ಮಕ್ಕಳ ಮನಸೆಳೆಯುವ ದಾಂಡೇಲಿಯ ಇಕೋ ಪಾರ್ಕ್‌


Team Udayavani, Aug 22, 2019, 5:18 AM IST

g-34

ದಾಂಡೇಲಿ ಪಟ್ಟಣದಲ್ಲಿ 25 ಎಕ್ರೆ ಅರಣ್ಯ ಪ್ರದೇಶದಲ್ಲಿ ಇಕೋ ಪಾರ್ಕ್‌ ಎಂಬ ಮಾಯಾಬಜಾರ್‌ ಮೈದಳೆದು ನಿಂತಿದೆ. ಮಕ್ಕಳ ಮನೋರಂಜನಗೆ ಇದೊಂದು ಅತಿ ವಿಶಿಷ್ಟ ಪಿಕ್‌ನಿಕ್‌ ತಾಣ ಎಂದೆನಿಸಿಕೊಂಡಿದೆ.

ಟಾಮ್‌ ಆ್ಯಂಡ್‌ ಜೆರ್ರಿ, ಮಿಕ್ಕಿ ಮೌಸ್‌, ಡೋರೆಮನ್‌, ಕಾಂಗಾ, ಎಂವೆಜರ್, ಪಾಪೆಯೆ, ಮಿಚಿಗನ್‌, ಶ್ರೇಕ್‌, ಆ್ಯಂಗ್ರಿ ಬರ್ಡ್ಸ್‌,ಛೋಟಾ ಭೀಮ್, ಅಲಾದಿನ್‌, ಜಂಗಲ್ ಬುಕ್‌ನ ಮೊಗ್ಲಿ, ಸ್ಕಿಪ್ಪಿ ಸೆರಲ್, ಚಿಪ್‌ ಆ್ಯಂಡ್‌ ಡೆಲ್, ಮೋಟು ಪೊತ್ಲು, ಹಾಸ್ಯ ಚಕ್ರವರ್ತಿ ಚಾರ್ಲಿ ಚಾಪ್ಲಿನ್‌ ಹೀಗೆ ಟಿ.ವಿ. ಯಲ್ಲಿ ಬರುವ ಮಕ್ಕಳ ಕಾರ್ಟೂನ್‌ ಲೋಕದ ಪಾತ್ರಗಳು ಕಣ್ಣೆದುರು ಬಂದರೆ ಹೇಗೆ? ಹೌದು, ಇವರೆಲ್ಲರನ್ನೂ ಒಂದೇ ವೇದಿಕೆಯಲ್ಲಿ ನೋಡುವಂಥ ಅವಕಾಶ ಇಲ್ಲಿದೆ. ಇದೊಂದು ಸುಂದರವಾದ ಮಾಯಾಬಜಾರ್‌. ಇಲ್ಲಿ ಎಲ್ಲವೂ ಮನಮೋಹಕ. ಮಕ್ಕಳನ್ನು ಇಲ್ಲಿಗೆ ಕರೆದುಕೊಂಡು ಬಂದ ತಂದೆ-ತಾಯಿಗೆ, ಮಕ್ಕಳೇ ಶಿಕ್ಷಕರು.

ಎಲ್ಲಿ ಅಂತೀರಾ? ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ಪಟ್ಟಣದ ಬಸ್‌ ನಿಲ್ದಾಣದ ಹಿಂದೆ ಸುಮಾರು 25 ಎಕ್ರೆ ಅರಣ್ಯ ಪ್ರದೇಶದಲ್ಲಿ ದಂಡಕಾರಣ್ಯ ಇಕೋ ಪಾರ್ಕ್‌ ಅನಾವರಣಗೊಂಡಿದೆ.

