ಮೂಲಸೌಕರ್ಯ ಅಭಿವೃದ್ಧಿ, ಬಂದರು,ಒಳನಾಡು ಜಲಸಾರಿಗೆ ಇಲಾಖೆಗೆ ಬಜೆಟ್‍ನಲ್ಲಿ ಸಿಕ್ಕಿದ್ದೇನು?


Team Udayavani, Jul 7, 2023, 4:00 PM IST

ಮೂಲಸೌಕರ್ಯ ಅಭಿವೃದ್ಧಿ, ಬಂದರು,ಒಳನಾಡು ಜಲಸಾರಿಗೆ ಇಲಾಖೆಗೆ ಬಜೆಟ್‍ನಲ್ಲಿ ಸಿಕ್ಕಿದ್ದೇನು?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ 14ನೇ ರಾಜ್ಯ ಬಜೆಟ್ ಮಂಡಿಸಿದರು. ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಕ್ಷೇತ್ರಕ್ಕೆ  ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರ ಮಾಹಿತಿ ಇಲ್ಲಿದೆ…

– ರೈಲ್ವೆ ಜಾಲದ ಸಾಂದ್ರತೆಯನ್ನು ಹೆಚ್ಚಿಸಿ, ಕರ್ನಾಟಕದ ಎಲ್ಲಾ ಭಾಗಗಳಿಗೆ ಸಂಪರ್ಕ ಕಲ್ಪಿಸುವ ಮೂಲಕ, ಪ್ರಾದೇಶಿಕ ಅಸಮತೋಲನ ಕಡಿಮೆ ಮಾಡುವುದು, ಜನಸಾಮಾನ್ಯರ ಸುಗಮ ಸಂಚಾರ ಹಾಗೂ ಸರಕು ಸಾಗಾಣಿಕೆಗೆ ಅನುವು ಮಾಡಿಕೊಡುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಸುಮಾರು
8,766 ಕೋಟಿ ರೂ.ಗಳ ರಾಜ್ಯದ ಹೂಡಿಕೆಯೊಂದಿಗೆ, 1,110 ಕಿ.ಮೀ. ಉದ್ದದ, ಒಂಬತ್ತು ರೈಲ್ವೆ ಯೋಜನಾ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು. ಇದರ ಜೊತೆಗೆ, ರಸ್ತೆ ಮಾರ್ಗದ ವಾಹನ ದಟ್ಟಣೆಯನ್ನು ನಿವಾರಿಸಿ ಸುಗಮ ರೈಲು ಸಂಚಾರಕ್ಕಾಗಿ ಅನುಮೋದಿತ ರೈಲ್ವೆ ಮೇಲ್ಸೇತುವೆ / ಕೆಳ ಸೇತುವೆಗಳ ನಿರ್ಮಾಣದ ಸುಮಾರು 803 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು.
– ರಾಜ್ಯದಲ್ಲಿ ವಾಯುಯಾನ ಆಧಾರಿತ ಅಭಿವೃದ್ಧಿಗೆ ಉತ್ತೇಜನ ನೀಡಲು ಸಮಗ್ರ ನಾಗರಿಕ ವಿಮಾನಯಾನ ನೀತಿಯನ್ನು ರೂಪಿಸಲಾಗುವುದು. ಈ ನೀತಿಯಡಿ ಕೈಗೆಟಕುವ ಬೆಲೆಯಲ್ಲಿ ವಾಯುಯಾನ ಸಂಚಾರ, ಪ್ರವಾಸೋದ್ಯಮ, ಸರಕು ಸಾಗಣೆ ಹಾಗೂ ಕೈಗಾರಿಕೋದ್ಯಮಗಳ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಿಸಲಾಗುವುದು.
