ಹಿಟ್‌ ಮ್ಯಾನ್‌ ತರಗತಿಗೆ ಚಕ್ಕರ್‌ ಹೊಡೆಯುತ್ತಿದ್ದ


Team Udayavani, Feb 20, 2020, 4:04 AM IST

wall-10

ಕ್ರಿಕೆಟ್‌ ಪ್ರೇಮಿಗಳಿಂದ ಹಿಟ್‌ ಮ್ಯಾನ್‌ ಎಂದು ಕರೆಸಿಕೊಂಡಾತ ರೋಹಿತ್‌ ಶರ್ಮ. ರೋಹಿತ್‌ ಕ್ರೀಸ್ನಲ್ಲಿ ಇದ್ದಾರೆಂದರೆ ಬೌಂಡರಿ, ಸಿಕ್ಸಗರ್‌ಗಳಿಗೆ ಬರವಿಲ್ಲ. ಯಾವುದೇ ಪಂದ್ಯದಲ್ಲಿ ಭಾರತ ತಂಡ ಹೆಚ್ಚು ಮೊತ್ತ ದಾಖಲಿಸಿದೆ ಅಂದರೆ, ಆಟ ನೋಡದೇ ಇದ್ದವರು ಕೇಳುವ ಮೊದಲ ಪ್ರಶ್ನೆ: ರೋಹಿತ್‌ ಜಾಸ್ತಿ ರನ್‌ ಹೊಡೆದಿರಬೇಕು ಅಲ್ವಾ? ಎಂಬುದೇ ಆಗಿರುತ್ತದೆ. ಅಷ್ಟರಮಟ್ಟಿಗೆ ಭರವಸೆಯ ನಂಬಿಗಸ್ತ ಆಟಗಾರ ಎಂಬ ಹೆಗ್ಗಳಿಕೆ ಈಚೀಚಿನ ದಿನಗಳಲ್ಲಿ ರೋಹಿತ್‌ ಅವರಿಗೆ ಸಿಕ್ಕಿದೆ. ಇಂಗ್ಲಿಷಲ್ಲಿ ರೋಹಿತ್‌ ಎಂದು ಬರೆಯುವಾಗ Rohit ಬರೆಯುತ್ತಾರೆ.

ಆ ಕಡೆಯ ಮೂರು ಅಕ್ಷರಗಳನ್ನು ತೆಗೆದುಕೊಂಡು ಹಿಟ್‌ ಮ್ಯಾನ್‌ ಎಂಬ ಶಬ್ದ ಬಳಸಲು ಆರಂಭವಾಗಿದೆ. ಇವತ್ತು ಪ್ರಚಂಡ ಬ್ಯಾಟ್ಸ್‌ಮ್ಯಾನ್‌ ಎಂಬ ಹೆಗ್ಗಳಿಕೆ ಹೊಂದಿರುವ ರೋಹಿತ್‌ ಶರ್ಮಗೆ, ಆರಂಭಿಕ ದಿನಗಳಲ್ಲಿ ಆಫ್ ಸ್ಪಿನ್ನರ್‌ ಆಗಬೇಕೆಂಬ ಆಸೆ-ಕನಸು. ಆದರೆ ಈ ಹುಡುಗನಲ್ಲಿ ಬೌಲರ್‌ ಆಗುವುದಕ್ಕಿಂತ ಬ್ಯಾಟ್ಸ್‌ಮ್ಯಾನ್‌ ಆಗುವ ಲಕ್ಷಣವೇ ಹೆಚ್ಚಾಗಿದೆ ಎಂದು ಗುರುತಿಸಿದ ತರಬೇತುದಾರ, ರೋಹಿತ್‌ಗೆ ಬ್ಯಾಟಿಂಗ್‌ ಪಾಠ, ಗುಟ್ಟು, ತಂತ್ರಗಳನ್ನೆಲ್ಲ ಹೇಳಿಕೊಟ್ಟರು. ಶಾಲಾ ದಿನಗಳಲ್ಲಿ ಈ ರೋಹಿತ್‌ ಶರ್ಮಗೆ ಮಾದರಿ ಆಟಗಾರ ಆಗಿದ್ದದ್ದು ಯಾರು ಗೊತ್ತೇ?

