ಭವಿಷ್ಯ ರೂಪಿಸುವ ಸಾಮಾಜಿಕ ಜಾಲತಾಣ 


Team Udayavani, May 15, 2019, 5:50 AM IST

20
ದಿನಗಳು ಉರುಳುತ್ತಿದ್ದಂತೆ ಸಾಮಾಜಿಕ ಜಾಲತಾಣಗಳು ವ್ಯಾಪಕವಾಗಿ ಬಳಕೆಯಾಗುತ್ತಿದ್ದು  ಸದ್ಬಳಕೆಗಿಂತ ದುರ್ಬಳಕೆಯೇ ಹೆಚ್ಚಾಗುತ್ತಿದೆ. ಹೀಗಾಗಿ ಈ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಪ್ರತಿ ಶಾಲೆ, ಕಾಲೇಜುಗಳಲ್ಲೂ ಆಗ ಬೇಕಿದೆ. 
  ಕಾಲೇಜು ಮೆಟ್ಟಿಲೇರುವಾಗ ಎಲ್ಲರಿಗೂ ತಮ್ಮದೇ ಆದ ಒಂದು ಸ್ವಂತ ಮೊಬೈಲ್‌ ಬೇಕು ಎನ್ನುವ ಹಂಬಲ ಉಂಟಾಗುತ್ತದೆ. ಗೆಳೆಯ- ಗೆಳತಿಯರಿಗಿಂತ ಚೆಂದದ ಮೊಬೈಲ್‌ ಬೇಕೆನಿಸುತ್ತದೆ. ಆಗ ಹಠಕ್ಕಾದರೂ ಹೊಸ ಮೊಬೈಲ್‌ ಹೆತ್ತವರಲ್ಲಿ ಕಾಡಿಬೇಡಿ ಕೊಂಡುಕೊಳ್ಳುತ್ತೇವೆ. ಆ ವಯಸ್ಸಿಗೆ ಯಾವುದು ಬೇಕು, ಯಾವುದು ಬೇಡ ಎನ್ನುವ ಮಾಹಿತಿ ಇರದೆ ಸಮಯ ಕಳೆಯುವ ಸಾಧನವಾಗಿ ಬಿಡುತ್ತದೆ.
ಮೊಬೈಲ್‌ ಕೈಗೆ ಬಂದ ಮೇಲೆ ಬೇರೆ ಬೇರೆ ಸಾಮಾಜಿಕ ಜಾಲತಾಣಗಳನ್ನು ಬಳಸಲು ಪ್ರಾರಂಭಿಸುವುದು ಸಾಮಾನ್ಯ. ಅದರ ಬಗ್ಗೆ ಸರಿಯಾಗಿ ಗೊತ್ತಿಲ್ಲದಿದ್ದರೂ ಅದನ್ನು ಬೇರೆಯವರಿಂದ ಕೇಳಿಯಾದರೂ ತಿಳಿದು ಕೊಳ್ಳಲು ಆರಂಭಿಸುತ್ತಾರೆ.
ಆದರೆ ಅದರ ಸದ್ಬಳಕೆ ಹೇಗೆ ಎಂಬುದು ಕೆಲವೇ ಕೆಲವರು ಅರಿತಿರುತ್ತಾರೆ. ಈಗ ಅಂತೂ ಸಾವಿರಾರು ಆ್ಯಪ್‌ಗಳು ಬಂದಿದ್ದು, ವಿದ್ಯಾರ್ಥಿಗಳಿಗೆ ಅನೇಕ ರೀತಿಯಲ್ಲಿ  ಮಾರ್ಗದರ್ಶನ ನೀಡುತ್ತವೆ. ಅದಲ್ಲದೆ ಸ್ಪರ್ಧಾತ್ಮಕ  ಪರೀಕ್ಷೆಗಳನ್ನು ಎದುರಿಸುವವರು ಅನೇಕ ಆ್ಯಪ್‌ಗ್ಳಿಂದ ಸಾಮಾನ್ಯ ಜ್ಞಾನಕ್ಕೆ ಬೇಕಾದ ಎಲ್ಲ ಮಾಹಿತಿಯನ್ನು ಪಡೆಯಬಹುದಾಗಿದೆ.
ರಜೆಯನ್ನು ಬಳಸಿಕೊಳ್ಳಿ
