ವಿದ್ಯಾರ್ಥಿಗಳ ಜ್ಞಾನ ವೃದ್ಧಿಗೆ ಪ್ರಬಂಧ ಪೂರಕ


Team Udayavani, Oct 9, 2019, 4:11 AM IST

x-11

ವಿದ್ಯಾರ್ಥಿಗಳ ಜ್ಞಾನ ವೃದ್ಧಿಗೆ ಪ್ರಬಂಧ ಪೂರಕಕಾಲೇಜು ಜೀವನದಲ್ಲಿ ಅನೇಕ ರೀತಿಯ ಸ್ಪರ್ಧೆಗಳಲ್ಲಿ ಭಾಗವ‌ಹಿಸುವುದು ಸಾಮಾನ್ಯ. ಆದರೆ ಕೆಲವರು ಯಾಕೆ ಅದಕ್ಕೆಲ್ಲಾ ಸೇರಬೇಕು ಎಂದು ಸುಮ್ಮನಾಗುತ್ತಾರೆ. ಅದೇ ರೀತಿ ಶಾಲಾ ಜೀವನದಿಂದ ಹಿಡಿದು ಕಾಲೇಜು ಮುಗಿಯುವವರೆಗೆ ಪ್ರಬಂಧ ಸ್ಪರ್ಧೆ ಏರ್ಪಡಿಸುವುದು ಸಾಮಾನ್ಯ. ಆದರೆ ಅದರಲ್ಲಿ ಭಾಗವಹಿಸುವವರ ಸಂಖ್ಯೆ ಮಾತ್ರ ವಿರಳ.

ಪ್ರಬಂಧ ಬರೆಯಲು ಎಲ್ಲರಿಗೂ ಇಷ್ಟವಿರುವುದಿಲ್ಲ ಆದರೆ ಅದರಿಂದ ಹಲವು ಅನೂಕೂಲಗಳಿವೆ. ಅದೆಂತಹ ಅನುಕೂಲ ಎಂಬ ಕೂತೂಹಲವಿರುವುದು ಸಾಮಾನ್ಯ. ಪ್ರಬಂಧ ಬರೆಯುವುದು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿ.

ಶೈಕ್ಷಣಿಕ ಹಾಗೂ ಮಾನಸಿಕ ಬೆಳವಣಿಗೆಗೆ ಪೂರಕವಾಗಿದೆೆ. ಪ್ರಬಂಧ ಬರೆಯುವುದರಿಂದ ಇರುವ ಅನುಕೂಲಗಳ ಬಗ್ಗೆ ಇಲ್ಲಿದೆ ಮಾಹಿತಿ.

ವಿಷಯಗಳ ಕ್ರೋಡೀಕರಣ
ಒಂದು ಪ್ರಬಂಧ ಬರೆಯಬೇಕಾದರೆ ಹಲವು ರೀತಿಯ ಪುಸ್ತಕಗಳನ್ನು ಓದಬೇಕಾಗುತ್ತದೆ. ಆಗ ಹೊಸ ವಿಷಯಗಳ ಪರಿಚಯವಾಗುತ್ತದೆ. ಪ್ರಬಂಧಕ್ಕೆ ಪೂರಕವಾದಂತಹ ಮಾಹಿತಿಗಳು ದೊರಕುತ್ತವೆ. ಹಲವು ಪುಸ್ತಕಗಳು ನೆನಪಿನ ಶಕ್ತಿಯನ್ನು ಹೆಚ್ಚಿಸಿ ಬೇರೆ ಬೇರೆ ವಿಷಯಗಳನ್ನು ಸುಲಭವಾಗಿ ತಿಳಿದುಕೊಳ್ಳಲು ಸಹಾಯ ಮಾಡುತ್ತವೆೆ. ಓದುವುದು ಮಾತ್ರವಲ್ಲದೆ ಬೇರೆ ಬೇರೆ ಕಡೆಗಳಿಂದ ವಿಷಯ ಸಂಪಾದಿಸಿಕೊಳ್ಳಬಹುದು. ಇದರಿಂದ ಜ್ಞಾನ ಭಂಡಾರವನ್ನು ಹೆಚ್ಚಿಸಿಕೊಳ್ಳಬಹುದು.

