ವಿದ್ಯಾರ್ಥಿಗಳ ಪಾಲಿಗೆ ಆದರ್ಶರಿವರು


Team Udayavani, Sep 4, 2019, 5:41 AM IST

q-19

ಭಾರತ ದೇಶ ಅನೇಕ ಮಹಾನ್‌ ಸಾಧಕರು ಬದುಕಿ ಬಾಳಿದ, ಬದುಕುತ್ತಿರುವ ದೇಶ. ಕಡು ಬಡತನದಲ್ಲಿಯೇ ಹುಟ್ಟಿ, ಬೆಳೆದು ದೇಶದ ಶ್ರೀಮಂತ ವ್ಯಕ್ತಿ, ರಾಷ್ಟ್ರಪತಿ, ಪ್ರಧಾನಿ, ವಿಜ್ಞಾನಿ, ವೈದ್ಯ ಹೀಗೆ ಹತ್ತು ಹಲವು ಉನ್ನತ ಸ್ಥಾನಗಳಲ್ಲಿ ಗುರುತಿಸಿಕೊಂಡವರು ಇಲ್ಲಿದ್ದಾರೆ. ಇಂತಹ ಮಹಾನ್‌ ವ್ಯಕ್ತಿಗಳೇ ಇಂದಿನ ವಿದ್ಯಾರ್ಥಿಗಳಿಗೆ ಆದರ್ಶವಾಗಬೇಕು. ಅಂಥ‌ ಕೆಲವು ಆದರ್ಶ ವ್ಯಕ್ತಿಗಳ ಕಿರು ಪರಿಚಯ ಇಲ್ಲಿದೆ.

ಎ.ಪಿ.ಜೆ. ಅಬ್ದುಲ್ ಕಲಾಂ

ದಿ ಮಿಸೆಲ್ ಮ್ಯಾನ್‌ ಆಫ್ ಇಂಡಿಯಾ ಎಂದೇ ಕರೆಯಲ್ಪಡುವ ಭಾರತದ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರು ವಿದ್ಯಾರ್ಥಿಗಳಿಗೆ ಒಬ್ಬ ಉತ್ತಮ ಆದರ್ಶ ವ್ಯಕ್ತಿ. ಕೇವಲ ರಾಷ್ಟ್ರಪತಿಯಾಗಿ ಮಾತ್ರವಲ್ಲದೇ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ಇವರ ಕೊಡುಗೆ ಅತ್ಯಮೂಲ್ಯವಾದುದು. ಭಾರತ ರತ್ನ, ಪದ್ಮ ವಿಭೂಷಣ, ಪದ್ಮ ಭೂಷಣದಂತಹ ದೇಶದ ಅತ್ಯಮೂಲ್ಯ ಪ್ರಶಸ್ತಿಗಳನ್ನು ಪಡೆದರೂ ಅತೀ ಸರಳವಾಗಿ ಎಲ್ಲರೊಂದಿಗೆ ಕೂಡಿ ಬಾಳಿದವರು ಕಲಾಂ. ಯುವ ಜನತೆಯ ಶಕ್ತಿಯ ಮೇಲೆ ನಂಬಿಕೆ ಇಟ್ಟಿದ್ದ ಇವರು ಸದಾ ಸಾಧನೆಗೆ ಪ್ರೇರೇಪಿಸುವ ಕೆಲಸ ಮಾಡುತ್ತಿದ್ದರು.