ಪಾರ್ಕ್‌ನೊಳಗೆ ಕಾಲಿಡುತ್ತಿದ್ದಂತೆ ಇರುವೆಗಳ ದೊಡ್ಡ ಸಾಲಿನ ದರ್ಶನವಾಗುತ್ತದೆ. ಅರೇ, ಇರುವೆಗಳು ಕಚ್ಚಬಹುದು ನಿಧಾನವಾಗಿ ನಡೆಯಿರಿ ಎಂದು ಹೇಳುತ್ತಾ ಮುಂದೆ ಸಾಗಿದಾಗ ಮರದ ಮರೆಯಿಂದ ಹೊರಬಂದ ಚಾರ್ಲಿ ಚಾಪ್ಲಿನ್‌ ತಮಾಷೆ ಪ್ರಸಂಗವೊಂದನ್ನು ತೋರಿಸಲು ಮಕ್ಕಳನ್ನು ಆಹ್ವಾನಿಸುವಂತೆ ನಿಂತಿದ್ದಾರೆ. ಚಾಪ್ಲಿನ್‌ ಟ್ರೇಡ್‌ ಮಾರ್ಕ್‌ ಎನಿಸಿರುವ ಟೋಪಿ ತಲೆಯ ಮೇಲಿದ್ದರೂ ಕೋಲನ್ನು ಅವರು ಎಲ್ಲಿಯೋ ಬಿಟ್ಟು ಬಂದಿರುವಂತಿದೆ. ಮೆಲ್ ಫ್ರಾಗ್‌ 19-20ನೇ ಶತಮಾನದ ಹಾಡುಗಳನ್ನು ಹಾಡುತ್ತಾ ಡ್ಯಾನ್ಸ್‌ ಮಾಡುತ್ತಾ ಇರುವ ಮಿಚಿಗನ್‌, ಪುರಪುರಿಯಲ್ಲಿ ವಾಸಿಸುವ ಮೋಟು ಮತ್ತು ಪತ್ಲು ಆಪ್ತಸ್ನೇಹಿತರು. ದೋಲಕ್‌ಪುರದ ಛೋಟಾ ಭೀಮ್‌ನ ಕುಟುಂಬ ಒಂದೆಡೆಯಾದರೆ, ಇನ್ನೊಂದೆಡೆ ಕಾಡಿನ ಪ್ರಾಣಿಗಳ ಸಹವಾಸದಲ್ಲೇ ಬೆಳೆದ ಮೊಗ್ಲಿ, ಆಮೆಯೊಂದರ ಮೇಲೆ ಸವಾರಿ ಮಾಡುತ್ತಿರುವ ದೃಶ್ಯ ನಗೆ ಉಕ್ಕಿಸುತ್ತದೆ. ಸೂಪರ್‌ ಮ್ಯಾನ್‌ ಸಹ ಈ ಪಾರ್ಕ್‌ನಲ್ಲಿ ತನ್ನ ತೋಳ್ಬಲ ಪ್ರದರ್ಶನಕ್ಕೆ ನಿಂತಿದ್ದಾನೆ.

ಜೀವನವಿಡೀ ಸೆಗಣಿಯನ್ನು ಉಂಡೆಮಾಡಿ ಅದನ್ನು ಉರುಳಿಸುವುದರಲ್ಲೇ ಕಾಲ ಕಳೆಯುವ ಕಾಪೋರೋಫಾಗಸ್‌ ಕೀಟಗಳು, ಶುಭ್ರವಾದ, ನಯವಾದ, ಸೆಗಣಿಯನ್ನು ಹುಡುಕುವುದರೊಂದಿಗೆ ತನ್ನ ದಿನ ಪ್ರಾರಂಭಿಸುವ ಡಂಗ್‌-ಬೀಟಲ್ಸ್ ಇಷ್ಟೆಲ್ಲಾ ಸಿಮೆಂಟ್ ಆಕೃತಿಗಳಿವೆ. ಒಂದೂವರೆ ವರ್ಷದ ಅವಧಿಯಲ್ಲಿ ಸುಮಾರು 35-40 ಕಲಾವಿದರು ಪರಿಶ್ರಮ ವಹಿಸಿ 106 ಕಾರ್ಟೂನ್‌ ಶಿಲ್ಪಗಳನ್ನು ನಿರ್ಮಿಸಿದ್ದಾರೆ. ಇಟ್ಟಿಗೆ, ಕಬ್ಬಿಣ, ಮರಳು ಮತ್ತಿತರ ಕಚ್ಚಾ ಸಾಮಗ್ರಿಗಳನ್ನು ಬಳಸಿ ನಿರ್ಮಿಸಲಾಗಿರುವ ವಿಭಿನ್ನ ಉದ್ಯಾನವನ ಇದಾಗಿದೆ.

