ಯೋಚನ ಸಾಮರ್ಥ್ಯ ಹೆಚ್ಚಿಸಿಕೊಳ್ಳಿ 


Team Udayavani, Jan 23, 2019, 7:10 AM IST

23-january-8.jpg

‘ ಬೆಳೆಯುವ ಸಿರಿ ಮೊಳಕೆಯಲ್ಲಿ’ ಎಂಬಂತೆ ಮಕ್ಕಳನ್ನು ಬಾಲ್ಯದಿಂದ ಸರಿಯಾಗಿ ಬೆಳೆಸಬೇಕಾಗುತ್ತದೆ. ಅವರನ್ನು ಏಕಮುಖವಾಗಿ ಬೆಳೆಸುವುದಕ್ಕಿಂತ ಬಹುಮುಖಿಯಾಗಿ ಬೆಳೆಸಿದಾಗ ಹೊಸ ಹೊಸ ಯೋಚನೆಗಳನ್ನು ಕಂಡುಕೊಳ್ಳಲು ಸಾಧ್ಯ. ವಿದ್ಯಾರ್ಥಿಗಳಿಗೆ ಪಠ್ಯಗಳಲ್ಲಿ ಮಾತ್ರ ವಲ್ಲ ಪಠ್ಯೇತರ ಚಟುವಟಿಕೆಗಳಲ್ಲೂ ಹೆಚ್ಚಾಗಿ ತೊಡಗಿಸಿಕೊಳ್ಳುವಂತೆ ನೋಡಿಕೊಳ್ಳಬೇಕು. ಆಧುನಿಕ ತಂತ್ರಜ್ಞಾನದ ಮೂಲಕ ನೀಡುವ ಶಿಕ್ಷಣ, ಪ್ರಾಯೋಗಿಕ ಕಲಿಕೆಯಿಂದ ಅವರಲ್ಲಿ ಯೋಚನಾ ಸಾಮರ್ಥ್ಯವನ್ನು ಹೆಚ್ಚಿಸಲು ಸಾಧ್ಯವಿದೆ. ಜತೆಗೆ ನವನವೀನ ಯೋಚನೆಗಳಿಗೆ ವೇದಿಕೆ ಕಲ್ಪಿಸಿಕೊಡಬಹುದು.

ಅಂಕಗಳಿಸುವುದೊಂದೇ ವಿದ್ಯಾರ್ಥಿಗಳ ಗುರಿಯಾಗಬಾರದು. ಜೀವನದಲ್ಲಿ ಕೌಶಲ ಬೆಳೆಸಿಕೊಂಡು ಹೊಸ ಯೋಚನೆಯನ್ನು ಬೆಳೆಸುವುದು ಹೆತ್ತವರು ಮತ್ತು ಶಿಕ್ಷಕರ ಜವಾಬ್ದಾರಿಯಾಗಬೇಕು. ವಿದ್ಯಾರ್ಥಿಗಳ ದೈಹಿಕ ಆರೋಗ್ಯಕ್ಕಿಂತ ಹೆಚ್ಚಾಗಿ ಮಾನಸಿಕ ಬೆಳವಣಿಗೆಗೆ ಒತ್ತು ನೀಡಿ ಸರ್ವತೋಮುಖ ಅಭಿವೃದ್ಧಿಯ ನಿಟ್ಟಿನಲ್ಲಿ ಯೋಚಿಸಬೇಕಿದೆ.

ಇಂದಿನ ವಿದ್ಯಾರ್ಥಿಗಳಲ್ಲಿ ಹೊಸ ಯೋಚನೆಗಳನ್ನು ಚಿಂತಿಸುವ ಮಟ್ಟ ಕಡಿಮೆಯಾಗುತ್ತಿದ್ದು, ಇದಕ್ಕೆ ಹೆತ್ತವರು ಒಂದು ರೀತಿಯಲ್ಲಿ ಕಾರಣ. ಹೆಚ್ಚಿನ ಮನೆಗಳಲ್ಲಿ ಉದ್ಯೋಗ ಹಾಗೂ ಕೆಲಸದ ಒತ್ತಡದಲ್ಲಿರುವ ಬಹುತೇಕ ಪೋಷಕರು, ತಮ್ಮ ಮಕ್ಕಳ ಶಿಕ್ಷಣದ ಬಗ್ಗೆ ಗಮನಹರಿಸುವುದಿಲ್ಲ. ಮಕ್ಕಳನ್ನು ಅವರ ಪಾಡಿಗೆ ಬಿಟ್ಟು ಬಿಡುವುದರಿಂದಾಗಿ. ಬೆಳೆಯುವ ವಿದ್ಯಾರ್ಥಿಗಳ ಮನಸ್ಥಿತಿ ಕುಗ್ಗಲು ಕಾರಣವಾಗಬಹುದು.

