ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ; ಕೇಂದ್ರಗಳಲ್ಲಿ ಬಿಗಿ ಬಂದೋಬಸ್ತ್
Team Udayavani, Mar 29, 2017, 2:17 AM IST
ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆ ಮಾ. 30ರಿಂದ ಆರಂಭಗೊಳ್ಳಲಿದ್ದು, ವಿದ್ಯಾರ್ಥಿಗಳು ಬೆಳಗ್ಗೆ 9.15ರಿಂದ 9.30ರ ಸಮಯದೊಳಗೆ ಪರೀಕ್ಷಾ ಕೊಠಡಿಗೆ ಹಾಜರಾಗಲು ಸಮಯ ನಿಗದಿಪಡಿಸಲಾಗಿದೆ. 15 ನಿಮಿಷಗಳ ವಿನಾಯಿತಿ ನೀಡಲಾಗಿದ್ದು 9.45ರವರೆಗೆ ಪರೀಕ್ಷಾ ಕೊಠಡಿ ಪ್ರವೇಶಕ್ಕೆ ಅನುಮತಿ ಇರಲಿದೆ. ಈ ಹಿಂದೆ ಬೆಳಗ್ಗೆ 9.30ಕ್ಕೆ ಪರೀಕ್ಷೆ ಪ್ರಾರಂಭವಾದ ಅನಂತರ ತಡವಾಗಿ ಬರುವ ಅಭ್ಯರ್ಥಿಗಳಿಗೆ ಪರೀಕ್ಷಾ ಕೊಠಡಿಯ ಪ್ರವೇಶವನ್ನು ನಿಷೇಧಿಸಿ ಆದೇಶಿಸಲಾಗಿತ್ತು. ಆದರೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 15 ನಿಮಿಷ ವಿನಾಯಿತಿ ನೀಡಲಾಗಿದೆ.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಆಯುಕ್ತೆ ಸೌಜನ್ಯಾ, ರಾಜ್ಯಾದ್ಯಂತ ಒಟ್ಟು 8,77,174 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ಹಾಜರಾಗಲಿದ್ದಾರೆ. ರಾಜ್ಯದ 2,770 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬಾಲಕರು 4,69,835 ಮತ್ತು ಬಾಲಕಿಯರು 4,07,339 ಸೇರಿದಂತೆ ಒಟ್ಟು 8,77,174 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದ ಅವರು, 72 ಸೂಕ್ಷ್ಮ ಪರೀಕ್ಷಾ ಕೇಂದ್ರಗಳು, 17 ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಅಗತ್ಯ ಬಂದೋಬಸ್ತ್ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದರು. ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷಾ ಅಕ್ರಮಗಳು ನಡೆಯದಂತೆ ಇಲಾಖೆ ಕ್ರಮಕೈಗೊಂಡಿದ್ದು, ಸರಕಾರಿ ಪರೀಕ್ಷಾ ಕೇಂದ್ರಗಳ ಕೊಠಡಿಗಳಲ್ಲಿ 226, ಅನುದಾನಿತ ಪರೀಕ್ಷಾ ಕೇಂದ್ರಗಳಲ್ಲಿ 564, ಅನುದಾನ ರಹಿತ ಕೇಂದ್ರಗಳಲ್ಲಿ 364 ಹೀಗೆ ಒಟ್ಟು 1,184 ಸಿಸಿ ಟಿವಿ ಕೆಮರಾಗಳನ್ನು ಅಳವಡಿಸಲಾಗಿದೆ.
ಜತೆಗೆ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರ ಕೊಠಡಿಗಳಲ್ಲಿ, ಸರಕಾರಿ ಕೇಂದ್ರಗಳಲ್ಲಿ 233, ಅನುದಾನಿತ ಕೇಂದ್ರಗಳಲ್ಲಿ 659 ಹಾಗೂ ಅನುದಾನ ರಹಿತ ಕೇಂದ್ರಗಳಲ್ಲಿ 469 ಹೀಗೆ ಒಟ್ಟು 1,361 ಸಿಸಿ ಕೆಮರಾಗಳನ್ನು ಅಳವಡಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ನೋಂದಣಿಯಾಗಿರುವ ಪ್ರೌಢಶಾಲೆಗಳಲ್ಲಿ ಸರಕಾರಿ 5,163, ಅನುದಾನಿತ 3,301, ಅನುದಾನ ರಹಿತ 5,834 ಪ್ರೌಢಶಾಲೆಗಳ ಸಹಿತ ಒಟ್ಟು 14,298 ಪ್ರೌಢಶಾಲೆಗಳ ವಿದ್ಯಾರ್ಥಿಗಳು ಈ ಬಾರಿಯ ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ವಿವರಿಸಿದರು.
ಪಿಯು ಮಾದರಿ ಉತ್ತರ ಪತ್ರಿಕೆ
ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಮಾದರಿ ಉತ್ತರ ಪತ್ರಿಕೆಗಳನ್ನು ಇಲಾಖಾ ವೆಬ್ಸೈಟ್: www.pue.kar.nic.inನಲ್ಲಿ ಬಿಟ್ಟಿದೆ. ವಿದ್ಯಾರ್ಥಿಗಳು ಮತ್ತು ಆಸಕ್ತರು ವೆಬ್ಸೈಟ್ಗೆ ಭೇಟಿ ನೀಡಿ ಕನ್ನಡ, ಇಂಗ್ಲಿಷ್, ಹಿಂದಿ ಸಹಿತ 34 ವಿಷಯಗಳ ಮಾದರಿ ಉತ್ತರ ಪತ್ರಿಕೆಗಳನ್ನು ಪರಿಶೀಲಿಸಬಹುದು ಎಂದು ಇಲಾಖೆ ನಿರ್ದೇಶಕಿ ಸಿ. ಶಿಖಾ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