ಭಾಷಣ, ಚರ್ಚಾ ಸ್ಪರ್ಧೆ ವಿದ್ಯಾರ್ಥಿ ಜೀವನಕ್ಕೆ ಪೂರಕ


Team Udayavani, Dec 4, 2019, 4:09 AM IST

rt-34

ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ಹಲವು ಮಜಲುಗಳಲ್ಲಿ ಗುರುತಿಸಿಕೊಳ್ಳಲು ಇಷ್ಟಪಡುತ್ತಾರೆ. ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗಿಯಾಗುವುದು ವಿದ್ಯಾರ್ಥಿಗಳ ಮಾನಸಿಕ ಮತ್ತು ದೈಹಿಕ ಅಭಿವೃದ್ಧಿಗೆ ಪೂರಕವಾಗುವುದಂತೂ ಸತ್ಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಭಾಷಣ, ಚರ್ಚೆ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಹಲವು ರೀತಿಯಲ್ಲಿ ಉಪಯೋಗವನ್ನು ಪಡೆದುಕೊಳ್ಳುತ್ತಾರೆ. ಇದರಿಂದ ಬೌದ್ಧಿಕವಾಗಿ ಸಬಲರಾಗುತ್ತಾರೆ ಎಂಬುದನ್ನು ಅರಿಯಬೇಕಿದೆ.

ಹಾಗಾದರೆ ಚರ್ಚೆ, ಸಂವಾದಗಳು ವಿದ್ಯಾರ್ಥಿ ಜೀವನಕ್ಕೆ ಹೇಗೆ ಪೂರಕವಾಗಲಿದೆ ಎಂಬುದನ್ನು ನಾವು ಈಗ ತಿಳಿಯಬಹುದಾಗಿದ್ದು ಕೆಲವೊಂದು ಅಂಶಗಳು ನೋಡಬಹುದು.

ಸಂವಹನ ಕೌಶಲ ವೃದ್ಧಿ
ವಿದ್ಯಾರ್ಥಿ ಜೀವನದಲ್ಲಿ ಭಾಷಣ ಸ್ಪರ್ಧೆ ಮತ್ತು ಚರ್ಚೆ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದಾಗಿ ವಿದ್ಯಾರ್ಥಿಗಳಲ್ಲಿ ಸಂವಹನ ಕೌಶಲ ವೃದ್ಧಿಯಾಗುತ್ತದೆ. ಇದರಿಂದ ಮಾತಿನಲ್ಲಿ, ಉಚ್ಚಾರದಲ್ಲಿ ಸ್ಪಷ್ಟತೆಯನ್ನು ಕಾಣಬಹುದು. ಮುಂದೆ ಉದ್ಯೋಗ ಅರಸಿ ಸಂದರ್ಶನಕ್ಕೆ ಹೋದಾಗ ನಮ್ಮ ಸಂವಹನವೂ ಕೂಡ ಮುಖ್ಯ ಪಾತ್ರ ವಹಿಸಲಿದೆ. ಸಂವಹನ ಕೌಶಲ ವೃದ್ಧಿ ಕೂಡ ಮುಖ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಜೀವನದಲ್ಲಿ ಭಾಷಣ, ಚರ್ಚೆ, ಸಂವಾದಗಳಲ್ಲಿ ಭಾಗವಹಿಸುವುದು ಅಗತ್ಯ.

