ವರುಣ ಅಡಕತ್ತರಿಯಲ್ಲಿ ವಿಜಯೇಂದ್ರ: ಸಿದ್ದು ಕ್ಷೇತ್ರದಲ್ಲಿ ಕಣಕ್ಕಿಳಿಸಲು ವರಿಷ್ಠರ ಆಸಕ್ತಿ

 ಹೈಕಮಾಂಡ್‌ ನಡೆ ಬಗ್ಗೆ ಕುತೂಹಲ

Team Udayavani, Mar 31, 2023, 6:24 AM IST

ವರುಣ ಅಡಕತ್ತರಿಯಲ್ಲಿ ವಿಜಯೇಂದ್ರ: ಸಿದ್ದು ಕ್ಷೇತ್ರದಲ್ಲಿ ಕಣಕ್ಕಿಳಿಸಲು ವರಿಷ್ಠರ ಆಸಕ್ತಿ

ಮೈಸೂರು: ಆಗ ಅವರು ವರುಣ ಕ್ಷೇತ್ರದಲ್ಲಿ ಎದುರಾಳಿಗಳಿಗೆ ತೊಡೆ ತಟ್ಟಲು ಸಿದ್ಧರಿದ್ದರು. ಆದರೆ  ಅವರ ಪಕ್ಷದ ವರಿಷ್ಠರು ತಯಾರಿರಲಿಲ್ಲ.  ಈಗ ಅವರಿಗೆ ಆಸಕ್ತಿ ಇಲ್ಲ. ಆದರೆ ತೊಡೆ ತಟ್ಟುವಂತೆ ವರಿಷ್ಠರು ಅವರನ್ನು ಅಖಾಡಕ್ಕೆ ತಳ್ಳುತ್ತಿದ್ದಾರೆ.

ಮೈಸೂರು ಜಿಲ್ಲೆಯ ವರುಣ ಕ್ಷೇತ್ರದಲ್ಲಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಚಾರದಲ್ಲಿ ಅನ್ವಯವಾಗುವ ಮಾತಿದು.

ವಿಜಯೇಂದ್ರ 2018ರ ಅಸೆಂಬ್ಲಿ ಚುನಾವಣೆ ವೇಳೆ ವರುಣ ಕ್ಷೇತ್ರ ಸುತ್ತಿ ಪಕ್ಷ ಸಂಘಟಿಸಿದ್ದರು. ತಮ್ಮ ಬೆಂಬಲಿಗರ ಪಡೆ ಕಟ್ಟಿದ್ದರು. ವೀರಶೈವ-ಲಿಂಗಾಯತ ಸಮಾಜದವರು ಹೆಚ್ಚಿರುವ ಈ ಕ್ಷೇತ್ರದಲ್ಲಿ ತಮ್ಮ ಪ್ರಭಾವವನ್ನು ಮೂಡಿಸಿದರು. ಆಗ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದವರು ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ. ಮುಖ್ಯಮಂತ್ರಿಗಳ ಕ್ಷೇತ್ರದಲ್ಲಿ ವಿಜಯೇಂದ್ರ ಅಖಾಡಕ್ಕೆ ಇಳಿಯಲು ಮುಂದಾದಾಗ ಈ ಭಾಗದ ಬಿಜೆಪಿ ಕಾರ್ಯಕರ್ತರಲ್ಲಿ ಹುಮ್ಮಸ್ಸು ಮೂಡಿತ್ತು. ಅದೊಂದು ಅನಿರೀಕ್ಷಿತ ತಿರುವಾಗಿತ್ತು.

ಆಗ ವರುಣ ಕ್ಷೇತ್ರದಲ್ಲಿ ವಿಜಯೇಂದ್ರ ಅವರ ಮಿಂಚಿನ ಸಂಚಾರ, ಜನರ ಜತೆ ಒಡನಾಟ, ಸಭೆ, ಸಮಾರಂಭಗಳಲ್ಲಿ ಪಾಲ್ಗೊಳ್ಳುವುದನ್ನು ಕಂಡು ಸ್ಥಳೀಯ ಕಾಂಗ್ರೆಸಿಗರು ದಿಗಿಲುಗೊಂಡಿದ್ದು ಉಂಟು. ಆದರೆ ಕೊನೆ ಘಳಿಗೆಯಲ್ಲಿ ಬಿಜೆಪಿ ಹೈಕಮಾಂಡ್‌ ವರುಣ ಕ್ಷೇತ್ರದಲ್ಲಿ ವಿಜಯೇಂದ್ರ ಅವರಿಗೆ ಟಿಕೆಟ್‌ ನಿರಾಕರಿಸಿತು. ಇದರಿಂದ ಯಡಿಯೂರಪ್ಪ, ವಿಜಯೇಂದ್ರ ಹಾಗೂ ಅವರ ಬೆಂಬಲಿಗರು ಅಸಮಾಧಾನಗೊಂಡಿದ್ದು ಈಗ ಇತಿಹಾಸ.

