ಇಂಗ್ಲಿಷ್‌ ಪಾಠ ರೆಡಿ; ಹಾಡು ಮಾತ್ರ ಬಾಕಿ!


Team Udayavani, Apr 18, 2019, 6:11 AM IST

1704MLR10

ಕೋಸ್ಟಲ್‌ವುಡ್‌ನ‌ ಸ್ಟಾರ್‌ ಡೈರೆಕ್ಟರ್‌ ಎಂಬ ಮಾನ್ಯತೆ ಪಡೆದ ಸೂರಜ್‌ ಶೆಟ್ಟಿ ನಿರ್ದೇಶನದ ಉದ್ಯಮಿ ಹರೀಶ್‌ ಶೇರಿಗಾರ್‌ ಮತ್ತು ಶರ್ಮಿಳಾ ಶೇರಿಗಾರ್‌ ನಿರ್ಮಾಣದ “ಇಂಗ್ಲಿಷ್‌’ ಸಿನೆಮಾದ ಬಹುತೇಕ ಶೂಟಿಂಗ್‌ ಪೂರ್ಣಗೊಂಡಿದೆ. ಸದ್ಯ ಎರಡು ಹಾಡುಗಳ ಶೂಟಿಂಗ್‌ ಮಾತ್ರ ಬಾಕಿ ಇದೆ. ಎಲ್ಲವೂ ಅಂದುಕೊಂಡಂತೆಯಾದರೆ ಆಗಸ್ಟ್‌ನಲ್ಲಿ “ಇಂಗ್ಲಿಷ್‌’ ತೆರೆಕಾಣಲಿದೆ. ವಾಮಂಜೂರು, ಉಡುಪಿ ಸೇರಿದಂತೆ ಮಂಗಳೂರು ಭಾಗದಲ್ಲಿ ಸುಮಾರು 34 ದಿನ ಶೂಟಿಂಗ್‌ ಕಂಡಿರುವ ಈ ಸಿನೆಮಾದ ಹಾಡುಗಳ ಶೂಟಿಂಗ್‌ ಇನ್ನಷ್ಟೇ ನಡೆಯಬೇಕಿದೆ. ಪೂರ್ಣ ಸಿನೆಮಾ ಕಾಮಿಡಿಯಾಗಿ ಮೂಡಿಬಂದಿದ್ದು ಹೊಸ ನಿರೀಕ್ಷೆ ಮೂಡಿಸಿದೆ.

ಬಹುಭಾಷಾ ನಟ ಅನಂತ್‌ನಾಗ್‌ ಈ ಚಿತ್ರ ದ ಮೂಲಕ ಕೋಸ್ಟಲ್‌ವುಡ್‌ಗೆ ಎಂಟ್ರಿ ಕೊಡುತ್ತಿರುವುದೇ ಚಿತ್ರದ ಪ್ರಮುಖ ಹೈಲೈಟ್‌.

