ರೈಲ್ವೇಯಲ್ಲಿ ಉದ್ಯೋಗ, ಮಾಹಿತಿ ಪಡೆದು ಪರೀಕ್ಷೆ ಎದುರಿಸಿ


Team Udayavani, Mar 6, 2019, 7:27 AM IST

6-march-9.jpg

ಜಗತ್ತಿನ ನಾಲ್ಕನೇ ಅತಿದೊಡ್ಡ ರೈಲ್ವೇ ನೆಟ್‌ವರ್ಕ್‌ ಎನಿಸಿಕೊಂಡಿರುವ ಭಾರತೀಯ ರೈಲ್ವೇಯಲ್ಲಿ ವಿವಿಧ ವಿಭಾಗಗಳಲ್ಲಿ ಸಾಕಷ್ಟು ಉದ್ಯೋಗಾವಕಾಶಗಳಿವೆ. ತಮ್ಮ ಅರ್ಹತೆಗಳಿಗೆ ತಕ್ಕುದಾದ ವಿಭಾಗಕ್ಕೆ ವರ್ಷಕ್ಕೆ ಸಾವಿರಾರು ಆಕಾಂಕ್ಷಿಗಳು ಅರ್ಜಿ ಸಲ್ಲಿಸುತ್ತಾರೆ. ಆದರೆ ಇನ್ನೂ ಕೆಲವರಿಗೆ ಯಾವ ಅರ್ಜಿ ಸಲ್ಲಿಸುವುದು, ಬೇಕಾದ ಅರ್ಹತೆ ಬಗ್ಗೆ ಮಾಹಿತಿ ಇರುವುದಿಲ್ಲ. ಇದರಿಂದ ಅರ್ಹರು ಉದ್ಯೋಗ ವಂಚಿತರಾಗುತ್ತಾರೆ. ಆರ್‌ಆರ್‌ಬಿ (ರೈಲ್ವೇ ರಿಕ್ರೂಟ್‌ ಮೆಂಟ್‌ ಬೋರ್ಡ್‌) ರೈಲ್ವೇ ವಿವಿಧ ವಿಭಾಗಗಳಿಗೆ ಉದ್ಯೋಗಿಗಳನ್ನು ನೇಮಕ ಮಾಡುತ್ತದೆ. ವರ್ಷದಲ್ಲಿ ಒಂದು ಬಾರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸುತ್ತದೆ. ಆನ್‌ ಲೈನ್‌ ಮೂಲಕ ಅರ್ಜಿ ಭರ್ತಿ ಮಾಡಿ ಪರೀಕ್ಷೆಗೆ ಹಾಜರಾಗಬೇಕಾಗುತ್ತದೆ. 

ವಿವಿಧ ಇಲಾಖೆ ಎಂದಾಗ ಆಯಾಯಾ ಇಲಾಖೆಗೆ ಸಂಬಂಧಿಸಿದ ವಿದ್ಯಾರ್ಹತೆ ಬೇಕಾಗುತ್ತದೆ. ಎಂಜಿನಿಯರಿಂಗ್‌ ವಿಭಾಗ, ಟಿಟಿ, ವಾಣಿಜ್ಯ, ಸ್ಟೇಶನ್‌ ಮಾಸ್ಟರ್‌ ಸಹಿತ ವಿವಿಧ ವಿಭಾಗಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗುತ್ತದೆ. ಅರ್ಜಿದಾರರ ಪದವಿ ಹಾಗೂ ವಯೋಮಿತಿ ಮೊದಲೇ ನಿರ್ಧರಿತವಾಗಿರುತ್ತದೆ.

ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಉದ್ದೇಶದಿಂದ ಅರ್ಜಿ ಆಹ್ವಾನಿಸಲಾಗುತ್ತದೆ. 2018- 19ನೇ ಸಾಲಿಗೆ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದೆ. ಮೊದಲಾಗಿ ಇಲಾಖೆ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಜಿ ನೀಡಲು ಅಧಿಸೂಚನೆ ಹೊರಡಿಸುತ್ತದೆ. ಬಳಿಕ ಆನ್‌ಲೈನ್‌ ಗಳಲ್ಲಿ ಅರ್ಜಿ ಭರ್ತಿ ಮಾಡಲು ದಿನ ನಿಗದಿ ಮಾಡುತ್ತದೆ. ಸುಮಾರು 1 ತಿಂಗಳು ಕಾಲಾವಕಾಶ ನೀಡುತ್ತದೆ. ಈ ಸಮಯದಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಹಿಂದಿರುಗಿಸಲು ಅವಕಾಶ ನೀಡಲಾಗುತ್ತದೆ. ಬಳಿಕ ಪರೀಕ್ಷೆಯ ಶುಲ್ಕವನ್ನು ಪಾವತಿಸಲು ಗಡುವು ನೀಡಲಾಗುತ್ತದೆ. ಸುಮಾರು ಎರಡು ತಿಂಗಳ ಬಳಿಕ ಪರೀಕ್ಷೆ ಗೆ ಆಹ್ವಾನಿಸಲಾಗುತ್ತದೆ.

