ಎಂಜಿನಿಯರ್‌ ಗಳಲ್ಲೂ ಗ್ರಾಮೀಣ ಸೇವೆಯ ಆಸಕ್ತಿ ಹುಟ್ಟಲಿ


Team Udayavani, Aug 15, 2018, 2:32 PM IST

15-agust-12.jpg

ಸಿವಿಲ್‌ ಎಂಜಿನಿಯರಿಂಗ್‌ ಕಲಿತವರಿಗೆ ಉದ್ಯೋಗವಕಾಶಗಳು ಈಗ ಹೇಗಿವೆ?
ಸಿವಿಲ್‌ ಎಂಜಿನಿಯರಿಂಗ್‌ ಕ್ಷೇತ್ರದಲ್ಲಿ ಅವಕಾಶಗಳು ಕಡಿಮೆ ಎಂಬುವುದಾಗಿ ಈ ಹಿಂದೆ ಭ್ರಮೆ ಹುಟ್ಟಿಸಲಾಗಿತ್ತು. ಸದ್ಯ ಕಾಲ ಬದಲಾಗಿದ್ದು, ಹೆಚ್ಚಿನ ಅವಕಾಶಗಳಿವೆ. ದೇಶದಲ್ಲಿ ಅನೇಕ ರಸ್ತೆ, ಕಟ್ಟಡ ನಿರ್ಮಾಣಗಳು ನಡೆಯುತ್ತಿದೆ. ಸರ್ವೆ, ಡ್ರಾಯಿಂಗ್‌, ಕ್ಯಾಡ್‌, ಪಬ್ಲಿಕ್‌ ಹೆಲ್ತ್‌ ಎಂಜಿನಿಯರಿಂಗ್‌ ಸಹಿತ ಇನ್ನಿತರ ಕ್ಷೇತ್ರಗಳಲ್ಲಿ ಹಲವಾರು ಅವಕಾಶಗಳು ತೆರೆದುಕೊಳ್ಳುತ್ತಿವೆ.

.ಮಕ್ಕಳು ಡಾಕ್ಟರ್‌, ಎಂಜಿನಿಯರೇ ಆಗಿರಬೇಕು ಎಂದು ಬಯಸುವ ಹೆತ್ತವರಿಗೆ ನಿಮ್ಮ ಕಿವಿ ಮಾತು ಏನು?
ತಮ್ಮ ಮಕ್ಕಳು ಎಂಜಿನಿಯರ್‌ ಅಥವಾ ಡಾಕ್ಟರ್‌ ಆಗಬೇಕೆಂಬ ಕ್ರೇಜ್‌ ಹೆತ್ತವರಲ್ಲಿ ಇತ್ತೀಚೆಗೆ ಪ್ರಾರಂಭವಾಗಿದೆ. ಕಳೆದ ಕೆಲವು ವರ್ಷಗಳ ಹಿಂದೆ ಡಾಕ್ಟರ್‌, ಎಂಜಿನಿಯರ್‌ ಕಲಿತ ವಿದ್ಯಾರ್ಥಿಗಳಿಗೆ ಉದ್ಯೋಗದಲ್ಲಿ ಹೆಚ್ಚಿನ ಅವಕಾಶವಿತ್ತು. ಆದರೆ ಈಗ ಕಾಲ ಬದಲಾಗಿದ್ದು, ಈ ಕ್ಷೇತ್ರ ಬಿಟ್ಟು ಉಳಿದ ಕ್ಷೇತ್ರಗಳಲ್ಲೂ ಸಾಕಷ್ಟು ಉದ್ಯೋಗವಕಾಶಗಳಿವೆ. ಅಷ್ಟೇ ಅಲ್ಲದೆ, ಇತ್ತೀಚಿನ ದಿನಗಳಲ್ಲಿ ಶಿಕ್ಷಣದ ಗುಣಮಟ್ಟ ಕುಸಿದಿದ್ದು, ವಿದ್ಯಾರ್ಥಿಗಳಿಗೆ ಪ್ರಾಥಮಿಕ ಜ್ಞಾನ ಕಡಿಮೆಯಾಗುತ್ತಿದೆ.

