ಪಠ್ಯೇತರ ಚಟುವಟಿಕೆಗಳಿಂದ ಕೌಶಲ ವೃದ್ಧಿ


Team Udayavani, Aug 21, 2019, 5:00 AM IST

12

ಅಂಕಗಳ ಆಧಾರದಲ್ಲಿ ವಿದ್ಯಾರ್ಥಿಗಳ ಸಾಮರ್ಥ್ಯ, ಶಿಕ್ಷಣವನ್ನು ಅಳೆಯುವ ಕಾಲ ಹೋಗಿದೆ. ಆಧುನಿಕ ಕಾಲದಲ್ಲಿ ವಿದ್ಯಾರ್ಥಿಗಳ ಶಿಕ್ಷಣ ಮಟ್ಟವನ್ನು ನಿರ್ಧರಿಸುವುದು ಕೌಶಲ, ಸಾಮಾನ್ಯ ಜ್ಞಾನಗಳ ಮೇಲೆ. ವಿದ್ಯಾರ್ಥಿಗಳು ಪಾಠದ ಜತೆ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದು ಪ್ರಸ್ತುತ ದಿನಗಳ ಅಗತ್ಯ.

ಎಸೆಸೆಲ್ಸಿ, ಪಿಯುಸಿಗಳಲ್ಲಿ ಡಿಸ್ಟಿಂಕ್ಷನ್‌ ಪಡೆಯುವುದಷ್ಟೇ ಮುಖ್ಯ ಎನ್ನುವುದನ್ನು ಮಕ್ಕಳೂ, ಹೆತ್ತವರೂ ಯೋಚಿಸುತ್ತಾರೆ. ಆದರೆ ಈಗ ವಾಸ್ತವತೆ ಬದಲಾಗಿದೆ. ಅಂಕಗಳ ಜತೆಗೆ ಬೇಕಾದ ಕೌಶಲಗಳನ್ನೂ ಮೈಗೂಡಿಸಿಕೊಳ್ಳಬೇಕು. ಹಾಗಾದರೆ ಮಾತ್ರ ಪಡೆದ ಶಿಕ್ಷಣ ಪರಿಪೂರ್ಣಗೊಳ್ಳುತ್ತದೆ. ಅಷ್ಟೇ ಅಲ್ಲದೆ ಸುಲಭವಾಗಿ ಉದ್ಯೋಗ ರಂಗವನ್ನು ಪ್ರವೇಶಿಸಲು ಸಾಧ್ಯ. ಸ್ಪರ್ಧಾತ್ಮಕ ಯಗದಲ್ಲಿ ಸ್ಫರ್ಧಿಸಲು ಸಾಧ್ಯ.

ಪಠ್ಯೇತರ ಚಟುವಟಿಕೆಗಳು
ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳುವುದು ಎಂದರೆ ಪಾಠ ಪುಸ್ತಕಗಳನ್ನು ನಿರ್ಲಕ್ಷಿಸಿ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದಲ್ಲ. ಬದಲಿಗೆ ಪುಸ್ತಕ, ತರಗತಿಗಳ ಜತೆ ಜತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ಶಾಲೆಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು. ಕಾಲೇಜುಗಳಲ್ಲಿರುವ ಎನ್ನೆಸ್ಸೆಸ್‌, ಎನ್‌ಸಿಸಿ, ಸಾಂಸ್ಕೃತಿಕ ಸಂಘಗಳಲ್ಲಿ ಪಾಲ್ಗೊಳ್ಳುವುದು.

ವಿದ್ಯಾರ್ಥಿ ಜೀವನದಲ್ಲಿ ಆಸಕ್ತ ವಿಷಯಗಳ ಕಲಿಕೆಯತ್ತಲೂ ಗಮನ ನೀಡುವುದು. ಸಂಗೀತ, ನೃತ್ಯ, ಕ್ರೀಡೆಗಳಲ್ಲಿ ಆಸಕ್ತಿಯಿದ್ದರೆ ಅವುಗಳ ಕಲಿಕೆಗೂ ಸ್ವಲ್ಪ ಸಮಯ ಮೀಸಲಿಡಿಸಿ. ಒಂದಷ್ಟು ಒಳ್ಳೆಯ ಹವ್ಯಾಸಗಳ ರೂಢಿ ಮಾಡಿಕೊಳ್ಳುವುದರಿಂದ ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧಿಸಲು ಸಹಾಯಕಾರಿ.

