ವಿವಿಧ ಭಾಷೆ ಕಲಿಯುವ ಹವ್ಯಾಸ ಬೆಳೆಸಿಕೊಳ್ಳಿ


Team Udayavani, Sep 11, 2019, 5:15 AM IST

t-39

ಭಾರತ ವಿವಿಧತೆಯಲ್ಲಿ ಏಕತೆಯನ್ನು ಸಾಧಿಸಿದ ರಾಷ್ಟ್ರ. ಅನೇಕ ಸಂಸ್ಕೃತಿಯ ಜತೆಗೆ ಅನೇಕ ಭಾಷೆಗಳನ್ನು ಇಲ್ಲಿ ಕಾಣಬಹುದು. ಸಂಸ್ಕೃತ ಮೂಲ ಭಾಷೆಯಾದರೆ, ಹಿಂದಿ ರಾಷ್ಟ್ರ ಭಾಷೆಯಾಗಿದೆ. ಪಂಜಾಬಿ, ಬಂಗಾಳಿ, ಮರಾಠಿ, ಬೋಜ್‌ಪುರಿ, ಕಾಶ್ಮೀರಿ ಉತ್ತರ ಭಾರತದ ಭಾಷೆಗಳಾದರೆ, ದಕ್ಷಿಣದಲ್ಲಿ ಕನ್ನಡ, ತಮಿಳು, ತೆಲುಗು, ತುಳು ಮತ್ತು ಮಲಯಾಳ ಭಾಷೆಗಳಿವೆ. ಇಷ್ಟೆಲ್ಲ ಭಾಷೆಗಳನ್ನು ಹೊಂದಿದ ಭಾರತದಲ್ಲಿ ಮಾತೃ ಭಾಷೆಗಷ್ಟೇ ಸೀಮಿತವಾಗದೇ ಬೇರೆ ಬೇರೆ ಭಾಷೆಗಳನ್ನು ಕಲಿ ಯುವ ಮನಸ್ಸು ಮಾಡಬೇಕು. ಭಾರತದ ಭಾಷೆ ಯಷ್ಟೇ ಅಲ್ಲ ಅಂತಾರಾಷ್ಟ್ರೀಯ ಭಾಷೆಗಳನ್ನೂ ಕಲಿಯಬೇಕು.

·ಜ್ಜಾನ ವೃದ್ಧಿ : ಕನ್ನಡ ಮಾತೃ ಭಾಷೆಯ ಹುಡುಗ ಹಿಂದಿ ಅಥವಾ ತಮಿಳು ಭಾಷೆಯನ್ನು ಓದಲು, ಬರೆಯಲು ಕಲಿತರೆ ಆತನಿಗೆ ಅ ಭಾಷೆಯ ಪುಸ್ತಕಗಳನ್ನು ಓದುವ ಮೂಲಕ ಜ್ಞಾನ ಸಂಪಾದಿಸಬಹುದು.

·ಒಂದು ಅಧ್ಯಯನ ಪ್ರಕಾರ ಹೆಚ್ಚು ಭಾಷೆಗಳನ್ನು ಕಲಿತಷ್ಟು ಜ್ಞಾಪಕ ಶಕ್ತಿಯೂ ವೃದ್ಧಿಯಾಗುತ್ತದೆ.

·ಇತರೆ ಭಾಷೆಗಳನ್ನು ಕಲಿಯುವುದರಿಂದ ಉತ್ತಮ ಸಂವಹನ ಕಲೆಯನ್ನು ರೂಢಿಸಿಕೊಳ್ಳಲು ಸಾಧ್ಯ.

·ಬೇರೆ ಬೇರೆ ಭಾಷೆಗಳ ಕಲಿಕೆ ನಮ್ಮ ಕ್ರಿಯಾಶೀಲತೆಯನ್ನು ಹೆಚ್ಚಿಸುತ್ತದೆ.

·ಬೇರೆ ಭಾಷೆ ಕಲಿಯುವುದರ ಜತೆಗೆ ಅಲ್ಲಿನ ಸಂಸ್ಕೃತಿಯನ್ನು ತಿಳಿಸಲು ಸಾಧ್ಯ.

·ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ.

