ಸೌಮ್ಯರೆಡ್ಡಿ ವಿರುದ್ಧ ಕಮಲದಿಂದ ಯಾರು?


Team Udayavani, Mar 13, 2023, 6:47 AM IST

ಸೌಮ್ಯರೆಡ್ಡಿ ವಿರುದ್ಧ ಕಮಲದಿಂದ ಯಾರು?

ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಕ್ಷೇತ್ರವಾಗಿ­ರುವ ಜಯನಗರ ಈ ಬಾರಿಯ ವಿಧಾನಸಭೆ ಚುನಾವಣೆ­ಯಲ್ಲಿ “ಜಿದ್ದಾಜಿದ್ದಿ’ನ ಕಣ.

ರಾಜ್ಯ ರಾಜಕಾರಣದ ಸಂಭಾವಿತ ರಾಜಕಾರಣಿ ಎಂದೇ ಖ್ಯಾತಿ ಪಡೆದಿದ್ದ ಎಂ.ಚಂದ್ರಶೇಖರ್‌ ಪ್ರತಿನಿಧಿಸಿದ್ದ, ಸೋಲಿಲ್ಲದ ಸರದಾರ ರಾಮಲಿಂಗಾರೆಡ್ಡಿ ಅವರನ್ನು ಗೆಲ್ಲಿಸಿದ್ದ ಜಯನಗರ ರಾಜಧಾನಿಯ ಹೃದಯಭಾಗದ ಪ್ರಜ್ಞಾವಂತ ಮತದಾರರ ಕ್ಷೇತ್ರ.

ತುರ್ತು ಪರಿಸ್ಥಿತಿಯ ನಂತರದಲ್ಲಿ ಜನತಾಪಾರ್ಟಿಯ ಭದ್ರಕೋಟೆಯಾಗಿದ್ದ ಜಯನಗರದಲ್ಲಿ 1989ರ ನಂತರದಲ್ಲಿ ಕಾಂಗ್ರೆಸ್‌ ಕೋಟೆ ಕಟ್ಟಿಕೊಂಡು ಕ್ಷೇತ್ರ ಪುನರ್‌ ವಿಂಗಡಣೆವರೆಗೂ ರಾಮಲಿಂಗಾರೆಡ್ಡಿ “ಸಾಮ್ರಾಜ್ಯ’ವಾಗಿತ್ತು.

ರಾಜಧಾನಿ ಮಟ್ಟಿಗೆ ಹೇಳುವುದಾದರೆ ರಾಜ­ಕೀಯ­ವಾಗಿಯೂ ಕ್ಷೇತ್ರದ ಮಹಿಮೆ ಕಡಿಮೆ­ಯೇನಲ್ಲ. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹಿತ ಘಟಾನುಘಟಿ ನಾಯಕರು ಇದೇ ಕ್ಷೇತ್ರದ ಮತದಾರರು. ಅಷ್ಟೇ ಏಕೆ ಸಚಿವ ಆರ್‌.ಅಶೋಕ್‌ ಅವರು ಪದ್ಮನಾಭನಗರ ಪ್ರತಿನಿಧಿಸಿದರೂ ಅವರು ವಾಸ ಇರುವುದೂ ಜಯನಗರ­ದಲ್ಲೇ. ಈ ಕ್ಷೇತ್ರದಲ್ಲಿ 1978­ರಿಂದ 1985ರವರೆಗೆ ಸತತ­ವಾಗಿ ಜನತಾ­ಪಾರ್ಟಿಯ ಎಂ.ಚಂದ್ರಶೇಖರ್‌ ಜಯ­ಗಳಿ­ಸಿದ್ದರು. ಇವರು ಸಚಿವರಾಗಿಯೂ ಕೆಲಸ ಮಾಡಿದ್ದರು.

