ವಿದ್ಯಾರ್ಥಿಗಳು ಓದಲೇಬೇಕಾದ 5 ಪುಸ್ತಕಗಳು


Team Udayavani, Jul 31, 2019, 5:00 AM IST

11

ವಿದ್ಯಾರ್ಥಿ ಜೀವನ ಎನ್ನುವುದು ಸುಂದರ ಭವಿಷ್ಯ ನಿರ್ಮಾಣದ ತಯಾರಿ. ಇದನ್ನು ನಾವು ಸದುಪಯೋಗಿಸಿಕೊಂಡರೆ ಅಂದುಕೊಂಡಿರುವ ಗುರಿಯನ್ನು ತಲುಪಬಹುದು. ವಿದ್ಯಾರ್ಥಿಗಳು ಪಠ್ಯ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮತ್ತು ವಿವಿಧ ಕೌಶಲಗಳನ್ನು ಅಳವಡಿಸಿಕೊಳ್ಳುವುದರ ಜತೆಗೆ ಜೀವನಕ್ಕೆ ಸ್ಫೂರ್ತಿ ತುಂಬಬಲ್ಲ ಪುಸ್ತಕಗಳನ್ನು ಓದಬೇಕು ಎನ್ನುತ್ತಾರೆ ಶಿಕ್ಷಣ ತಜ್ಞರು. ವಿದ್ಯಾರ್ಥಿ ಗಳು ಓದಲೇ ಬೇಕಾದ 5 ಪುಸ್ತಕಗಳ ವಿವರ ಇಲ್ಲಿದೆ.

ರಾಷ್ಟ್ರ ಜಾಗೃತಿ
ಸ್ವಾಮಿ ವಿವೇಕಾ ನಂದರ 150ನೇ ಜನ್ಮ ಮಹೋತ್ಸವದ ಪ್ರಯುಕ್ತ ಪ್ರಕಟಿಸಲಾದ ಕಿರು ಹೊತ್ತಗೆ ರಾಷ್ಟ್ರ ಜಾಗೃತಿ. ಇದು ಸ್ವಾಮಿ ವಿವೇಕಾನಂದರ ಜೀವನ ಮತ್ತು ಉಪದೇಶಗಳನ್ನು ಒಳಗೊಂಡಿದೆ. ಈ ಪ್ರೇರಕ ನುಡಿಗಳು ಯುವ ಜನರಲ್ಲಿ ಸ್ಫೂರ್ತಿ ತುಂಬಬಲ್ಲದು. ಸಮಸ್ಯೆಗಳನ್ನು ಎದುರಿಸುವ ಧೈರ್ಯ ನೀಡಬಲ್ಲದು. ಇದರಲ್ಲಿನ ನುಡಿಗಳನ್ನು ಒಂಬತ್ತು ಸಂಪುಟಗಳಲ್ಲಿ ಪ್ರಕಟವಾದ “ಸ್ವಾಮಿ ವಿವೇಕಾನಂದರ ಕೃತಿಶ್ರೇಣಿ’ಯಿಂದ ಆಯ್ದುಕೊಳ್ಳಲಾಗಿದೆ.

ಗೃಹಭಂಗ
ಡಾ| ಎಸ್‌.ಎಲ್‌.ಭೈರಪ್ಪ ಭಾರತದಲ್ಲೇ ವಿಶಿಷ್ಟ ಲೇಖಕ. ಅವರ ಹೆಚ್ಚಿನ ಎಲ್ಲ ಕೃತಿಗಳು ಭಾರತದ ಇತರ ಭಾಷೆಗಳಿಗೂ ಅನುವಾದಗೊಂಡು ಜನಪ್ರಿಯ ವಾಗಿವೆ. ಅವುಗಳ ಪೈಕಿ ಗೃಹಭಂಗವೂ ಒಂದು. ಇದು ಭಾರತದ 13 ಭಾಷೆಗಳಿಗೂ ತರ್ಜುಮೆಗೊಂಡಿದೆ. ಬೇಜವಾಬ್ದಾರಿಯಿಂದ ಮನೆತನವೊಂದು ಹೇಗೆ ಅಧಃಪತನ ಹೊಂದುತ್ತದೆ, ಮಹಿಳೆಯೊಬ್ಬಳು ಮಕ್ಕಳ ಬೆಳವಣಿಗೆಗೆ ಪಡುವ ಕಷ್ಟ ಗಳನ್ನು ಈ ಕಾದಂಬರಿ ಮನೋಜ್ಞವಾಗಿ ಚಿತ್ರಿಸುತ್ತದೆ.

