ನೋಡ ಬನ್ನಿ ಅರ್ಬಿ


Team Udayavani, Jun 20, 2019, 5:00 AM IST

d-19

ಮಳೆಗಾಲದಲ್ಲಿ ಬೋರ್ಗರೆವ ಜಲಪಾತಗಳ ನಡುವೆ ಒಂದಷ್ಟು ಹೊತ್ತು ಕಳೆದರೆ ಮನಸ್ಸಿಗೆ ಹಾಯ್‌ ಎನಿಸುತ್ತದೆ. ಇಡೀ ಜಗತ್ತನ್ನೇ ಮರೆಸುವ ಶಕ್ತಿ ಜಲಪಾತಗಳಿಗಿರುತ್ತವೆ. ತಂಪಾದ ಗಾಳಿ, ಇಂಪಾದ ಹಕ್ಕಿಗಳ ಕಲರವ, ಹಸುರು ತುಂಬಿದ ಪ್ರದೇಶ, ನಿಶ್ಯಬ್ದ ಕಾನನ ಇವಿಷ್ಟು ಸಾಕು ಮನಸ್ಸನ್ನು ಶಾಂತಗೊಳಿಸಲು. ಪ್ರಕೃತಿಯ ಸುಂದರತೆಯನ್ನು ಸವಿಯಬಯಸುವ ಪ್ರಕೃತಿ ಪ್ರಿಯರಿಗೆ ಶೈಕ್ಷಣಿಕ ನಗರಿ ಮಣಿಪಾಲ ದಲ್ಲಿರುವ ಅರ್ಬಿ ಪಾಲ್ಸ್‌ ಕೂಡ ಉತ್ತಮ ಸ್ಥಳ.

ಮಳೆಗಾಲ ಪ್ರಾರಂಭವಾಯಿತೆಂದರೆ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಹಲವಾರು ಜಲಪಾತಗಳು ತಮ್ಮ ಸೌಂದರ್ಯವನ್ನು ವೃದ್ಧಿಸಿಕೊಂಡು ಭೋರ್ಗರೆಯುತ್ತವೆ. ಜನರು ಈ ಜಲಪಾತಗಳಡಿಯಲ್ಲಿ ಜಳಕವಾಡಲು ಮುಗಿ ಬೀಳುತ್ತಾರೆ. ಕರಾವಳಿಯಲ್ಲೂ ಅಲ್ಲಲ್ಲಿ ಪುಟ್ಟ ತೊರೆಗಳು ಮೋಹಕ ಜಲಪಾತಗಳಾಗಿ ಜೀವ ತಳೆಯುವುದು ಸರ್ವೇ ಸಾಮಾನ್ಯ. ಈ ಮಾದರಿಯ ಒಂದು ಜಲಪಾತ ಶೈಕ್ಷಣಿಕ ನಗರಿ ಎಂದೇ ಹೆಸರುವಾಸಿಯಾಗಿರುವ ಮಣಿಪಾಲದ ಹೊರಭಾಗದಲ್ಲಿದೆ. ಇದುವೇ ಅರ್ಬಿ ಜಲಪಾತ.