ಬೇಸಗೆ ರಜೆ ಬಂತೆಂದರೆ ಸಾಕು, ಸಮಯ ಕಳೆದದ್ದೇ ತಿಳಿಯುವುದಿಲ್ಲ ಎಂಬ ಮಕ್ಕಳು  ಸ್ವಲ್ಪ ವಿವಿಧ ರೀತಿಯ ಪರೀಕ್ಷೆಗಳನ್ನು ಎದುರಿಸಬೇಕು, ಇಲ್ಲವಾದಲ್ಲಿ ಸಣ್ಣಪುಟ್ಟ ಕ್ರಾಫ್ಟ್ ಗಳನ್ನು ಮಾಡುವುದನ್ನು ಕಲಿಯಬೇಕು. ಸಾಮಾಜಿಕ ಜಾಲತಾಣಗಳಲ್ಲಿ  ಮನೆಗಳಲ್ಲಿ ಹೇಗೆ ವಿವಿಧ ರೀತಿಯ ಕ್ರಾಫ್ಟ್ ಗಳನ್ನು ಮಾಡುವುದು ಎಂಬುದರ ಬಗ್ಗೆ ಮಾಹಿತಿ ಸಿಗುತ್ತದೆ. ಇದರಿಂದ ಯಾವುದೋ ಒಂದು ಹೊಸ ವಿಷಯ ತಿಳಿದ ಹಾಗೆ ಆಗುವುದಲ್ಲದೆ ಹೆಚ್ಚು ಹೆಚ್ಚು ತಿಳಿದುಕೊಂಡಾಗ ಬಿಡುವಿನ ಸಮಯದಲ್ಲಿ  ಅದನ್ನು  ಬಳಸಿಕೊಳ್ಳಬಹುದು. ಇದರಿಂದ ಪಾಕೆಟ್‌ ಮನಿಗಂತೂ ಯಾವುದೇ ಕೊರತೆಯಾಗುವುದಿಲ್ಲ.
ವಿವಿಧ ಭಾಷೆ ಕಲಿಯಲು ಅವಕಾಶ
ಇಂಗ್ಲಿಷ್‌, ಹಿಂದಿ ಕಲಿತರೆ ಸಾಕು ಎನ್ನುತ್ತಿದ್ದವರು ಈಗ ಬೇರೆ ಬೇರೆ ಭಾಷೆಗಳನ್ನು ಕಲಿಯಲು ಇಚ್ಛಿಸುತ್ತಿದ್ದಾರೆ. ಇದಕ್ಕೆ ಪೂರಕವಾಗಿ ಕೆಲವು ಆ್ಯಪ್‌ಗಳು ನೀವು ಕೇಳಿದ ಭಾಷೆಯನ್ನು ನಿಮಗೆ ಸುಲಭದಲ್ಲಿ ಕಲಿಸಿಕೊಡುತ್ತವೆ. ಇದರಿಂದ ನಿಮ್ಮ ಭಾಷೆಯ ಜತೆ ಇನ್ನೊಂದು ಭಾಷೆಯನ್ನು ಕಲಿಯಲು ಅವಕಾಶವಾಗುತ್ತದೆ.  ಸಾಮಾಜಿಕ ಜಾಲತಾಣಗಳು ದುರ್ಬಳಕೆಯಾಗುತ್ತಿರುವ ದಿನಗಳಲ್ಲಿ ಅದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳುವುದು ಹೇಗೆ ಎಂಬುದನ್ನು ತಿಳಿದುಕೊಂಡರೆ ಸುಂದರ ಭವಿಷ್ಯ ನಮ್ಮದಾಗುವುದು.
ಯಾವ ಕೋರ್ಸ್‌ ಒಳ್ಳೆಯದು 
ಒಂದು ಹಂತದ ಶಿಕ್ಷಣ ಮುಗಿದ ಬಳಿಕ ಮುಂದೇನು ಮಾಡುವುದು ಎಂಬ ಚಿಂತೆ ಕಾಡುತ್ತದೆ. ಆದರೆ ಈಗ ಹಾಗಲ್ಲ ಯಾವುದನ್ನು ಆಯ್ಕೆ ಮಾಡಿದರೆ ಮುಂದೆ ಯಾವ ಯಾವ ಹಂತಗಳಿಗೆ ಹೋಗಬಹುದು. ಹಾಗೆ ಹೋದರೆ ಮುಂದೆ ದೊರೆಯುವ  ಉದ್ಯೋಗ ಹೇಗಿರುತ್ತದೆ. ಇವೆಲ್ಲವನ್ನೂ ನಾವು ಕುಳಿತಲ್ಲಿಯೇ ತಿಳಿದುಕೊಳ್ಳಬಹುದು.
ಪ್ರೀತಿ ಭಟ್‌ ಗುಣವಂತೆ 

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.