ವಿಚಾರ ಸಂಕಿರಣ ಜ್ಞಾನವೃದ್ಧಿಗೆ ಪೂರಕ


Team Udayavani, Nov 27, 2019, 4:17 AM IST

as-26

ವಿದ್ಯಾರ್ಥಿಗಳ ಬೌದ್ಧಿಕ ಮತ್ತು ಶೈಕ್ಷಣಿಕ ಬೆಳವಣಿಗೆಯ ವಿಷಯದಲ್ಲಿ ವಿಚಾರ ಸಂಕಿರಣಗಳು ಬಹುದೊಡ್ಡ ಪಾತ್ರ ನಿರ್ವಹಿಸುತ್ತವೆ. ಈ ವಿಷಯವನ್ನು ಮನಗಂಡೇ ಇಂದು ಬಹುತೇಕ ಎಲ್ಲ ಶಿಕ್ಷಣ ಸಂಸ್ಥೆಗಳು ಆಗಾಗ ವಿಚಾರ ಸಂಕಿರಣಗಳನ್ನು ಏರ್ಪಡಿಸುವ ಮೂಲಕ ವಿದ್ಯಾರ್ಥಿಗಳನ್ನು ಜಾಗೃತಗೊಳಿಸುವ ಕೆಲಸ ಮಾಡುತ್ತಿವೆ. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಜ್ಞಾನ ಸಂಪಾದನೆ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಉತ್ತಮ ವೇದಿಕೆಯಾಗಿದ್ದು, ಸದ್ಬಳಕೆ ಅತ್ಯಗತ್ಯ.

ಸಾಧಕರ ಪರಿಚಯ
ವಿಚಾರ ಸಂಕಿರಣ ಹೆಸರೇ ಹೇಳುವಂತೆ ಇದೊಂದು ವಿಷಯಗಳ ವಿನಿಮಯಕ್ಕಾಗಿಯೇ ನಡೆಸುವ ಕಾರ್ಯಕ್ರಮವಾಗಿದ್ದು, ಸಾಮಾನ್ಯವಾಗಿ ಸಾಧಕರೊಂದಿಗೆ ಸಂವಾದ, ವಿಷಯ ವಿನಿಮಯಗಳು ನಡೆಯುತ್ತವೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ವಿವಿಧ ಸಾಧಕರ ಪರಿಚಯ ಆಗುವುದಲ್ಲದೆ, ಅವರು ನಡೆದು ಬಂದ ಹಾದಿ, ಪ್ರಸ್ತುತ ಅವರು ಕೆಲಸ ನಿರ್ವಹಿಸುತ್ತಿರುವ ಕ್ಷೇತ್ರದ ಆಗು-ಹೋಗುಗಳ ಬಗ್ಗೆಯೂ ಜ್ಞಾನ ದೊರೆಯುತ್ತದೆ. ಸಂದೇಹಗಳ ನಿವಾರಣೆ ಹೊಸ ವಿಷಯಗಳ ವಿನಿಮಯಕ್ಕೂ ಇದು ಉತ್ತಮ ವೇದಿಕೆಯಾಗಿದೆ.

ಕೌಶಲ ವೃದ್ಧಿ
ವಿಚಾರಸಂಕಿರಣಗಳು ಕೇವಲ ಭಾಷಣದ ವೇದಿಕೆಯಾಗಿರುವುದಿಲ್ಲ. ಅಲ್ಲಿ ಚರ್ಚೆ, ಸಂವಾದ, ಸಂಶೋಧನ ಪ್ರಬಂಧಗಳ ಮಂಡನೆ ನಡೆಯುವುದರಿಂದ ಇದೊಂದು ಬೌದ್ದಿಕ ವೇದಿಕೆಯಾಗಿರುತ್ತದೆ. ಹೀಗಾಗಿ ವಿಚಾರ ಸಂಕಿರಣಗಳಿಗೆ ತನ್ನದೇ ವೈಶಿಷ್ಟéಯಿದೆ. ವಿಚಾರ ಸಂಕಿರಣಗಳಲ್ಲಿ ವಿದ್ಯಾರ್ಥಿಗಳಲ್ಲಿ ಭಾಗವಹಿಸುವುದರಿಂದ ಸಂವಾದದಿಂದ ಸಂವಹನ ಕೌಶಲ ವೃದ್ಧಿ, ಪ್ರಬಂಧ ಮಂಡನೆಯಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ.

