ಶಿಕ್ಷಣ ಮೊಟಕುಗೊಳಿಸಿದವರಿಗೆ ನೆರವಾಗುವ ದೂರ ಶಿಕ್ಷಣ


Team Udayavani, Sep 4, 2019, 5:01 AM IST

q-21

ದೇಶದಲ್ಲಿ ಅದೆಷ್ಟೋ ಜನ ಆರ್ಥಿಕ ಹಿನ್ನಡೆ, ಆರೋಗ್ಯ  ಸಮಸ್ಯೆ ಹೀಗೆ ಅನೇಕ
ಕಾರಣಗಳಿಂದ ಶಿಕ್ಷಣದಿಂದ ವಂಚಿತರಾದವರು ಇದ್ದಾರೆ. ಕಲಿಯುವ ಆಸಕ್ತಿ ಇದ್ದರೂ ಸೂಕ್ತ ಹಣಕಾಸಿನ ವ್ಯವಸ್ಥೆಯಿಲ್ಲದೆ ಅಥವಾ ಕಾಲೇಜಿಗೆ ತೆರಳಲಾಗದೇ ಶಿಕ್ಷಣದಿಂದ 
ದೂರ ಉಳಿಯುತ್ತಾರೆ. ಅಂಥವರಿಗೆ ನೆರವಾಗುವ ಶಿಕ್ಷಣ ಅಂಚೆ ತೆರಪಿ ಅಥವಾ ದೂರ ಶಿಕ್ಷಣ. ಮನೆಯಲ್ಲೇ ಕೂತು, ಉದ್ಯೋಗ ಮಾಡುತ್ತಾ ಅಥವಾ ಅರ್ಧದಲ್ಲೇ ವಿದ್ಯಾಭ್ಯಾಸ
ಮೊಟಕು ಗೊಳಿಸಿದವರಿಗೆ ವ್ಯಾಸಂಗ ಮಾಡಲು ಅನುವು ಮಾಡಿಕೊಡುತ್ತದೆ ಈ ಶಿಕ್ಷಣ ವ್ಯವಸ್ಥೆ.

ದೇಶದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಶಿಕ್ಷಣ ವ್ಯವಸ್ಥೆಗಳಲ್ಲಿ ದೂರಶಿಕ್ಷಣ ಕೂಡ ಒಂದು. ಶಾಲೆ-ಕಾಲೇಜುಗಳಿಗೆ ತೆರಳಿ ಶಿಕ್ಷಣ ಪಡೆಯದೇ ಅಂಚೆ ತೆರಪಿನ ಮುಖೇನ ಶಿಕ್ಷಣ ಪಡೆಯುವ ವ್ಯವಸ್ಥೆ ಇದಾಗಿದೆ. ಒಂದೆಡೆ ಕುಳಿತು ನಾನಾ ವಿವಿಧ ಕೆಲಸಗಳಲ್ಲಿ ನಿರತವಾಗಿರುವವರಿಗೆ ಏಕಕಾಲದಲ್ಲಿ ಕೆಲಸಗಳನ್ನು ನಿಭಾಯಿಸುತ್ತಾ ಶಿಕ್ಷಣ ಹೊಂದುವ ಅವಕಾಶ ದೂರಶಿಕ್ಷಣ ವ್ಯವಸ್ಥೆಯಲ್ಲಿದೆ.

ಕಾರ್ಮಿಕರು, ಆರ್ಥಿಕವಾಗಿ ಹಣಕಾಸಿನ ಸಮಸ್ಯೆ ಅನುಭವಿಸುತ್ತಿರುವವರು, ವಿವಿಧ ಸಮಸ್ಯೆಗಳಿಂದ ಶಿಕ್ಷಣ ಪಡೆಯಲು ಅಸಾಧ್ಯವಾಗುವವರಿಗೆ ದೂರ ಶಿಕ್ಷಣವು ಅನುಕೂಲ ಮಾಡುತ್ತದೆ. ಇದರ ಮುಖೇನ ವಿದ್ಯಾರ್ಥಿಗೆ ಹಣದ ಉಳಿತಾಯದ ಜತೆ, ಸುಲಭವಾಗಿ ಕಲಿಕೆಯೂ ಸಾಧ್ಯವಾಗುತ್ತದೆ. ಸ್ವಾವಲಂಬಿ ಬದುಕು ರೂಪಿಸಲು, ಅರ್ಧಕ್ಕೆ ನಿಂತ ಶಿಕ್ಷಣವನ್ನು ಪುನಃ ಪ್ರಾರಭಿಸುವ ನಿಟ್ಟಿನಲ್ಲಿ ಇದು ಸಹಕಾರಿ.

