ಪ್ಯಾರಾಮೆಡಿಕಲ್‌ ಹಲವು ಅವಕಾಶ


Team Udayavani, Nov 27, 2019, 5:21 AM IST

as-27

ಶೈಕ್ಷಣಿಕ ಮತ್ತು ವೃತ್ತಿಪರವಾಗಿ ಇಂದು ಪ್ಯಾರಾಮೆಡಿಕಲ್‌ ಕೋರ್ಸ್‌ ಹೆಚ್ಚು ಮಹತ್ವ ಪಡೆದುಕೊಳ್ಳುತ್ತಿದೆ. ಮೂರು ವರ್ಷದ ಕೋರ್ಸ್‌ ಇದಾಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಹೆಚ್ಚು ಉದ್ಯೋಗಗಳಿಗೆ ಅವಕಾಶಗಳಿರುವುದರಿಂದ ಪ್ಯಾರಾಮೆಡಿಕಲ್‌ ಕೋರ್ಸ್‌ಗೆ ಹೆಚ್ಚು ಒತ್ತು ಸಿಕ್ಕಿರುವುದು ಸತ್ಯ. ಹೀಗಾಗಿ ಕೋರ್ಸ್‌ನ ವಿಶೇಷತೆ, ಅವಕಾಶ ಗಳು ಮತ್ತು ಮಾಹಿತಿ ಯನ್ನು ಇಲ್ಲಿ ತಿಳಿಯ ಬಹುದಾಗಿದೆ.

ವೈದ್ಯಕೀಯ ಕ್ಷೇತ್ರ ದಿನದಿಂದ ದಿನಕ್ಕೆ ಬೆಳವಣಿಗೆಯಾಗುತ್ತಿದ್ದು, ಉದ್ಯೋಗ ಸೃಷ್ಟಿಸುವ ಪ್ರಮುಖ ಕ್ಷೇತ್ರವಾಗಿ ಮಾರ್ಪಾಡಾಗುತ್ತಿದೆ. ಅದರಲ್ಲಿಯೂ ವೈದ್ಯಕೀಯ ಕ್ಷೇತ್ರಕ್ಕೆ ತಂತ್ರಜ್ಞರ ಹಾಗೂ ರೋಗಪತ್ತೆ ತಜ್ಞರ ಆವಶ್ಯಕತೆ ಹೆಚ್ಚಿದ್ದು, ಪ್ರಯೋಗಾಲಯ ತಂತ್ರಜ್ಞರು, ವೈದ್ಯ ಸಹಾಯಕರು, ಶುಶ್ರೂಷಕರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.

ಎಸೆಸೆಲ್ಸಿ ಮತ್ತು ಪಿಯುಸಿ ಕಲಿತ ಬಳಿಕ ಮುಂದೇನು? ಎಂಬ ಯೋಚನೆ ವಿದ್ಯಾರ್ಥಿಗಳನ್ನು ಮತ್ತು ಹೆತ್ತವರನ್ನು ಕಾಡದೇ ಇರದು. ಇತ್ತೀಚಿನ ದಿನಗಳಲ್ಲಿ ಪ್ಯಾರಾ ಮೆಡಿಕಲ್‌ ಕೋರ್ಸ್‌ (ವೈದ್ಯಕೀಯ ಪೂರಕ)ಗೆ ಹೆಚ್ಚಿನ ಬೇಡಿಕೆ ಇದ್ದು, ವಿದ್ಯಾರ್ಥಿಗಳು ಈ ಕೋರ್ಸ್‌ ಆಯ್ಕೆ ಮಾಡುತ್ತಿದ್ದಾರೆ. ಇದನ್ನು ಕಲಿತ ಮಂದಿ ಮೆಡಿಕಲ್‌ ಲ್ಯಾಬ್‌ ಟೆಕ್ನೀಶಿಯನ್‌, ಮೆಡಿಕಲ್‌ ರೆಕಾರ್ಡ್ಸ್‌

ಟೆಕ್ನಾಲಜಿ, ಎಕ್ಸ್‌ರೇ ಟೆಕ್ನಾಲಜಿ, ಡೆಂಟಲ್‌ ಮೆಕ್ಯಾನಿಕ್‌, ಹೆಲ್ತ್‌ ಇನ್‌ಸ್ಪೆಕ್ಟರ್‌ ಸಹಿತ ವಿವಿಧ ವೃತ್ತಿಯಲ್ಲಿ ಗುರುತಿಸಿಕೊಳ್ಳಬಹುದಾಗಿದೆ.

