ವಿದ್ಯಾರ್ಥಿಗಳಲ್ಲಿ ಇರಲಿ ತಾಂತ್ರಿಕ ಕೌಶಲ


Team Udayavani, Jul 31, 2019, 5:00 AM IST

13

ಶಿಕ್ಷಣ ವ್ಯಕ್ತಿಯೋರ್ವನ ಬದುಕಿನಲ್ಲಿ ಮಹತ್ತರ ಪಾತ್ರವಹಿಸುತ್ತದೆ. ಪ್ರಸ್ತುತ ಬದಲಾದ ಕಾಲಘಟ್ಟದಲ್ಲಿ ಕೇವಲ ಪದವಿ, ರ್‍ಯಾಂಕ್‌ ಸಾಕಾಗುವುದಿಲ್ಲ. ಅಂಕಗಳೊಂದಿಗೆ ವಿವಿಧ ಕೌಶಲಗಳನ್ನು ಬೆಳೆಸಿಕೊಳ್ಳಬೇಕಾದ ಅನಿವಾರ್ಯತೆ ಇದೆ.

ಕೈಗಾರಿಕಾ ಕ್ಷೇತ್ರ ಸೇರಿದಂತೆ ಯಾವುದೇ ಕ್ಷೇತ್ರಗಳಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಬೇಕಾದರೆ ಪದವಿಯೊಂದಷ್ಟೇ ಸಾಕಾಗುವುದಿಲ್ಲ. ಕೌಶಲಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಇಂತಹ ಕೌಶಲಗಳನ್ನು ವಿದ್ಯಾರ್ಥಿ ದೆಸೆಯಲ್ಲೇ ಅಂದರೆ ಪದವಿ ಅಧ್ಯಯನ ಸಮಯದಲ್ಲೇ ಪಡೆದುಕೊಂಡರೆ ಅಂತಹವರಿಗೆ ಜೌದ್ಯೋಗಿಕ ಕ್ಷೇತ್ರದಲ್ಲಿ ಹೆಚ್ಚಿನ ಆದ್ಯತೆ ಸಿಗುತ್ತದೆ. ಪುಸ್ತಕದ ಮಾಹಿತಿಯಷ್ಟೇ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ನೆರವಾಗುತ್ತದೆ ಎಂಬ ಕಾಲ ಬದಲಾಗಿದೆ. ಪುಸ್ತಕ ಹೊರತುಪಡಿಸಿ ಗಳಿಸಿದ ಜ್ಞಾನ ಮಾತ್ರವೇ ಉದ್ಯೋಗ ಗಿಟ್ಟಿಸಿಕೊಳ್ಳಲು ನೆರವಾಗುತ್ತದೆ.

ಪ್ರತಿಯೊಬ್ಬ ವಿದ್ಯಾರ್ಥಿಗೂ ಶೈಕ್ಷಣಿಕ ಜ್ಞಾನದ ಜತೆಗೆ ತಾಂತ್ರಿಕ ಜ್ಞಾನ ಹಾಗೂ ಪ್ರಾಯೋಗಿಕ ಜ್ಞಾನ ಇರಬೇಕಾದುದು ಅವಶ್ಯ. ಶಿಕ್ಷಕರು ತರಗತಿಯಲ್ಲಿ ನೀಡುವ ಮಾಹಿತಿಯನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಕೆಲವು ಶೈಕ್ಷಣಿಕ ವಿಷಯಗಳಲ್ಲಿ ಪ್ರಯೋಗಕ್ಕೆ ಒಳಪಡಿಸಬೇಕಾಗುತ್ತದೆ. ಇದರಿಂದ ಆ ವಿಷಯದ ಕುರಿತಾದ ನೈಜ ಜ್ಞಾನ ವಿದ್ಯಾರ್ಥಿಗಳಿಗೆ ಲಭಿಸುತ್ತದೆ. ಉದಾಹರಣೆಗೆ ಮಕ್ಕಳಿಗೆ ಕಂಪ್ಯೂಟರ್‌ ಎಂದರೇನು, ಅದರ ವಿವಿಧ ಭಾಗಗಳು ಯಾವುವು ಎಂಬುದನ್ನು ತರಗತಿಯಲ್ಲಿ ತಿಳಿಸಬಹುದು. ಆದರೆ ಆ ಭಾಗಗಳು ಯಾವುವು ಎಂಬುದನ್ನು ಬಿಡಿಸಿ ತೋರಿಸುವ ಕೌಶಲವೂ ವಿದ್ಯಾರ್ಥಿಗಳಿಗೆ ಇರಬೇಕು.

