ಮೊಬೈಲ್‌ ಯುಗದಲ್ಲಿ ಸಾಹಿತ್ಯ ಅಭಿರುಚಿ ಮರೆಯಾಗದಿರಲಿ


Team Udayavani, Jan 8, 2020, 5:39 AM IST

24

ಇಂದಿನ ಶೆಕ್ಷಣಿಕ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಸಾಹಿತ್ಯದ ಬಗ್ಗೆ ಅಭಿರುಚಿಯನ್ನು ಬೆಳೆಸುವುದು ಕಷ್ಟವಾಗಿದೆ. ಜಾಗತೀಕರಣವಾಗಿ ಹೆಮ್ಮರವಾಗಿ ಬೆಳೆಯುತ್ತಿರುವ ಈ ಇಂಟರ್ನೆಟ್‌ ಯುಗದಲ್ಲಿ ಸಾಹಿತ್ಯ ಕಲಿಕೆ ಕ್ಷಿಣಿಸುತ್ತಿದ್ದು, ನಿರಂತರ ಕಲಿಕಾಭ್ಯಾಸ ಮರೆಯಾಗುತ್ತಿದೆ. ಇಂದಿನ ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಸಕ್ತಿ ಬೆಳೆಸುವುದು ಅವಶ್ಯವಾಗಿದ್ದು, ಸಾಹಿತ್ಯ ಓದು ಶಿಕ್ಷಣಕ್ಕೆ ಪೂರಕ ಎಂಬುದನ್ನು ಮನಗಾಣಿಸಬೇಕಿದೆ. ಈ ನಿಟ್ಟಿನಲ್ಲಿ ಶೈಕ್ಷಣಿಕವಾಗಿ ಸಾಹಿತ್ಯವನ್ನು ಅಳವಡಿಸಿರುವುದರಿಂದ ಆಗುವ ಉಪಯುಕ್ತತತೆಗಳನ್ನು ಇಲ್ಲಿ ನೀಡಲಾಗಿದೆ.

ಬೌದ್ಧಿಕ ಶಕ್ತಿ ವೃದ್ಧಿ
ಇಂದಿನ ವಿದ್ಯಾರ್ಥಿಗಳಲ್ಲಿ ಚಿಂತನಾಶಕ್ತಿ ಕಡಿಮೆಯಾಗುತ್ತಿದ್ದು, ಕ್ರಿಯಾಶೀಲತೆ ಕುಂದುತ್ತಿದೆ. ಅದಕ್ಕೆ ಮುಖ್ಯ ಕಾರಣ ಓದುವಿನ ಕೊರತೆ. ಸಾಹಿತ್ಯ ಓದುವಿನ ಅಭಿರುಚಿಯಿಂದ ವಿದ್ಯಾರ್ಥಿಗಳ ಬೌದ್ಧಿಕ ಚಿಂತನ ಮಟ್ಟ ಹೆಚ್ಚಲಿದ್ದು, ನಾನಾ ಆಯಾಮಗಳಲ್ಲಿ ವಿಷಯವಸ್ತುಗಳನ್ನು ಅವಲೋಕಿಸುವ ಚಾಣಕ್ಷತನವು ಇದರಿಂದ ವೃದ್ಧಿಯಾಗುತ್ತದೆ.

ಸೃಜನಶೀಲತೆ ಹೆಚ್ಚುತ್ತದೆ
ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸೃಜನಶೀಲತೆ ಪ್ರಮುಖ ಭಾಗವಾಗಿದ್ದು, ಶೈಕ್ಷಣಿಕವಾಗಿ ಯಶಸ್ಸು ಕಾಣಲು ಈ ಕೌಶಲ ಅಗತ್ಯವಾಗಿದೆ. ಸಾಹಿತ್ಯಾಧಾರಿತ ಪುಸ್ತಕಗಳನ್ನು ಓದುವುದರಿಂದ ವಿದ್ಯಾರ್ಥಿಗಳಲ್ಲಿ ಸೃಜನಶಕ್ತಿ ಹೆಚ್ಚಲಿದ್ದು, ಯೋಚನಾ ಲಹರಿಯೂ ವೃದ್ಧಿಸುತ್ತದೆ.

ಭಾಷೆಯ ಮೇಲೆ ಹಿಡಿತ
ಹೆಚ್ಚೆಚ್ಚು ಸಾಹಿತ್ಯ ಆಧರಿತ ಪುಸ್ತಕಗಳನ್ನು ಓದುವುದರಿಂದ ಭಾಷೆಯ ಮೇಲೆ ಹಿಡಿತ ಸಾಧಿಸಬಹುದಾಗಿದ್ದು, ಬರವಣಿಗೆಯ ಜ್ಞಾನವನ್ನು ಪಡೆದುಕೊಳ್ಳಬಹುದು. ಜತೆಗೆ ವಿದ್ಯಾರ್ಥಿಯಾಗಿದ್ದಾಗಲೇ ಕಥೆ, ಕಾದಂಬರಿ, ಕವನ ಸಂಕಲನಗಳನ್ನು ಓದುವ ಮತ್ತು ಬರೆಯುವ ಹವ್ಯಾಸ ರೂಢಿಸಿಕೊಂಡರೆ ಶೈಕ್ಷಣಿಕ ಮುಂದಿನ ವಿದ್ಯಾಭ್ಯಾಸಕ್ಕೂ ಸಹಾಯವಾಗಲಿದ್ದು, ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈಯುವುದಕ್ಕೆ ಈ ಹವ್ಯಾಸ ನಿಮ್ಮನ್ನು ಪ್ರೇರೆಪಿಸುತ್ತದೆ.