ಶ್ರೀ ರಾಮಾಯಣ ದರ್ಶನಂ
ಕುವೆಂಪು ಅವರಿಗೆ ಜ್ಞಾನಪೀಠ ಪ್ರಶಸ್ತಿ ದೊರಕಿಸಿ ಕೊಟ್ಟ ಕೃತಿ ಇದು. ಬಹುಶಃ ರಾಮಾ ಯಣವನ್ನು ಒಂದು ಹೊಸ ದೃಷ್ಟಿಕೋನ ದಿಂದ ಅಧ್ಯಯನ ಮಾಡಲು ಇದು ಸಹಕಾರಿಯಾಗಲಿದೆ. ರಾಮಾಯಣ ಕಥೆಯ ಜತೆಗೆ ಒಂದಷ್ಟು ಲೋಕಜ್ಞಾನವನ್ನು ಈ ಪುಸ್ತಕ ತಿಳಿಹೇಳುತ್ತದೆ. ತ್ಯಾಗ, ಸಹನೆ ಕಡಿಮೆಯಾಗುತ್ತಿರುವ ಇಂದಿನ ಸಮುದಾಯಕ್ಕೆ ಅದನ್ನು ಹೇಗೆ ಬೆಳೆಸಬಹುದು ಎಂಬುದನ್ನು ತಿಳಿಸಿಕೊಡುವಲ್ಲಿ ಈ ಕೃತಿ ಯಶಸ್ವಿಯಾಗುತ್ತದೆ.

ಅಗ್ನಿಯ ರೆಕ್ಕೆಗಳು
ಮಾಜಿ ರಾಷ್ಟ್ರಪತಿ ಡಾ|ಎ.ಪಿ.ಜೆ. ಅಬ್ದುಲ್‌ ಕಲಾಂ ಅವರ ಆತ್ಮಕಥೆ Wings of fire ನ ಅನುವಾದ ಅಗ್ನಿಯ ರೆಕ್ಕೆಗಳು. ಜಯಪ್ರಕಾಶ್‌ ಪುತ್ತೂರು ಇದರ ಅನುವಾದಕರು. ಕಲಾಂ ತಮ್ಮ ಬಾಲ್ಯ, ತಾವು ಪಟ್ಟ ಕಷ್ಟ, ವಿದ್ಯಾರ್ಥಿ ಜೀವನ, ಕ್ಷಿಪಣಿ ಉಡ್ಡಯನದ ವಿಜ್ಞಾನಿಯಾಗಿ ಯಶಸ್ವಿಯಾದ ಬಗೆಯನ್ನು ಇಲ್ಲಿ ವಿವರಿಸಿದ್ದಾರೆ. ಸುಮಾರು 13 ಭಾಷೆಗಳಲ್ಲಿ ಈ ಪುಸ್ತಕ ಪ್ರಕಟಗೊಂಡಿದೆ. ರಾಮೇಶ್ವರ ಬೀದಿಗಳಲ್ಲಿ ಪೇಪರ್‌ ಹಂಚುತ್ತಿದ್ದ ಬಾಲಕ ವಿಜ್ಞಾನಿಯಾಗಿ ಬೆಳೆದ ರೀತಿ ವಿದ್ಯಾರ್ಥಿಗಳ ಸಾಧನೆಯ ಹಾದಿಗೆ ಸ್ಫೂರ್ತಿಯಾಗಬಲ್ಲದು.

ಪರಿಸರದ ಕತೆ
ಪರಿಸರದ ಕುರಿತಾದ ಬರಹಗಳಿಗೆ ಪ್ರಸಿದ್ಧರಾದ ಖ್ಯಾತ ಲೇಖಕ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಕೃತಿ ಪರಿಸರದ ಕತೆ. ನಮ್ಮ ಸುತ್ತಮುತ್ತಲಿನ ಪ್ರಕೃತಿಯಲ್ಲಿ ಕಾಣುವ ಅನೇಕ ಕೌತುಕಗಳನ್ನು ಸರಳವಾಗಿ ಸಾಮಾನ್ಯರಿಗೂ ಅರ್ಥವಾಗುವಂತೆ ವಿವರಿಸಿರುವುದು ಈ ಕೃತಿಯ ವಿಶೇಷತೆ.

- ರಮೇಶ್‌ ಬಳ್ಳಮೂಲೆ

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.