ವಿದ್ಯಾರ್ಥಿಗಳಲ್ಲಿ ಇರಬೇಕಾದ ತಾಂತ್ರಿಕ ಕೌಶಲಗಳು
ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಪುಸ್ತಕವನ್ನು ಹೊರತುಪಡಿಸಿದ ಜ್ಞಾನದ ಆವಶ್ಯಕತೆ ಇದೆ. ಅದರಲ್ಲೂ ತಾಂತ್ರಿಕ ಕೌಶಲ ಬಹುಮುಖ್ಯ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳಲ್ಲಿ ಪ್ರಮುಖವಾಗಿ ಇರಬೇಕಾದ ತಾಂತ್ರಿಕ ಕೌಶಲಗಳನ್ನು ನೋಡೋಣ ಸಾಮಾಜಿಕ ಜಾಲತಾಣಗಳ ಬಳಕೆ ಸಾಫ್ಟ್ವೇರ್‌ ಸ್ಕಿಲ್‌ಗ‌ಳಂತೆಯೇ ಸಾಮಾಜಿಕ ಜಾಲತಾಣಗಳ ಜ್ಞಾನವೂ ಅಗತ್ಯ. ಕೇವಲ ಭಾವಚಿತ್ರಗಳನ್ನು ಅಪ್‌ಲೋಡ್‌ ಮಾಡಿ ಲೈಕ್‌ ಗಿಟ್ಟಿಸಿಕೊಳ್ಳುವುದು ಮಾತ್ರವಲ್ಲದೆ ಜಗತ್ತಿನ ವಿವಿಧ ಭಾಗಗಳ ಜನರ ಬಗ್ಗೆ ಮಾಹಿತಿ ಲಭಿಸುತ್ತದೆ. ಸಾಮಾನ್ಯ ಯುವಕ ತನ್ನ ಪರಿಶ್ರಮದಿಂದ ಫೇಸ್‌ಬುಕ್‌ ಸ್ಥಾಪಿಸಿದ ಬಗೆ ಎಲ್ಲವೂ ವಿದ್ಯಾರ್ಥಿಗಳಿಗೆ ಸ್ಫೂ³ರ್ತಿದಾಯಕ. ಇದರೊಂದಿಗೆ ಸಾಮಾಜಿಕ ಜಾಲತಾಣಗಳ ಕೆಲಸದ ಶೈಲಿಯ ಬಗ್ಗೆ ತಿಳಿದುಕೊಳ್ಳಲು ಪ್ರಯತ್ನಿಸಬಹುದಾಗಿದೆ.

ಆನ್‌ಲೈನ್‌ ಸೇಪ್ಟಿ ಹಾಗೂ ಭದ್ರತೆ
ತಾಂತ್ರಿಕವಾಗಿ ಅಭಿವೃದ್ಧಿ ಹೊಂದುತ್ತಿರುವ ಜಗತ್ತಿನಲ್ಲಿ ಆದಷ್ಟು ತಾಂತ್ರಿಕ ಜ್ಞಾನವನ್ನು ಪಡೆದುಕೊಳ್ಳಬೇಕಾಗುತ್ತದೆ. ಬ್ಯಾಂಕ್‌ನ ಗೌಪ್ಯ ಮಾಹಿತಿ, ಸಾಮಾಜಿಕ ಜಾಲತಾಣಗಳ ಗೌಪ್ಯತೆ ಹೀಗೆ ಹಲವಾರು ವೈಯಕ್ತಿಕ ವಿಚಾರಗಳ ಭದ್ರತೆ ಕಾಪಾಡಿಕೊಳ್ಳುವುದೇ ಸಾಹಸ. ಎಷ್ಟೇ ಭದ್ರತೆ ನೀಡಿದರೂ ಹ್ಯಾಕರ್‌ ಗಳು ತಮ್ಮ ಕೈಚಳಕ ತೋರಿಸುತ್ತಾರೆ. ಅದಕ್ಕಾಗಿ ಅವರಿಂದ ವೈ‌ಯಕ್ತಿಕ ಮಾಹಿತಿಗಳನ್ನು ರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಹೊಸ ತಂತ್ರಜ್ಞಾನವನ್ನು ತಿಳಿದುಕೊಳ್ಳಬೇಕಾಗುತ್ತದೆ. ಇದರೊಂದಿಗೆ ವೈರಸ್‌, ಆನ್‌ಲೈನ್‌ ಅಟ್ಯಾಕ್ಸ್‌ ಬಗ್ಗೆ ಜ್ಞಾನವಿರಬೇಕು.