ಭವಿಷ್ಯಕ್ಕೆ ಪೂರಕ
ಕಾಲೇಜುಗಳಲ್ಲಿ ಆಯೋಜಿಸಲಾಗುವ ಕಾರ್ಯಾಗಾರ ಮತ್ತು ವಿಚಾರಸಂಕಿರಣದಿಂದಾಗಿ ನಮ್ಮ ಭವಿಷ್ಯದ ಬಗ್ಗೆ ಹಲವಾರು ಮಾಹಿತಿ ತಿಳಿದುಕೊಳ್ಳಬಹುದು. ಉದ್ಯೋಗ ಮತ್ತು ವೃತ್ತಿಪರತೆಯ ಅರಿವು ಇದಿರಿಂದಾಗುತ್ತದೆ. ಅವಕಾಶಗಳು ಸಂಪೂರ್ಣ ಮಾಹಿತಿ ದೊರೆಯುತ್ತದೆ.

ವೃತ್ತಿ ಜೀವನದ ಮಾಹಿತಿ
ಪದವಿ ಅಥವಾ ಪದವಿ ಬಳಿಕ ಮುಂದೇನು ಎಂಬ ಗೊಂದಲದಲ್ಲಿಯೇ ಬಹುತೇಕ ವಿದ್ಯಾರ್ಥಿಗಳಿರುತ್ತಾರೆ. ಇಂತವರಿಗೆ ವಿಚಾರ ಸಂಕಿರಣಗಳು ಸೂಕ್ತ ಮಾರ್ಗದರ್ಶನ ನೀಡುವ ಜತೆಗೆ ವೃತ್ತಿಪರ ಸಂಸ್ಥೆಗಳ ಹುಡುಕಾಟಕ್ಕೂ ಸಹಕಾರಿಯಾಗಲಿದೆ. ಕೌಶಲಗಳ ಅಭಿವೃದ್ಧಿಯ ಜತೆಗೆ ಸಂಶೋಧನೆ ಮಾಡಬಹುದಾದ ಹೊಸ ಹೊಸ ವಿಷಯಗಳನ್ನು ವಿದ್ಯಾರ್ಥಿಗಳ ಗಮನಕ್ಕೆ ತರುವಲ್ಲಿ ವಿಚಾರ ಸಂಕಿರಣಗಳ ಪಾತ್ರ ಬಹಳ ದೊಡ್ಡದಿದ್ದು, ಈಗಾಗಲೇ ಮಾಡಿರುವ ಸಂಶೋಧನೆಗಳ ವಿಷಯ ಮಂಡನೆಗೂ ಅವಕಾಶಗಳು ದೊರೆಯುತ್ತವೆ. ಸಾಮಾನ್ಯವಾಗಿ ಇಲ್ಲಿ ಅತ್ಯುನ್ನತ ಮಟ್ಟದ ಚರ್ಚೆಗಳು ನಡೆಯುವುದರಿಂದ ವಿದ್ಯಾರ್ಥಿಗಳ ಯೋಚನಾ ಮಟ್ಟವೂ ಹೆಚ್ಚುತ್ತದೆ.

ಹೊಸ ವಿದ್ಯಾರ್ಥಿಗಳ ಪರಿಚಯ
ಕೇವಲ ಜ್ಞಾನಾರ್ಜನೆಗೆ ಮಾತ್ರವಲ್ಲದೆ ಹೊಸ ಪರಿಚಯಕ್ಕೂ ವಿಚಾರ ಸಂಕಿರಣಗಳು ಕಾರಣವಾಗುತ್ತದೆ. ಬೇರೆ ಬೇರೆ ಸ್ಥಳಗಳಲ್ಲಿ ಕಾರ್ಯಕ್ರಮ ನಡೆಯುವ ಕಾರಣ ಇತರ ವಿದ್ಯಾರ್ಥಿಗಳ ಪರಿಚಯವಾಗುವ ಜತೆಗೆ ಆಲೋಚನೆಗಳು, ಸಂಶೋಧನೆಗಳ ವಿನಿಮಯವೂ ಸಾಧ್ಯವಾಗುತ್ತದೆ.

- ವೃಂದಾ

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.