ಎದುರಿಸುವ ಸಾಮರ್ಥ್ಯ
ಭಾಷಣ, ಚರ್ಚೆ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಎಲ್ಲವನ್ನೂ ಎದುರಿಸುವ ಸಾಮರ್ಥ್ಯವನ್ನು ನಾವು ಕಂಡುಕೊಳ್ಳುತ್ತೇವೆ. ಏಕೆಂದರೆ ಚರ್ಚೆ, ಸಂವಾದಗಳಲ್ಲಿ ನಮ್ಮ ಎದುರಾಳಿ ತಂಡಗಳು ಬೀಸುವ ಪ್ರಶ್ನೆಗಳು, ಹಾಕುವ ಪಾಯಿಂಟ್‌ಗಳಿಂದ ತತ್‌ಕ್ಷಣವೇ ನಮ್ಮಲ್ಲೊಂದು ಹೊಸ ಆಲೋಚನೆ ಹುಟ್ಟಿಕೊಳ್ಳಲು ನೆರವಾಗುತ್ತದೆ. ಎದುರಾಳಿಗಳು ನಮ್ಮನ್ನು ಪ್ರಶ್ನೆಗಳಿಂದ ಕಟ್ಟಿ ಹಾಕುವಾಗ ನಾವು ಸಾಮಾನ್ಯವಾಗಿ ಅಧ್ಯಯನಶೀಲರಾಗಿರುವುದರಿಂದ ಎಲ್ಲವನ್ನೂ ಎದುರಿಸುವ ಸಾಮರ್ಥ್ಯವನ್ನು ನಾವು ಗಳಿಸಿಕೊಳ್ಳುತ್ತೇವೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಚರ್ಚೆ, ಸಂವಾದ ಪೂರಕವಾಗಲಿದೆ.

ವಿಚಾರ ಸ್ಪಷ್ಟತೆ
ಭಾಷಣ, ಚರ್ಚೆ ಮತ್ತು ಸಂವಾದಗಳಲ್ಲಿ ನಾವು ಭಾಗವಹಿಸುವುದರಿಂದ ನಮ್ಮಲ್ಲಿ ಒಂದು ವಿಚಾರದ ಬಗೆಗಿನ ಸ್ಪಷ್ಟತೆಯನ್ನು ಕಂಡುಕೊಳ್ಳಬಹುದು. ಭಾಷಣದ ವಿಷಯಾಧಾರದ ಮೇಲೆ ನಾವು ಪರಿಣಾಮಕಾರಿಯಾಗಿ ಅಧ್ಯಯನ ಮಾಡುತ್ತೇವೆ. ಇದರಿಂದ ಒಂದು ಸಣ್ಣ ವಿಷಯದ ಬಗೆಗಿನ ಸವಿಸ್ತಾರವಾದ ನೋಟಗಳು ನಮ್ಮಲ್ಲಿ ಮೂಡುತ್ತವೆ. ಆಗ ಬೌದ್ಧಿಕ, ಶೈಕ್ಷಣಿಕ ಅಭಿವೃದ್ಧಿಗೆ ಚರ್ಚೆ, ಸಂವಾದಗಳು ಉಪಯುಕ್ತವಾಗುತ್ತವೆ.

ಯೋಚನಾ ಶಕ್ತಿ ವೃದ್ಧಿ
ಚರ್ಚೆ, ಸಂವಾದಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳಿಗೆ ಯೋಚನ ಶಕ್ತಿ ವೃದ್ಧಿಯಾಗುತ್ತದೆ. ಚರ್ಚೆ, ಭಾಷಣ ಸ್ಪರ್ಧೆಗಳಲ್ಲಿ ಎದುರಾಳಿಗಳು ಸವಾಲೆಸೆಯುವ ಪ್ರಶ್ನೆಗಳಿಗೆ ನಾವು ಅಗತ್ಯವಾಗಿ ಯೋಚಿಸಿ, ಯೋಜಿಸಿಯೇ ಉತ್ತರ ನೀಡಬೇಕಾಗುತ್ತದೆ. ಅದು ಕೂಡ ಸಾರ್ವಕಾಲಿಕ ಒಪ್ಪಿತ ಅಭಿಪ್ರಾಯವಾಗಬೇಕಿರುವ ನಿಟ್ಟಿನಲ್ಲಿ ನಾವು ವಿಭಿನ್ನವಾಗಿ ಯೋಚಿಸಲು ಮುಂದಾಗುತ್ತೇವೆ. ಇದು ನಮ್ಮ ಬೌದ್ಧಿಕ ಮಟ್ಟದ ವೃದ್ಧಿಗೆ ಪೂರಕವಾಗುವುದು.

-  ಶಿವ ಸ್ಥಾವರಮಠ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.