ಪರೀಕ್ಷೆಯ ಸಂದರ್ಭ ವಿದ್ಯಾರ್ಥಿಗಳ ಏಕಾಗ್ರತೆ ಹೇಗೆ ಹೆಚ್ಚಿಸಬಹುದು?


Team Udayavani, Feb 12, 2020, 4:48 AM IST

sds-18

ವಿದ್ಯಾರ್ಥಿಗಳಿಗೆ ಪರೀಕ್ಷೆ ಹತ್ತಿರವಾಗುತ್ತಾ ಬಂತು. ಶಾಲೆ, ಮನೆಗಳಲ್ಲಿ ವಿದ್ಯಾರ್ಥಿಗಳ ಮೇಲೆ ಒತ್ತಡವೂ ಹೆಚ್ಚಾಗುತ್ತಾ ಹೋಗುತ್ತದೆ. ಆದರೆ ಎಷ್ಟೇ ಓದಿದರೂ ವಿದ್ಯಾರ್ಥಿಗಳಲ್ಲಿ ಏಕಾಗ್ರತೆಯ ಕೊರತೆಯಿದ್ದರೆ ಓದಿದ್ದು ನೆನಪಿನಲ್ಲಿ ಉಳಿಯಲು ಸಾಧ್ಯವಿಲ್ಲ. ಏಕಾಗ್ರತೆಯಿದ್ದರೆ ಮಾತ್ರ ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸಲು ಸಾಧ್ಯ. ಆದ್ದರಿಂದ ಮಕ್ಕಳ ಏಕಾಗ್ರತೆಗೆ ಪೂರಕವಾಗುವಂತಹ ಕೆಲಸವನ್ನು ಮನೆಯವರು, ಶಿಕ್ಷಕರು ಮತ್ತು ಸ್ವತಃ ವಿದ್ಯಾರ್ಥಿಗಳೂ ಅರಿತಿರಬೇಕು.

ಪರೀಕ್ಷೆಗೆ ಅಥವಾ ಯಾವುದೇ ಸಂದರ್ಭದಲ್ಲೂ ಓದುವಾಗ ಏಕಾಗ್ರತೆಯಿದ್ದರೆ ಮಾತ್ರ ಓದಿದ್ದೂ ನೆನಪಿನಲ್ಲಿ ಉಳಿಯುತ್ತದೆ. ವಿದ್ಯಾರ್ಥಿಗಳ ಏಕಾಗ್ರತೆಗಾಗಿ ಒಂದಿಷ್ಟು ಟಿಪ್ಸ್‌ ಇಲ್ಲಿದೆ.

1. ಅಧ್ಯಯನಕ್ಕೆ ಸರಿಯಾದ ಸಿದ್ಧತೆ
ಮನೆಯಲ್ಲಿ ಪರೀಕ್ಷೆಗೆ ಸಿದ್ಧತೆ ಮಾಡಲು ಪೂರ್ವಸಿದ್ಧತೆ ಅಗತ್ಯವಿದೆ. ಸರಿಯಾದ ಜಾಗದ ಆಯ್ಕೆ, ವಾತಾವರಣ ಚೆನ್ನಾಗಿರಲಿ. ಇದರಿಂದ ಏಕಾಗ್ರತೆಯಿಂದ ಓದಲು ಸಾಧ್ಯ.

2. ಓದಲು ಕುಳಿತುಕೊಳ್ಳುವ ಮೊದಲೇ ಎಲ್ಲ ಪರಿಕರಗಳನ್ನು ತೆಗೆದುಕೊಳ್ಳಿ.
ಓದಲು ಕುಳಿತುಕೊಳ್ಳುವ ಮೊದಲೇ ಎಲ್ಲ ಪರಿಕರಗಳನ್ನು ತೆಗೆದುಕೊಳ್ಳುವುದು ಉತ್ತಮ. ಇದರಿಂದ ಮಧ್ಯೆ ಮಧ್ಯೆ ಓಡಾಡುವ ಸಂದರ್ಭ ಕಡಿಮೆಯಾಗುತ್ತದೆ.

3. ಓದುವ ಜಾಗವನ್ನು ಶುದ್ಧವಾಗಿಟ್ಟುಕೊಳ್ಳಿ.
ಓದುವ ಜಾಗ ಶುಚಿಯಾಗಿದ್ದರೆ ಮನಸ್ಸಿಗೆ ಮುದ ನೀಡುತ್ತದೆ. ಇದರಿಂದ ಏಕಾಗ್ರತೆಯಿಂದ ವಿದ್ಯಾರ್ಥಿಗಳು ಓದಲು ಸಾಧ್ಯ. ಓದುವ ಜಾಗದಲ್ಲಿ ಅನಾವಶ್ಯಕ ವಸ್ತುಗಳು, ಏಕಾಗ್ರತೆಗೆ ಭಂಗ ಉಂಟು ಮಾಡುವಂತಹ ವಾತಾವರಣ ಇರದಂತೆ ನೋಡಿಕೊಳ್ಳುವುದು ಉತ್ತಮ.