ಹುಡುಗನೊಬ್ಬ ಮಾಲ್‌ ಒಂದರಲ್ಲಿ ಗೊಂಬೆ ವೇಷ ಹಾಕಿ ಕುಣಿಯುವ ಕೆಲಸ ಮಾಡುತ್ತಿರುತ್ತಾನೆ. ಅಲ್ಲಿಗೆ ಹುಡುಗಿಯೊಬ್ಬಳು ತನ್ನ ಗೆಳತಿ ಜತೆ ಬರುತ್ತಿರುತ್ತಾಳೆ. ಆ ಹುಡುಗನಿಗೆ ಹುಡುಗಿ ಮೇಲೆ ಇಷ್ಟವಾಗುತ್ತದೆ. ಒಂದು ದಿನ ಆ ಹುಡುಗ ಅಲ್ಲಿಗೆ ಬರುವ ಹುಡುಗಿಗೆ ತನ್ನ ಪ್ರೀತಿಯ ವಿಷಯ ತಿಳಿಸುತ್ತಾನೆ. ಹುಡುಗನಿಗೆ ಇಂಗ್ಲಿಷ್‌ ಬರುವುದಿಲ್ಲ ಎಂಬ ಕಾರಣಕ್ಕೆ ಆಕೆ ಆತನ ಪ್ರೀತಿ ನಿರಾಕರಿಸುತ್ತಾಳೆ. ನಾನು ಮದುವೆ ಆಗುವುದಾದೆ ಇಂಗ್ಲಿಷ್‌ ಗೊತ್ತಿದ್ದವನನ್ನು ಎಂದು ಹುಡುಗಿ ಹೇಳುತ್ತಾಳೆ. ಅಂದಿನಿಂದ ಆತ ತನ್ನ ಫ್ರೆಂಡ್ಸ್‌ ಜತೆ ಸೇರಿ ಇಂಗ್ಲಿಷ್‌ ಕಲಿಯಲು ಶುರು ಮಾಡುತ್ತಾನೆ. ಹುಡುಗ ಕಷ್ಟಪಟ್ಟು ಇಂಗ್ಲಿಷ್‌ ಕಲಿಯುವುದನ್ನು ನೋಡಿ ಆ ಹುಡುಗಿಗೆ ಆತನ ಮೇಲೆ ಇಷ್ಟವಾಗುತ್ತದೆ. ಇಬ್ಬರ ನಡುವೆ ಫ್ರೆಂಡ್‌ಶಿಪ್‌ ಶುರುವಾಗುತ್ತದೆ. ಇದು ಪ್ರೀತಿಗೆ ಬದಲಾಗುತ್ತದೆ. ಹುಡುಗಿ ತನ್ನ ಪ್ರೀತಿಯ ವಿಷಯ ಮನೆಯವರಲ್ಲಿ ತಿಳಿಸುತ್ತಾಳೆ. ಆದರೆ ಮನೆಯವರು ಆತನನ್ನು ಒಪ್ಪಿಕೊಳ್ಳುವುದಿಲ್ಲ. ಕೊನೆಗೆ ಹುಡುಗ ತನ್ನಂತೆಯೇ ಇತರರಿಗೂ ಇಂಗ್ಲಿಷ್‌ ಕಲಿಸಬೇಕು ಎನ್ನುವ ಉದ್ದೇಶದಿಂದ ಇಂಗ್ಲಿಷ್‌ ಸ್ಪಿಕಿಂಗ್‌ ಕ್ಲಾಸ್‌ ಪ್ರಾರಂಭಿಸುತ್ತಾನೆ.

ಈ ಸಾಧನೆಯನ್ನು ಕಂಡು ಹುಡುಗಿ ಮನೆಯವರಿಗೆ ಆತನ ಮೇಲೆ ಹೆಮ್ಮೆಯಾಗುತ್ತದೆ. ಬಳಿಕ ನಡೆಯುವ ಕಥೆಯೇ “ಇಂಗ್ಲಿಷ್‌’.

ಕೃಷ್ಣ ಸಾರಥಿ ಛಾಯಾಗ್ರಹಣ- ಸಂಕಲನ ಮನು ಶೇರಿಗಾರ್‌, ಸಂಗೀತ ಮಣಿಕಾಂತ್‌ ಕದ್ರಿ, ಸಾಹಿತ್ಯ ಶಶಿರಾಜ್‌ ಕಾವೂರು, ಅರ್ಜುನ್‌ ಲೂಯಿಸ್‌. ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನ ಕೆ. ಸೂರಜ್‌ ಶೆಟ್ಟಿ ಅವರದ್ದು. ತಾರಾಗಣದಲ್ಲಿ ಪೃಥ್ವಿ ಅಂಬರ್‌, ನವ್ಯಾ ಪೂಜಾರಿ, ನವೀನ್‌ ಡಿ. ಪಡೀಲ್‌, ಅರವಿಂದ್‌ ಬೋಳಾರ್‌, ಭೋಜರಾಜ ವಾಮಂಜೂರು, ವಿಸ್ಮಯ ವಿನಾಯಕ್‌, ದೀಪಕ್‌ ರೈ ಪಾಣಾಜೆ, ಸಂದೀಪ್‌ ಶೆಟ್ಟಿ ಮಾಣಿಬೆಟ್ಟು, ಪ್ರಸನ್ನ ಬೈಲೂರು, ರವಿರಾಮ ಕುಂಜ ಬಣ್ಣಹಚ್ಚಿದ್ದಾರೆ.

 

ಟಾಪ್ ನ್ಯೂಸ್

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

13-uv-fusion

UV Fusion: ಹದ್ದು ಮೀರದೆ ಹದ್ದಿನಂತಾಗೋಣ

7-uv-fusion

Tour Circle: ಓ ಮಲೆನಾಡಿನ ಮೈ ಸಿರಿಯೇ…

6-mother

Mother: ಕೈ ತುತ್ತು ತಿನ್ನಿಸಿದ ಜೀವ ನಲುಗದಿರಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.