ಯಾರು ಗೆದ್ದರೂ ಇತಿಹಾಸ; ಅದಕ್ಕೇ ಅಖಾಡದಲ್ಲಿ ತೀವ್ರ ಪೈಪೋಟಿ


Team Udayavani, May 6, 2023, 7:10 AM IST

Udayavani Kannada Newspaper

ಕುಂದಾಪುರ: ಈ ಬಾರಿ ಕಾಂಗ್ರೆಸ್‌ ಅಥವಾ ಬಿಜೆಪಿ ಯಾರೇ ಗೆದ್ದರೂ ಹೊಸ ಇತಿಹಾಸದ ನಿರ್ಮಾಣ. ಎರಡು ಅವಧಿಗಷ್ಟೇ ವಿನ್ನಿಫ್ರೆಡ್‌ ಫೆರ್ನಾಂಡಿಸ್‌ ಶಾಸಕಿಯಾಗಿದ್ದರ ಹೊರತು 1952ರಿಂದ ಈವರೆಗೆ ಬಂಟ ಸಮುದಾಯದವರೇ ಶಾಸಕರಾದದ್ದು ಇಲ್ಲಿನ ದಾಖಲೆ. ಕಾಂಗ್ರೆಸ್‌ ಪ್ರಾಬಲ್ಯ ಮುರಿದು 1999ರಿಂದ ಈವರೆಗೆ ಹಾಲಾಡಿ ಶ್ರೀನಿವಾಸ ಶೆಟ್ಟರೇ 4 ಬಾರಿ ಬಿಜೆಪಿ, ಒಮ್ಮೆ ಪಕ್ಷೇತರರಾಗಿ ಗೆದ್ದು ರಾಜ್ಯದಲ್ಲಿ ಮೂರನೇ ಅತೀ ಹೆಚ್ಚು ಅಂತರದ ಗೆಲುವಿನ ಕ್ಷೇತ್ರವಾಗಿಸಿದ್ದು ಇನ್ನೊಂದು ದಾಖಲೆ.

ಬಿಜೆಪಿಯ ಕಿರಣ್‌ ಕುಮಾರ್‌ ಕೊಡ್ಗಿ ಗೆದ್ದರೆ ಬಂಟರ ವಿಜಯದ ಸರಪಳಿ ಮುರಿದ ದಾಖಲೆ, ಕಾಂಗ್ರೆಸ್‌ ಮೊಳಹಳ್ಳಿ ದಿನೇಶ್‌ ಹೆಗ್ಡೆ ಗೆದ್ದರೆ ಬಿಜೆಪಿ ವಿಜಯದ ಜೈತ್ರಯಾತ್ರೆಗೆ ಅಡ್ಡಗಾಲಿಟ್ಟು ಕಾಂಗ್ರೆಸ್‌ ತೆಕ್ಕೆಗೆ ಕ್ಷೇತ್ರ ವನ್ನು ವಾಪಸು ತಂದ ದಾಖಲೆ. ಇಬ್ಬರೂ ಹೊಸಮುಖಗಳೇ. ಬಿಜೆಪಿಗೆ ಉಳಿಸಿಕೊಳ್ಳುವ ಕಾತರ, ಕಾಂಗ್ರೆಸ್‌ಗೆ ಮರಳಿ ಪಡೆಯುವ ಆತುರ.

ಸ್ಪರ್ಧಿಸುವುದಾಗಿ ಪಕ್ಷದ ಸಭೆಯಲ್ಲಿ ಹೇಳಿ ಊರಿಗೆ ಬಂದ ಹಾಲಾಡಿ ಸ್ಪರ್ಧಿಸುವುದಿಲ್ಲ ಎಂದು ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದರು. ಈ ಬೆಳವಣಿಗೆ ಜಿಲ್ಲೆಯ ರಾಜಕೀಯ ಚಿತ್ರಣ ಬದಲಿಸಿತು. ಅವರ ಬಯಕೆ ಯಂತೆಯೇ ಜತೆಗಾರ ಕಿರಣ್‌ ಕೊಡ್ಗಿಗೆ ಅವಕಾಶ ಸಿಕ್ಕಿದ್ದು, ಗೆಲ್ಲಿಸುವ ಹೊಣೆ ಹೊತ್ತ ಹಾಲಾಡಿ ಕ್ಷೇತ್ರಾದ್ಯಂತ ಪ್ರಚಾರದಲ್ಲಿ ತೊಡಗಿದ್ದಾರೆ.