ದೂರ ಶಿಕ್ಷಣ ನೀಡಲು ಯುಜಿಸಿಯು ಕೆಲವೊಂದು ವಿಶ್ವವಿದ್ಯಾನಿಲಯಗಳಿಗೆ ಅನುಮತಿ ನೀಡಿದೆ. ಅದರಂತೆಯೇ ಮಂಗಳೂರು ವಿ.ವಿ., ಮೈಸೂರು ವಿ.ವಿ., ಕುವೆಂಪು ವಿ.ವಿ., ಬೆಂಗಳೂರು ವಿ.ವಿ. ಸೇರಿದಂತೆ ಕೆಲವೊಂದು ಯುನಿವರ್ಸಿಟಿಗಳಲ್ಲಿ ದೂರಶಿಕ್ಷಣದ ಕೋರ್ಸ್‌ ಗಳಿವೆ. ದೂರಶಿಕ್ಷಣದಲ್ಲಿ ಪದವಿ, ಸ್ನಾತಕೋತ್ತರ ಪದವಿಗೆ ಕೆಎಸ್‌ಒಯು (ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ)ನಲ್ಲಿಯೂ ಕೋರ್ಸ್‌ಗಳಿದ್ದು, ಇತ್ತೀಚೆಗೆಯಷ್ಟೇ ಅರ್ಜಿ ಆಹ್ವಾನಿಸಲಾಗಿತ್ತು. ಕೆಎಸ್‌ಒಯುನಲ್ಲಿ ಬಿಎ, ಬಿಕಾಂ. ಎಂ.ಎ., ಎಂಕಾಂ., ಬಿ.ಲಿಬ್‌.ಐಎಸ್ಸಿ., ಎಂ.ಲಿಬ್‌.ಎಎಸ್ಸಿ., ಎಂ.ಎಸ್ಸಿ, ಡಿಪ್ಲೊಮಾ, ಪಿಜಿ ಡಿಪ್ಲೊಮ ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ಅವಕಾಶವಿದೆ. ಎಂಬಿಎ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ ಇರುತ್ತದೆಯೇ ವಿನಾಃ ಉಳಿದ ಯಾವುದೇ ವಿಷಯಗಳ ಪ್ರವೇಶಕ್ಕೆ ಪರೀಕ್ಷೆಗಳು ಇರುವುದಿಲ್ಲ.

ದೂರಶಿಕ್ಷಣ ಪಡೆಯಲು ಯಾವುದೇ ಪ್ರಾಯದ ಮಿತಿ ಇಲ್ಲ. ಪದವಿ ಶಿಕ್ಷಣ ಪಡೆಯಲು ಪಿಯುಸಿ ಪೂರ್ಣಗೊಳಿಸಿರಬೇಕು. ಮಂಗಳೂರು ವಿವಿಯಲ್ಲಿ ಬಿಎ, ಬಿಕಾಂ, ಬಿಬಿಎ ಸೇರಿದಂತೆ ವಿವಿಧ ದೂರ ಶಿಕ್ಷಣದ ಕೋರ್ಸ್‌ಗಳು ಕೂಡ ಇದೆ. ಕೆಲವೊಂದು ಮಂದಿ ಉದ್ಯೋಗದಲ್ಲಿದ್ದು, ನಿವೃತ್ತ ಹೊಂದಿದ ಬಳಿಕವೂ ದೂರಶಿಕ್ಷಣ ಪಡೆಯುತ್ತಾರೆ. ಮತ್ತೂ ಕೆಲವರು ಉದ್ಯೋಗದಲ್ಲಿದ್ದು, ಉದ್ಯೋಗದ ಪ್ರೊಮೋಶನ್‌ಗೂ ದೂರಶಿಕ್ಷಣದ ಮೊರೆ ಹೋಗುತ್ತಾರೆ.