ಓದು- ಬರಹವೊಂದೇ ಮಕ್ಕಳಿಗೆ ಪ್ರಪಂಚವಲ್ಲ. ಮತ್ತೂಂದು ಪ್ರಪಂಚವಿದೆ ಎಂಬುವುದನ್ನು ಹೆತ್ತವರು ಮಕ್ಕಳಿಗೆ ಮನವರಿಕೆ ಮಾಡಿಕೊಡಬೇಕು. ಇಂದಿನ ದಿನಗಳಲ್ಲಿ ತಂತ್ರಜ್ಞಾನ ಕ್ಷೇತ್ರ ಮುಂದುವರೆದಿದೆ. ಫೇಸ್‌ಬುಕ್‌, ವಾಟ್ಸಪ್‌ ಸಹಿತ ಸಾಮಾಜಿಕ ಜಾಲತಾಣಗಳ ಬಳಕೆಯು ಮಿತದಲ್ಲಿದ್ದರೆ ಏನೂ ತಪ್ಪಿಲ್ಲ. ಆದರೆ ಹೆತ್ತವರು ಮಕ್ಕಳನ್ನು ಈ ಪ್ರಪಂಚದಿಂದ ದೂರವಿಡುತ್ತಾರೆ ಇದು ತಪ್ಪು. ಅಂತರ್ಜಾಲದ ಸದ್ಬಳಕೆಯಿಂದ ಸಣ್ಣ ಹಳ್ಳಿಯಿಂದ ಹಿಡಿದು ಪಟ್ಟಣ, ದೇಶ, ವಿದೇಶಗಳ ಸುದ್ದಿಯನ್ನು ಕ್ಷಣಾರ್ಧದಲ್ಲಿಯೇ ತಿಳಿದುಕೊಳ್ಳಲು ಸಾಧ್ಯವಿದೆ. ಇದನ್ನು ತಿಳಿಯುವುದರ ಮೂಲಕ ವಿದ್ಯಾರ್ಥಿಗಳ ಯೋಚನೆ ಕೂಡ ಬೆಳೆಯುತ್ತದೆ.

ಈ ಹಿಂದೆ ಯಾವುದೇ ಒಂದು ಕ್ಷೇತ್ರದ ಅಭ್ಯಾಸಕ್ಕೆ ಆಯಾ ಪರಿಣಿತರನ್ನು ಆಯ್ಕೆ ಮಾಡಬೇಕಿತ್ತು. ಉದಾಹರಣೆಗೆ ನೃತ್ಯ ಕಲಿಯಲು ಆಯಾ ಗುರುಗಳ ಬಳಿ ತೆರಳಿ ಕಲಿಯಬೇಕಾಗಿತ್ತು. ಆದರೆ ಇಂದಿನ ತಂತ್ರಜ್ಞಾನ ಯುಗದಲ್ಲಿ ಯೂಟ್ಯೂಬ್‌ ಸಹಿತ ಅಂತರ್ಜಾಲದಲ್ಲಿ ಮಾಹಿತಿಯನ್ನು ಪಡೆಯಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಯೋಚನೆಗಳನ್ನು ಬೆಳೆಸದಿದ್ದರೆ ಅಂತರ್ಜಾಲದಲ್ಲಿ ಜಾಲಾಡಲು ಸಾಧ್ಯವಿಲ್ಲ.

ವಿದ್ಯಾರ್ಥಿಗಳು ಮನೆಯಲ್ಲಿ ಪೋಷಕರ ಜತೆ ಬೆರೆಯುವುದಕ್ಕಿಂತ ಹೆಚ್ಚು ಶಾಲಾ-ಕಾಲೇಜುಗಳಲ್ಲಿ ಅಧ್ಯಾಪಕರ ಜತೆ ಬೆರೆಯುತ್ತಾರೆ. ವಿದ್ಯಾರ್ಥಿಗಳಲ್ಲಿ ನವನವೀನ ಆಲೋಚನೆ, ಚಿಂತನೆಗಳನ್ನು ಬೆಳೆಸುವ ನಿಟ್ಟಿನಲ್ಲಿ ಅವರ ಪಾತ್ರವೂ ಮಹತ್ವದ್ದು. ಶಾಲಾ ಕಾಲೇಜುಗಳಲ್ಲಿ ಇತರೆ ವಿಷಯಗಳಂತೆ ಯೋಚನಾ ಸಾಮರ್ಥ್ಯದ ಆಟಗಳು, ಕಲಾ ಪ್ರಕಾರಗಳ ಕಲಿಕೆಗೆ ಹೆಚ್ಚು ಒತ್ತು ನೀಡಬೇಕಿದೆ. ವಿದ್ಯಾರ್ಥಿಗಳ ಮನಸ್ಥಿತಿ, ಆಸಕ್ತಿಯನ್ನು ಅರ್ಥಮಾಡಿಕೊಂಡು ಆಯಾ ವಿಚಾರದಲ್ಲಿ ಹೆಚ್ಚು ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡಬೇಕಿದೆ.

