ಇಲ್ಲೊಂದು ಟೈಟಾನಿಕ್ ಚರ್ಚ್


Team Udayavani, Jul 4, 2019, 5:00 AM IST

19

ಅಲ್ಲಿ ಮುಳುಗಿದೆ ನೋಡಿ ಕಮಾನು ಕಾಣಿಸ್ತಿದೆಯಲ್ಲ, ಅದೇ ಚರ್ಚ್‌- ಹಾಗಂತ ಗೈಡ್‌ ಒಬ್ಬ ಕತೆ ಹೊಡೆಯೋದಿಕ್ಕೆ ಶುರುಮಾಡಿದರೆ, ನೀರೊಳಗೆ ಟೈಟಾನಿಕ್‌ ಹಡಗಿನಂತೆ ಮಲಗಿದ್ದ ಚರ್ಚ್‌ ಒಳಗಿಂದಲೇ ಏನನ್ನೋ ಪಿಸುಗುಡುತ್ತದೆ. ಅದು ಶೆಟ್ಟಿಹಳ್ಳಿಯ ರೋಸರಿ ಚರ್ಚ್‌. ಮಳೆಗಾಲ ಪ್ರಾರಂಭವಾಗಿ ಹಿನ್ನೀರು ಹೆಚ್ಚಾಗುತ್ತಿದ್ದಂತೆ ಈ ಚರ್ಚ್‌ ಮುಳುಗುತ್ತದೆ. ಆಗ ಇದನ್ನು ನೋಡಲೆಂದೇ, ಪ್ರವಾಸಿಗರು ತೆಪ್ಪದಲ್ಲಿ ತೆರಳಿ ವೀಕ್ಷಿಸುತ್ತಾರೆ. ನೀರಿನ ಮಟ್ಟ ತಗ್ಗಿದಂತೆ, ಬೈಕ್‌- ಕಾರು- ಆಟೋಗಳಲ್ಲಿ ಹೋಗಿ, ಚರ್ಚ್‌ನ ಸೌಂದರ್ಯ ವೀಕ್ಷಿಸಿ ಬರುವುದೆಂದರೆ ಪ್ರವಾಸಿಗರಿಗೆ ಅದೇನೋ ರೋಮಾಂಚನ.

ಹಾಸನದಿಂದ 20 ಕಿ.ಮೀ. ದೂರದಲ್ಲಿರುವ ಶೆಟ್ಟಿಹಳ್ಳಿ ಎಂಬ ಗ್ರಾಮದ ಈ ಚರ್ಚ್‌ ಹಿಂದೊಮ್ಮೆ ಕ್ರೈಸ್ತರ ಹೆಮ್ಮೆಯ ಆರಾಧನಾ ಕೇಂದ್ರ. ಹಾಸನದ ಪ್ರವಾಸಿ ತಾಣಗಳಾದ ಬೇಲೂರು, ಹಳೆಬೀಡು, ಶ್ರವಣ ಬೆಳಗೊಳ ಹಾಗೂ ಸಕಲೇಶಪುರದ ಪೈಕಿ ಇದೂ ಒಂದು ಪ್ರೇಕ್ಷಣೀಯ ಸ್ಥಳ. ಇಂದು ಕಾಲಗರ್ಭದೊಳಗೆ ಅದು ಹೂತು ಹೋಗಿದ್ದರೂ ಸಹಸ್ರಾರು ಮಂದಿಗೆ ಆ ದಿನಗಳ ಪ್ರಾರ್ಥನೆಯ ನೆನಪುಗಳು ಈಗಲೂ ಕಣ್ಣಿಗೆ ಕಟ್ಟಿವೆ.

ಚರ್ಚ್‌ನ ಜಾಗತಿಕ ಕಳೆ
ಜಲಾಶಯದ ನೀರು ಬಂತು ಎಂದರೆ ಚರ್ಚ್‌ ಮುಳುಗಿ ಟೈಟಾನಿಕ್‌ ಹಡಗಿನಂತೆ ತೋರುತ್ತದೆ. ಸಿನಿಮಾ ಮಂದಿಗೆ ಈ ಕಟ್ಟಡ ಅಮರ ಪ್ರೇಮದ ಸ್ಮಾರಕವಾದರೆ, ಊರಿನವರಿಗೆ ಹಾಳು ಕೊಂಪೆ. ನಗರದ ಜಂಜಡದಿಂದ ಬೇಸತ್ತು ಬಂದ ಮಂದಿಗೆ ಇದು ನೆಮ್ಮದಿಯ ತಾಣ. ಚರ್ಚ್‌ ಗೋಡೆಗಳು ವಿಕೃತ ಮನದ ಪ್ರೇಮಿಗಳ ಕೈಗೆ ಸಿಲುಕಿ, ನೋಡಬಾರದ ಶಾಸನಗಳಂತಾಗಿವೆ.