ಸಾಕಷ್ಟು ಮಳೆ ಸುರಿದರೆ ದಟ್ಟ ಕಾನನದ ನಡುವೆ ಇಳಿಜಾರಿನಲ್ಲಿ ಮೈದುಂಬಿ ಹರಿಯುತ್ತಿದೆ ಅರ್ಬಿ ಜಲಪಾತ. ಈ ಜಲಪಾತವನ್ನು ನೋಡುವುದೇ ಕಣ್ಣುಗಳಿಗೆ ಸೊಗಸು. ತಳುಕುತ್ತಾ ಬಳುಕುತ್ತಾ ಕಲ್ಲಿನಿಂದ ಕಲ್ಲಿಗೆ ಹಂತ ಹಂತವಾಗಿ ಹರಿಯುವಾಗ ಕ್ಷೀರಧಾರೆಯೇ ಹರಿದು ಬಂದಂತಹ ಅನುಭವ.
ಮಣಿಪಾಲದಿಂದ ಅಲೆವೂರಿಗೆ ಹೋಗುವ ರಸ್ತೆಯಲ್ಲಿ ಸುಮಾರು ಎರಡು ಕಿಲೋಮೀಟರ್‌ ಹೋದರೆ ದಶರಥ ನಗರವೆಂಬ ಸ್ಥಳ ಸಿಗುತ್ತದೆ. ಇಲ್ಲಿಂದ ಎಡಕ್ಕೆ ವೈಷ್ಣವಿ ದುರ್ಗಾ ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿ ಸುಮಾರು ಒಂದೂವರೆ ಕಿಲೋಮೀಟರ್‌ ಸಾಗಿದರೆ ಸಿಗುತ್ತದೆ ಅರ್ಬಿ ಜಲಪಾತ.
ನಗರದ ಧಾವಂತದ ಬದುಕಿನಿಂದ ಬೇಸತ್ತವರಿಗೆ ದಿನದ ಒಂದಿಷ್ಟು ಹೊತ್ತು ಪ್ರಕೃತಿ ಮಡಿಲಲ್ಲಿ ವಿಶ್ರಾಂತಿ ಪಡೆಯಲು ಇದು ಹೇಳಿ ಮಾಡಿಸಿದ ಜಾಗ. ಇಲ್ಲಿನ ಪ್ರಶಾಂತ ವಾತಾವರಣ ಒಂದು ಅವ್ಯಕ್ತ ನೆಮ್ಮದಿಯನ್ನು ನೀಡುತ್ತದೆ. ಒಂದೆರಡು ತಾಸು ಅಥವಾ ಅರ್ಧ ದಿನದ ಪಿಕ್‌ನಿಕ್‌ಗೆ ಸೂಕ್ತ ಜಾಗವಿದು.
ಬಹಳ ವರ್ಷಗಳಿಂದ ಪ್ರಕೃತಿಯ ಮಡಿಲಲ್ಲಿ ನಿಶ್ಶಬ್ದವಾಗಿ ಹರಿಯುತ್ತಿದ್ದ ಅರ್ಬಿ ಜಲಪಾತ ಈಗ ಸಾಮಾಜಿಕ ಮಾಧ್ಯಮಗಳ ಪ್ರಭಾವದಿಂದಾಗಿ ಜನಪ್ರಿಯಗೊಂಡಿದೆ. ಹಲವಾರು ಕವಲುಗಳಾಗಿ ಶುಭ್ರ ನೀರಿನಿಂದ ಹರಿಯುವ ಅರ್ಬಿ ಜಲಪಾತವನ್ನು ನೋಡಲು ಕಾಲೇಜು ವಿದ್ಯಾರ್ಥಿಗಳ ದಂಡೇ ಹರಿದುಬರುತ್ತಿದೆ, ರಜಾದಿನಗಳಲ್ಲಿ ಇಲ್ಲಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿರುತ್ತದೆ.
ಜಲಪಾತದ ಪಕ್ಕದಲ್ಲೇ ವೈಷ್ಣವಿದುರ್ಗಾ ದೇವಸ್ಥಾನ ಇದ್ದು ಇಲ್ಲಿಗೆ ಬರುವ ಭಕ್ತರು ದೇವರ ದರ್ಶನ‌ ಪಡೆದು ಈ ಜಲಪಾತದ ಸೊಬಗನ್ನು ಸವಿಯುತ್ತಾರೆ.

ಇಲ್ಲಿಗೆ ಭೇಟಿ ನೀಡಿದ ನಿಸರ್ಗ ಪ್ರಿಯರು ಫೋಟೊ, ವೀಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿರುವುದರಿಂದ ಇತ್ತೀಚಿನ ದಿನಗಳಲ್ಲಿ ಹೆಚ್ಚು ಪ್ರಚಾರ ಪಡೆಯುತ್ತಿದೆ. ತೀರಾ ಆಳವೂ ಇಲ್ಲ, ರಭಸವೂ ಇಲ್ಲ. ಹೀಗಾಗಿ ನೀರಾಟವಾಡಲು ಚೆನ್ನಾಗಿದೆ. ಮಕ್ಕಳು ಕೂಡಾ ನೀರಿಗಿಳಿದು ಆಡಬಹುದು. ಹಿರಿಯರು, ಕಿರಿಯರು ಕುಟುಂಬ ಸಮೇತರಾಗಿ ಬಂದು ಜಲಧಾರೆಯ ಸೌಂದರ್ಯವನ್ನು ನೋಡಿ ಕಣ್ತುಂಬಿಕೊಳ್ಳುವುದು ಈಗ ಸಾಮಾನ್ಯ ದೃಶ್ಯ.