ಪ್ಯಾರಾಮೆಡಿಕಲ್‌ ಡಿಪ್ಲೊಮಾ ಕೋರ್ಸ್‌ಗಳಲ್ಲಿ ವಿವಿಧ ವಿಭಾಗಗಳಿವೆ. ಅದರಲ್ಲೂ ಒಂದು ವರ್ಷದ ಎಎನ್‌ಎಂ ಸರ್ಟಿಫಿಕೇಟ್‌ ಕೋರ್ಸ್‌, ಆರೋಗ್ಯ ನಿರೀಕ್ಷಕರ ಕೋರ್ಸ್‌, ನರ್ಸಿಂಗ್‌ ಜನರಲ್‌, ನರ್ಸಿಂಗ್‌ ಡಿಪ್ಲೊಮಾ ಮುಂತಾದ ಅವಕಾಶಗಳಿವೆ. ಇನ್ನು, ಆರೋಗ್ಯ ಕ್ಷೇತ್ರದಲ್ಲಿ ತಪಾಸಣೆ, ರೋಗ ವಿಧಾನ, ಕೌನ್ಸೆಲಿಂಗ್‌, ಫಾರ್ಮಸಿ, ರೇಡಿಯೋಲಜಿ ಕ್ಷೇತ್ರಗಳಲ್ಲಿಯೂ ಸರ್ಟಿಫಿಕೇಟ್‌ ಡಿಪ್ಲೊಮಾ ಕೋರ್ಸ್‌ಗಳಿವೆ. ಪ್ಯಾರಾ ಮೆಡಿಕಲ್‌ ಕೋರ್ಸ್‌ನ ಸೂಚನೆಗಳು, ಅರ್ಜಿ ಆಹ್ವಾನ ಸೇರಿದಂತೆ ಹೆಚ್ಚಿನ ಮಾಹಿತಿಗೆ ಕರ್ನಾಟಕ ಸರಕಾರ ಪ್ಯಾರಾ ಮೆಡಿಕಲ್‌ ಬೋರ್ಡ್‌ ನ್‌ www.pmbkarnataka.org ಅಂತರ್ಜಾಲ ತಾಣದಿಂದಲೂ ಮಾಹಿತಿ ಪಡೆಯಬಹುದು.

ಈ ಕೋರ್ಸ್‌ಗೆ ಸೇರಲು ಕನಿಷ್ಠ ಹತ್ತನೇ ತರಗತಿ ಉತ್ತೀರ್ಣರಾಗಬೇಕು. ಇದಾದ ಅನಂತರ ಮೂರು ವರ್ಷಗಳ ತರಬೇತಿಯ ನಂತರ ನಿರ್ದಿಷ್ಟ ಕ್ಷೇತ್ರಗಳಲ್ಲಿ ಗುರುತಿಸಿಕೊಳ್ಳಬಹುದಾಗಿದೆ. ರಾಜ್ಯದ 150ಕ್ಕೂ ಹೆಚ್ಚಿನ ಸರಕಾರಿ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ಯಾರಾ ಮೆಡಿಕಲ್‌ ಕೋರ್ಸ್‌ ಕಲಿಯಲು ಅವಕಾಶವಿದೆ. ಕರ್ನಾಟಕ ರಾಜ್ಯ ಪ್ಯಾರಾ ಮೆಡಿಕಲ್‌ ಬೋರ್ಡ್‌ ಇದನ್ನು ನಿಯಂತ್ರಣ ಮಾಡುತ್ತದೆ.

