ನಾವು ಕೇಳಿದ್ದು ಇನ್ನೂ ಈಡೇರದ್ದು; ಶಿಲಾನ್ಯಾಸವಾದದ್ದೇ ಭಾಗ್ಯ ಕೂಡಿ ಬರಲಿಲ್ಲ ಯೋಗ

ಮಹಿಳಾ ಪಾಲಿಟೆಕ್ನಿಕ್‌ನ ಜಾಗವನ್ನು ಅಂತಿಮಗೊಳಿಸಲಾಗಿತ್ತು

Team Udayavani, Mar 10, 2023, 10:40 AM IST

ನಾವು ಕೇಳಿದ್ದು ಇನ್ನೂ ಈಡೇರದ್ದು; ಶಿಲಾನ್ಯಾಸವಾದದ್ದೇ ಭಾಗ್ಯ ಕೂಡಿ ಬರಲಿಲ್ಲ ಯೋಗ

ಮಂಗಳೂರು: ದ.ಕ. ಜಿಲ್ಲೆಯ ಕಲಾವಿದರಿಗೆ ಸುಸಜ್ಜಿತ ರಂಗ ಮಂದಿರ ನಿರ್ಮಾಣವಾಗಬೇಕೆನ್ನುವುದು ಜಿಲ್ಲೆಯ ಕಲಾವಿದರು, ಕಲಾಭಿಮಾನಿಗಳ ಮೂರೂವರೆ ದಶಕಗಳಿಗೂ ಹಿಂದಿನ ಬೇಡಿಕೆ. ಪ್ರತೀ ಬಾರಿ ಹೊಸ ಸರಕಾರ ಆಡಳಿತಕ್ಕೆ ಬಂದಾಗ ಆರಂಭದಲ್ಲಿ ಈ ಬಗ್ಗೆ ಚರ್ಚೆ, ಸಭೆ ನಡೆಸಿ ಪ್ರಕ್ರಿಯೆಗಳನ್ನು ನಡೆಸಲಾಗುತ್ತದೆ.

ರಂಗ ಮಂದಿರಕ್ಕಾಗಿ ಐದಕ್ಕೂ ಅಧಿಕ ಬಾರಿ ಶಿಲಾನ್ಯಾಸವನ್ನೂ ನಡೆಸಲಾಗಿದೆ. ಆದರೆ ರಂಗ ಮಂದಿರ ಕಟ್ಟಡ ಮಾತ್ರ ತಲೆ ಎತ್ತಿಲ್ಲ! ತುಳು ಭಾಷೆಸೇರಿದಂತೆ ನಾಟಕ ಪ್ರದರ್ಶನ, ನೃತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನಕ್ಕೆ ಸುಸಜ್ಜಿತ ರಂಗ ಮಂದಿರ ಬೇಕೆಂದು ಕಲಾವಿದರು ಹಾಗೂ ಕಲಾಭಿಮಾನಿಗಳು ಜಿಲ್ಲಾಡಳಿತ, ರಾಜಕಾರಣಿಗಳನ್ನು ಒತ್ತಾಯಿಸುತ್ತಾ ಬಂದರು. ಕೊನೆಗೆ ಹೋರಾಟ 2019ರಲ್ಲಿ ಹೊಸ ಸ್ವರೂಪ ಪಡೆದುಕೊಂಡು ಟ್ವಿಟರ್‌ ಅಭಿಯಾನದ ಮೂಲಕವೂ ಜನಪ್ರತಿನಿಧಿಗಳ ಗಮನ ಸೆಳೆದಿತ್ತು.

ಹೀಗೆ ರಂಗ ಮಂದಿರ ನಿರ್ಮಾಣದ ಪ್ರಸ್ತಾವ ಆರಂಭಗೊಂಡಾಗ 4 ಕೋಟಿ ರೂ. ಗಳಿದ್ದ ಯೋಜನಾ ವೆಚ್ಚ 24 ಕೋಟಿ ರೂ. ಗಳಿಗೇರಿತ್ತು. ಹಲವು ಜಾಗಗಳನ್ನು ಗುರುತಿಸಿ ಕೈಬಿಟ್ಟು ಕೊನೆಯದಾಗಿ 2010ರಲ್ಲಿ ಬೊಂದೇಲ್‌ ನ ಮಹಿಳಾ ಪಾಲಿಟೆಕ್ನಿಕ್‌ನ ಜಾಗವನ್ನು ಅಂತಿಮಗೊಳಿಸಲಾಗಿತ್ತು. ಆ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶಿಲಾನ್ಯಾಸ ಮಾಡಿದ್ದರು.

24 ಕೋಟಿ ರೂ. ವೆಚ್ಚದ ಯೋಜನೆಯನ್ನು ಕೇಂದ್ರ ಸರಕಾರದ ಸಂಸ್ಕೃತಿ ಇಲಾಖೆಯ ಠಾಗೋರ್‌ ಕಲ್ಚರಲ್‌ ಕಾಂಪ್ಲೆಕ್ಸ್‌ ಸ್ಕೀಂನಡಿ ಶೇ. 60ರಷ್ಟು ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಉಳಿದ 9.6 ಕೋಟಿ ರೂ. ರಾಜ್ಯ ಸರಕಾರದ ಪಾಲು ಎಂದು ಅಂದಾಜಿಸಲಾಗಿತ್ತು. ಆದರೆ ಕೇಂದ್ರದ ಅನುದಾನ ದೊರೆಯದಾಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ನಿರ್ಮಿಸಲು ಉದ್ದೇಶಿಸಲಾಯಿತು.

ಇವೆಲ್ಲವೂ ಆಗಿ, ಸ್ವಲ್ಪ ಸಮಯದ ಹಿಂದೆ ಕಲಾವಿದರ ಹೋರಾಟ, ಒತ್ತಡದ ಪರಿಣಾಮವಾಗಿ ಈ ಹಿಂದಿನ ಆಡ ಳಿತದ ಡಿಪಿಆರ್‌ ಬದಲಾವಣೆ ಮಾಡಿ ಅಂದಾಜು 9.9 ಕೋಟಿ ರೂ. ವೆಚ್ಚದಲ್ಲಿ ಡಿಪಿಆರ್‌ ತಾಂತ್ರಿಕ ಅನುಮೋದನೆಗಾಗಿ ಪೌರಾಡಳಿತ ಸಚಿವಾಲಯಕ್ಕೆ ಸಲ್ಲಿಕೆಯಾಯಿತು. ಇನ್ನೂ ಆಡಳಿತಾತ್ಮಕ ಅನುಮೋದನೆ ದೊರಕಿಲ್ಲ. ಕಲಾವಿದರು ಮತ ದಾರರಾಗಿ ಪರಿಗಣಿಸಲ್ಪಡದ ಕಾರಣವೇನೋ, ಸರಕಾರ ರಂಗ ಮಂದಿರ ಮನಸ್ಸು ಮಾಡುತ್ತಿಲ್ಲ ಎನ್ನುವುದು ಕಲಾವಿದರ ಅಳಲು.

-ಸತ್ಯ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.