ಅನೌಪಚಾರಿಕ ಶಿಕ್ಷಣ ವಿದ್ಯಾಭ್ಯಾಸಕ್ಕೆ ಪೂರಕವಾಗಿರಲಿ


Team Udayavani, Nov 13, 2019, 5:19 AM IST

qq-20

ಶಿಕ್ಷಣ ಇಂದು ಮೂಲ ಸೌಕರ್ಯಗಳಲ್ಲಿ ಒಂದಾಗಿದೆ. ಜಗತ್ತಿನಲ್ಲಿ ಜನಿಸುವ ಪ್ರತಿಯೊಬ್ಬ ಮಗುವಿಗೂ ಶಿಕ್ಷಣ ಲಭಿಸಬೇಕೆಂಬುದನ್ನು ಲಿಖೀತ ನಿಯಮವನ್ನು ಕೂಡ ರೂಪಿಸಲಾಗಿದೆ. ಆ ಕಾರಣಕ್ಕಾಗಿಯೇ ಉಚಿತ ಶಿಕ್ಷಣ ನೀಡಲಾಗಿದೆ. ಔಪಚಾರಿಕ ಶಿಕ್ಷಣಗಳು ಇಂದು ಮೌಲ್ಯಗಳನ್ನು ಕಳೆದುಕೊಳ್ಳುತ್ತಿವೆ ಎಂಬ ಮಾತೊಂದು ಇದೆ. ಔಪಚಾರಿಕ ಶಿಕ್ಷಣದ ಜತೆಗೆ ಅನೌಪಚಾರಿಕ ಶಿಕ್ಷಣಗಳು ಜತೆಗೂಡಿದರೆ ಶಿಕ್ಷಣದ ಮೌಲ್ಯಗಳೂ ಹೆಚ್ಚಾಗುತ್ತವೆ. ಮಕ್ಕಳಿಗೆ ಸಂಸ್ಕಾರದ ಜತೆಗೆ ಶಿಕ್ಷಣ ಲಭಿಸಿದರೆ ಅವರು ಮುಂದೆ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಲು ಸಾಧ್ಯ.

ಗುರುಕುಲಗಳು ಮಾದರಿಯಾಗಲಿ
ಈ ಹಿಂದೆ ಅನೌಪಚಾರಿಕ ಶಿಕ್ಷಣ ಮಾದರಿಯಾಗಿ ಗುರುಕುಲದಲ್ಲಿ ಶಿಕ್ಷಣವನ್ನು ನೀಡಲಾಗುತ್ತಿತ್ತು. ಹೆತ್ತವರು ತಮ್ಮ ಮಕ್ಕಳನ್ನು ಯಾವುದಾದರೂ ಗುರುವಿನ ಆಶ್ರಮದ ಬಳಿ ಬಿಟ್ಟರೆ ಒಂದು ಹಂತದ ಶಿಕ್ಷಣ ಮುಗಿಯುವವರೆಗೆ ಅಲ್ಲೇ ನಿಂತು ಶಿಕ್ಷಣ ಪೂರೈಸುತ್ತಿದ್ದರು. ಅಲ್ಲಿ ಕೇವಲ ಅಕ್ಷರಾಭ್ಯಾಸ ಮಾತ್ರವಲ್ಲದೆ ಬದುಕಿನ ಪಾಠಗಳನ್ನು ಕಲಿಸುತ್ತಿದ್ದರು. ಜೀವನವನ್ನು ರೂಪಿಸುತ್ತಿದ್ದರು. ಬದುಕಿನ ಮೌಲ್ಯಗಳನ್ನು ಹೇಳಿಕೊಡಲಾಗುತ್ತಿತ್ತು. ಹಿರಿಯರಿಗೆ ಗೌರವ ನೀಡುವುದು ಹೇಗೆ, ಕೆಲಸವನ್ನು ಅಚ್ಚುಕಟ್ಟಾಗಿ ಕೆಲಸವನ್ನು ಮಾಡುವುದು ಹೇಗೆ ಮೊದಲಾದ ವಿಷಯಗಳನ್ನು ಅಲ್ಲಿ ಕಲಿಸುತ್ತಿದ್ದರು. ಎಲ್ಲ ಕೆಲಸಗಳನ್ನು ಕಲಿಸುವ ಈ ಆಶ್ರಮಗಳು ಇಂದಿನ ಶಿಕ್ಷಣ ವ್ಯವಸ್ಥೆಗೆ ಮಾದರಿಯಾಗಿವೆ. ಮಕ್ಕಳಿಗೆ ಇಂದು ಅಕ್ಷರಾಭ್ಯಾಸಕ್ಕಿಂತ ಹೆಚ್ಚು ಜಗತ್ತಿನ ಆಗುಹೋಗುಗಳ ಹಾಗೂ ಸಾಮಾನ್ಯ ಜ್ಞಾನದ ಪರಿಚಯವಿರಬೇಕಾಗುತ್ತದೆ. ಅದಕ್ಕೆ ಮನೆಯಲ್ಲಿ ಅಥವಾ ಶಾಲೆಯಲ್ಲಿ ಇತರ ವಿಷಯಗಳನ್ನು ಬೋಧಿಸಬೇಕಾಗುತ್ತದೆ.

