ಅಬ್ಬಾ ಅಬ್ಬಿ !

ಮಡಿಕೇರಿ ಮಂಜಲ್ಲಿ ಮಿಂದ ಸುಂದರಿ

Team Udayavani, Aug 8, 2019, 5:00 AM IST

p-24

ಪ್ರಕೃತಿ ಮಾತೆಗೆ ಮೆರುಗು ನೀಡುವ ಸೌಂದರ್ಯರಾಶಿ. ಜುಳು ಜುಳು ಹರಿಯುವ ನೀರಿನ ಶಬ್ದವು ಕಿವಿಗೆ ಇಂಪಾದ ಸಂಗೀತದಂತೆ ಕೇಳಿಸುತ್ತದೆ. ಬೇಂದ್ರೆಯವರ ಇಳಿದು ಬಾ ತಾಯೇ ಹಾಡಿಗೆ ಮರುಳಾಗಿ ಹರನ ಜಡೆಯಿಂದ ಗಂಗೆಯೇ ಭೂರಮೆಗೆ ಇಳಿದುಬಂದಂತಹ ಅನುಭವ. ಕಣ್ಣಿಗೆ ಮುದ ನೀಡುವ ಬೆಳ್ನೊರೆಯ ಈ ಜಲಪಾತ ಕಾಣಸಿಗುವುದು ಕೊಡಗು ಜಿಲ್ಲೆಯ ಮುಖ್ಯ ಪಟ್ಟಣವಾದ ಮಡಿಕೇರಿಯಲ್ಲಿ.

ಮಡಿಕೇರಿಯಿಂದ 7ರಿಂದ 8 ಕಿ.ಮೀ. ದೂರ ಸಾಗಿದರೆ ಪ್ರಕೃತಿಯ ಚಂದವನ್ನು ಸವಿಯುವ ಜತೆಗೆ ಧರೆಗೆ ಇಳಿಯುವ ನೀರಿನ ಸಪ್ಪಳಕ್ಕೆ ಕಿವಿಯಾಗಬಹುದು. ಮಳೆಗಾಲದ ಅವಧಿಯಲ್ಲಿ ಅದೊಂದು ಅದ್ಭುತ ಅನುಭವ. ಅಬ್ಟಾ! ಎಂಬ ಉದ್ಗಾರ ನಮ್ಮ ಬಾಯಿಯಿಂದ ತಾನಾಗಿಯೇ ಹೊಮ್ಮುತ್ತದೆ. ಅಷ್ಟು ಸೊಗಸಾಗಿದೆ ಅಬ್ಬಿ ಜಲಪಾತ.

ಸುತ್ತ ಹಸುರು ಉಟ್ಟ ಕಾಡಿನ ಸೊಬಗು. ನಡುವೆ ನಡೆಯುತ್ತ ಸಾಗಿದರೆ ಆಯಾಸವೂ ಗಮನಕ್ಕೆ ಬಾರದು. ಜಲಪಾತದ ಮೊರೆಯುವ ಸದ್ದು ಜೋರಾಗುತ್ತ ಸಾಗಿ, ನಮ್ಮನ್ನು ಬೇಗ ಬಾ ಎಂದು ಕರೆಯುತ್ತದೆ. ದಾರಿಯಲ್ಲಿ ಹಕ್ಕಿಗಳ ಇಂಚರ, ಪ್ರಾಣಿಗಳ ಕೂಗು ಮುದ ನೀಡುತ್ತದೆ.

ಕೊಡಗು ಹಲವು ಜಲಪಾತಗಳಿಗೆ ಹೆಸರುವಾಸಿಯಾಗಿದೆ. ಕೆ. ನಿಡುಗಣೆ ಗ್ರಾಮ ಪಂಚಾಯತ್‌ ವ್ಯಾಪ್ತಿಗೆ ಒಳಪಡುವ ಅಬ್ಬಿ ಜಲಪಾತ ಮಡಿಕೇರಿ ಪ್ರವಾಸಕ್ಕೆಂದು ತೆರಳುವ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತದೆ. ಅಬ್ಬಿ ಜಲಪಾತ ನೋಡದಿದ್ದರೆ ಕೊಡಗಿನ ಪ್ರವಾಸ ಪೂರ್ತಿಯಾಗುವುದಿಲ್ಲ. ಮಡಿಕೇರಿಯ ಮಂಜು, ದಟ್ಟ ಕಾಡುಗಳು, ಕಾಫಿ ತೋಟಗಳು ನಿಸರ್ಗದ ರಮಣೀಯತೆಯನ್ನು ವೃದ್ಧಿಸಿವೆ. ಚುಮು ಚುಮು ಚಳಿಯಲ್ಲಿ ಬೆಚ್ಚನೆಯ ಕಾಫಿ ಸವಿಯುವ ಸುಖ ಸ್ವರ್ಗಕ್ಕೇ ಕಿಚ್ಚು ಹಚ್ಚುವಂತಿರುತ್ತದೆ. ಇಂತಹ ಸೌಂದರ್ಯಕ್ಕೆ ಕಲಶವಿಟ್ಟಂತೆ ಜಲಪಾತಗಳು!

