ಇತಿಹಾಸವನ್ನು ಬಣ್ಣಿಸುವ “ಬಳ್ಳಿಕಾಳ ಬೆಳ್ಳಿ’


Team Udayavani, Sep 18, 2019, 4:00 AM IST

Udayavani Kannada Newspaper

ಬಳ್ಳಿಕಾಳ ಬೆಳ್ಳಿ ಡಾ| ಕೆ.ಎನ್‌. ಗಣೇಶಯ್ಯನವರ 15ನೇ ಪುಸ್ತಕ. ಮರೆತು ಹೋದ ಭವ್ಯ ಇತಿಹಾಸವನ್ನು ಮತ್ತೆ ಪರಿಚಯಿಸಬೇಕು ಎನ್ನುವ ಹಂಬಲದಿಂದ ಮೂಡಿಬಂದ ಪುಸ್ತಕವೇ ಬಳ್ಳಿಕಾಳ ಬೆಳ್ಳಿ. ಇದು ಇತಿಹಾಸವನ್ನು ನೆನಪಿಸುವ ಕಾದಂಬರಿ. ಇತಿಹಾಸ ಎಂದರೆ ಬೋರಿಂಗ್‌ ಎನ್ನುವ ಮಾತನ್ನು ಸುಳ್ಳು ಮಾಡುವಂತೆ ಓದುಗರನ್ನು ಕುತೂಹಲದಿಂದ ಓದಿಸುತ್ತಾ ಹೋಗುವ ಬಳ್ಳಿಕಾಳ ಬೆಳ್ಳಿ ಕಾದಂಬರಿ ಪ್ರತಿಯೊಂದು ಸೂಕ್ಷ್ಮ ವಿಷಯಗಳಿಗೂ ಮಹತ್ವ ನೀಡಿದೆ.

ಇತಿಹಾಸದಲ್ಲಿ ಅಚ್ಚಳಿಯದೆ ಉಳಿದವರು ಸ್ವಲ್ಪ ಜನರಾದರೆ, ಇನ್ನೂ ಸ್ವಲ್ಪ ಜನ, ಘಟನೆಗಳು ತೆರೆಮರೆಯಲ್ಲಿಯೆ ಉಳಿದುಕೊಂಡುಬಿಟ್ಟಿವೆ. ಇನ್ನೊಂದಷ್ಟು ಇತಿಹಾಸವು ಕಾರಣಾಂತರಗಳಿಂದ ಮುಚ್ಚಿ ಹೋಗಿದೆ. ಕರಾವಳಿಯ ಇತಿಹಾಸವು ಭವ್ಯವಾಗಿದ್ದು, ಇಂದು ಅವು ಮರೆತು ಹೋಗಿದೆ. ಅವುಗಳನ್ನು ಮತ್ತೆ ನೆನಪಿಸುವ ಪ್ರಯತ್ನದಲ್ಲಿ ಕಾದಂಬರಿಕಾರರು ಯಶಸ್ವಿಯಾಗಿದ್ದಾರೆ.

 ಘಟನೆ: 1
ಪಶ್ಚಿಮದ ಕರಾವಳಿಯ ವೀರಗಾಥೆಯ ಸುತ್ತ ಹೆಣೆದಿರುವ ಕಾದಂಬರಿ ಇದಾಗಿದೆ. ಇತಿಹಾಸಕಾರರು ಹೇಗೆ ಇತಿಹಾಸವನ್ನು ಕೆದಕುತ್ತಾರೆ, ಕಾಲಘಟ್ಟವನ್ನು ಅರಿಯುತ್ತಾರೆ, ಇತಿಹಾಸವನ್ನು ತಿಳಿಯಲು ಶಾಸನಗಳ ಮಹತ್ವವೇನು ಎನ್ನುವುದನ್ನು ಲೇಖಕರು ತಿಳಿಸುತ್ತಾ ಹೋಗುತ್ತಾರೆ. ಕರಾವಳಿಯು ಹೆಚ್ಚು ಶ್ರೀಮಂತವಾಗಿದ್ದು, ಹಿಂದೆ ಸಂಪತ್ತನ್ನು ಹೇಗೆ ಸಂಗ್ರಹಿಸಿಡುತ್ತಿದ್ದರು ಮತ್ತು ಅದನ್ನು ಒಂದೊಂದಾಗಿ ಹೇಗೆ ಬ್ರಿಟಿಷರು ವಶಪಡಿಸಿಕೊಂಡರು ಎನ್ನುವುದನ್ನೂ ಸೂಚ್ಯವಾಗಿ ತಿಳಿಸುತ್ತಾರೆ.