ಈ ಹಿಂದೆ ಭಾರತ ತಂಡದ ಆರಂಭಿಕರಾಗಿದ್ದ ವೀರೇಂದ್ರ ಸೆಹ್ವಾಗ್‌. ತನ್ನ ಮೆಚ್ಚಿನ ಆಟಗಾರನನ್ನು ನೋಡುವ, ಭೇಟಿಯಾಗುವ ಉದ್ದೇಶದಿಂದ ಈ ರೋಹಿತ್‌ ಆಗಿಂದಾಗ್ಗೆ ಶಾಲೆಗೆ ಚಕ್ಕರ್‌ ಹೊಡೆಯುತ್ತಿದ್ದನಂತೆ. ಕ್ರಿಕೆಟ್‌ ಆಟವನ್ನು ಅಪಾರವಾಗಿ ಪ್ರೀತಿಸುತ್ತಿದ್ದದ್ದು ಮಾತ್ರವಲ್ಲ, ಶಾಲೆ ಕಾಲೇಜುಗಳ ಪರವಾಗಿ ಆಡಿ, ಗೆಲುವು ತಂದುಕೊಡುತ್ತಿದ್ದರಿಂದ, ಶಿಕ್ಷಕರು ಹಾಜರಾತಿ ಕೊಟ್ಟು, ನಿನ್ನ ಆಟಕ್ಕೋಸ್ಕರ ಎಲ್ಲ ತಪ್ಪುಗಳನ್ನು ಮಾಫ್ ಮಾಡಿದ್ದೀವಿ, ಹೋಗು’ ಎನ್ನುತ್ತಿದ್ದರಂತೆ. ಒಂದು ಕಾಲದಲ್ಲಿ ಸೆಹ್ವಾಗ್‌ ಅವರನ್ನು ಆರಾಧಿಸುತ್ತಿದ್ದ ಹುಡುಗನೇ ಈಗ ಸೆಹ್ವಾಗ್‌ರಂತೆ ಉತ್ತರಾಧಿಕಾರಿಯಂತೆ ಬ್ಯಾಟ್‌ ಬೀಸುತ್ತಿದ್ದಾನಲ್ಲ, ಅದು ಅಚ್ಚರಿಯೂ ಹೌದು, ಸ್ವಾರಸ್ಯವೂ ಹೌದು.

ಆಟಗಾರನ ತಲೆಗೂದಲು ಕತ್ತರಿಸಿದ ಅಂಪೈರ್‌
ಅಂಪೈರ್‌ಗಳು, ಆಟಗಾರರಿಗೆ ಸಲಹೆ ಕೊಡುವುದನ್ನು, ಎಚ್ಚರಿಕೆ ನೀಡುವುದನ್ನು ನಾವು ನೀವೆಲ್ಲ ನೋಡಿದ್ದೇವೆ. ಆದರೆ, ಅಂಪೈರ್‌ ಒಬ್ಬರು, ಬ್ಯಾಟ್ಸ್‌ಮ್ಯಾನ್‌ ಒಬ್ಬರಿಗೆ ಮೈದಾನದಲ್ಲಿಯೇ ಕೂದಲು ಕತ್ತರಿಸಿದ ಸುದ್ದಿಯನ್ನು ಯಾರೂ ನೋಡಿರಲಿಕ್ಕಿಲ್ಲ. ಅಷ್ಟೇ ಯಾಕೆ ಕೇಳಿರುವ ಸಾಧ್ಯತೆಯೂ ಇಲ್ಲ. ಆದರೆ, ಇಂಥದೊಂದು ಅಪರೂಪದ ಪ್ರಸಂಗ ನಡೆದಿದ್ದು ನಿಜ. ಅಂದ ಹಾಗೆ, ಅಂಪೈರಿಂದ ಕೂದಲು ಕತ್ತರಿಸಿಕೊಂಡ ಆಟಗಾರ ಯಾರು ಗೊತ್ತೇ? ನಮ್ಮ ಸುನೀಲ್‌ ಗಾವಸ್ಕರ್‌.

