ಸೃಜನಾತ್ಮಕ ಕಲೆ ಕಲಿಕೆಗೂ ಇದೆ ವೇದಿಕೆ 


Team Udayavani, Sep 19, 2018, 12:58 PM IST

19-sepctember-11.jpg

ಶಾಲೆ, ಕಾಲೇಜುಗಳಲ್ಲಿ ಪಠ್ಯದ ಜತೆಗೆ ಇತರ ಹವ್ಯಾಸವನ್ನು ಬೆಳೆಸಿಕೊಳ್ಳಲಿ ಎನ್ನುವ ಉದ್ದೇಶದಿಂದ ಪಠ್ಯತರ ಚಟುವಟಿಕೆಗಳಿಗೆ ಒತ್ತು ನೀಡುವುದು ಸಾಮಾನ್ಯ. ಇದರಿಂದ ವಿದ್ಯಾರ್ಥಿಗಳು ತಮಗೆ ಇಷ್ಟ ಬಂದಂತಹ ವಿಷಯಗಳಲ್ಲಿ ತರಬೇತಿಗಳನ್ನು ಪಡೆದು ಹವ್ಯಾಸವನ್ನು ಬೆಳೆಸಿಕೊಳ್ಳಲು ಅವಕಾಶ ಸಿಕ್ಕಂತಾಗುತ್ತದೆ.

ಮುಖ್ಯವಾಗಿ ಚಿತ್ರಕಲೆ, ಮಣ್ಣಿನ ಕಲಾಕೃತಿ ರಚನೆ, ಕರಕುಶಲ ವಸ್ತುಗಳ ತಯಾರಿ, ರಂಗೋಲಿ, ಹೊಲಿಗೆ, ಕಸದಿಂದ ರಸ ಮಾಡುವಂತಹ ಹವ್ಯಾಸ ಬೆಳೆಸಿಕೊಂಡರೆ ಮುಂದೆ ಇದರಿಂದಲೂ ಒಳ್ಳೆಯ ಭವಿಷ್ಯವನ್ನು ರೂಪಿಸಿಕೊಳ್ಳಲು ನೂರಾರು ಅವಕಾಶಗಳು ಸಿಗುತ್ತವೆ.

ಪಠ್ಯದ ಜತೆಗಿನ ಕಲಿಕೆ
ಇಂತಹ ವಿದ್ಯೆಗೆ ಪ್ರತ್ಯೇಕ ತರಬೇತಿ ಅಗತ್ಯ ಇರುವುದಿಲ್ಲ. ಶ್ರದ್ಧೆ, ಆಸಕ್ತಿ ಹಾಗೂ ಸೃಜನಶೀಲತೆ ಇದ್ದರೆ ಸಾಕು ಯಾರೂ ಬೇಕಾದರೂ ಈ ಕಲೆಯನ್ನು ತಮ್ಮ ಹವ್ಯಾಸವಾಗಿ, ವೃತ್ತಿಯಾಗಿ, ಪ್ರವೃತ್ತಿಯಾಗಿ ಬೆಳೆಸಿಕೊಳ್ಳಬಹುದು.

ಕಾಲೇಜು ತರಬೇತಿ
ಕಾಲೇಜುಗಳಲ್ಲಿ ಇಂತಹ ಶಿಕ್ಷಣಗಳು ವಿದ್ಯಾರ್ಥಿಗಳನ್ನು ಹೆಚ್ಚಾಗಿ ಆಕರ್ಷಿಸುತ್ತವೆ. ಈ ಸಂದರ್ಭದಲ್ಲಿ ಕಲಿಕೆಗೆ ಅವಕಾಶಗಳು ಹೆಚ್ಚಿರುವುದರಿಂದ ಸಮಯ ಸಿಕ್ಕಾಗ ಡ್ರಾಯಿಂಗ್‌ ತರಬೇತಿಗಳು, ಮಣ್ಣಿನ ಕಲಾಕೃತಿ ರಚನೆ, ಕರಕುಶಲ ವಸ್ತುಗಳ ತಯಾರಿ, ರಂಗೋಲಿ ಹಾಕುವುದು, ಹೊಲಿಗೆ, ಅಥವಾ ಕೆಲವು ತ್ಯಾಜ್ಯ ವಸ್ತುಗಳಿಂದ ಮನೆ ಅಲಂಕಾರಿಕ ವಸ್ತುಗಳನ್ನು ತಯಾರಿಸುವಂತಹ ಹಲವು ತರಬೇತಿಗಳು ತೊಡಗಿಕೊಳ್ಳಬಹುದು. ಈ ಹವ್ಯಾಸಗಳ ಕಲಿ ಕೆಗೆ ವಯಸ್ಸಿನ ಮಿತಿ ಇಲ್ಲ. ಹೀಗಾಗಿ ಉದ್ಯೋಗಕ್ಕೆ ಸೇರಿದ ಮೇಲೂ ಇವುಗಳನ್ನು ಕಲಿಯುವ ಅವಕಾಶ ಸಾಕಷ್ಟಿರುತ್ತವೆ.

ಒಂದು ವೇಳೆ ವಿದ್ಯೆ ತಲೆಹತ್ತದಿದ್ದರೂ, ಈ ಹವ್ಯಾಸವೇ ಭವಿಷ್ಯಕ್ಕೆ ದಾರಿ ತೋರಿಸುತ್ತದೆ. ಇಂತಹ ತರಬೇತಿಗಳಿಗೆ ಸ್ಫೂರ್ತಿಯಾಗುವುದು ಕಾಲೇಜು, ಅಂತರ್‌ಕಾಲೇಜು ಸ್ಪರ್ಧೆಗಳು ಜತೆಗೆ ಪಠ್ಯೇತರ ಚಟುವಟಿಕೆಗಳು. ಕಾಲೇಜುಗಳಲ್ಲಿ ಸ್ಪರ್ಧೆಗಳಿಗೆ ತರಬೇತಿ ಹಾಗೂ ತಯಾರಿಯನ್ನು ನಡೆಸುವುದರಿಂದ ಬಹುಮಾನ ಗಳಿಸುವ ತವಕದಲ್ಲಿ ಅವುಗಳು ಉತ್ತಮ ಪ್ರತಿಭೆಗಳನ್ನು ಬೆಳಕಿಗೆ ತರುತ್ತವೆ. ಕೆಲವೊಂದು ಖಾಸಗಿ ಸಂಸ್ಥೆಗಳು, ಸರಕಾರದ ಮೂಲಕ ನಡೆಸಲ್ಪಡುವ ಕೈಗಾರಿಕೆಗಳು, ಎನ್‌ಜಿಒಗಳು ಉಚಿತವಾಗಿ ಇಂಥ ತರಬೇತಿಗಳನ್ನು ನೀಡುತ್ತವೆ. ಈ ಮೂಲಕ ಮಾತ್ರವಲ್ಲದೇ ಅಂತರ್ಜಾಲದ ಮೂಲಕವೂ ಸುಲಭವಾಗಿ ಇವುಗಳನ್ನು ಕಲಿಯಬಹುದು. 

ಭರತ್‌ ರಾಜ್‌ ಕರ್ತಡ್ಕ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.