ಮಡಿಕೇರಿಯಲ್ಲಿ ಮಳೆಯಾಯಿತೆಂದರೆ ಅಬ್ಬಿ ಜಲಪಾತವು ಹೆಬ್ಬಂಡೆಯ ಮೇಲಿಂದ ಮೇಲೆ ಧುಮುಕಿ ಹರಿಯುತ್ತಿರುತ್ತದೆ. ಝರಿಯ ನರ್ತನದಲ್ಲಿ ಮೀಯುವ ಹೆಬ್ಬಂಡೆಗಳ ಚೆಲುವನ್ನು ನೋಡುವುದರಲ್ಲೇ ನಾವು ಮೈಮರೆಯುತ್ತೇವೆ.

ಅಬ್ಬಿ ಜಲಪಾತದ ರಮಣೀಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ಅಸಂಖ್ಯಾತ ಪ್ರವಾಸಿಗರು ಇಲ್ಲಿಗೆ ಬರುತ್ತಾರೆ. ಬೇಸಗೆಯಲ್ಲಿ ಮಾತ್ರ ಇದು ಸೊರಗುತ್ತದೆ. ಮಳೆಗಾಲದಲ್ಲಿ ರುದ್ರ ರಮಣೀಯವಾಗುತ್ತದೆ. ವಯ್ನಾರದಿಂದ ಧುಮುಕುವ ಜಲಧಾರೆ ನೋಡುಗರ ಕಣ್ಮನವನ್ನು ತಣಿಸುತ್ತದೆ. ಈ ಸ್ಥಳಕ್ಕೆ ಭೇಟಿ ನೀಡಿದರೆ ಮೈಮರೆಯುವ ಪ್ರಕೃತಿ ಸೌಂದರ್ಯದ ಆರಾಧಕರಾಗಿ ಸಮಯ ಕಳೆಯಬಹುದು.

ಸುಮಾರು 70 ಅಡಿ ಎತ್ತರದಿಂದ ಧುಮುಕುವ ಈ ಜಲಪಾತದ ನೀರು ಮುಂದೆ ಕಾವೇರಿ ನದಿಯನ್ನು ಸೇರುತ್ತದೆ. ಇದು ಪ್ರವಾಸಿ ತಾಣವಾಗಿಯೂ ಹೆಸರಾಗಿದೆ. ವಿಶಾಲವಾದ ಜಾಗ ಪಾರ್ಕಿಂಗ್‌ಗೆ ಲಭ್ಯವಿದೆ. ಇಲ್ಲಿ ಸಿಗುವ ಆಹಾರದ ಗುಣಮಟ್ಟವೂ ಉತ್ತಮವಾಗಿದೆ. ಬೆಳಗ್ಗೆ 8ರಿಂದ ಸಂಜೆ 5.30ರ ತನಕ ಜಲಪಾತ ವೀಕ್ಷಣೆಗೆ ಅವಕಾಶವಿದೆ. ಜಲಪಾತದ ಮುಂಭಾಗದಲ್ಲಿ ಒಂದು ತೂಗುಸೇತುವೆ ಇದ್ದು, ಅಲ್ಲಿಂದ ಜಲಪಾತದ ಸೌಂದರ್ಯವನ್ನು ಮನದಣಿಯೆ ಸವಿಯಬಹುದು.

ಅಬ್ಬಿ ಫಾಲ್ಸ್ ಮಂಗಳೂರಿನಿಂದ 144 ಕಿ.ಮೀ. ದೂರದಲ್ಲಿದೆ. ಮಡಿಕೇರಿಯಿಂದ ಕೇವಲ 8 ಕಿ.ಮೀ. ಅಂತರ. ಮಡಿಕೇರಿಯಿಂದ ಆಟೋಗಳು ಸಿಗುತ್ತವೆ. ಪ್ರವೇಶದ್ವಾರದಿಂದ ಸುಮಾರು 200 ಅಡಿ ದೂರಕ್ಕೆ ಕಾಫಿ ತೋಟಗಳ ನಡುವೆ ಕೆಳಗಿಳಿದು ಸಾಗಬೇಕು. ವೃದ್ಧರಿಗೆ ಇದು ಸ್ವಲ್ಪ ಕಷ್ಟದ ದಾರಿ. ವಾಹನಗಳ ನಿಲುಗಡೆಗೆ 30 ರೂ., ಪ್ರವೇಶಕ್ಕೆ 15 ರೂ. ಶುಲ್ಕ ವಿಧಿಸಲಾಗುತ್ತದೆ.

ರೂಟ್‌ ಮ್ಯಾಪ್‌
- ಮಂಗಳೂರಿನಿಂದ ಮಡಿಕೇರಿಗೆ 137.8 ಕಿ.ಮೀ.
- ಪುತ್ತೂರಿನಿಂದ ಮಡಿಕೇರಿ 87.1 ಕಿ.ಮೀ.
- ಮಡಿಕೇರಿಯಿಂದ ಅಬ್ಬಿಗೆ ಕೇವಲ 8 ಕಿ.ಮೀ. ಆಟೋ ಮಾಡಿಕೊಂಡು ಹೋಗಬಹುದು

- ಸಾಯಿನಂದಾ ಚಿಟ್ಪಾಡಿ, ಪುತ್ತೂರು

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

16-adu-jeevitham

Movie Review: ಆಡು ಜೀವಿದಂ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.