ಕಳೆದ ಬಾರಿ ಬೇರೆ ಜಿಲ್ಲೆಯ ಅಭ್ಯರ್ಥಿಯನ್ನು ಆಮದು ಮಾಡಿಕೊಂಡಿದ್ದ ಕಾಂಗ್ರೆಸ್‌ ಈ ಬಾರಿ ಕ್ಷೇತ್ರದವರಿಗೇ ಅವಕಾಶ ನೀಡಿದೆ. ಟಿಕೆಟ್‌ ಘೋಷಣೆಗೆ ಮುನ್ನವೇ ಒಂದು ಹಂತ ಪ್ರಚಾರ ಮುಗಿಸಲಾಗಿತ್ತು. ಪಕ್ಷದಲ್ಲಿ ಬಹಿರಂಗ ಅಸಮಾಧಾನ ಇಲ್ಲದಿದ್ದರೂ ದೊಡ್ಡ ನಾಯಕರ ಪೂರ್ಣ ಸಹಕಾರದ ಕೊರತೆ ಇರುವುದು ಕೊಂಚ ಹಿನ್ನಡೆ ಒದಗಿಸಿದೆ.

ಜಿ.ಪಂ. ಕ್ಷೇತ್ರವಾರು ಸಭೆಗಳಲ್ಲಿ ನಿರೀಕ್ಷೆ ಮೀರಿ ಜನ ಪಾಲ್ಗೊಳ್ಳುತ್ತಿರುವುದು ಬಿಜೆಪಿಯಲ್ಲಿ ಉತ್ಸಾಹ ಹೆಚ್ಚಿಸಿದೆ. ಚುನಾವಣೆ ಘೋಷಣೆಗೂ ಮುನ್ನ ನಡೆಸಿದ ಸಭೆಗಳಲ್ಲಿ ದೊರೆತ ಬೆಂಬಲ, ಗ್ಯಾರಂಟಿ ಕಾರ್ಡ್‌ ಕುರಿತಾದ ಜನರ ಆಸಕ್ತಿ ಕಾಂಗ್ರೆಸ್‌ ಆಸೆಯನ್ನು ಪುಟಿದೆಬ್ಬಿಸಿದೆ. ಸಾಂಪ್ರದಾಯಿಕ ಮತಗಳ ಜತೆ ಗ್ಯಾರಂಟಿ ಕಾರ್ಡ್‌ ಮೂಲಕ ಮಹಿಳಾ ಮತಗಳ ಕಡೆ ಕಾಂಗ್ರೆಸ್‌ ಕಣ್ಣು ಹಾಕಿದ್ದರೆ ಹಾಲಾಡಿಯವರಿಗೆ ದೊರೆತ ಮತಗಳೊಂದಿಗೆ ಹೆಚ್ಚಿನ ಅಂತರದ ಗೆಲುವಿನ ಹಂಬಲದಲ್ಲಿದೆ. ಮತದಾರರ ಒಲವು ಯಾರನ್ನು ಗೆಲ್ಲಿಸುವುದೋ ಎಂಬುದೇ ಕುತೂಹಲ.

ಜಾತಿ ಲೆಕ್ಕ
ಇಲ್ಲಿ ಬಂಟ ಸಮುದಾಯದವರು ಅಧಿಕ ಸಂಖ್ಯೆಯಲ್ಲಿದ್ದಾರೆ. ಬಿಜೆಪಿಯಿಂದ ಬ್ರಾಹ್ಮಣ ಅಭ್ಯರ್ಥಿ ಸ್ಪರ್ಧಿಸಿದ ಕಾರಣ ಕಾಂಗ್ರೆಸ್‌ನ ಬಂಟ ಅಭ್ಯರ್ಥಿ ಕಡೆ ಜಾತಿ ಮತಗಳು ಧ್ರುವೀಕರಣ ಆಗಬಹುದು ಎಂಬ ಮಾತು ಚಾಲ್ತಿಯಲ್ಲಿದೆ. ಆದರೆ ಇಂಥ ಲೆಕ್ಕಾಚಾರ ಕರಾವಳಿಯಲ್ಲಿ ಕಡಿಮೆ. ಪಕ್ಕದ ಬೈಂದೂರು, ಉಡುಪಿಯಲ್ಲೂ ಹೆಚ್ಚಿನ ಸಂಖ್ಯೆಯವರು ಇರುವ ಸಮುದಾಯದವರ ಬದಲಿಗೆ ಬೇರೆಯವರು ಅನೇಕ ಬಾರಿ ಆರಿಸಿ ಬಂದದ್ದಿದೆ ಎನ್ನುತ್ತಾರೆ ವಿಶ್ಲೇಷಕರು.