4. ಮೊಬೈಲ್‌ ಫೋನ್‌ಗಳನ್ನು ಓದುವ ಜಾಗಕ್ಕೆ ತರಬೇಡಿ
ಇತ್ತೀಚೆಗೆ ವಿದ್ಯಾರ್ಥಿಗಳ ಏಕಾಗ್ರತೆಗೆ ತೊಡಕು ಎಂದರೆ ಅದು ಮೊಬೈಲ್‌ ಫೋನ್‌. ಅದನ್ನು ಓದುವ ಜಾಗದಿಂದ ಮಾರು ದೂರದಲ್ಲಿಡುವುದನ್ನು ರೂಢಿಸಿಕೊಳ್ಳಬೇಕು ಅಥವಾ ಅದನ್ನು ಸ್ವಿಚ್‌ಆಫ್ ಮಾಡಿ ಇಡುವುದರಿಂದ ಏಕಾಗ್ರತೆ ಕಾಯ್ದುಕೊಳ್ಳಲು ಸಾಧ್ಯ.

5. ಟೈಮ್‌ ಟೇಬಲ್‌ ಅಗತ್ಯ
ಪ್ರತಿಯೊಂದು ಕೆಲಸದಲ್ಲಿ ಶಿಸ್ತು ಇದ್ದರೆ ಕೆಲಸ ಹೆಚ್ಚು ಪ್ರಭಾವ ಬೀರುತ್ತದೆ. ಓದಿನಲ್ಲೂ ಹಾಗೆ. ಸರಿಯಾದ ಸಮಯಕ್ಕೆ ಓದು, ಊಟ, ನಿದ್ದೆ ಮಾಡಿದರೆ ಮಾತ್ರ ಏಕಾಗ್ರತೆಯಿರಲು ಸಾಧ್ಯ. ಪರೀಕ್ಷೆಯ ಒತ್ತಡದಲ್ಲಿ ದಿನವಿಡೀ ಊಟ, ನಿದ್ದೆ ಮಾಡದೆ ಓದಲು ಆರಂಭಿಸಿದರೆ ಓದಿದ್ದೂ ಪ್ರಯೋಜನಕ್ಕೆ ಬರುವುದಿಲ್ಲ. ಆದ್ದರಿಂದ ಯಾವ ಸಮಯದಲ್ಲಿ ಓದಬೇಕು, ಎಷ್ಟು ಅವಧಿ ಓದಬೇಕು ಎನ್ನುವುದನ್ನು ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯಕ್ಕನುಗುಣವಾಗಿ ನಿಗದಿಪಡಿಸಿ ಪ್ರತಿದಿನ ಓದಬೇಕು.

6. ಪ್ರಮುಖ ಅಂಶ ಬರೆದಿಡಿ
ಓದುತ್ತಿರುವಾಗ ಪ್ರಮುಖವಾದ ಅಂಶಗಳನ್ನು ಬರೆದಿಟ್ಟುಕೊಳ್ಳುವುದರಿಂದ ಸುಲಭವಾಗಿ ನೆನಪಿನಲ್ಲಿಟ್ಟುಕೊಳ್ಳಬಹುದು ಮತ್ತು ಪರೀಕ್ಷೆಯ ದಿನ ಆ ಪಾಯಿಂಟ್‌ಗಳ ಮೂಲಕ ಓದಿದ್ದನ್ನು ಮರುಕಳಿಸಿಕೊಳ್ಳಬಹುದು.

7. ಓದುವ ಮಧ್ಯೆ ಬ್ರೇಕ್‌ ತೆಗೆದುಕೊಳ್ಳಿ
ವಿದ್ಯಾರ್ಥಿಗಳಿಗೆ ಓದಿನಲ್ಲಿ ಏಕಾಗ್ರತೆಯಿರಬೇಕಾದರೆ ನಿರಂತರವಾಗಿ ಓದುವ ಬದಲು ಮಧ್ಯೆ ಮಧ್ಯೆ ಒಂದಿಷ್ಟೂ ಬ್ರೇಕ್‌ ತೆಗೆದುಕೊಳ್ಳಿ. ಇದರಿಂದ ಹೆಚ್ಚು ಸಮಯ ಓದಲು ಸಾಧ್ಯವಾಗುತ್ತದೆ.

- ರಂಜಿನಿ ಮಿತ್ತಡ್ಕ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.