ವಿದ್ಯಾರ್ಥಿ ಜೀವನದಲ್ಲಿ ನೋಡಬೇಕಾದ ಸಿನೆಮಾ


Team Udayavani, Aug 7, 2019, 5:07 AM IST

S-22

ಸಿನೆಮಾ ಕೇವಲ ಮನೋರಂಜನೆಗೆ ಸೀಮಿತವಾಗಿಲ್ಲ. ಅದರಲ್ಲೂ ಕಲಿಕೆ ಬೇಕಾದ ಸಾಕಷ್ಟು ವಿಷಯಗಳು ಅಡಕವಾಗಿರುತ್ತವೆ. ಚಿಕ್ಕ ವಯಸ್ಸಿನಲ್ಲೇ ಉತ್ತಮ ಸಿನೆಮಾಗಳನ್ನು ನೋಡುವ ಹವ್ಯಾಸಗಳನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಸಿನೆಮಾಕ್ಕೆ ಭಾಷೆಯ ಬೇಲಿಯಿಲ್ಲ. ಎಲ್ಲ ಭಾಷೆಗಳಲ್ಲೂ ಅತ್ಯುತ್ತಮ ಸಿನೆಮಾಗಳು ನಿರ್ಮಾಣಗೊಳ್ಳುತ್ತವೆ. ಅವುಗಳನ್ನು ನೋಡಿ ಆನಂದಿಸುವುದರೊಂದಿಗೆ ಅವುಗಳಲ್ಲಿರುವ ಮಾಹಿತಿ ಗಳನ್ನು ಅರಿತುಕೊಳ್ಳಬೇಕು. ವಿದ್ಯಾರ್ಥಿ ಜೀವನದಲ್ಲಿ ನೋಡಬೇಕಾದ ಸಿನೆಮಾಗಳ ಮಾಹಿತಿ ಇಲ್ಲಿದೆ.

ಲೈಫ್ ಆಫ್ ಪೈ: ಇದು ಇಂಗ್ಲಿಷ್‌ ಸಿನೆಮಾ. 2012ರಲ್ಲಿ ಬಿಡುಗಡೆಗೊಂಡು ಸುದ್ದಿ ಮಾಡಿದ ಸಿನೆಮಾ ಯಾನ್‌ ಮಾರ್ಟೆಲ್‌ ಕೃತಿಯ ಮೂಲವಾಗಿದ್ದು. ಸೂರಜ್‌ ಶರ್ಮಾ ಇದರ ಪ್ರಮುಖ ಪಾತ್ರಧಾರಿ. ಆ್ಯಂಡ್ಲಿ ನಿರ್ದೇಶಕ. ಈ ಸಿನೆಮಾ ಗಮನ ಸೆಳೆದದ್ದು ಬಾಲಕ ಮತ್ತು ಹುಲಿ ಬೋಟ್‌ನಲ್ಲಿ ಸಾಗುವ ದೃಶ್ಯ. ಕ್ರೂರತೆ ಮತ್ತು ಮುಗ್ಧತೆ ಎಂಬ ಎರಡು ವಿಷಯಗಳನ್ನು ತೆಗೆದುಕೊಂಡು ಮಾನವೀಯ ಸಂಬಂಧಗಳನ್ನು ಮನಮುಟ್ಟುವಂತೆ ತೋರಿಸಿದ ಸಿನೆಮಾ.

ಅಬಿ: ಮಲೆಯಾಳಂ ಭಾಷೆಯ ನಿರ್ದೇಶಿಸಿದ್ದು ಶ್ರೀಕಾಂತ್‌ ಮುರಳಿ. ವಿಮಾನವನ್ನು ಕಂಡುಹಿಡಿಯಬೇಕೆನ್ನುವ ಕನಸಿನ ಹಿಂದೆ ಓಡುವವವನ್ನು ಕೇಂದ್ರವಾಗಿಟ್ಟುಕೊಂಡು ಮಾಡಿದ ಸಿನೆಮಾ. ಓದಲು ಇಷ್ಟವಿಲ್ಲದ ಆತ ವಿಮಾನವನ್ನು ಕಂಡು ಹಿಡಿಯುವುದನ್ನು ಮನೋಜ್ಞವಾಗಿ ಇಲ್ಲಿ ಚಿತ್ರಿಸಿದ್ದಾರೆ.