ಧನಾತ್ಮಕ-ಋಣಾತ್ಮಕ ಅಂಶಗಳು
ಎರಡೂ ಪಕ್ಷದ ಅಭ್ಯರ್ಥಿಗಳು ವಿಧಾನಸಭೆ ಚುನಾವಣೆಗೆ ಹೊಸಬರಾದರೂ ಕ್ಷೇತ್ರಕ್ಕೆ ಹಳ ಬರೇ. ಕೊಡ್ಗಿ ಪಕ್ಷದ ವಿವಿಧ ಹುದ್ದೆಗಳಲ್ಲಿದ್ದು ರಾಜಕೀಯದಲ್ಲಿ 40 ವರ್ಷಗಳಿಂದ ಇದ್ದಾರೆ. ದಿನೇಶ್‌ ಹೆಗ್ಡೆಯವರು ಮೊಳಹಳ್ಳಿ ಪಂಚಾಯತ್‌ ಸದಸ್ಯರಾಗಿ, ಅಧ್ಯಕ್ಷರಾಗಿ 15 ವರ್ಷ ಸೇವೆ ಸಲ್ಲಿಸಿ ರಾಜಕಾರಣದಲ್ಲಿ ಸಕ್ರಿಯರಾಗಿದ್ದವರು. ರಾಷ್ಟ್ರ , ರಾಜ್ಯ ನಾಯಕರ ದಂಡೇ ಬಿಜೆಪಿ ಪಾಳಯದಲ್ಲಿ ಪ್ರಚಾರದಲ್ಲಿ ತೊಡಗಿಸಿಕೊಂಡಿದೆ. ಕಾಂಗ್ರೆಸ್‌ ಪಾಳಯದಲ್ಲಿ ಹಿರಿಯ ನಾಯಕರು ಮೌನಕ್ಕೆ ಶರಣಾಗಿದ್ದಾರೆ. ಜೆಡಿಎಸ್‌ ಮತ್ತಿತರ ಪಕ್ಷಗಳು, ಪಕ್ಷೇತರ ಅಭ್ಯರ್ಥಿಗಳು ಪಡೆಯುವ ಮತಗಳು ಇಲ್ಲಿ ಫ‌ಲಿತಾಂಶದ ಮೇಲೆ ಪರಿಣಾಮ ಬೀರುವುದು ಕಡಿಮೆ.

ಕಣದಲ್ಲಿರುವ ಅಭ್ಯರ್ಥಿಗಳು 5
- ಎ. ಕಿರಣ್‌ ಕುಮಾರ್‌ ಕೊಡ್ಗಿ (ಬಿಜೆಪಿ )
-  ದಿನೇಶ್‌ ಹೆಗ್ಡೆ ಮೊಳಹಳ್ಳಿ (ಕಾಂಗ್ರೆಸ್‌ )
-  ರಮೇಶ (ಜೆಡಿಎಸ್‌)
-  ಅರುಣ್‌ ದೀಪಕ್‌ ಮೆಂಡೋನ್ಸಾ (ಉತ್ತಮ ಪ್ರಜಾಕೀಯ ಪಕ್ಷ )
-  ಚಂದ್ರಶೇಖರ ಜಿ.(ಪಕ್ಷೇತರ)

ಲೆಕ್ಕಾಚಾರ ಏನು?
ಇಬ್ಬರೂ ಹೊಸಬರಾದರೂ ಮತ ಗಳಿಕೆಯ ಮೇಲೆ ಹೆಚ್ಚಿನ ಪರಿಣಾಮ ಬೀರದು. ಹಾಲಾಡಿ ನೆರಳು ಒಬ್ಬರಿಗೆ ಆಶ್ರಯವಾದರೆ, ಸಾಂಪ್ರದಾಯಕ ಮತ ಬ್ಯಾಂಕ್‌ ಇನ್ನೊಬ್ಬರಿಗೆ ಆಸರೆ.

– ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.