ಪಠ್ಯೇತರ ಚಟುವಟಿಕೆಗಳಿಂದ ಕೌಶಲ ವೃದ್ಧಿ


Team Udayavani, Aug 21, 2019, 5:00 AM IST

12

ಅಂಕಗಳ ಆಧಾರದಲ್ಲಿ ವಿದ್ಯಾರ್ಥಿಗಳ ಸಾಮರ್ಥ್ಯ, ಶಿಕ್ಷಣವನ್ನು ಅಳೆಯುವ ಕಾಲ ಹೋಗಿದೆ. ಆಧುನಿಕ ಕಾಲದಲ್ಲಿ ವಿದ್ಯಾರ್ಥಿಗಳ ಶಿಕ್ಷಣ ಮಟ್ಟವನ್ನು ನಿರ್ಧರಿಸುವುದು ಕೌಶಲ, ಸಾಮಾನ್ಯ ಜ್ಞಾನಗಳ ಮೇಲೆ. ವಿದ್ಯಾರ್ಥಿಗಳು ಪಾಠದ ಜತೆ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದು ಪ್ರಸ್ತುತ ದಿನಗಳ ಅಗತ್ಯ.

ಎಸೆಸೆಲ್ಸಿ, ಪಿಯುಸಿಗಳಲ್ಲಿ ಡಿಸ್ಟಿಂಕ್ಷನ್‌ ಪಡೆಯುವುದಷ್ಟೇ ಮುಖ್ಯ ಎನ್ನುವುದನ್ನು ಮಕ್ಕಳೂ, ಹೆತ್ತವರೂ ಯೋಚಿಸುತ್ತಾರೆ. ಆದರೆ ಈಗ ವಾಸ್ತವತೆ ಬದಲಾಗಿದೆ. ಅಂಕಗಳ ಜತೆಗೆ ಬೇಕಾದ ಕೌಶಲಗಳನ್ನೂ ಮೈಗೂಡಿಸಿಕೊಳ್ಳಬೇಕು. ಹಾಗಾದರೆ ಮಾತ್ರ ಪಡೆದ ಶಿಕ್ಷಣ ಪರಿಪೂರ್ಣಗೊಳ್ಳುತ್ತದೆ. ಅಷ್ಟೇ ಅಲ್ಲದೆ ಸುಲಭವಾಗಿ ಉದ್ಯೋಗ ರಂಗವನ್ನು ಪ್ರವೇಶಿಸಲು ಸಾಧ್ಯ. ಸ್ಪರ್ಧಾತ್ಮಕ ಯಗದಲ್ಲಿ ಸ್ಫರ್ಧಿಸಲು ಸಾಧ್ಯ.

ಪಠ್ಯೇತರ ಚಟುವಟಿಕೆಗಳು
ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳುವುದು ಎಂದರೆ ಪಾಠ ಪುಸ್ತಕಗಳನ್ನು ನಿರ್ಲಕ್ಷಿಸಿ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದಲ್ಲ. ಬದಲಿಗೆ ಪುಸ್ತಕ, ತರಗತಿಗಳ ಜತೆ ಜತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ಶಾಲೆಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು. ಕಾಲೇಜುಗಳಲ್ಲಿರುವ ಎನ್ನೆಸ್ಸೆಸ್‌, ಎನ್‌ಸಿಸಿ, ಸಾಂಸ್ಕೃತಿಕ ಸಂಘಗಳಲ್ಲಿ ಪಾಲ್ಗೊಳ್ಳುವುದು.