ಕ್ಯಾಪ್ಟನ್‌ ಪ್ರೇಮ್‌ ಮಥೂರ್‌

ಸಮಾಜ ಏನನ್ನು ಒಪ್ಪುದಿಲ್ಲವೋ ಅದನ್ನು ನೀವು ಸಾಧಿಸುವವರಾದರೆ ಕ್ಯಾಪ್ಟನ್‌ ಪ್ರೇಮ್‌ ಮಥೂರ್‌ ಅವರಿಗಿಂತ ಬೇರೆ ಆದರ್ಶ ನಿಮಗೆ ಸಿಗಲಾರದು. ಲಿಂಗ ಸರಿಸಮಾನತೆ ಇಲ್ಲದ ಸಮಯದಲ್ಲಿಯೇ ಸಮಾಜವನ್ನು ಎದುರಿಸಿ ಪೈಲೈಟ್ ಲೈಸೆನ್ಸ್‌ ಅನ್ನು ಪಡೆಯುವ ಮೂಲಕ ಪೈಲೈಟ್ ಲೈಸೆನ್ಸ್‌ ಪಡೆದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದವರು ಇವರು. ಮಹಿಳಾ ಪೈಲೆಟ್ ಏನು ಮಾಡಬಲ್ಲಳು ಎಂಬ ಮನೋಭಾವನೆಯಿಂದ ಹಲವು ಏರ್‌ಲೈನ್ಸ್‌ಗಳು ಇವರನ್ನು ಕೆಲಸಕ್ಕೆ ಸೇರಿಸಿಕೊಳ್ಳಲು ಹಿಂದೇಟು ಹಾಕಿದವು. ಆದರೂ ಛಲಬಿಡದ ಈಕೆ ಸತತ ಪ್ರಯತ್ನದಿಂದ ಡೆಕ್ಕನ್‌ ಏರ್‌ಲೈನ್ಸ್‌ನಲ್ಲಿ ಕೆಲಸ ಗಿಟ್ಟಿಸಿಕೊಂಡರು. 1949ರಲ್ಲಿ ನ್ಯಾಶನಲ್ ಏರ್‌ ರೇಸ್‌ನಲ್ಲಿ ಜಯಶಾಲಿಯಾಗಿ ಎಲ್ಲರನ್ನೂ ನಿಬ್ಬೆರಗು ಗೊಳಿಸಿದರು.

ವರ್ಗೀಸ್‌ ಕುರಿಯನ್‌

ವೈಟ್ ರೆವ್ಯೂಲೂಶನ್‌ನ ಪಿತಾಮಹ ಎಂದೇ ಕರೆಯಲಾಗುವ ವರ್ಗೀಸ್‌ ಕುರಿಯನ್‌ ಅವರ ಸಾಧನೆ ಇಂದಿನ ಮಕ್ಕಳಿಗೆ ಆದರ್ಶವಾಗಲೇಬೇಕು. ರೈತರ ಮಾಲಕತ್ವದಲ್ಲಿ ವೃತ್ತಿಪರರಿಂದ ನಡೆಸಲ್ಪಡುವ 30ಕ್ಕೂ ಅಧಿಕ ಸಂಸ್ಥೆಗಳನ್ನು ಹುಟ್ಟಿಹಾಕಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಅಮುಲ್ ಬ್ರ್ಯಾಂಡ್‌ನ‌ ಡೇರಿ ಉತ್ಪನ್ನಗಳ ಯಶಸ್ಸಿನ ಹಿಂದಿನ ರೂವಾರಿ ಕೂಡ ಇವರೇ ಆಗಿದ್ದಾರೆ.

ಪ್ರಕಾಶ್‌ ಆಮ್ಟೆ

ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಹೆಸರುವಾಸಿಯಾದವರು ಪ್ರಕಾಶ್‌ ಆಮ್ಟೆ. ಇವರು ಕುಷ್ಠರೋಗಿಗಳಿಗೆ ನೆರವಾಗುವ ಮೂಲಕ ಹೆಸರುವಾಸಿಯಾಗಿದ್ದ ಬಾಬಾ ಆಮ್ಟೆ ಅವರ ಪುತ್ರ. ತಂದೆಯ ಹಾದಿಯಲ್ಲೇ ಮುಂದುವರಿದಿರುವ ಇವರು ವಿದ್ಯುತ್‌ ಕೂಡ ಇಲ್ಲದ ಊರಿನಲ್ಲಿ ಆಸ್ಪತ್ರೆ ನಡೆಸುವ ಮೂಲಕ ಬಡ ಜನರ ಸೇವೆ ಮಾಡುತ್ತಿದ್ದಾರೆ. ಶಾಲೆ, ಆಸ್ಪತ್ರೆ, ಪ್ರಾಣಿ ಸಂರಕ್ಷಣಾ ಕೇಂದ್ರಗಳನ್ನು ನಡೆಸುತ್ತಿರುವ ಇವರ ಮಾನವೀಯತೆ ಪ್ರತಿಯೊಬ್ಬರಿಗೂ ಆದರ್ಶ.
ಪ್ರಸನ್ನ ಹೆಗಡೆ ಊರಕೇರಿ

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.