ಕುಡ್ಲದಲ್ಲಿ ‘ಗಿರಿಗಿಟ್’ ಕಮಾಲ್

ಕುಡ್ಲದಲ್ಲಿ 'ಗಿರಿಗಿಟ್' ಕಮಾಲ್

Team Udayavani, Jul 25, 2019, 5:00 AM IST

q-28

ಸದ್ಯ ಪೋಸ್ಟರ್‌ ಹಾಗೂ ಒಂದೊಂದು ಡೈಲಾಗ್‌ ಮೂಲಕವೇ ಸಾಮಾಜಿಕ ಜಾಲತಾಣದ ಮೂಲಕ ಸುದ್ದಿಯಲ್ಲಿರುವ ಸಿನೆಮಾ ‘ಗಿರಿಗಿಟ್’!

ವಿಭಿನ್ನ ಪ್ರಚಾರದಲ್ಲಿಯೇ ಗಮನಸೆಳೆದಿರುವ ‘ಗಿರಿಗಿಟ್’ ಕೋಸ್ಟಲ್ವುಡ್‌ನ‌ಲ್ಲಿ ಹೊಸ ನಿರೀಕ್ಷೆ-ಭರವಸೆಯೊಂದಿಗೆ ತೆರೆಗೆ ಬರಲು ಕಾತುರವಾಗಿದೆ. ಕೊಂಚ ಮಟ್ಟಿಗೆ ಸಪ್ಪೆ ಆಗಿರುವ ಕೋಸ್ಟಲ್ವುಡ್‌ಗೆ ಹೊಸ ಲುಕ್‌ ಹಾಗೂ ಭವಿಷ್ಯ ಕಲ್ಪಿಸುವ ನೆಲೆಯಲ್ಲಿಯೂ ಗಿರಿಗಿಟ್ ಮೇಲೆ ಮಹತ್ತರ ಜವಾಬ್ದಾರಿಯಿದೆ. ಹೀಗಾಗಿಯೇ ಕೋಸ್ಟಲ್ವುಡ್‌ನ‌ಲ್ಲಿ ಹೊಸ ಮೂಡ್‌ ಕ್ರಿಯೇಟ್ ಮಾಡುವ ತುಡಿತದಲ್ಲಿ ಗಿರಿಗಿಟ್ ಇದೆ.

ರೂಪೇಶ್‌ ಶೆಟ್ಟಿ ಅವರು ಮೊದಲು ಆ್ಯಕ್ಷನ್‌ ಕಟ್ ಹೇಳಿದ ಸಿನೆಮಾವಿದು. ನವೀನ್‌ ಡಿ ಪಡೀಲ್, ಅರವಿಂದ ಬೋಳಾರ್‌, ಭೋಜರಾಜ್‌ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಉಮೇಶ್‌ ಮಿಜಾರ್‌, ಸಂದೀಪ್‌ ಶೆಟ್ಟಿ ಮಾಣಿಬೆಟ್ಟು ಸೇರಿದಂತೆ ಪ್ರಬುದ್ಧ ಕಲಾವಿದರು ಈ ಸಿನೆಮಾದಲ್ಲಿರುವ ಕಾರಣದಿಂದ ಗಿರಿಗಿಟ್ ಮೇಲೆ ಸಾಕಷ್ಟು ನಿರೀಕ್ಷೆ ಸುತ್ತಾಡುತ್ತಿದೆ.

ಅಂದಹಾಗೆ, ಸಿನೆಮಾವೊಂದು ಸದ್ಯ ಹೆಚ್ಚು ಜನರ ಬಳಿಗೆ ರೀಚ್ ಆಗುವುದು ಸೋಶಿಯಲ್ ಮೀಡಿಯಾ ಮೂಲಕ. ಸಿನೆಮಾದ ಪೋಸ್ಟರ್‌, ಟ್ರೇಲರ್‌ ಎಲ್ಲವೂ ಮೊಬೈಲ್ನಲ್ಲಿ ಹೆಚ್ಚು ಜನರಿಗೆ ಹತ್ತಿರವಾಗುವ ಕಾರಣದಿಂದ ಪ್ರಚಾರ ತಂತ್ರಕ್ಕೆ ಇದೊಂದು ಬೆಸ್ಟ್‌ ಮಾಧ್ಯಮ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಗಿರಿಗಿಟ್ ಚಿತ್ರತಂಡ ಒಂದೊಂದೇ ಶೈಲಿಯ ಪ್ರಚಾರ ತಂತ್ರದ ಮೂಲಕ ಗಿರಿಗಿಟ್ ಪ್ರಚಾರದಲ್ಲಿ ನಿರತವಾಗಿದೆ. ವಿಶೇಷವೆಂದರೆ; ಇಲ್ಲಿಯವರೆಗೆ ಗಿರಿಗಿಟ್‌ನ ಎಲ್ಲಾ ಪೋಸ್ಟರ್‌ ಹಾಗೂ ಟ್ರೇಲರ್‌ ಸಾಕಷ್ಟು ದಾಖಲೆ ಬರೆಯುವ ಜತೆಗೆ-ಕೋಸ್ಟಲ್ವುಡ್‌ನ‌ಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ ಎಂಬುದು ಕೂಡ ಅಷ್ಟೇ ಸತ್ಯ.