ವಿದ್ಯಾರ್ಥಿ ಜೀವನದಲ್ಲಿ ಆಸಕ್ತ ವಿಷಯಗಳ ಕಲಿಕೆಯತ್ತಲೂ ಗಮನ ನೀಡುವುದು. ಸಂಗೀತ, ನೃತ್ಯ, ಕ್ರೀಡೆಗಳಲ್ಲಿ ಆಸಕ್ತಿಯಿದ್ದರೆ ಅವುಗಳ ಕಲಿಕೆಗೂ ಸ್ವಲ್ಪ ಸಮಯ ಮೀಸಲಿಡಿಸಿ. ಒಂದಷ್ಟು ಒಳ್ಳೆಯ ಹವ್ಯಾಸಗಳ ರೂಢಿ ಮಾಡಿಕೊಳ್ಳುವುದರಿಂದ ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧಿಸಲು ಸಹಾಯಕಾರಿ.

ಪಠ್ಯೇತರ ಚಟುವಟಿಕೆಗಳ ಮಹತ್ವ
ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿವುದರಿಂದ ವಿದ್ಯಾರ್ಥಿಗಳಿಗೆ ಪಾಠದ ಜತೆ ಜತೆಗೆ ಇತರ ಸಾಮಾನ್ಯ ಜ್ಞಾನಗಳ ಅರಿವೂ ಮೂಡಲಾರಂಭಿಸುತ್ತದೆ. ಸಾಮಾನ್ಯ ಜ್ಞಾನ, ವಾಕ್‌ಚಾತುರ್ಯ ಹೆಚ್ಚಾಗುತ್ತದೆ.

1 ಸಾಮಾನ್ಯ ಜ್ಞಾನ ವೃದ್ಧಿವಿದ್ಯಾರ್ಥಿಗಳಿಗೆ ಸಾಮಾನ್ಯ ಜ್ಞಾನ ಹೆಚ್ಚಾಗಬೇಕಾದರೆ ಪಾಠದ ಜತೆಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗಿಯಾಗಬೇಕು. ಕಾಲೇಜುಗಳಲ್ಲಿ ನಡೆಯುವ ಕಾರ್ಯಕ್ರಮಗಳ ಆಯೋಜನೆ, ಭಾಗಿಯಾಗುವುದರಿಂದ ಸಾಮಾನ್ಯ ಜ್ಞಾನ ವೃದ್ಧಿ ಸಾಧ್ಯ.

2 ಕೌಶಲಗಳು ಮೈಗೂಡಿಸಿಕೊಳ್ಳಲು
ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸುಲಭವಾಗಿ ಸ್ಪರ್ಧಿಸಲು ಕೌಶಲಗಳು ಮುಖ್ಯ. ಕೌಶಲಗಳು ಬೆಳೆಯಬೇಕಾದರೆ ವಿದ್ಯಾರ್ಥಿ ಜೀವನದಲ್ಲಿಯೇ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗಿಗಳಾಗಬೇಕು. ಇದರಿಂದ ಕೌಶಲಗಳು ವೃದ್ಧಿಯಾಗುತ್ತವೆ.

3 ನಾಯಕತ್ವದ ಗುಣ
ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚು ಭಾಗವಹಿಸಿದರೆ ನಾಯಕತ್ವದ ಗುಣ ಬೆಳೆಯುತ್ತದೆ. ಕಾಲೇಜು, ಶಾಲೆಗಳಲ್ಲಿರುವ ಸಂಘಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ನಾಯಕತ್ವದ ಗುಣ ಬೆಳೆಯುತ್ತದೆ.

4 ವಾಕ್‌ಚಾತುರ್ಯ
ಭಾಷಣ, ಕಾರ್ಯಕ್ರಮ ನಿರೂಪಣೆ, ಆಶುಭಾಷಣ ಮೊದಲಾದ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚು ಭಾಗವಹಿಸುವುದರಿಂದ ವಾಕ್‌ಚಾತುರ್ಯ ವೃದ್ದಿಯಾಗುತ್ತದೆ. ಮಾತೇ ಎಲ್ಲ ಆಗಿರುವಾಗ ಸಭೆಯ ಮುಂದೆ ನಿಂತು ಮಾತನಾಡುವ ಧೈರ್ಯ ಬರುತ್ತದೆ.

ರಂಜಿನಿ ಮಿತ್ತಡ್ಕ

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.