ಪ್ರಾಯೋಗಿಕ ಪಾಠದ ಮೂಲಕ ಚಿಂತನೆ
ಹೆಚ್ಚಿನ ಶಾಲಾ -ಕಾಲೇಜಿಗಳಲ್ಲಿ ಪ್ರಾಯೋಗಿಕ ಶಿಕ್ಷಣದ ಕಲಿಕಾ ಪದ್ಧತಿಗೆ ಹೆಚ್ಚಿನ ಒತ್ತು ನೀಡುವ ಆವಶ್ಯಕತೆ ಇದೆ. ಪದವಿ, ಸ್ನಾತಕೋತ್ತರ ಪದವಿಯಲ್ಲಿ ಕೊನೆಯ ಸೆಮಿಸ್ಟರ್‌ನಲ್ಲಿ ಒಂದು ಪಾಠವಾಗಿಯೇ ಪ್ರಾಯೋಗಿಕ ಅಧ್ಯಯನವಿದ್ದು, ಈ ವೇಳೆ ವಿದ್ಯಾರ್ಥಿಗಳು ತಮ್ಮ ಅಧ್ಯಯನದಲ್ಲಿ ಹೊಸ ಚಿಂತನೆಗಳನ್ನು ಅಳವಡಿಸಲು ಮುಂದಾಗಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ರೂಪಿಸುವ ಹೊಣೆ ಶಿಕ್ಷಕರಲ್ಲಿದೆ.

ವಿದ್ಯಾರ್ಥಿಗಳಿಗೆ ಹೊಸ ಚಿಂತನೆ ರೂಢಿಸಿಕೊಳ್ಳಲು ನೂರಾರು ಅವಕಾಶಗಳಿವೆ. ಆದರೆ ಸ್ಪರ್ಧಿಸಲು ಸಾಮಾನ್ಯ ಜ್ಞಾನದ ಕೊರತೆ ಎದ್ದು ಕಾಣುತ್ತದೆ. ಇದನ್ನು ಹೋಗಲಾಡಿಸಲು ಇಂದಿನ ದಿನಗಳಲ್ಲಿ ನೂರಾರು ಮಾರ್ಗಗಳಿವೆ. ಯುವಜನತೆ ಹೆಚ್ಚಾಗಿ ಅಂತರ್ಜಾಲವನ್ನು ಚಲನಚಿತ್ರ, ವೀಡಿಯೋ ಗೇಮ್‌, ಚಾಟಿಂಗ್‌, ಸಾಮಾಜಿಕ ಜಾಲ ತಾಣಗಳ ಬಳಕೆಗೆ ಉಪಯೋಗ ಮಾಡುತ್ತಿದ್ದಾರೆ. ಇದರ ಜತೆಗೆ ತಮ್ಮ ಬುದ್ಧಿಗೆ ಕೆಲಸ ಕೊಡುವ ನಿಟ್ಟಿನಲ್ಲಿಯೂ ಬಳಕೆ ಮಾಡಬೇಕಿದೆ.

ಸ್ಮಾರ್ಟ್‌ ಪಾಠ 
ನಾಲ್ಕು ಗೋಡೆಯ ನಡುವೆ ಕುಳಿತು ಪಾಠ ಕೇಳುವ ಕಾಲ ಈಗ ಹೋಗಿದ್ದು, ಇದರಿಂದ ವಿದ್ಯಾರ್ಥಿಗಳಲ್ಲಿ ಹೊಸ ಯೋಚನ ಶಕ್ತಿ ಹೊಂದಲು ಸಾಧ್ಯವಿಲ್ಲ. ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಶಾಲೆಗಳಲ್ಲಿ ಸ್ಮಾರ್ಟ್‌ ಕ್ಲಾಸ್‌ ಪ್ರಾರಂಭವಾಗಿದೆ. ಕಂಪ್ಯೂಟರ್‌, ಸ್ಯಾಟ್‌ಲೈಟ್ ಮುಖೇನ ವಿದ್ಯಾರ್ಥಿಗಳಿಗೆ ಆಡಿಯೋ, ವೀಡಿಯೋ ಮೂಲಕ ಪಾಠಗಳನ್ನು ಮಾಡಲಾಗುತ್ತದೆ. ಇದರಿಂದಾಗಿ ವಿದ್ಯಾರ್ಥಿಗಳು ತಮ್ಮ ಬುದ್ಧಿಮತ್ತೆಯನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಲು ಸಾಧ್ಯವಾಗುತ್ತದೆ.

•••ನವೀನ್‌ ಭಟ್ ಇಳಂತಿಲ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.