ಈಗ ಕಳೆದ ಐದು ವರ್ಷಗಳಲ್ಲಿ ರಾಜ್ಯ ರಾಜಕೀಯ ಪರಿಸ್ಥಿತಿಯೂ ಬದಲಾಗಿದೆ. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ವರುಣ ಕ್ಷೇತ್ರದಲ್ಲಿ ಮತ್ತೆ ವಿಜಯೇಂದ್ರ ಅವರ ಹೆಸರು ಮುಂಚೂಣಿಗೆ ಬಂದು ನಿಂತಿದೆ. ಆಗ ವರುಣ ಕ್ಷೇತ್ರದಲ್ಲಿ ಕಣಕ್ಕಿಳಿಯದ ಸಿದ್ದರಾಮಯ್ಯ ಅವರಿಗೆ ಈ ಬಾರಿ ವರುಣದಲ್ಲಿಯೇ ಸ್ಪರ್ಧಿಸುವಂತೆ ಕಾಂಗ್ರೆಸ್‌ ಟಿಕೆಟ್‌ ನೀಡಿದೆ. ಆಗ ಸಿದ್ದರಾಮಯ್ಯ ಹಾಗೂ ವಿಜಯೇಂದ್ರ ಅವರ ಮಧ್ಯೆ ಕಾಳಗದ ನಿರೀಕ್ಷೆ ಹುಸಿಯಾಗಿತ್ತು. ಇಬ್ಬರೂ ಅಖಾಡದಿಂದ ದೂರ ಸರಿದರು. ಈಗ ಸಿದ್ದರಾಮಯ್ಯ ಸ್ಪರ್ಧೆ ಖಚಿತವಾಗಿದ್ದರೆ, ವಿಜಯೇಂದ್ರ ವಿಚಾರದಲ್ಲಿ ಹೈಕಮಾಂಡ್‌ ತಳೆಯುವ ನಿಲುವು ಕುತೂಹಲಕಾರಿಯಾಗಿದೆ.

ವರುಣದಲ್ಲಿ ಈ ಬಾರಿ ಸ್ಪರ್ಧಿಸಲು ವಿಜಯೇಂದ್ರ ಅವರಿಗೆ ಆಸಕ್ತಿ ಇಲ್ಲ. ಕಳೆದ ಚುನಾವಣೆಯಲ್ಲಿ ಇಲ್ಲಿ ಟಿಕೆಟ್‌ ನಿರಾಕರಿಸಿದ ಅನಂತರ ಅವರು ಈ ಕ್ಷೇತ್ರದಲ್ಲಿ ಸ್ಪರ್ಧಿಸುವ ಆಸಕ್ತಿ ಕಳೆದುಕೊಂಡರು. ವರುಣ ಕ್ಷೇತ್ರಕ್ಕೆ ಭೇಟಿ ಕಡಿಮೆಯಾಯಿತು. ಯಡಿಯೂರಪ್ಪ ಅವರು ಚುನಾವಣ ರಾಜಕಾರಣದಿಂದ ದೂರ ಸರಿದ ಅನಂತರ ಅವರು ಪ್ರತಿನಿಧಿಸಿರುವ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಕ್ಷೇತ್ರದಿಂದ ಕಣಕ್ಕೆ ಧಮುಕಲು ವಿಜಯೇಂದ್ರ ತಯಾರಿ ನಡೆಸಿದ್ದಾರೆ. ಹೀಗಿರುವಾಗ, ವರುಣ ಕ್ಷೇತ್ರದಿಂದ ವಿಜಯೇಂದ್ರ ಅವರನ್ನು ಕಣಕ್ಕೆ ಇಳಿಸಲು ಹೈಕಮಾಂಡ್‌ ಚಿಂತಿಸಿರುವುದು ವಿಜಯೇಂದ್ರ ಅವರ ಆಪ್ತರಲ್ಲಿ ಬೇಸರ ಮೂಡಿಸಿದೆ.