ಸ್ಪರ್ಧಾತ್ಮಾಕ ಪರೀಕ್ಷೆಗಳಿಗೂ ಸಾಹಿತ್ಯ ಬೇಕು
ದೇಶದ ಉನ್ನತ ಹುದ್ದೆ ಎಂದು ಉತ್ಪ್ರೇಕ್ಷಿಸುವ ಐಎಸ್‌ಎಸ್‌, ಕೆಎಸ್‌ಎಸ್‌ ಎಂಬಿತ್ಯಾದಿ ಪರೀಕ್ಷೆಗಳಲ್ಲೂ ಸಾಹಿತ್ಯ ಕುರಿತಾದ ಅಧ್ಯಯನವಿದ್ದು, ಇಂದಿನಿಂದಲ್ಲೇ ಸಾಹಿತ್ಯವನ್ನು ಓದುವ ಅಭ್ಯಾಸ ರೂಢಿಸಿಕೊಂಡರೆ ಮುಂದಿನ ದಿನಗಳಲ್ಲಿ ಉಪಯುಕ್ತ ವಾಗಲಿದೆ. ಜತೆಗೆ ಸ್ಪರ್ಧಾತ್ಮಾಕ ಪರೀಕ್ಷೆಗಳಲ್ಲಿ ಸಾಹಿತ್ಯಕ್ಕೆ ಸಂಬಂಧ ಪ್ರಶ್ನೆಗಳನ್ನು ಸುಲಭವಾಗಿ ಎದುರಿಸಬಹುದಾಗಿದೆ.

ಮಾನಸಿಕ ನೆಮ್ಮದಿ ಪಡೆಯಲು ಸಾದ್ಯ
ಓದು ಜೀವನಕ್ಕೆ ಬಹಳ ಮುಖ್ಯ. ಅದರಲ್ಲೂ ಸಾಹಿತ್ಯದ ಓದು ಮನಸ್ಸಿಗೆ ಹಿತವನ್ನು ನೀಡವುದರೊಂದಿಗೆ ಆಹ್ಲಾದಕಾರ ಮನೋಭಾವವನ್ನು ಹೊಂದಲು ನೆರವು ನೀಡುತ್ತದೆ. ಜತೆಗೆ ಬದುಕಿನ ನಾನಾ ಜಂಜಾಟಗಳಿಂದ ಬೆಸತ್ತಾಗ ಪುಸ್ತಕದ ಹಾಳೆಗಳನ್ನು ಒಮ್ಮೆ ತಿರುವಿ ಹಾಕಿದ್ದರೆ ಸಾಕು ನಮ್ಮನ್ನು ಕಾಡುತ್ತಿದ್ದ ಚಿಂತೆಗಳು ಮಾಯವಾಗಿ ಮಾನಸಿಕ ನೆಮ್ಮದಿ ಸಿಗುತ್ತದೆ. ಅಂತಹ ಮಾಂತ್ರಿಕತೆ ಸಾಹಿತ್ಯಕ್ಕಿದ್ದು, ನಮ್ಮ ಆಲೋಚನಾ ಕ್ರಮವನ್ನು ಬಲಗೊಳಿಸುತ್ತದೆ.

ಇತಿಹಾಸವನ್ನು ತಿಳಿಸುತ್ತದೆ
ಸಾಹಿತ್ಯ ಕ್ಷೇತ್ರದ ವ್ಯಾಪ್ತಿ ವಿಶಾಲವಾದುದು. ಏಕತೆಯಲ್ಲಿ ವಿವಿಧತೆಯನ್ನು ಪ್ರತಿಬಿಂಬಿಸುವ ಈ ಕ್ಷೇತ್ರ ಪ್ರಬಂಧ, ಕಥೆ, ಕಾದಂಬರಿ, ಹನಿಗವನ, ಹಾಸ್ಯ ಕಥೆ ಹೀಗೆ ಹಲವು ವೈವಿಧ್ಯತೆಗಳನ್ನು ತನ್ನ ಒಡಲಿನಲ್ಲಿಟ್ಟುಕೊಂಡಿದೆ. ಜತೆಗೆ ಸಾಹಿತ್ಯ ಪುಸ್ತಕಗಳಲ್ಲಿ ಗತಕಾಲದ ಘಟನೆಗಳನ್ನು, ಚರಿತ್ರೆಗಳನ್ನು ಉಲ್ಲೇಖ ಮಾಡಿದ್ದು, ನಮ್ಮ ದೇಶದ ಇತಿಹಾಸವನ್ನು ತಿಳಿಯಲು ಇದು ಸಹಾಯ ಮಾಡುತ್ತದೆ.

- ಸುಶ್ಮಿತಾ ಜೈನ್‌

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.