1989ರಿಂದ 2004ರ ವರೆಗೆ ರಾಮಲಿಂಗಾರೆಡ್ಡಿ ಶಾಸಕರಾಗಿದ್ದರೆ, ಬಳಿಕ ಎರಡು ಬಾರಿ ಬಿಜೆಪಿಗೆ ಒಲಿದಿತ್ತು. ಬಿ.ಎನ್‌.ವಿಜಯ­ಕುಮಾರ್‌ ಶಾಸಕರಾಗಿ ಆಯ್ಕೆಯಾದರು. 2013 ರಲ್ಲಿಯೂ 2ನೇ ಬಾರಿಗೆ ವಿಜಯಕುಮಾರ್‌ ಮರು ಆಯ್ಕೆ ಯಾದರು. ಆದರೆ, 2018ರಲ್ಲಿ ವಿಜಯಕುಮಾರ್‌ ಅಕಾಲಿಕ ಮರಣಕ್ಕೆ ತುತ್ತಾದರು. 2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌­ನಿಂದ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯರೆಡ್ಡಿ ಅವರನ್ನು ಕಣಕ್ಕಿಳಿಸಲಾಯಿತು. ಆಗ ಬಿ.ಎನ್‌. ವಿಜಯಕುಮಾರ್‌ ಅವರ ಸಹೋದರ ಬಿ.ಎನ್‌. ಪ್ರಹ್ಲಾದ್‌ ಬಿಜೆಪಿಯಿಂದ ಸ್ಪರ್ಧಿಸಿ ಸೋತಿ ದ್ದ ರು.
ಹಲವರ ಕಣ್ಣು: ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸೌಮ್ಯರೆಡ್ಡಿ ಸ್ಪರ್ಧೆ ಖಚಿತವಾಗಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಪ್ರಹ್ಲಾದ್‌ ಜತೆಗೆ ಕೇಂದ್ರ ಸಚಿವರಾಗಿದ್ದ ಅನಂತ್‌ಕುಮಾರ್‌ ಪತ್ನಿ ತೇಜಸ್ವಿನಿ ಅನಂತಕುಮಾರ್‌, ಬಿಜೆಪಿ ವಕ್ತಾರ ಪಾಲಿಕೆಯ ಮಾಜಿ ಸದಸ್ಯ ಎನ್‌.ಆರ್‌.ರಮೇಶ್‌, ಮಾಜಿ ಮೇಯರ್‌ ಎಸ್‌.ಕೆ.ನಟರಾಜ್‌, ಪಾಲಿಕೆಯ ಮಾಜಿ ಸದಸ್ಯ ಸಿ.ಕೆ.ರಾಮಮೂರ್ತಿ, ನಟಿ ತಾರಾ, ಮಾಜಿ ಶಾಸಕ ಸುಬ್ಟಾರೆಡ್ಡಿ ಪುತ್ರ ವಿವೇಕ್‌ ರೆಡ್ಡಿ ಬಿಜೆಪಿಯಿಂದ ಆಕಾಂಕ್ಷಿಗಳಾಗಿದ್ದಾರೆ.

ಇವರೆಲ್ಲರ ಜತೆಗೆ ಇತ್ತೀಚೆಗಷ್ಟೇ ಆಮ್‌ ಆದ್ಮಿ ಪಾರ್ಟಿ ಬಿಟ್ಟು ಬಿಜೆಪಿ ಸೇರಿರುವ ಮಾಜಿ ಪೊಲೀಸ್‌ ಕಮಿಷನರ್‌ ಭಾಸ್ಕರ್‌ರಾವ್‌ ಸಹ ಪ್ರಬಲ ಆಕಾಂಕ್ಷಿ ಯಾಗಿದ್ದಾರೆ. ಬಸವನಗುಡಿ ಅಥವಾ ಜಯನಗರದಲ್ಲಿ ಟಿಕೆಟ್‌ ಖಾತರಿ ಕೊಟ್ಟೇ ಅವರನ್ನು ಬಿಜೆಪಿಗೆ ಕರೆತರಲಾಗಿದೆ ಎಂಬ ಮಾತುಗಳೂ ಇವೆ. ಅವರಿಗೆ ಅಲ್ಲಿ ಟಿಕೆಟ್‌ (ಬಸವನಗುಡಿ) ಇಲ್ಲದಿದ್ದರೆ ಇಲ್ಲಿ (ಜಯನಗರ) ಎಂಬಂತಾಗಿದೆ.