ಹಿರಿಯರೊಂದಿಗೆ ಸಂವಹನ ಅತ್ಯಗತ್ಯ
ಇಂದಿನ ಯುಗದಲ್ಲಿ ಪರಸ್ಪರ ಮಾತುಕತೆಗಳು ಕಡಿಮೆಯಾಗುತ್ತಿವೆ ಎಂಬ ಕೊರಗಿನ ಮಾತುಗಳು ಆಗಾಗ ಕೇಳಿಬರುತ್ತಿರುತ್ತದೆ. ನಾವು ಯಾರೊಂದಿಗೂ ಮಾತನಾಡದಿದ್ದರೆ ಇದರಿಂದ ಒಂಟಿತನವನ್ನು ಹೆಚ್ಚು ಮಾಡುತ್ತದೆ. ಇದು ಹೆಚ್ಚಾಗುತ್ತಾ ಹೋದಂತೆ ಜ್ಞಾನದ ಪರಿಧಿ ಸಂಕುಚಿತಗೊಳ್ಳುತ್ತಾ ಹೋಗುತ್ತದೆ. ಇದನ್ನು ಕಡಿಮೆ ಮಾಡಲು ಹಿರಿಯರೊಂದಿಗೆ ಮಾತಕತೆಗಳು ನಿರಂತವಾಗಿರಬೇಕು. ಇದು ನಮ್ಮ ಜ್ಞಾನವನ್ನು ವಿಸ್ತರಿಸುತ್ತಾ ಹೋಗುತ್ತದೆ. ಅನೌಪಚಾರಿಕ ಶಿಕ್ಷಣಗಳು ಯಾವತ್ತೂ ಒಂದು ರಚನೆಯ ಒಳಗೆ ರೂಪುಗೊಳ್ಳುವುದಿಲ್ಲ. ಯಾವಾಗಲೂ ಏನಿದ್ದರೂ ರಚನೆಯನ್ನು ಬೇಧಿಸುವಂತವುಗಳಾಗಿರುತ್ತವೆ. ಒಟ್ಟಿಗೆ ಕುಳಿತು, ಆಟ, ಊಟ, ಶಿಕ್ಷಣಗಳನ್ನು ಮನನ ಮಾಡುವುದರಿಂದ ಒಬ್ಬ ವಿದ್ಯಾರ್ಥಿ ಕೇವಲ ಬುದ್ದಿವಂತನಾಗುವುದು ಮಾತ್ರವಲ್ಲ ಅವನಲ್ಲಿ ಸಮಾಜದಲ್ಲಿ ಬದುಕಲು ಬೇಕಾದ ಮೌಲ್ಯಗಳು ರೂಪುಗೊಳ್ಳುತ್ತವೆ. ಒಬ್ಬ ಉತ್ತಮ ವಿದ್ಯಾರ್ಥಿಯನ್ನು ರೂಪಿಸುವಲ್ಲಿ ಅನೌಪಚಾರಿಕ ಶಿಕ್ಷಣದ ಪಾತ್ರ ಮಹತ್ತರವಾಗಿದೆ.

 ಸುಶ್ಮಿತಾ ಶೆಟ್ಟಿ ಸಿರಿಬಾಗಿಲು

ಟಾಪ್ ನ್ಯೂಸ್

12-uv-fusion

Water: ನೀರನ್ನು ಮಿತವಾಗಿ ಬಳಸೋಣ

yadagiri

SSLC Exam Result; ಮತ್ತೆ ಕೊನೆಯ ಸ್ಥಾನ ಪಡೆದ ಯಾದಗಿರಿ..; ಕಾರಣವೇನು?

1

Sikandar Movie: ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

11-kushtagi

SSLC Result: ಉದಯವಾಣಿ ಪತ್ರಿಕೆಯ ಬೈಕ್ ರೂಟ್ ವಿತರಕನ ಮಗಳು ಎಸ್ಸೆಸ್ಸೆಲ್ಸಿಯಲ್ಲಿ ಟಾಪರ್

10-uv-fusion

UV Fusion: ವ್ಯಾಪ್ತಿ ಪ್ರದೇಶದ ಹೊರಗೆ

Floor Test: ವಿಶ್ವಾಸ ಮತ ಸಾಬೀತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ ಬರೆದ ದುಷ್ಯಂತ್ ಚೌಟಾಲ

Floor Test: ವಿಶ್ವಾಸ ಮತ ಸಾಬೀತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ ಬರೆದ ದುಷ್ಯಂತ್ ಚೌಟಾಲ

Delhi Police; 9 people belonging to Lawrence Bishnoi-Goldy Brar gang arrested

Delhi Police; ಲಾರೆನ್ಸ್ ಬಿಷ್ಣೋಯ್-ಗೋಲ್ಡಿ ಬ್ರಾರ್ ಗ್ಯಾಂಗ್‌ ಗೆ ಸೇರಿದ 9 ಜನರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

12-uv-fusion

Water: ನೀರನ್ನು ಮಿತವಾಗಿ ಬಳಸೋಣ

yadagiri

SSLC Exam Result; ಮತ್ತೆ ಕೊನೆಯ ಸ್ಥಾನ ಪಡೆದ ಯಾದಗಿರಿ..; ಕಾರಣವೇನು?

1

Sikandar Movie: ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

11-kushtagi

SSLC Result: ಉದಯವಾಣಿ ಪತ್ರಿಕೆಯ ಬೈಕ್ ರೂಟ್ ವಿತರಕನ ಮಗಳು ಎಸ್ಸೆಸ್ಸೆಲ್ಸಿಯಲ್ಲಿ ಟಾಪರ್

10-uv-fusion

UV Fusion: ವ್ಯಾಪ್ತಿ ಪ್ರದೇಶದ ಹೊರಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.