ಸಾಕಷ್ಟು ಮಳೆಯಾದರೆ ಮಾತ್ರ ಈ ಜಲಪಾತ ತುಂಬಿ ಹರಿಯುತ್ತದೆ. ಹೀಗಾಗಿ ಜೂನ್‌ನಿಂದ ಸೆಪ್ಟಂಬರ್‌ ಮಧ್ಯೆ ಬಂದರೆ ಜಲಪಾತದ ವೈಭವವನ್ನು ಪೂರ್ಣ ಪ್ರಮಾಣದಲ್ಲಿ ವೀಕ್ಷಿಸಬಹುದು. ಸಣ್ಣ ಸಣ್ಣ ತೊರೆಗಳಿಂದ ಸೃಷ್ಟಿಯಾಗಿರುವ ಜಲಪಾತವು ಅಪಾಯಕಾರಿಯಾಗಿಲ್ಲವಾದರೂ ಜಾರುವ ಕಲ್ಲುಗಳ ಮೇಲೆ ನಡೆದಾಡುವಾಗ ಜಾಗ್ರತೆ ವಹಿಸುವುದು ಒಳಿತು.

ಸದಾಕಾಲ ಈ ಜಲಪಾತದಲ್ಲಿ ಪ್ರವಾಸಿಗರು ಮೋಜು ಮಸ್ತಿ ಮಾಡುತ್ತಾ ಕಲ್ಲುಬಂಡೆಗಳ ಮೇಲೆ ನಿಂತು ಫೋಟೋ ತೆಗೆಸಿಕೊಂಡು ಜಲಪಾತದ ಸೌಂದರ್ಯವನ್ನು ಸವಿಯುತ್ತಾರೆ. ಜಲಪಾತ ಅಪಾಯಕಾರಿಯಲ್ಲದ ಪರಿಣಾಮ ಮಕ್ಕಳು ನೀರಿನಲ್ಲಿ ಸ್ವತ್ಛಂದವಾಗಿ ಆಟವಾಡುತ್ತಾರೆ.
ಅಂದಹಾಗೆ ನೀವು ಇಲ್ಲಿಗೆ ಭೇಟಿ ನೀಡಿಲ್ಲವಾದರೆ ಮಳೆಗಾಲ ಮುಗಿಯುವುದರೊಳಗೆ ಒಮ್ಮೆ ಭೇಟಿ ಕೊಡಿ, ಒಟ್ಟಿನಲ್ಲಿ ಅರ್ಬಿ ಫಾಲ್ಸ… ನಿಸರ್ಗ ಪ್ರಿಯರಿಗೆ ಹೇಳಿಮಾಡಿಸಿದಂತಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ…

ರೂಟ್‌ ಮ್ಯಾಪ್‌
·  ಮಂಗಳೂರಿನಿಂದ ಉಡುಪಿಗೆ 55.9 ಕಿಲೋ ಮೀಟರ್‌
·    ಉಡುಪಿಯಿಂದ ಮಣಿಪಾಲಕ್ಕೆ 8 ಕಿ.ಮೀ. ದೂರವಿದೆ.
·    ಮಣಿಪಾಲದಿಂದ ಅರ್ಬಿ ಫಾಲ್ಸ್‌ಗೆ ಮೂರುವರೆ ಕಿ.ಮೀ. ದೂರವಿದೆ.
·    ದಶರಥ ನಗರದಿಂದ ಕಾಲ್ನಡಿಗೆಯೇ ಉತ್ತ ಮ.
·    ಉಡುಪಿ, ಮಣಿ ಪಾಲದಿಂದ ಸಾಕಷ್ಟು ಬಸ್‌ ಸೌಲಭ್ಯವಿದೆ.
·    ಜೂನ್‌ ತಿಂಗಳಾಂತ್ಯಕ್ಕೆ ಅರ್ಬಿ ಫಾಲ್ಸ್‌ಗೆ ಭೇಟಿ ಕೊಟ್ಟರೆ ಪ್ರಕೃತಿಯ ಸುಂದರ ನೋಟವನ್ನು
ಕಣ್ತುಂಬಿಕೊಳ್ಳಬಹುದು.
·    ಮಣಿಪಾಲ ಹತ್ತಿರದಲ್ಲಿರುವುದರಿಂದ ಊಟ, ವಸತಿ ಸಮಸ್ಯೆಯಿಲ್ಲ.

-   ಊರ್ಮಿಳಾ

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

17

Sirsi: ಶಿರಸಿ ಮಾರಿಕಾಂಬೆ ವೈಭವದ ಜಾತ್ರೆ

16-wtr

Water: ನೀರು ಭುವನದ ಭಾಗ್ಯ

15-mother

Mother: ಕಣ್ಣಿಗೆ ಕಾಣುವ ದೇವರು ಅಂದರೆ ಅಮ್ಮ ತಾನೇ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.