ದಾಂಡೇಲಿ ಭಾಗದಲ್ಲಿ ಪ್ರವಾಸೋದ್ಯಮವನ್ನು ಮತ್ತಷ್ಟು ಉತ್ತೇಜಿಸಲು ಈ ಸೌಲಭ್ಯ ಕಲ್ಪಿಸಲಾಗಿದೆ. ಜತೆಗೆ ಮನೋರಂಜನೆಗಾಗಿ ಜಿಮ್ನಾಶಿಯಂ, ಮಲ್ಟಿ ಪ್ಲೇ ಮಾಡಲಾಗಿದೆ. ದಂಡಕಾರಣ್ಯದ ಒಳಗಿರುವ ಯಾವುದೇ ಒಂದು ಮರವನ್ನೂ ಕಡಿಯದೆ. ಆಲಂಕಾರಿಕ ಹೂವು ಮತ್ತು ಹಣ್ಣಿನ ಗಿಡಗಳನ್ನೂ ಅಲ್ಲಿ ನೆಟ್ಟು ನೈಸರ್ಗಿಕ ಸನ್ನಿವೇಶದಲ್ಲೇ ಕಾರ್ಟೂನ್‌ ಶಿಲ್ಪಗಳನ್ನು ನಿರ್ಮಿಸಲಾಗಿದೆ.

ಕಲಾವಿದರಿಗೆ ಪ್ರತಿ ಶನಿವಾರ ಮತ್ತು ರವಿವಾರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಮೂಲಕ ಪ್ರತಿಭಾನ್ವೇಷಣೆ ಕಾರ್ಯವನ್ನೂ ನಡೆಸಲಾಗುತ್ತದೆ. ಈ ಕಾರ್ಟೂನ್‌ ಲೋಕ ಎಲ್ಲರಿಗೂ ಪರಿಸರದ ಮಹತ್ವವನ್ನು ಮನವರಿಕೆ ಮಾಡಿಕೊಡುತ್ತಲೇ ಪರಿಸರ ರಕ್ಷಣೆಯ ಮನೋಭಾವದ ಬೀಜ ಬಿತ್ತುವುದು ಅತ್ಯಂತ ಮಹತ್ವದ ವಿಷಯ. ಕುಡಿಯುವ ನೀರು, ಶೌಚಾಲಯ, ವಿಶ್ರಾಂತಿಗೆ ಪ್ಯಾರಾಗೋಲ ಮಾಹಿತಿ ಕೇಂದ್ರವನ್ನು ನಿರ್ಮಿಸಲಾಗಿದೆ. ದಾಂಡೇಲಿಗೆ ತಮ್ಮ ಮಕ್ಕಳನ್ನು ಕರೆದುಕೊಂಡು ಬಂದರೆ ಈ ಕಾರ್ಟೂನ್‌ ಪಾರ್ಕ್‌ಗೆ ಬಂದು ಹೋಗಿ.

ಇತರ ಪ್ರವಾಸಿ ತಾಣಗಳು
ದಾಂಡೇಲಿ ಕಡೆ ಪ್ರವಾಸ ಬೆಳೆಸಿದರೆ ನೋಡಲು ಸುಂದರವಾರ ತಾಣಗಳು ಬಹಳಷ್ಟಿವೆ. ಅವುಗಳಲಿ ಪ್ರಮುಖವಾಗಿ ಕಾಳಿ ನದಿ, ಸಿಂಥೆರಿ ರಾಕ್‌, ಸೂಪ ಡ್ಯಾಮ್‌, ಅಂಶಿ ರಾಷ್ಟ್ರೀಯ ಉದ್ಯಾನವನ, ಸೈಕ್ಸ್‌ ಪಾಯಿಂಟ್, ಕವಳ ಗುಹೆ, ಕುಲ್ಗಿ ನೇಚರ್‌ ಕ್ಯಾಂಪ್‌ ಆಕರ್ಷಣೀಯ ಸ್ಥಳಗಳು.

•ಟಿ.ಶಿವಕುಮಾರ್‌

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

16-adu-jeevitham

Movie Review: ಆಡು ಜೀವಿದಂ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.