ಪಠ್ಯೇತರ ಚಟುವಟಿಕೆಗಳ ಮಹತ್ವ
ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿವುದರಿಂದ ವಿದ್ಯಾರ್ಥಿಗಳಿಗೆ ಪಾಠದ ಜತೆ ಜತೆಗೆ ಇತರ ಸಾಮಾನ್ಯ ಜ್ಞಾನಗಳ ಅರಿವೂ ಮೂಡಲಾರಂಭಿಸುತ್ತದೆ. ಸಾಮಾನ್ಯ ಜ್ಞಾನ, ವಾಕ್‌ಚಾತುರ್ಯ ಹೆಚ್ಚಾಗುತ್ತದೆ.

1 ಸಾಮಾನ್ಯ ಜ್ಞಾನ ವೃದ್ಧಿವಿದ್ಯಾರ್ಥಿಗಳಿಗೆ ಸಾಮಾನ್ಯ ಜ್ಞಾನ ಹೆಚ್ಚಾಗಬೇಕಾದರೆ ಪಾಠದ ಜತೆಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗಿಯಾಗಬೇಕು. ಕಾಲೇಜುಗಳಲ್ಲಿ ನಡೆಯುವ ಕಾರ್ಯಕ್ರಮಗಳ ಆಯೋಜನೆ, ಭಾಗಿಯಾಗುವುದರಿಂದ ಸಾಮಾನ್ಯ ಜ್ಞಾನ ವೃದ್ಧಿ ಸಾಧ್ಯ.

2 ಕೌಶಲಗಳು ಮೈಗೂಡಿಸಿಕೊಳ್ಳಲು
ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸುಲಭವಾಗಿ ಸ್ಪರ್ಧಿಸಲು ಕೌಶಲಗಳು ಮುಖ್ಯ. ಕೌಶಲಗಳು ಬೆಳೆಯಬೇಕಾದರೆ ವಿದ್ಯಾರ್ಥಿ ಜೀವನದಲ್ಲಿಯೇ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗಿಗಳಾಗಬೇಕು. ಇದರಿಂದ ಕೌಶಲಗಳು ವೃದ್ಧಿಯಾಗುತ್ತವೆ.

3 ನಾಯಕತ್ವದ ಗುಣ
ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚು ಭಾಗವಹಿಸಿದರೆ ನಾಯಕತ್ವದ ಗುಣ ಬೆಳೆಯುತ್ತದೆ. ಕಾಲೇಜು, ಶಾಲೆಗಳಲ್ಲಿರುವ ಸಂಘಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ನಾಯಕತ್ವದ ಗುಣ ಬೆಳೆಯುತ್ತದೆ.

4 ವಾಕ್‌ಚಾತುರ್ಯ
ಭಾಷಣ, ಕಾರ್ಯಕ್ರಮ ನಿರೂಪಣೆ, ಆಶುಭಾಷಣ ಮೊದಲಾದ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚು ಭಾಗವಹಿಸುವುದರಿಂದ ವಾಕ್‌ಚಾತುರ್ಯ ವೃದ್ದಿಯಾಗುತ್ತದೆ. ಮಾತೇ ಎಲ್ಲ ಆಗಿರುವಾಗ ಸಭೆಯ ಮುಂದೆ ನಿಂತು ಮಾತನಾಡುವ ಧೈರ್ಯ ಬರುತ್ತದೆ.

ರಂಜಿನಿ ಮಿತ್ತಡ್ಕ

ಟಾಪ್ ನ್ಯೂಸ್

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.