ದೂರಶಿಕ್ಷಣ ತರಬೇತಿಗೆ ಪ್ರವೇಶಾತಿಯ ಬಳಿಕ ಆಯಾ ಯುನಿವರ್ಸಿಟಿಗಳು ಅಭ್ಯಾಸ ಪಠ್ಯಪುಸ್ತಕಗಳನ್ನು ನೀಡುತ್ತವೆೆ. ಬಳಿಕ ಪಠ್ಯ ವಿಷಯದಲ್ಲಿ ಯಾವುದೇ ಸಂದೇಹಗಳಿದ್ದರೆ ಸುಮಾರು 4 ತಿಂಗಳಿಗೊಮ್ಮೆ ಕಾಂಟೆಕ್ಟ್ ಪ್ರೋಗ್ರಾಂ ಇರುತ್ತದೆ. ವರ್ಷದಲ್ಲಿ ಒಂದು ಬಾರಿ ಪರೀಕ್ಷೆ ಇರುತ್ತದೆ.

ಅಭ್ಯರ್ಥಿಗಳಿಗೆ ಜಾಗೃತಿ ಮುಖ್ಯ
ಯಾವುದೇ ವಿಷಯದಲ್ಲಿ ಕರೆಸ್ಪಾಂಡೆನ್ಸ್‌ ಪದವಿ ಮಾಡುವುದಕ್ಕೂ ಮುನ್ನ, ಆ ಪದವಿ ಅಥವಾ ಕೋರ್ಸ್‌ ಯುಜಿಸಿಯಿಂದ ಮಾನ್ಯತೆ ಪಡೆದಿದೆಯೇ ಮತ್ತು ಕೇಂದ್ರ ಅಥವಾ ರಾಜ್ಯ ಸರಕಾರದಿಂದ ಮಾನ್ಯತೆ ಹೊಂದಿದೆಯೇ ಎಂಬುವುದನ್ನು ತಿಳಿದುಕೊಳ್ಳಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಬರೆಯುವಾಗ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯ ಪದವಿ ಅಗತ್ಯವಾಗುತ್ತದೆ. ಕೇಂದ್ರ ಲೋಕಸೇವಾ ಆಯೋಗ, ರೈಲ್ವೇ, ಸಿಬಂದಿ ನೇಮಕಾತಿ ವಿಭಾಗ ಸೇರಿದಂತೆ ನೇಮಕಾತಿ ಸಂಸ್ಥೆಗಳು ದೂರಶಿಕ್ಷಣ ಪೂರ್ಣಗೊಳಿಸಿದಂತಹ ವಿದ್ಯಾರ್ಥಿಗಳಿಗೂ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವುದಕ್ಕೆ ಅನುಮತಿಯನ್ನು ಒದಗಿಸುತ್ತದೆ. ಇತ್ತೀಚಿನ ದಿನಗಳಲ್ಲಿ ಕೆಲವೊಂದು ಖಾಸಗಿ ಶೈಕ್ಷಣಿಕ ಸಂಸ್ಥೆಗಳು ಮತ್ತು ಸ್ವಾಯತ್ತ ಸಂಸ್ಥೆಗಳು ದೂರ ಶಿಕ್ಷಣದ ಮೂಲಕ ಪದವಿಯನ್ನು ಒದಗಿಸುತ್ತಿದೆ. ವಿದ್ಯಾರ್ಥಿಗಳು ಯಾವುದೇ ಕೋರ್ಸ್‌ ಅಥವಾ ಪದವಿಯನ್ನು ಸೇರುವುದಕ್ಕೂ ಮುನ್ನ ಆ ಕೋರ್ಸ್‌/ಪದವಿ ಮಾನ್ಯತೆ ಪಡೆದಿದೆಯೇ ಎಂಬುವುದನ್ನು ಖಚಿತಪಡಿಸಿಕೊಳ್ಳಬೇಕು. ಬಳಿಕವೇ ಕೋರ್ಸ್‌ಗೆ ಸೇರುವುದು ಉತ್ತಮ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.