ಹತ್ತೆಂಟು ದೇಶಗಳ ಸಮನ್ವಯದ ಸಂಕೇತದಂತಿದ್ದ ಈ ಚರ್ಚ್‌ ನಿರ್ಮಾಣವಾಗಿದ್ದು 1810ರಲ್ಲಿ. ಧರ್ಮಗುರು ಅಬ್ಬೆ ದುಬಾಯ್ಸ ಅವರ ಕಲ್ಪನೆಯ ಸಾಕಾರವಿದು. ಜರ್ಮನಿ, ಇಂಗ್ಲೆಂಡ್‌, ಆಸ್ಟ್ರೇಲಿಯ ಸೇರಿದಂತೆ ಯುರೋಪ್‌ನ ರಾಯಭಾರಿಗಳು ಇಲ್ಲಿಗೆ ಭೇಟಿ ನೀಡಿದ್ದರಂತೆ.

ಹಾಸನ, ತುಮಕೂರು ಹಾಗೂ ಮಂಡ್ಯ ಜಿಲ್ಲೆಯ ಭಾಗಗಳಿಗೆ ನೀರಾವರಿ ವ್ಯವಸ್ಥೆ ಕಲ್ಪಿಸಲು 1960ರಲ್ಲಿ ಹೇಮಾವತಿ ನದಿಗೆ ಗೊರೂರು ಬಳಿ ಅಣೆಕಟ್ಟು ನಿರ್ಮಾಣ ಪ್ರಾರಂಭವಾಯಿತು. ಆಗ ಶೆಟ್ಟಿಹಳ್ಳಿ ಸೇರಿದಂತೆ ಸುಮಾರು 28 ಗ್ರಾಮಗಳು ಅಣೆಕಟ್ಟಿನ ಹಿನ್ನೀರಿನಲ್ಲಿ ಮುಳುಗಡೆಯಾದವು. ಈ ಪೈಕಿ ಶತಮಾನದ ಕವಿತೆಯಂತಿದ್ದ ಚರ್ಚ್‌ ಕೂಡ ಹೇಮಾವತಿಯ ಅಣೆಕಟ್ಟೆಯೊಡಲು ಸೇರಿತು!

1960ರಲ್ಲಿ ಈ ಕಟ್ಟಡದಲ್ಲಿ ಧರ್ಮಗುರು ದೇಶಾಂತ್‌ ಅವರು ಆಸ್ಪತ್ರೆ ಆರಂಭಿಸಿದ್ದರು. ಅನಂತರ ಮುಳುಗಡೆ ಆಗುವವರೆಗೂ ಇಲ್ಲಿನ ಸಹಸ್ರಾರು ಮಂದಿಯ ಆರೋಗ್ಯ ಕಾಪಾಡಿತ್ತು. ಸಿಡುಬು, ಪ್ಲೇಗ್‌, ಕಾಲರಾ ರೋಗಕ್ಕೆ ಚರ್ಚ್‌ ನ ವೈದ್ಯರು ಲಸಿಕೆ ಹಾಕಿ, ಜನರ ಸಂಕಷ್ಟ ನಿವಾರಿಸಿದ್ದರು. 1823ರ ಭೀಕರ ಬರಗಾಲದಲ್ಲಿ ಇದು ನಿರ್ಗತಿಕರಿಗೆ ಆಶ್ರಯ ತಾಣವಾಗಿಯೂ, ಮಾನವೀಯತೆ ಮೆರೆದಿತ್ತು.

ಚರ್ಚ್‌ ಸುಂದರ ಕಮಾನುಗಳು, ಗೋಪುರ, ಎತ್ತರದ ಬಾಗಿಲುಗಳು, ಮಿನಾರುಗಳು ನೋಡುಗರ ಕಣ್ಣಿಗೆ ಈಗಲೂ ಹಬ್ಬವನ್ನುಂಟು ಮಾಡುತ್ತವೆ. ಹಲವು ದಶಕಗಳಿಂದ ನೀರಿನಲ್ಲಿ ಮುಳುಗೇಳುತ್ತಿರುವ ಚರ್ಚ್‌ ಮೂಲ ಹಾಗೂ ಸದ್ಯದ ಸ್ವರೂಪಕ್ಕೂ ಅಜಗಜಾಂತರವಿದೆ. ಏಕೆಂದರೆ ವರ್ಷದಿಂದ ವರ್ಷಕ್ಕೆ ಚರ್ಚ್‌ನ ಗೋಡೆ ಕಮಾನು ಹಾಗೂ ಗೋಪುರಗಳು ಕುಸಿಯುತ್ತಾ, ಹಿನ್ನೀರಿನ ಒಡಲಲ್ಲಿ ಮಣ್ಣಾಗುತ್ತಿವೆ.