ಹತ್ತನೇ ತರಗತಿ ಕಲಿತರೆ ಅನಂತರ ಮೂರು ವರ್ಷದ ಡಿಪ್ಲೊಮಾ ಕೋರ್ಸ್‌ ಮಾಡಬಹುದು. ಒಂದು ವೇಳೆ ಪಿಯುಸಿ ವಿದ್ಯಾಭ್ಯಾಸದ ಬಳಿಕ ಸೇರಿದರೆ ಎರಡು ವರ್ಷದ ಡಿಪ್ಲೊಮಾ ಕೋರ್ಸ್‌ಗೆ ಸೇರಬಹುದಾಗಿದೆ. ಎಸೆಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಯಾವ ರೀತಿ ಅಂಕ ಗಳಿಸುತ್ತೇವೆ ಎನ್ನುವುದರ ಮೇಲೆ ಸೀಟು ಸಿಗುತ್ತದೆ. ಸಾಮಾನ್ಯವಾಗಿ ಜುಲೈ ಮತ್ತು ಆಗಸ್ಟ್‌ ತಿಂಗಳಿನಿಂದ ಪ್ಯಾರಾ ಮೆಡಿಕಲ್‌ ಕೋರ್ಸ್‌ಗೆ ಅರ್ಜಿ ಆಹ್ವಾನಿಸಲಾಗುತ್ತದೆ. ಕೌನ್ಸೆಲಿಂಗ್‌ ಮುಖೇನ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.

ವೆನ್ ಲಾಕ್ ಆಸ್ಪತ್ರೆಯಲ್ಲಿ ಏಳು ಕೋರ್ಸ್‌
ವೆನ್ ಲಾಕ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ| ರಾಜೇಶ್ವರಿ ದೇವಿ ಅವರು ಪ್ರತಿಕ್ರಿಯಿಸಿ “ಎಸೆಸೆಲ್ಸಿ ಉತ್ತೀರ್ಣರಾದವರಿಗೆ 3 ವರ್ಷಗಳ ಸರ್ಟಿಫಿಕೇಟ್‌ ಕೋರ್ಸ್‌ಗಳು ಹಾಗೂ ಪಿಯುಸಿ ಉತ್ತೀರ್ಣರಾದವರಿಗೆ ಡಿಪ್ಲೊಮಾ ಕೋರ್ಸ್‌ ಗಳು ವೆನ್ ಲಾಕ್  ಆಸ್ಪತ್ರೆಯಲ್ಲಿವೆ. ರೇಡಿಯಾಲಜಿ ಟೆಕ್ನಿಶಿಯನ್‌ ಮೆಡಿಕಲ್‌ಲ್ಯಾಬ್‌ ಟೆಕ್ನೀಶಿಯನ್‌, ಡಯಾಲಿಸಿಸ್‌ ಟ್ರೀಟ್‌ಮೆಂಟ್‌, ಮೆಡಿಕಲ್‌ ರೆಕಾರ್ಡ್‌ ನಿರ್ವಹಣೆ, ಆರೋಗ್ಯ ನಿರೀಕ್ಷಕರು, ಆಪರೇಶನ್‌ ಥಿಯೇಟರ್‌ ಟೆಕ್ನೀಶಿಯನ್‌ ಸಹಿತ 7 ಕೋರ್ಸ್‌ಗಳನ್ನು ಒಳಗೊಂಡಿದೆ ಎಂದಿದ್ದಾರೆ.

ಎಲ್ಲಿಲ್ಲಿ ಅವಕಾಶ
ಈ ಕೋರ್ಸ್‌ ಕಲಿತ ಮಂದಿ ಕ್ಲಿನಿಕ್‌ಗಳಲ್ಲಿ, ಆಸ್ಪತ್ರೆಗಳಲ್ಲಿ, ಖಾಸಗಿ ಆಸ್ಪತ್ರೆಗಳಲ್ಲಿ ಅಪಘಾತ ಚಿಕಿತ್ಸೆ ಕೇಂದ್ರಗಳಲ್ಲಿ ತುರ್ತುನಿಗಾ ಘಟಕಗಳಲ್ಲಿ, ರೋಗ ಪತ್ತೆ ಮಾಡುವಂತಹ ಪ್ರಯೋಗಾಲಯಗಳಲ್ಲಿ, ಸ್ಕ್ಯಾನಿಂಗ್‌ ಸೆಂಟರ್‌ಗಳಲ್ಲಿ, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ, ನರ್ಸಿಂಗ್‌ ಹೋಂಗಳಲ್ಲಿ, ಡಯಾಲಿಸಿಸ್‌ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು ಅವಕಾಶವಿದೆ.

- ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.