ತಾರೇ ಝಮೀನ್‌ ಪರ್‌: ಇದು 2007 ರಲ್ಲಿ ಬಿಡುಗಡೆಗೊಂಡ ಹಿಂದಿ ಸಿನೆಮಾ. ಆರೋಗ್ಯ ಸಮಸ್ಯೆಯನ್ನು ಹೊಂದಿದ್ದ ಹುಡುಗನ ಜೀವನವನ್ನು ಹೇಗೆ ಶಿಕ್ಷಕ ಸರಿಪಡಿಸುತ್ತಾನೆ ಎಂಬುದು ಇದರ ಮೂಲ ವಿಷಯ.

ಪರಮಾಣು
2018ರಲ್ಲಿ ಬಿಡುಗಡೆಯಾದ ಹಿಂದಿ ಸಿನೆಮಾ ಪರಮಾಣು. ಅಭಿಷೇಕ್‌ ಶರ್ಮಾ ನಿರ್ದೇಶನದ, ಜಾನ್‌ ಅಬ್ರಾಹಂ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಸಿನೆಮಾ. ಭಾರತ ಅಣ್ವಸ್ತ್ರವನ್ನು ಕಂಡು ಹಿಡಿದ ಬಗೆ ಮತ್ತು ಅದನ್ನು ಪ್ರಯೋಗಕ್ಕೊಳಪಡಿಸಿದ ನೈಜ ವಸ್ತು ಚಿತ್ರವನ್ನು ಅದರ ಹಿಂದಿನ ಕಥೆಗಳನ್ನು ಸೇರಿಸಿ ಈ ಸಿನೆಮಾ ತಯಾರಿಸಲಾಗಿದೆ. ಅನೇಕ ಕುತೂಹಲಕಾರಿ ವಿಷಯಗಳನ್ನು ಒಳಗೊಂಡಿರುವ ಈ ಚಿತ್ರ ನೋಡುಗರಿಗೆ ಭಾರತದ ಬಗ್ಗೆ ಅಭಿಮಾನ ಮೂಡಿಸುತ್ತದೆ. ಆ ಸಮಯದಲ್ಲಿನ ರಾಜಕಾರಣಿಗಳು, ಶತ್ರು ರಾಷ್ಟ್ರಗಳು, ವಿಜ್ಞಾನಿಗಳು ಮೊದಲಾದ ಹಲವು ವಿಷಯ ಸಂಗ್ರಹದೊಡನೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಉತ್ತಮ ಸಿನೆಮಾ.

ರೈಲ್ವೇ ಚಿಲ್ಡ್ರನ್‌
ರೈಲ್ವೇ ಚಿಲ್ಡ್ರನ್‌ 2016ರಲ್ಲಿ ಬಿಡುಗಡೆಯಾದ ಕನ್ನಡ ಸಿನೆಮಾ. ಈ ಸಿನೆಮಾವನ್ನು ಪೃಥ್ವಿ ಕೊನನೂರು ನಿರ್ದೇಶಿಸಿದ್ದಾರೆ. ಸ್ಲಮ್‌ ಹುಡುಗರ ಬದುಕಿನ ಸಿನೆಮಾ ಇದಾಗಿದೆ. ಈ ಹುಡುಗರು ದಾರಿ ತಪ್ಪುವ ರೀತಿಯನ್ನು ಅಷ್ಟೇ ನೈಜತೆಯಿಂದ ನಿರ್ದೇಶಕರು ಕಟ್ಟಿಕೊಟ್ಟಿದ್ದಾರೆ. ಈ ರೀತಿ ದಿಕ್ಕಿಲ್ಲದ ಹುಡುಗರನ್ನು ಯಾವ ರೀತಿ ಸಮಾಜ ಉಪಯೋಗಿಸುತ್ತದೆ ಎನ್ನುವುದನ್ನು ಇಲ್ಲಿ ತೋರಿಸಲಾಗಿದೆ. ಈ ಸಿನೆಮಾ ಕೊನೆಗೆ ತೃತೀಯ ಲಿಂಗಿಗಳ ಸಮಸ್ಯೆಗಳನ್ನು ಉತ್ತಮ ರೀತಿಯಲ್ಲಿ ಚಿತ್ರಿಸಿದ್ದಾರೆ. ಆದರೆ ವಾಣಿಜ್ಯ ಸಿನೆಮಾಗಳಂತೆ ಇದು ಥಿಯೇಟರ್‌ನಲ್ಲಿ ಪ್ರದರ್ಶನಗೊಂಡೇ ಇಲ್ಲ.

  ವಿಶ್ವಾಸ್‌ ಅಡ್ಯಾರ್‌

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.