲ್ಲಲ್ಲಿ ಸಣ್ಣ ಸಣ್ಣ ಸಭೆಗಳನ್ನು ಆಯೋಜಿಸುವ ಮೂಲಕ ಖುದ್ದು ಅಭ್ಯರ್ಥಿ ಗಳೇ ಹೋಗಿ ಮನವರಿಕೆ ಮಾಡಿಕೊಡುತ್ತಿರುವುದನ್ನು ಕಾಣಬಹುದಾಗಿದೆ. ಇತ್ತೀಚೆಗೆ ಉಡುಪಿ ಜಿಲ್ಲೆಯ ವಿವಿಧ ಕ್ಷೇತ್ರದ ಕೆಲವು ಅಭ್ಯರ್ಥಿಗಳು ಬೆಂಗಳೂರು, ಮುಂಬಯಿ, ಪುಣೆ, ಹುಬ್ಬಳಿ- ಧಾರವಾಡ ಮೊದಲಾದ ಕಡೆಗಳಲ್ಲಿ ಸಭೆ ನಡೆಸಿ ಮತಯಾಚಿಸಿದ್ದಾರೆ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.