ಸಿದ್ದರಾಮಯ್ಯ ಅವರು ಈಗ ಮುಖ್ಯಮಂತ್ರಿಯಲ್ಲ, ವಿಪಕ್ಷದ ನಾಯಕರಾಗಿದ್ದಾರೆ. ಸಿದ್ದರಾಮಯ್ಯ ಆಗ ಮುಖ್ಯಮಂತ್ರಿಯಾಗಿದ್ದರಿಂದ ಅವರ ವಿರುದ್ಧ ಕಣಕ್ಕಿಳಿಯುವ ಆಸಕ್ತಿಯನ್ನು ವಿಜಯೇಂದ್ರ ತೋರಿದ್ದರು. ಆಗ ಬಿಜೆಪಿ ವಿಪಕ್ಷದಲ್ಲಿತ್ತು. ಈಗ ಪರಿಸ್ಥಿತಿ ಭಿನ್ನವಾಗಿದೆ. ಸಿªದರಾಮಯ್ಯ ವಿರುದ್ಧ ಸ್ಪರ್ಧಿಸಬೇಕೆಂದು ಸ್ವಕ್ಷೇತ್ರ ಶಿಕಾರಿಪುರ ಬಿಟ್ಟು  ವರುಣಾಗೆ ಏಕೆ ಬರಬೇಕು? ಮಾಸ್‌ ಲೀಡರ್‌ ಆಗಿರುವ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಲು ವಿಜಯೇಂದ್ರ ಅವರೇ ಏಕೆ ಗುರಾಣಿ ಆಗಬೇಕು? ಪಕ್ಷದಲ್ಲಿ ಅನೇಕ ಹಿರಿಯ ನಾಯಕರು, ಸಚಿವರು ತಮ್ಮ ಸುರಕ್ಷಿತ ಕ್ಷೇತ್ರ ಬಿಟ್ಟು ಬರದಿದ್ದಾಗ ವಿಜಯೇಂದ್ರ ಅವರ ವಿಚಾರದಲ್ಲಿಯೇ ಏಕೆ ಹೈಕಮಾಂಡ್‌ ಈ ಧೋರಣೆ ತಳೆದಿದೆ? ಸಿದ್ದರಾಮಯ್ಯ ವಿರುದ್ಧ ನಿಂತು ವಿಜಯೇಂದ್ರ ಅವರೇಕೆ ಬಲಿಪಶುವಾಗಬೇಕು? ಎಂಬ ಪ್ರಶ್ನೆಗಳು ವಿಜಯೇಂದ್ರ ಅವರ ಬೆಂಬಲಿಗರನ್ನು ಕಾಡಿದೆ.

ವಿಜಯೇಂದ್ರ ವರುಣದಲ್ಲಿ ಕಣಕ್ಕಿಳಿದರೆ ಶಿಕಾರಿಪುರದಲ್ಲೂ  ಅವರ ಸ್ಪರ್ಧೆಗೆ ಬಿಜೆಪಿ ಹೈಕಮಾಂಡ್‌ ಅವಕಾಶ ಕಲ್ಪಿಸುತ್ತದೆಯೇ? ಆಗ ಅವಕಾಶ ಕಲ್ಪಿಸಿದರೆ ಬಿಜೆಪಿಯ ಇನ್ನೂ ಕೆಲವು ಹಿರಿಯ ನಾಯಕರು ಇಂಥದ್ದೇ ಅವಕಾಶಕ್ಕೆ ಬೇಡಿಕೆ ಮುಂದಿಡಬಹುದು.

ಒಟ್ಟಿನಲ್ಲಿ ವಿಜಯೇಂದ್ರ ಅವರ ವರುಣ ಸ್ಪರ್ಧೆ ವಿಚಾರದಲ್ಲಿ ಹೈಕಮಾಂಡ್‌ ತಳೆಯುವ ನಿಲುವು ಕುತೂಹಲ ಮೂಡಿಸಿದೆ.

ಹೈಕಮಾಂಡ್‌ ನಿರ್ಧಾರ ಅಂತಿಮ

ವರುಣ ಕ್ಷೇತ್ರದಲ್ಲಿ ತಮ್ಮ ಸ್ಪರ್ಧೆ ಕುರಿತು ಹೈಕಮಾಂಡ್‌ ನಿಲುವಿಗೆ ಬದ್ಧರಾಗಿರುವುದಾಗಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಮ್ಮ ಬೆಂಬಲಿಗರ ಬಳಿ ಹೇಳಿಕೊಂಡಿದ್ದಾರೆ. ವರುಣ ಸ್ಪರ್ಧೆ ಕುರಿತು ವಿಜಯೇಂದ್ರ  ವರುಣ ಕ್ಷೇತ್ರದ ತಮ್ಮ ಬೆಂಬಲಿಗರ  ಜತೆ ಮಾತುಕತೆ ನಡೆಸಿದ್ದಾರೆ. ವರುಣದಲ್ಲಿ ಸ್ಪರ್ಧಿಸುವ ಆಸಕ್ತಿ ತಮಗಿಲ್ಲ. ಆದರೆ ಹೈಕಮಾಂಡ್‌ ತಮ್ಮ ಸ್ಪರ್ಧೆ ವಿಚಾರದಲ್ಲಿ ಕೈಗೊಳ್ಳುವ ನಿರ್ಧಾರವೇ ಅಂತಿಮ ಎಂದು ವಿಜಯೇಂದ್ರ ತಮ್ಮ ಬೆಂಬಲಿಗರಿಗೆ ಹೇಳಿದ್ದಾರೆ.

– ಕೂಡ್ಲಿ ಗುರುರಾಜ

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.