ಹೊಸತನ್ನು ಕಲಿಯುವ ತವಕವಿರಲಿ
ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಯ ಕಡೆಗೂ ವಿದ್ಯಾರ್ಥಿಗಳು ಗಮನಹರಿಸಬೇಕು. ನೂತನ ಪ್ರಯೋಗ, ಆವಿಷ್ಕಾರಗಳನ್ನು ಮಾಡುವ ಕಡೆಗೆ ವಿದ್ಯಾರ್ಥಿಗಳು ಉತ್ಸಾಹ ತೋರಬೇಕು. ಇದಕ್ಕಾಗಿ ಶಿಕ್ಷಕರ ಮಾರ್ಗದರ್ಶನ ಪಡೆದು ಅಂತರ್ಜಾಲವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಪ್ರತಿ ಕ್ಷಣವೂ ಹೊಸತನ್ನು ಕಲಿಯುವ ತವಕ ಬಹಳ ಮುಖ್ಯ.

ವೃತ್ತಿಪರ ಬರವಣಿಗೆ
ಬಹುತೇಕ ವಿದ್ಯಾರ್ಥಿಗಳು ವೃತ್ತಿಪರ ಬರವಣಿಗೆಯನ್ನು ಅಷ್ಟು ಗಂಭೀರವಾಗಿ ಪರಿಗಣಿಸುವುದಿಲ್ಲ. ಆದರೆ ಇದು ಗಂಭೀರವಾದ ವಿಚಾರ. ಕಾರ್ಪೊರೇಟ್‌ ಉದ್ಯೋಗಿಗಳಿಗೆ ಉತ್ತಮ ಬರವಣಿಗೆ ಶೈಲಿ, ಉತ್ತಮ ಇ ಮೈಲ್‌ ಬರೆಯುವ ಕೌಶಲ ಮುಖ್ಯವಾಗಿರುತ್ತದೆ. ಇದರೊಂದಿಗೆ ಉತ್ತಮ ಸಂವಹನ ಪ್ರಕ್ರಿಯೆಯೂ ಮುಖ್ಯವಾಗಿರುತ್ತದೆ. ತಮ್ಮೊಳಗಿರುವ ಹೊಸ ಯೋಚನೆಗಳನ್ನು ಕಾರ್ಯಗತಗೊಳಿಸಲು ಸೂಕ್ತ ವೇದಿಕೆಯನ್ನು ಆರಿಸಿಕೊಂಡು ಪ್ರಸ್ತುತ ಪಡಿಸುವ ಕೌಶಲಗಳು ವಿದ್ಯಾರ್ಥಿಗಳಲ್ಲಿ ಅಗತ್ಯವಿದೆ.

ಸಾಫ್ಟ್‌ವೇರ್‌ ಸ್ಕಿಲ್‌
ಎಂಜಿನಿಯರಿಂಗ್‌ ಅಥವಾ ಇತರ ತಾಂತ್ರಿಕ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಸಾಫ್ಟ್‌ವೇರ್‌ ಕೌಶಲಗಳಲ್ಲಿ ಪರಿಣತಿ ಪಡೆಯಲೇ ಬೇಕಾದ ಆವಶ್ಯಕತೆ ಇರುತ್ತದೆ. ವರ್ಡ್‌, ಪ್ರೊಸೆಸರ್‌, ಸ್ಪೆಡ್‌ಶೀಟ್‌ , ಪ್ರಸೆಂಟೇಶನ್‌ ಪ್ರೋಗ್ರಾಂ ಹಾಗೂ ಕೆಲವು ಡಿಸೈನಿಂಗ್‌ ಸಾಫ್ಟ್‌ವೇರ್‌ಗಳ ಬಗ್ಗೆ ತಿಳಿದಿರಬೇಕಾಗುತ್ತದೆ. ಇವುಗಳು ತಾಂತ್ರಿಕ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಇನ್ನಿತರ ಕೋರ್ಸ್‌ಗಳ ವಿದ್ಯಾರ್ಥಿಗಳಿಗೂ ಸಹಕಾರಿಯಾಗಲಿದೆ. ವರ್ಡ್‌ ಮೂಲಕ ಪತ್ರ ಬರೆಯುವುದು, ರಿಪೋರ್ಟ್‌ ಮಾಡುವುದು, ಪವರ್‌ ಪಾಯಿಂಟ್‌ ಪ್ರಸೆಂಟೇಶನ್‌ಗಳ ಮೂಲಕ ಪ್ರೊಜೆಕ್ಟ್ ನೀಡುವುದು, ಎಕ್ಸೆಲ್‌ಗ‌ಳ ಬಳಕೆ ಎಲ್ಲಾ ವಿಭಾಗದವರಿಗೂ ಸಹಕಾರಿಯಾಗುತ್ತದೆ. ಈ ಬಗ್ಗೆ ಸಾಮಾನ್ಯ ಜ್ಞಾನ ಇರಬೇಕಾದುದು ಇಂದಿನ ವಿದ್ಯಾರ್ಥಿಗಳ ಜವಾಬ್ದಾರಿಯಾಗಿರುತ್ತದೆ.

-  ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.