.ಎಂಜಿನಿಯರಿಂಗ್‌, ವೈದ್ಯಕೀಯ ಶಿಕ್ಷಣ ಪಡೆದವರು ಗ್ರಾಮೀಣ ಭಾಗದಲ್ಲಿ ಕರ್ತವ್ಯ ನಿರ್ವಹಿಸುವುದಿಲ್ಲ. ನಗರಕ್ಕೆ ಹೋಗಿ ಸೇರುತ್ತಾರೆ ಎಂಬ ಆರೋಪವಿದೆ ಇದನ್ನು ಹೇಗೆ ಸರಿಪಡಿಸಬಹುದು?
ಈ ಬಗ್ಗೆ ಸರಕಾರವೇ ಕಾನೂನು ತರಬೇಕಿದೆ. ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ತಾನು ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸಬೇಕು ಎಂಬ ಆಸಕ್ತಿ ಹುಟ್ಟಿಸಬೇಕು. ಆದರೆ ಸದ್ಯ ಶಿಕ್ಷಣ ಕಲಿಯಲು ಖರ್ಚಾದ ಎರಡರಷ್ಟು ಹಣ ಸಂಪಾದನೆ ಮಾಡಬೇಕೆಂಬ ಆಸೆ ಹೆಚ್ಚಾಗಿದೆ. 

.ಸಿವಿಲ್‌ ಎಂಜಿನಿಯರ್‌ಗಳೆಂದರೆ ನಮಗೆ ಬದುಕಲು ಬೇಕಾದುದ್ದನ್ನು ತಯಾರಿಸುವುದು, ಅದನ್ನು ಉತ್ತಮಗೊಳಿಸುವುದು ಮತ್ತು ಪರಿಸರವನ್ನು ರಕ್ಷಿಸುವವರು ಎನ್ನಲಾಗುತ್ತದೆ. ಆದರೆ ಇದು ನಿಜವಾಗಿಯೂ ಪಾಲನೆಯಾಗುತ್ತಿದೆಯೇ?
ಇಲ್ಲ. ಸಿವಿಲ್‌ ಎಂಜಿನಿಯರಿಂಗ್‌ ವಿದ್ಯಾರ್ಥಿ ಯಾವುದೇ ಕಟ್ಟಡ ಕಟ್ಟಿದರೂ ಅದು ಪರಿಸರ ಸ್ನೇಹಿಯಾಗಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಕಟ್ಟಡದ ಬಾಳಿಕೆ, ಗುಣಮಟ್ಟ ಕಡಿಮೆಯಾಗುತ್ತಿದೆ. ಈ ಬಗ್ಗೆ ವಿದ್ಯಾರ್ಥಿಗಳು ಗಮನಹರಿಸಬೇಕಾಗಿದೆ.

. ಸಿವಿಲ್‌ ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಮುಂದಿರುವ ಸವಾಲುಗಳು ಏನು?
ಸಿವಿಲ್‌ ಎಂಜಿನಿಯರಿಂಗ್‌ ಉಳಿದ ಎಂಜಿನಿಯರಿಂಗ್‌ ಶಿಕ್ಷಣಕ್ಕೆ ಬೇಸಿಕ್‌ ಆಗಿದೆ. ಸಿವಿಲ್‌ ಎಂಜಿನಿಯರಿಂಗ್‌ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಹೊಸ ಹೊಸ ತಂತ್ರಜ್ಞಾನಗಳು ಮಾರುಕಟ್ಟೆಗೆ ಬರುತ್ತಿದೆ. ವಿದ್ಯಾರ್ಥಿಗಳಿಗೆ ಇದರ ಬಗ್ಗೆ ಜ್ಞಾನ ಅಗತ್ಯ. ಅಲ್ಲದೆ, ಉದ್ಯೋಗಾವಕಾಶ ಪಡೆದುಕೊಳ್ಳಲು ತಯಾರಿ ಮಾಡುಕೊಳ್ಳುವುದು ಕೂಡ ಸವಾಲಾಗಿದೆ.

ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.