ಅಷ್ಟಕ್ಕೂ ಏನಾಯಿತೆಂದರೆ, 1974ರಲ್ಲಿ ಭಾರತ ಕ್ರಿಕೆಟ್‌ ತಂಡ, ಇಂಗ್ಲೆಂಡಿಗೆ ಟೆಸ್ಟ್‌ ಪಂದ್ಯ ಆಡಲು ಹೋಗಿತ್ತು. ಓಲ್ಡ… ಟ್ರಾಫ‌ಡರ್‌ಲ್ಲಿ ನಡೆದ ಪಂದ್ಯದ ಅಂಪೈರ್‌ ಆಗಿದ್ದವರು, ಡಿಕೆ ಬರ್ಡ್‌. ಅವತ್ತು ಬ್ಯಾಟಿಂಗ್‌ಗೆ ಇಳಿದಾಗ, ಉದ್ದಕ್ಕಿದ್ದ ತಲೆಗೂದಲು ಪದೇಪದೇ ಕಣ್ಣಿನ ಮೇಲೆ ಬಿದ್ದು ತೊಂದರೆ ಕೊಡುತ್ತಿತ್ತು. ಗಾವಸ್ಕರ್‌ ವಿಶೇಷತೆಯೆಂದರೆ, ಎಂಥ ವೇಗದ ಬೌಲಿಂಗ್‌ ಸಂದರ್ಭದಲ್ಲೂ ಆತ ಹೆಲ್ಮೆಟ್‌ ಹಾಕುತ್ತಿರಲಿಲ್ಲ.

ಒಂದು ಟೊಪ್ಪಿ ಹಾಕಿಕೊಂಡೇ ಆಡುತ್ತಿದ್ದ. ಆಗ ಗಾವಸ್ಕರ್‌ ನೇರವಾಗಿ ಅಂಪೈರ್‌ ಬಳಿ ಹೋಗಿ, ತಲೆಗೂದಲು ಪದೇ ಪದೆ ಕಣ್ಣಿನ ಮೇಲೆ ಬಿದ್ದು ತೊಂದರೆ ಕೊಡುತ್ತಿದೆ. ಇದನ್ನು ಕತ್ತರಿಸಲು ಸಾಧ್ಯವೇ ಎಂದು ಕೇಳಿದರಂತೆ. ಅಯ್ಯೋ ಅದಕ್ಕೇನಂತೆ ಎಂದ ಡಿಕೆ ಬರ್ಡ್‌, ತಮ್ಮ ಕೋಟಿನ ಜೇಬಲ್ಲಿದ್ದ ಕತ್ತರಿ ತೆಗೆದು, ಗಾವಸ್ಕರ್‌ ತಲೆಗೂದಲನ್ನು ಕತ್ತರಿಸಿಯೇ ಬಿಟ್ಟರು. ಅಂಪೈರ್‌ ಒಬ್ಬ ಕ್ರಿಕೆಟ್‌ ಆಟಗಾರನ ತಲೆಗೂದಲು ತೆಗೆದ ಮತ್ತೂಂದು ಪ್ರಸಂಗ ಕ್ರಿಕೆಟ್‌ ಇತಿಹಾಸದಲ್ಲಿ ಇಲ್ಲ.

ಟಾಪ್ ನ್ಯೂಸ್

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-uv-fusion

Social Media and Youths: ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋದ ಯುವ ಸಮೂಹ

7-uv-fusion

Summer Heat: ಕಡುಬೇಸಗೆಯಲ್ಲಿರಲಿ ಪ್ರಾಣಿಪಕ್ಷಿಗಳ ಮೇಲೆ ಕರುಣೆ

10-uv-fusion

Lifestyle‌: ಕಳೆದು ಹೋಗುತ್ತಿರುವಂತಹ ಆರೋಗ್ಯಕರ ಜೀವನ ಶೈಲಿ

8-uv-fusion-2

Photographers: ನೆನಪಿನ ನಾವಿಕರಿಗೆ ಸಲಾಂ…

6-uv-fusion

Summer: ಬಿಸಿಲಿನ ತಾಪಕ್ಕೆ ಕಂಗಾಲಾಗಿರುವ ಜೀವ ಸಂಕುಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.