ಪರೀಕ್ಷೆ ನಾಲ್ಕು ಹಂತಗಳಲ್ಲಿ ನಡೆಯುತ್ತದೆ. ಕಂಪ್ಯೂಟರ್‌ ಬೇಸ್ಡ್ ಪರೀಕ್ಷೆಗಳೇ (ಸಿಬಿಟಿ) ನಡೆಯುತ್ತದೆ. ಮೊದಲ ಎರಡು ಹಂತಗಳಲ್ಲಿ ಸಿಬಿಟಿ ಪರೀಕ್ಷೆ ಇರುತ್ತದೆ. ಮೂರನೇ ಹಂತದಲ್ಲಿ ದಾಖಲೆಗಳ ಪರಿಶೀಲನೆ, 4ನೇ ಹಂತದಲ್ಲಿ ವೈದ್ಯಕೀಯ ಪರೀಕ್ಷೆ ನಡೆಯಲಿದೆ. ಸಿಬಿಟಿ ಪರೀಕ್ಷೆಗಳು 100 ಅಂಕಗಳಿಗೆ ಒಂದೂವರೆ ಗಂಟೆ ಅವಧಿಗೆಯಲ್ಲಿ ಇರುತ್ತದೆ.

ಆನ್‌ಲೈನ್‌ ಅರ್ಜಿ ಹಾಕುವುದು ಹೇಗೆ?
ಅರ್ಜಿ ಸಲ್ಲಿಸಬೇಕಾದ ಲಿಂಕ್‌ ಗೆ ಕ್ಲಿಕ್‌ ಮಾಡಿ. ಅಲ್ಲಿ ಅರ್ಜಿ ಸಲ್ಲಿಸಬೇಕಾದ ಹುದ್ದೆಯನ್ನು ಆಯ್ಕೆ ಮಾಡಿ. ಅಲ್ಲಿ ಅಪ್ಲೈ  ಬಟನ್‌ ಕ್ಲಿಕ್‌ ಮಾಡಿ. ಅದರಲ್ಲಿ ನ್ಯೂ ರಿಜಿಸ್ಟ್ರೇಶನ್‌ ಬಟನ್‌ ಒತ್ತಿ. ಅಗತ್ಯವಿರುವ ಮಾಹಿತಿಗಳನ್ನು ನೀಡಿ ಅರ್ಜಿಯನ್ನು ಭರ್ತಿ ಮಾಡಿ. ಅರ್ಜಿ ಶುಲ್ಕವನ್ನು ಪಾವತಿಸಿ ಬಳಿಕ ಸಬ್‌ಮಿಟ್‌ ಕೊಡಬೇಕು. ಮುಂದಿನ ಅಗತ್ಯಗಳಿಗಾಗಿ ಅರ್ಜಿಯ ಪ್ರಿಂಟ್‌ ತೆಗೆದಿರಿಸಿಕೊಳ್ಳುವುದು ಉತ್ತಮ.

ವೆಬ್‌ ಸೈಟ್‌ ನಲ್ಲಿ ಮಾಹಿತಿ
ರೈಲ್ವೇ ಇಲಾಖೆಗೆ ಯಾವಾಗ ಪರೀಕ್ಷೆಗಳು ನಡೆಯುತ್ತದೆ ಎಂಬುದನ್ನು ಪರಿಶೀಲಿಸಿಕೊಳ್ಳುತ್ತಿರಬೇಕು. ಇಲಾಖೆಯ ವೆಬ್‌ಸೈಟ್‌ಗಳನ್ನು ಗಮನಿಸುತ್ತಿರಬೇಕು. ಅರ್ಜಿ ಹಾಕಿದ ಬಳಿಕ ಪರೀಕ್ಷೆಗೆ ಸರಿಯಾದ ರೀತಿಯಲ್ಲಿ ಸಿದ್ಧತೆ ನಡೆಸಿ. ಅವಕಾಶಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು. 
– ನಾರಾಯಣನ್‌,
ನಿವೃತ್ತ ರೈಲ್ವೇ ಅಧಿಕಾರಿ

ಪ್ರಜ್ಞಾ ಶೆಟ್ಟಿ 

ಟಾಪ್ ನ್ಯೂಸ್

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.