ಕಾನೂನು ಶಿಕ್ಷಣ ವಿಪುಲ ಅವಕಾಶ


Team Udayavani, Oct 16, 2019, 6:00 AM IST

u-20

ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬ ನಾಗರಿಕನು ಕಾನೂನಿನ ಅರಿವು ಹೊಂದಿರುವುದು ಅಗತ್ಯ. ಮಾನವ ಸಂಘಜೀವಿ ಆಗಿರುವವರೆಗೂ ಕಾನೂನು ಅಸ್ತಿತ್ವ ದಲ್ಲಿರುತ್ತದೆ. ಜನರಿಗೆ ಕಾನೂನಿನ ಕುರಿತು ಮಾಹಿತಿ, ಮಾರ್ಗದರ್ಶನ ನೀಡುವವರು ವಕೀಲರು. ಹೀಗಾಗಿ ಕಾನೂನು ಶಿಕ್ಷಣ ಕಲಿಕೆಗೆ ಹೆಚ್ಚಿನ ಮಹತ್ವವಿದೆ. ಕಾನೂನು ಪದವಿ ಪಡೆದರೆ ಅನೇಕ ಅವಕಾಶಗಳು ತೆರೆದುಕೊಳ್ಳುತ್ತವೆ.

ಒಂ ದು ಕಲ್ಲನ್ನು ಸುಂದರ ಶಿಲ್ಪವಾಗಿಸುವ ಚಾಣಾಕ್ಷತೆ ಶಿಲ್ಪಿಗೆ ಇದ್ದಂತೆಯೇ ಒಬ್ಬ ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುವ ಹಾಗೂ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಬದಲಾಯಿಸುವ ಶಕ್ತಿ ಶಿಕ್ಷಣಕ್ಕೆ ಇದೆ. ಆ ಹಿನ್ನಲೆಯಲ್ಲಿ ಶಿಕ್ಷಣದಿಂದ ದೂರವಿದ್ದ ಎಲ್ಲ ಮಕ್ಕಳಿಗೆ ಕಡ್ಡಾಯ ಶಿಕ್ಷಣ ನೀಡಬೇಕು ಎಂಬುದಾಗಿ ಸರಕಾರ ಆದೇಶ ನೀಡಿತು. ಅದರಂತೆ ಶೈಕ್ಷಣಿಕ ರಂಗದಲ್ಲೂ ದಿನಂಪ್ರತಿ ಸಾವಿರಾರು ಅವಕಾಶಗಳು ಉದಯಿಸಿದವು.

ಪ್ರಾಥಮಿಕ, ಪ್ರೌಢ ಶಿಕ್ಷಣದ ಬಳಿಕ ಹಲವಾರು ಕೋರ್ಸ್‌ಗಳು ವಿದ್ಯಾರ್ಥಿಗಳನ್ನು ಆಕರ್ಷಿಸತೊಡಗಿದವು. ಅದರಲ್ಲಿ ಕಾನೂನು ಶಿಕ್ಷಣವೂ ಒಂದು. ಕೆಲವು ವರ್ಷಗಳ ಹಿಂದೆ ಅರೆಕಾಲಿಕ ಕೋರ್ಸ್‌ ಆಗಿದ್ದ ಕಾನೂನು ಶಿಕ್ಷಣ ಇದೀಗ ಉದ್ಯೋಗಾವಕಾಶ ನೀಡುವ ಉತ್ತಮ ಮಾರ್ಗವಾಗಿ ಬದಲಾಗಿದೆ. ಕಾನೂನು ಶಿಕ್ಷಣವು ಜಾಗತೀಕರಣದ ಹಿನ್ನಲೆಯಲ್ಲಿ ಸಾಕಷ್ಟು ಬದಲಾವಣೆಗಳನ್ನು ಕಂಡಿದೆ. ಆ ಬಳಿಕ ಕಾನೂನು ಶಿಕ್ಷಣದಲ್ಲಿ ಸಮಗ್ರ ಸುಧಾರಣೆಗಳಾಗಿದ್ದು, ಕಾಲೇಜುಗಳು ಪೂರ್ಣಕಾಲಿಕ ವೃತ್ತಿಪರ ಕಾಲೇಜುಗಳಾಗಿವೆ. ಜಾಗತಿಕ ಸ್ಪರ್ಧೆಗೆ ತಕ್ಕಂತೆ ಪಠ್ಯಕ್ರಮಗಳನ್ನು ರೂಪಿಸಲಾಗುತ್ತಿದೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ನಾಗರಿಕನೂ ಕಾನೂನಿನ ಅರಿವು ಹೊಂದಬೇಕಾಗಿರುವುದು ಹಾಗೂ ಅದನ್ನು ಪಾಲಿಸಬೇಕಾಗಿರುವುದು ಕರ್ತವ್ಯ. ಎಲ್ಲಿಯವರೆಗೆ ವ್ಯಕ್ತಿ ಸಂಘ ಜೀವಿಯಾಗಿರುತ್ತಾನೋ ಅಲ್ಲಿಯವರೆಗೆ ಕಾನೂನಿನ ಅಸ್ತಿತ್ವ ಇರುತ್ತದೆ. ಹಾಗಾಗಿ ಸರಕಾರಿ ಸಂಸ್ಥೆ, ಬಹುರಾಷ್ಟ್ರೀಯ ಕಂಪೆನಿ , ಸೇನೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆಯನ್ನು ಸಲ್ಲಿಸಲು ಪ್ರಸ್ತುತ ಕಾನೂನು ವಿದ್ಯಾರ್ಥಿಗಳನ್ನು ತಯಾರು ಮಾಡುವ ಜವಾಬ್ದಾರಿಯನ್ನು ಕಾಲೇಜುಗಳು ಹಾಗೂ ವಿಶ್ವವಿದ್ಯಾನಿಲಯಗಳು ವಹಿಸಿಕೊಂಡಿವೆ.