 ಘಟನೆ: 2
ಇದರಲ್ಲಿ ಬರುವ ಲಕ್ಷ್ಮೀ ಪೊದ್ದಾರ್‌ ಮತ್ತು ಪೂಜಾ ಪಾತ್ರಗಳು ಕಾದಂಬರಿಯುದ್ದಕ್ಕೂ ಇತಿಹಾಸದ ಕುರಿತು ಮಾಹಿತಿ ನೀಡುತ್ತಾ ಹೋಗುತ್ತವೆ. ಮಾಫಿಯಾ ಗ್ಯಾಂಗ್‌ನವರು ಭಾರತದಲ್ಲಿದ್ದ ಸಂಪತ್ತನ್ನು ವಶಪಡಿಸಿಕೊಳ್ಳಲು ಮಾಡುವ ಪ್ರಯತ್ನ, ಅವರ ಸುಳಿಯೊಳಗೆ ಬಿದ್ದ ಲಕ್ಷ್ಮೀ ಪೊದ್ದಾರ್‌ ಮತ್ತು ಪೂಜಾ ಮತ್ತು ಆ ಕಾರಣದಿಂದ ಇತಿಹಾಸವನ್ನು ಕೆದಕುವ ಪ್ರಯತ್ನ ನಡೆಸಿದ ರೀತಿಯನ್ನು ಸರಳ, ಸುಂದರವಾಗಿ ಚಿತ್ರಿಸಿದ್ದಾರೆ.

 ಘಟನೆ: 3
ಇತಿಹಾಸದ ಬೆನ್ನತ್ತಿ ಹೊರಟ ಕಾದಂಬರಿಯ ಪಾತ್ರಗಳಿಗೆ ಹೊಸ ಹೊಸ ಮಾಹಿತಿಗಳು ಸಿಗುತ್ತಾ ಹೋಗುತ್ತವೆ. ಇತಿಹಾಸ ಕುತೂಹಲಕಾರಿಯಾದುದು ಎನ್ನುವುದನ್ನು ಈ ಕಾದಂಬರಿಯ ಮೂಲಕ ಲೇಖಕರು ಸಾರುತ್ತಾರೆ. ಜತೆಗೆ ಕರಾವಳಿ ಇತಿಹಾಸ, ಇಲ್ಲಿದ್ದ ರಾಣೆಯರ ಪರಾಕ್ರಮ, ಸಾಹಸಗಳು ಇತಿಹಾಸದ ಪುಟಗಳಲ್ಲಿ ಹೆಚ್ಚು ಮಹತ್ವ ಪಡೆದಿಲ್ಲ. ಆದರೆ ಅವರ ಸಾಧನೆ, ಪರಾಕ್ರಮ ಪ್ರಮುಖವಾದದ್ದು ಎನ್ನುವುದನ್ನು ತಿಳಿಸುತ್ತಾರೆ. ಇಲ್ಲಿರುವ ಭೂತಾರಾಧನೆ, ದೇವಸ್ಥಾನ, ಬಸದಿಗಳ ಹಿಂದಿರುವ ಇತಿಹಾಸ, ಕಥೆಗಳನ್ನು ಕಾದಂಬರಿಯಲ್ಲಿ ತಿಳಿಸಿದ್ದಾರೆ. ನಮ್ಮ ದೇಶ, ರಾಜ್ಯದ ಇತಿಹಾಸದಲ್ಲಿ ಅನೇಕ ವ್ಯಕ್ತಿ, ಘಟನೆಗಳ ತುಂಬಾ ಲೇಖಕರು ಬರೆದಿದ್ದಾರೆ. ಆದರೆ ಇನ್ನೂ ಬೇಧಿಸದೇ ಇದ್ದ ಅನೇಕ ಹೊಸ ಸಂಗತಿಗಳನ್ನು ತಿಳಿಸುವ ಬಳ್ಳಿಕಾಳ ಬೆಳ್ಳಿ ಉಳಿದ ಇತಿಹಾಸ ಪುಸ್ತಕಗಳಿಗಿಂತ ಭಿನ್ನವಾಗಿದೆ.

- ರಂಜಿನಿ ಮಿತ್ತಡ್ಕ

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.