ಬೇರೆ ಬೇರೆ ಭಾಷೆಗಳನ್ನು ಕಲಿಯುವುದು ಹೇಗೆ?
·ಭಾಷೆಗಳನ್ನು ಕಲಿಯಬೇಕೆಂಬ ಹಂಬಲ, ಆಸಕ್ತಿ ಮೊದಲು ಇರಬೇಕು. ಬೇರೆ ಬೇರೆ ಭಾಷೆಗಳನ್ನು ಕಲಿಯುವ ಆ್ಯಪ್‌ಗ್ಳಿದ್ದು ಅವುಗಳ ಮೂಲಕ ಕಲಿಯಬಹುದು.

·ಇತರೆ ಭಾಷೆ ಮಾತನಾಡುವವರ ಜತೆಗೆ ಅವರ ಭಾಷೆಯಲ್ಲೇ ಮಾತನಾಡುವುದು. ಉದಾ: ತುಳು ಬರದ ಕನ್ನಡ ವ್ಯಕ್ತಿ ತುಳು ಮಾತನಾಡುವ ವ್ಯಕ್ತಿ ಜತೆಗೆ ತುಳುವಿನಲ್ಲೇ ಮಾತನಾಡಲು ಪ್ರಯತ್ನಿಸುವುದು.

·ಇತರೆ ಭಾಷೆಯ ಸಿನಿಮಾಗಳನ್ನು ನೋಡುವ ಮೂಲಕವೂ ಭಾಷೆಗಳನ್ನು ಕಲಿಯಬಹುದು.

·ಯೂಟ್ಯೂಬ್‌ನಲ್ಲಿ ಭಾಷೆಯ ಕಲಿಕೆಗೆ ಸಾಕಷ್ಟು ವೀಡಿಯೋಗಳು ಲಭ್ಯವಿದೆ. ಅವುಗಳನ್ನು ಗಮನಿಸುವ ಮೂಲಕ ಇತರ ಭಾಷೆಗಳನ್ನು ಕಲಿಯಬಹುದು.

ಬೇರೆ ಭಾಷೆಯ ಕಲಿಕೆಯ ಅಗತ್ಯವೇನು?
ಯಾವುದೇ ಒಂದು ಭಾಷೆ ಪ್ರಾದೇಶಿಕ ನೆಲೆ ಗಟ್ಟಿನಲ್ಲಿ ನಿಂತರೆ ಅದು ಬೆಳೆಯಲು ಸಾಧ್ಯವಿಲ್ಲ. ಭಾರತೀಯರು ಇಂಗ್ಲಿಷ್‌ ಭಾಷೆಯನ್ನು ಕಲಿಯದಿದ್ದರೆ ಇಂದು ಜಗತ್ತಿನ ಮುಂದೆ ತಲೆ ಎತ್ತಲಾಗುತ್ತಿರಲಿಲ್ಲ. ಸಂಸ್ಕೃತ ಭಾಷೆ ಇಂದು ಜನ ಮನಸದಿಂದ ನಶಿಸಿ ಹೋಗಲು ಕಾರಣ ಆ ಭಾಷೆಯನ್ನು ಕಲಿಯಲು ಯಾರೂ ಮುಂದಾಗದ್ದು. ಒಂದು ಭಾಷೆಯ ಉಳಿವಿಗಾಗಿ ಭಾಷಾ ಕಲಿಕೆ ಅಗತ್ಯವಾಗಿದೆ.

ಮಾನವನಿಗೆ ಸಂವಹನ ಅತೀ ಮುಖ್ಯ. ಸಂವಹನಕ್ಕೆ ಭಾಷೆ ಅಗತ್ಯ. ಕೇವಲ ಮಾತೃಭಾಷೆಗೆ ಸೀಮಿತವಾಗದೇ ವಿವಿಧ ಭಾಷೆಗಳನ್ನು ಕಲಿತಾಗ ಪರ ಊರಿನ ಜನರೊಂದಿಗೆ ಸಂವಹನ ನಡೆಸಲು ಸಾಧ್ಯ. ಕೇವಲ ಭಾರತೀಯ ಭಾಷೆಗಳನ್ನು ಕಲಿಯುವುದು ಮಾತ್ರವಲ್ಲದೇ ಅಂತಾರಾಷ್ಟ್ರೀಯ ಭಾಷೆಗಳನ್ನೂ ಕಲಿಯುವುದು ಒಂದು ಉತ್ತಮ ಹವ್ಯಾಸ.

•ಧನ್ಯಶ್ರೀ ಬೋಳಿಯಾರ್‌

ಟಾಪ್ ನ್ಯೂಸ್

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.