ಕಾನೂನು ವಿಶ್ವ ವಿದ್ಯಾನಿಲಯಗಳು
ಎಲ್ಲ ರಂಗದಲ್ಲೂ ಕಾನೂನಿನ ಪದವೀಧರರಿಗೆ ಹಲವಾರು ಅವಕಾಶಗಳು ಇವೆ. ಐದು ವರ್ಷದ ಕಾನೂನು ಶಿಕ್ಷಣ ಹಾಗೂ 3 ವರ್ಷದ ಕಾನೂನು ಶಿಕ್ಷಣ ಕ್ಷೇತ್ರದಲ್ಲಿ ರಾಷ್ಟ್ರದಲ್ಲಿ ಹಲವಾರು ಕಾನೂನು ವಿಶ್ವವಿದ್ಯಾನಿಲಯಗಳಿದ್ದು, ಕಾನೂನಿನ ವಿವಿಧ ಅಂಶಗಳನ್ನು ಹಾಗೂ ಭಾರತೀಯ ದಂಡ ಸಂಹಿತೆಯ (ಇಂಡಿಯನ್‌ ಪಿನಲ್‌ ಕೋಡ್‌) ಕುರಿತು ಅಧ್ಯಯನ ಕೈಗೊಳ್ಳಬಹುದು. ಈ ಕೋರ್ಸ್‌ನಲ್ಲಿ ಸ್ಪೆಷಲೆ„ಜೇಶನ್‌ ಆಗಿ ಸಿವಿಲ್‌ ಅಥವಾ ಕ್ರಿಮಿನಲ್‌ ಲಾ, ಅಂತಾರಾಷ್ಟ್ರೀಯ ಕಾನೂನು, ಲೇಬರ್‌ ಲಾ, ಸೆ„ಬರ್‌ ಲಾ, ಅಡ್ಮಿನಿಸ್ಟ್ರೇಟಿವ್‌ ಲಾ, ಪೇಟೆಂಟ್‌ ಲಾ ಇವೇ ಮೊದಲಾದ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಕಾನೂನು ವೃತ್ತಿ ಕೈಗೊಳ್ಳಬೇಕಾದರೆ ಎಲ್‌ಎಲ್‌ಬಿ ಕೋರ್ಸ್‌ ಮಾಡಿರಬೇಕು.

ಶೈಕ್ಷಣಿಕ ಕೋರ್ಸ್‌ಗಳು
ಕಾನೂನು ಶಿಕ್ಷಣದಲ್ಲಿ ಬ್ಯಾಚುಲರ್‌ ಆಫ್‌ ಲಾ (ಎಲ್‌ಎಲ್‌ಬಿ), ಮಾಸ್ಟರ್‌ ಆಫ್‌ ಲಾ (ಎಲ್‌ಎಲ್‌ಎಮ್‌), ಮಾಸ್ಟರ್‌ ಆಫ್‌ ಬ್ಯುಸಿನೆಸ್‌ ಲಾ, ಡಾಕ್ಟರ್‌ ಆಫ್‌ ಫಿಲಾಸಫಿ(ಪಿಎಚಿx) ಕೋರ್ಸ್‌ ಮಾಡಬಹುದು.

ಟಾಪ್ ನ್ಯೂಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.