ಜೆಡಿಎಸ್‌ ಸಮರ್ಥ ಅಭ್ಯರ್ಥಿಯ ಹುಡುಕಾಟದಲ್ಲಿದೆ. ಈ ಹಿಂದೆ ಜೆಡಿಎಸ್‌ನಲ್ಲಿದ್ದ ಜಮೀರ್‌ ಅಹಮದ್‌ ಜಯನಗರದಿಂದ ಸ್ಪರ್ಧಿಸಿ ಕಾಂಗ್ರೆಸ್‌ಗೆ ಪೈಪೋಟಿ ನೀಡಿದ್ದು ಬಿಟ್ಟರೆ ಆ ನಂತರ ಜೆಡಿಎಸ್‌ ಅಭ್ಯರ್ಥಿಗಳು ಇಲ್ಲಿ ಅಂತಹ ಸಾಧನೆ ಮಾಡಲಾಗಲಿಲ್ಲ. ಈ ಬಾರಿಯೂ ಇನ್ನೂ ಅಭ್ಯರ್ಥಿ ಫೈನಲ್‌ ಆಗಿಲ್ಲ. ಕೆಆರ್‌ಎಸ್‌ ಪಕ್ಷದಲ್ಲಿ ಗುರುತಿಸಿಕೊಂಡಿರುವ ರವಿಕೃಷ್ಣಾರೆಡ್ಡಿ ಸಹ ಈ ಬಾರಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಜತೆಗೆ, ಆಮ್‌ ಆದ್ಮಿ ಪಕ್ಷದಿಂದಲೂ ಅಭ್ಯರ್ಥಿ ಕಣಕ್ಕಿಳಿಯುವ ಸಂಭವವಿದೆ.

ಮೂರ್ನಾಲ್ಕು ವರ್ಷಗಳಿಂದ ಗ್ರೌಂಡ್‌ ವರ್ಕ್‌
ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚುವರಿಯಾಗಿ ಮೂರು ಸೀಟು ಗೆಲ್ಲುವ ಹಠ ತೊಟ್ಟಿರುವ ಬಿಜೆಪಿ ಮೊದಲು ಕಣ್ಣು ಹಾಕಿರುವುದೇ ಜಯನಗರದ ಮೇಲೆ. ಇಲ್ಲಿ ಗೆಲುವು ಸಾಧಿಸಿ ಹಿಡಿತ ಹೊಂದಿದ್ದರೆ ಪಕ್ಕದ ಬಿಟಿಎಂ ಲೇಔಟ್‌ಗೂ “ರಂಗಪ್ರವೇಶ’ ಮಾಡಬಹುದು ಎಂಬ ದೂರಾಲೋಚನೆಯೂ ಬಿಜೆಪಿ ನಾಯಕರಲ್ಲಿದೆ. ಹೀಗಾಗಿ, ಕಳೆದ ಮೂರ್‍ನಾಲ್ಕು ವರ್ಷಗಳಿಂದ “ಗ್ರೌಂಡ್‌’ ವರ್ಕ್‌ ಮಾಡಲಾಗುತ್ತಿದೆ. ಈ ಬಾರಿ ಶತಾಯಗತಾಯ ಗುರಿ ತಲುಪುವ ಹಠ ಬಿಜೆಪಿಯದ್ದು, ಏನಾದರೂ ಸರಿಯೇ ಕ್ಷೇತ್ರ ಬಿಟ್ಟುಕೊಡಬಾರದು ಎಂಬ ಪಟ್ಟು ಕಾಂಗ್ರೆಸ್‌ನದು. ಇವರಿಬ್ಬರ ನಡುವೆ ಉಳಿದವರ ಸ್ಪರ್ಧೆ ಲೆಕ್ಕಕ್ಕೆ ಬರುತ್ತಾ ಕಾದು ನೋಡಬೇಕಾಗಿದೆ.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.