ವಿಷಯ ಪ್ರಸ್ತುತಿ
ವಿದ್ಯಾರ್ಥಿಗಳು ಹೇಗೆ ಒಂದು ವಿಷಯವನ್ನು ಪ್ರಸ್ತುತ ಪಡಿಸಬೇಕೆನ್ನುವುದನ್ನು ಪ್ರಬಂಧ ಕಲಿಸಿಕೊಡುತ್ತದೆ. ಒಂದು ವಿಷಯವನ್ನು ಹೇಗೆ ಆರಂಭಿಸಬೇಕು, ಹೇಗೆ ಆರಂಭಿಸಿದರೆ ಉತ್ತಮ ಮತ್ತು ಅದಕ್ಕೆ ಪೂರಕವಾದ ಅಂಶಗಳನ್ನು ನೀಡುವುದು ಹೇಗೆ ಎಂಬುದನ್ನು ಮನಗಾಣಲು ಸಹಾಯ ಮಾಡುತ್ತದೆ. ಇದರಿಂದ ಒಬ್ಬ ವಿದ್ಯಾರ್ಥಿ ತಾನು ಹೇಗೆ ಒಂದು ವಿಷಯವನ್ನು ಪ್ರಸ್ತುತಪಡಿಸಬಹುದು ಎಂಬುದನ್ನು ತಿಳಿದುಕೊಳ್ಳುತ್ತಾನೆ.

ಭಾಷಾ ಪ್ರೌಢಿಮೆ
ಇವೆಲ್ಲವುದರ ಹೊರತಾಗಿ ಪ್ರಬಂಧ ಬರೆಯುವುದರಿಂದ ವಿದ್ಯಾರ್ಥಿ ತನ್ನ ಭಾಷಾ ಪ್ರೌಢಿಮೆಯನ್ನು ಹೆಚ್ಚಿಸಿಕೊಳ್ಳಬಹುದು. ಪ್ರಬಂಧ ಬರೆಯುವಾಗ ಬಳಸುವ ಪದಗಳು, ಅದು ಯಾವ ಅರ್ಥ ನೀಡಿದರೆ ಹೆಚ್ಚು ಸೂಕ್ತ, ಪದ ಬಳಕೆ ಯಾವುದು ಸರಿ? ಹೀಗೆ ಹತ್ತು ಹಲವು ಪ್ರಶ್ನೆಗಳಿಗೆ ಪ್ರಬಂಧ ಉತ್ತರ ನೀಡುತ್ತದೆ. ಒಬ್ಬ ವಿದ್ಯಾರ್ಥಿ ಹೆಚ್ಚು ಹೆಚ್ಚು ಬರೆಯುತ್ತಾ ಹೋದಂತೆ ಭಾಷೆಯ ಪ್ರೌಢಿಮೆ ಹೆಚ್ಚುತ್ತದೆ. ಹೀಗೆ ಪ್ರಬಂಧ ಬರೆಯುವುದರಿಂದ ವಿದ್ಯಾರ್ಥಿಯ ಕೌಶಲ ವೃದ್ಧಿ ಯಾಗುವುದಲ್ಲದೆ ಅವರ ಸಾಮರ್ಥ್ಯ ಕೂಡ ಹೆಚ್ಚುತ್ತದೆ

ಉತ್ತಮ ಬರೆವಣಿಗೆ
ಪ್ರಬಂಧ ಬರೆಯುವ ರೂಢಿ ಬೆಳೆಸಿಕೊಂಡಲ್ಲಿ ಸರ್ವೇ ಸಾಮಾನ್ಯವಾಗಿ ಉತ್ತಮ ಬರವಣಿಗೆಗೆ ಸಹಕಾರಿ. ಅದಲ್ಲದೆ ಇದು ಕಾರ್ಯಕ್ಷಮತೆಯನ್ನು ಇಮ್ಮಡಿಗೊಳಿಸುತ್ತದೆ. ಹೆಚ್ಚು ಹೆಚ್ಚು ಬರೆಯುವುದರಿಂದ ಅಕ್ಷರಗಳು ಸುಂದರವಾಗಿ ಮೂಡುವುದಲ್ಲದೆ ಬರವಣಿಗೆಯ ವೇಗ ಕೂಡ ಹೆಚ್ಚುತ್ತದೆ.

ಪ್ರೀತಿ ಭಟ್‌ ಗುಣವಂತೆ

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.