ಅರವಿಂದ ಬೋಳಾರ್‌ ಕೋದಂಡ ಎಂಬ ಲಾಯರ್‌ ಲುಕ್‌ನಲ್ಲಿದ್ದರೆ, ವಾಮಂಜೂರು ಯಕ್ಷಗಾನದ ವೇಷ ಹಾಕಿದ ಪೋಸ್ಟರ್‌ ಹಾಗೂ ಮೀಸೆ ಮಾಮನ ಲುಕ್‌ನಲ್ಲಿ ನವೀನ್‌ ಡಿ ಪಡೀಲ್ ಅವರ ಲುಕ್‌ ಚಿತ್ರದ ಪ್ರಚಾರಕ್ಕೆ ಹೆಚ್ಚು ಬಲ ನೀಡಿದೆ. ಅದರಲ್ಲಿಯೂ ಪೋಸ್ಟರ್‌ ರಿಲೀಸ್‌ ಮಾಡುವ ಮೊದಲ ದಿನ ಈ ಕುರಿತಂತೆ ಮಾಡಿದ ಕೆಲವೊಂದು ಹಾಸ್ಯದ ಸನ್ನಿವೇಶಗಳು ಕೂಡ ಕೋಸ್ಟಲ್ವುಡ್‌ನ‌ಲ್ಲಿ ಪ್ರಥಮ ಪ್ರಯೋಗ.

ಆ ಬಳಿಕ ಅರವಿಂದ ಬೋಳಾರ್‌, ನವೀನ್‌ ಡಿ ಪಡೀಲ್ ಹಾಗೂ ಈಗ ಭೋಜರಾಜ್‌ ವಾಮಂಜೂರು ಅವರ ಎಂಟ್ರಿಯ ಟ್ರೇಲರ್‌ ರಿಲೀಸ್‌ ಆಗಿ ಅದು ಇನ್ನಷ್ಟು ಕುತೂಹಲ ಸೃಷ್ಟಿಸಿದೆ. ವಿಭಿನ್ನ ಕ್ಯಾರೆಕ್ಟರ್‌ಗಳೊಂದಿಗೆ ಅವರು ಗಿರಿಗಿಟ್‌ನಲ್ಲಿ ಕಮಾಲ್ ಮಾಡುವುದು ಸತ್ಯ ಎಂಬುದು ಟ್ರೇಲರ್‌ ಕಂಡಾಗಲೇ ಅರ್ಥವಾಗುತ್ತದೆ.

ಅಂದಹಾಗೆ; ಕೋಸ್ಟಲ್ವುಡ್‌ನ‌ಲ್ಲಿ ಭರವಸೆಯ ನಟನಾಗಿ ಮಿಂಚಿರುವವರು ನಟ ರೂಪೇಶ್‌ ಶೆಟ್ಟಿ. ಹೊಸತನದೊಂದಿಗೆ ಹೊಸ ನಿರೀಕ್ಷೆಯಲ್ಲಿ ಸಿನೆಮಾ ಬರಬೇಕು ಎಂಬ ಲೆಕ್ಕ ಹಾಕಿಕೊಂಡವರು ಅವರು. ಹೀಗಾಗಿಯೇ ತುಳು ಹಾಗೂ ಕನ್ನಡದಲ್ಲಿಯೂ ನಾಯಕ ನಟನಾಗಿ ಮಿಂಚುವ ಅವಕಾಶ ಅವರಿಗೆ ದೊರಕಿದೆ. ‘ಐಸ್‌ಕ್ರೀಂ’, ‘ಅಮ್ಮೆರ್‌ ಪೊಲೀಸಾ’ ಸೇರಿದಂತೆ ಹಲವು ತುಳು ಸಿನೆಮಾ ಮಾಡಿದ ರೂಪೇಶ್‌ ಇದೀಗ ನೇರವಾಗಿ ‘ಗಿರಿಗಿಟ್’ ಸಿನೆಮಾಕ್ಕೆ ಆ್ಯಕ್ಷನ್‌ ಕಟ್ ಹೇಳುವಲ್ಲಿ ಯಶಸ್ವಿಯಾಗಿದ್ದಾರೆ. ಆಗಸ್ಟ್‌ ವೇಳೆಗೆ ಬಿಡುಗಡೆಯ ನಿರೀಕ್ಷೆಯಲ್ಲಿರುವ ಈ ಸಿನೆಮಾ ರೂಪೇಶ್‌ ಅವರ ಬಹುನಿರೀಕ್ಷೆಯ ಸಿನೆಮಾ.

ದಿನೇಶ್‌ ಇರಾ

ಟಾಪ್ ನ್ಯೂಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-uv-fusion

Relationships: ಆಕೆಯ ಸುಂದರ ಬದುಕಿಗೆ ಇಷ್ಟೇ ಸಾಕಲ್ಲವೇ…

7-uv-fusion

Poetry: ಸಾಹಿತ್ಯ ಲೋಕದ ಭಾವಯಾನ ‘ಕವನ’

9-uv-fusion

Sirsi festival: ಶಿರಸಿ ಜಾತ್ರೆ ಎಂದರೆ, ಸುಮ್ಮನೆ ಅಲ್ಲ !

8-uv-fusion

UV Fusion: ಅವಳು

6-nss-camp

NSS Camp: ಜೀವನ ಮೌಲ್ಯ ಕಲಿಸಿದ ಎನ್‌ಎಸ್‌ಎಸ್‌ ಶಿಬಿರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.