– ಪ್ರವಾಸೋದ್ಯಮ ಮತ್ತು ಉದ್ಯಮ ವಲಯಗಳನ್ನು ಉತ್ತೇಜಿಸಲು ಹಾಗೂ ವಿಪತ್ತು ನಿರ್ವಹಣೆಯ ಸಮಯದಲ್ಲಿ ರಕ್ಷಣಾ ಕಾರ್ಯಗಳಿಗೆ ನೆರವಾಗುವ ಉದ್ದೇಶದಿಂದ ಧರ್ಮಸ್ಥಳ, ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಹೊಸ ಏರ್‌ಸ್ಟ್ರಿಪ್‌ಗಳನ್ನು (Airstrip) ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುವುದು.
– ವಿಜಯಪುರ ವಿಮಾನ ನಿಲ್ದಾಣದ ಸಿವಿಲ್‌ ಕಾಮಗಾರಿಗಳನ್ನು ಪೂರ್ಣಗೊಳಿಸಿ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಪ್ರಸಕ್ತ ಸಾಲಿನಲ್ಲಿಯೇ ಪ್ರಾರಂಭಿಸಲಾಗುವುದು.
– ರಾಜ್ಯದಲ್ಲಿನ ನೈಸರ್ಗಿಕ ಅನಿಲ (Natural Gas) ವಿತರಣಾ ಜಾಲದ ವಿಸ್ತರಣೆಗೆ ಅನುವು ಮಾಡಿಕೊಡಲು, ರಾಜ್ಯಾದ್ಯಂತ ಏಕರೂಪದ ಅನುಮತಿ ಶುಲ್ಕ ಒಳಗೊಂಡಂತೆ, ನಗರ ಅನಿಲ ವಿತರಣಾ ನೀತಿಯನ್ನು (City Gas Distribution Policy) ರೂಪಿಸಲಾಗುವುದು.
– ಬಂದರು ಅವಲಂಬಿತ ಕೈಗಾರಿಕೆಗಳಿಗೆ ಉತ್ತೇಜನ ನೀಡಲು ಉತ್ತರ ಕನ್ನಡ ಜಿಲ್ಲೆಯ ಕೇಣಿಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸರ್ವ ಋತು ಡೀಪ್‌ವಾಟರ್ ಗ್ರೀನ್‌ಫೀಲ್ಡ್ ಬಂದರು ಅಭಿವೃದ್ಧಿ ಪಡಿಸಲಾಗುವುದು.
-. ಉತ್ತರ ಕನ್ನಡ ಜಿಲ್ಲೆಯ ಮಂಕಿಯಲ್ಲಿ ಬಹುಪಯೋಗಿ ಬಂದರಿನ ಅಭಿವೃದ್ಧಿಗೆ ಪ್ರಸಕ್ತ ಸಾಲಿನಲ್ಲಿ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲಾಗುವುದು.
– ಮೀನುಗಾರಿಕಾ ದೋಣಿಗಳು ತಂಗುವ ಜೆಟ್ಟಿಗಳು ಹಾಗೂ ಬಂದರುಗಳಲ್ಲಿ ಹೂಳು ತೆಗೆಯುವುದು ಮತ್ತು ಮಲ್ಪೆ, ಹೊನ್ನಾವರ, ಭಟ್ಕಳ, ಕುಂದಾಪುರ ಮತ್ತು ಬೇಲೆಕೇರಿ ಬಂದರುಗಳಲ್ಲಿ ಎರಡು ವರ್ಷಗಳಿಗೊಮ್ಮೆ ಹೂಳೆತ್ತುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.
– ರಾಜ್ಯದ ಕಿರು ಬಂದರುಗಳ ವಾಣಿಜ್ಯೀಕರಣ ಮತ್ತು ಸುಸ್ಥಿರ ಕಾರ್ಯನಿರ್ವಹಣೆಗೆ ವಿಸ್ತೃತ ಕ್ರಿಯಾ ಯೋಜನೆಯನ್ನು ರೂಪಿಸಲಾಗುವುದು.
-ನೈಸರ್ಗಿಕ ಮೀನುಗಾರಿಕಾ ಬಂದರುಗಳನ್ನು ಸುಸ್ಥಿತಿಯಲ್ಲಿಡಲು ಸಮಗ್ರ ಕರಾವಳಿ ನಿರ್ವಹಣಾ ಸಮಿತಿಯ ಸಬಲೀಕರಣ ಮಾಡಲಾಗುವುದು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.