ಕಟ್ಟಡದ ವಿಶ್ವ ಸೌಂದರ್ಯ
ಅಂದಚೆಂದದ ವಿನ್ಯಾಸದ ಹಿಂದೆ ಜಗತ್ತಿನ ಪ್ರತಿಭಾವಂತ ವಾಸ್ತುಶಿಲ್ಪಿಗಳ ಕೈಚಳಕವಿದೆ. ಅದು ಧರ್ಮಗುರು ಬೊಯೆ ಅವರ ವಿನ್ಯಾಸದ ಪರಿಕಲ್ಪನೆ. ಒಂದು ಮಹಡಿ ಕಟ್ಟಡದಲ್ಲಿ ಎರಡು ಗಂಟೆಗಳ ಗೋಪುರವಿದೆ. ಜರ್ಮನ್‌ ವಿನ್ಯಾಸ, ಫ್ರೆಂಚ್ ಶೈಲಿ, ಹಿಂದೂ ಶೈಲಿಯ ಒಳಾಂಗಣದಿಂದ ಇದು ಕಳೆಗಟ್ಟಿತ್ತು. ಈಜಿಪ್ಟ್ ಜಿಪ್ಸಮ್, ಬೆಲ್ಜಿಯಂನ ಗಾಜು, ಸ್ಕಾಟ್ಲೆಂಡ್‌ನ‌ ಚಿತ್ರಗಳು, ಇಟಲಿ ಬ್ರೆಜಿಲ್ನ ಅಲಂಕಾರಿಕ ವಸ್ತುಗಳು, ಮಲೇಶ್ಯದ ತಾಳೆ ಮರಗಳನ್ನು ಕಟ್ಟಡ ನಿರ್ಮಾಣಕ್ಕೆ ಬಳಸಲಾಗಿತ್ತು.

ಹಾಳಾದ ಸೌಂದರ್ಯ
1 ಕೆ.ಆರ್‌.ಎಸ್‌. ಜಲಾಶಯದಿಂದ ಹೊಯ್ಸಳರ ನಿರ್ಮಾಣದ ವೇಣುಗೋಪಾಲ ಸ್ವಾಮಿ, ಕನ್ನೇಶ್ವರ ಮತ್ತು ಕಾಳಮ್ಮ ದೇಗುಲಗಳು.
2 ಕಬಿನಿ ಹಿನ್ನೀರಿನಲ್ಲಿ ಮಾಂಕಾಳಮ್ಮ ಮತ್ತು ಭವಾನಿಶಂಕರ ದೇಗುಲಗಳು.
3 ಲಿಂಗನಮಕ್ಕಿ ಜಲಾಶಯದಲ್ಲಿ ಹಳೆಯ ಮುಡೆನೋರ ಅಣೆಕಟ್ಟು ನೀರಿನಲ್ಲಿ ಮುಳುಗಿ, ನೀರು ಕಡಿಮೆಯಾದಾಗ ಗೋಚರವಾಗುತ್ತದೆ.

ರೂಟ್ ಮ್ಯಾಪ್‌

·ಮಂಗಳೂರಿನಿಂದ ಹಾಸನ- 172 ಕಿಲೋಮೀಟರ್‌

·ಹಾಸನಕ್ಕೆ ರೈಲು, ಬಸ್‌ನಲ್ಲಿ ತೆರಳಬಹುದು

·ಹಾಸನದಿಂದ ಶೆಟ್ಟಿ ಹಳ್ಳಿ ರೋಸರಿ ಚರ್ಚ್‌-39 ಕಿಲೋ ಮೀಟರ್‌

·ಸ್ವಂತ ವಾಹನವಿದ್ದರೇ ಇಲ್ಲಿಗೆ ಭೇಟಿ ನೀಡುವುದು ಸುಲಭ

·ಬೇಲೂರು, ಹಳೇಬಿಡು ಪ್ರವಾಸ ಕೈಗೊಂಡ ಇಲ್ಲಿಗೆ ತೆರಳಬಹುದು.

·ಸುತ್ತಮುತ್ತ ಯಾವುದೇ ಊಟ, ತಿಂಡಿಯ ವ್ಯವಸ್ಥೆಗಳಿಲ್ಲ.

•ಟಿ. ಶಿವಕುಮಾರ್‌

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

16-adu-jeevitham

Movie Review: ಆಡು ಜೀವಿದಂ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.